Homeಮುಖಪುಟಕೊಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್, ಅಶ್ರುವಾಯು ಪ್ರಯೋಗ

ಕೊಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್, ಅಶ್ರುವಾಯು ಪ್ರಯೋಗ

ಬಿಜೆಪಿ ಕಾರ್ಯಕರ್ತರು ಮತ್ತು ಅವರ ಬಾಡಿಗೆ ಗೂಂಡಾಗಳು ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟವುಂಟು ಮಾಡುತ್ತಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.

- Advertisement -
- Advertisement -

ಪಶ್ಚಿಮ ಬಂಗಾಳ ಸಚಿವಾಲಯ ‘ನಬನ್ನಾ’ದ ಹೊರಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ವಿಭಾಗವು ಆಯೋಜಿಸಿದ್ದ ಪ್ರತಿಭಟನಾ ರ್‍ಯಾಲಿ ಹಿಂಸಾತ್ಮಕ ರೂಪ ಪಡೆದಿದೆ. ನೂರಾರು ಬಿಜೆಪಿ ಕಾರ್ಯಕರ್ತರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದಾಗ, ಕಲ್ಲು ತೂರಾಟ ನಡೆಸಿದಾಗ ಗುಂಪು ಚದುರಿಸಲು ಪೊಲೀಸರು ಲಾಠೀ ಚಾರ್ಜ್‌ ಮತ್ತು ಅಶ್ರುವಾಯು ಪ್ರಯೋಗಿಸಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ಅಡಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಬಿಜೆಪಿ ‘ನಬನ್ನಾ ಚಲೋ’ ರ್‍ಯಾಲಿ ಆಯೋಜಿಸಿತ್ತು.

ಕೊರೊನಾ ಸಾಂಕ್ರಾಮಿಕ ಹೆಚ್ಚಾಗುತ್ತಿದ್ದು, ಜನರು ಗುಂಪು ಸೇರುವಂತಿಲ್ಲ ಎಂದು ಸೂಚಿಸಿದ್ದ ರಾಜ್ಯ ಸರ್ಕಾರ ಬಿಜೆಪಿ ಆಯೋಜಿಸಿದ್ದ ‘ನಬನ್ನಾ ಚಲೋ’ ಪ್ರತಿಭಟನೆಗೆ ಅನುಮತಿ ನಿರಾಕರಿಸಿತ್ತು. ಬಿಜೆಪಿ ಯುವ ಘಟಕದ ಅಧ್ಯಕ್ಷ ತೇಜಸ್ವಿ ಸೂರ್ಯ ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲೆಂದು ಕೊಲ್ಕತ್ತಾಗೆ ಬಂದಿದ್ದರು.

ಇದನ್ನೂ ಓದಿ: ’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

“ನಾವು ಶಾಂತಿಯುವಾಗಿ ಪ್ರತಿಭಟಿಸುತ್ತಿದ್ದೇವೆ, ಆದರೆ ಮಮತಾ ಜಿ ನಮ್ಮ ಶಾಂತಿಯುತ ಪ್ರದರ್ಶನವನ್ನು ಹಿಂಸಾತ್ಮಕ ಪ್ರತಿಭಟನೆಯನ್ನಾಗಿ ಮಾಡಲು ಪ್ರಯತ್ನಿಸಿದ್ದಾರೆ. ಗೂಂಡಾಗಳು, ಪೊಲೀಸರೊಂದಿಗೆ ನಮ್ಮ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ” ಎಂದು ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.

‘ಪೊಲೀಸರು ಬಿಜೆಪಿ ಕಾರ್ಯಕರ್ತರನ್ನೇ ಗುರಿಯಾಗಿಸಿಕೊಂಡು ಲಾಠೀ ಚಾರ್ಜ್ ಮಾಡುತ್ತಿದ್ದಾರೆ. ಕಲ್ಲುತೂರಾಟದಲ್ಲಿ ನಮ್ಮ ಕಾರ್ಯಕರ್ತರು ಪಾಲ್ಗೊಂಡಿಲ್ಲ. ಖಿದಿರ್ಪುರ ಕಡೆಯಿಂದ ಕಲ್ಲು ತೂರಾಟ ನಡೆಸಲಾಗುತ್ತಿದೆ. ಪೊಲೀಸರು ಅದನ್ನು ಯಾಕೆ ನೋಡುತ್ತಿಲ್ಲ’ ಎಂದು ಬಿಜೆಪಿ ನಾಯಕ ಲೋಕೆತ್ ಚಟರ್ಜಿ ಆಕ್ರೋಶ ವ್ಯಕ್ತಪಡಿಸಿದರು.

ಘಟನೆಯನ್ನು ಖಂಡಿಸಿರುವ ಬಿಜೆಪಿ ಯುವ ಮೋರ್ಚಾದ ಮುಖ್ಯಸ್ಥ, ’ ಟಿಸಿಎಂ ಗೂಂಡಾಗಳು ನಮ್ಮ ಮೇಲೆ ಕಂಟ್ರಿ ಬಾಂಬ್‌ಗಳನ್ನು ಎಸೆದಿದ್ದಾರೆ. ಫ್ಯಾಸಿಸಂ ಅಂದರೆ ಇದೆ’ ಎಂದು ಟ್ವೀಟ್ ಮಾಡಿದ್ದಾರೆ.

ರ್‍ಯಾಲಿಯಲ್ಲಿ ಬಿಜೆಪಿ ವರ್ತನೆ ಬಗ್ಗೆ ಕಿಡಿಕಾರಿರುವ ಟಿಎಂಸಿ ಮುಖಂಡ ಬರ್ತ್ಯಾ ಬಸು ’ನಿಮ್ಮ ಗೂಂಡಾಗಿರಿಯಿಂದಾಗಿ ಪ್ರತಿ ಬಾರಿ ಎಷ್ಟು ಸಾರ್ವಜನಿಕ ಆಸ್ತಿ ನಾಶವಾಗುತ್ತದೆ ಎಂಬುದರ ಬಗ್ಗೆ ಕಾಳಜಿ ವಹಿಸುತ್ತೀರಾ? ಎಂದು ಪ್ರಶ್ನಿಸಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿಗೆ ಟ್ಯಾಗ್ ಮಾಡಿ ’ನಿಮ್ಮ ಬಾಡಿಗೆ ಗೂಂಡಾಗಳು ಮತ್ತು ಹೊರಗಿನವರು ಮಾಡಿದ ಈ ಹಾನಿಗಳಿಗೆ ಯಾರು ಹಣ ಪಾವತಿಸುತ್ತಾರೆ..?’ ಎಂದು ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಸ್ಯಾನಿಟೈಸೇಶನ್‌ ಮಾಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಚೇರಿಯೂ ಇರುವ ಸಚಿವಾಲಯವನ್ನು ಎರಡು ದಿನಗಳ ಅವಧಿಗೆ ಮುಚ್ಚಲಾಗಿದೆ. ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಖಂಡಿಸಿದೆ. “ನೈರ್ಮಲ್ಯೀಕರಣದ ಉದ್ದೇಶಕ್ಕಾಗಿ” ಸಚಿವಾಲಯದ ಕಟ್ಟಡದ ಎಲ್ಲಾ ಕಚೇರಿಗಳನ್ನು ಎರಡು ದಿನಗಳವರೆಗೆ ಮುಚ್ಚಲಾಗುವುದು ಎಂದು ರಾಜ್ಯ ಸರ್ಕಾರ ನಿನ್ನೆ ಸಂಜೆಯೇ  ಘೋಷಿಸಿತ್ತು.


ಇದನ್ನೂ ಓದಿ: ತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...