Homeಮುಖಪುಟಕೊಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್, ಅಶ್ರುವಾಯು ಪ್ರಯೋಗ

ಕೊಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್, ಅಶ್ರುವಾಯು ಪ್ರಯೋಗ

ಬಿಜೆಪಿ ಕಾರ್ಯಕರ್ತರು ಮತ್ತು ಅವರ ಬಾಡಿಗೆ ಗೂಂಡಾಗಳು ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟವುಂಟು ಮಾಡುತ್ತಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.

- Advertisement -
- Advertisement -

ಪಶ್ಚಿಮ ಬಂಗಾಳ ಸಚಿವಾಲಯ ‘ನಬನ್ನಾ’ದ ಹೊರಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ವಿಭಾಗವು ಆಯೋಜಿಸಿದ್ದ ಪ್ರತಿಭಟನಾ ರ್‍ಯಾಲಿ ಹಿಂಸಾತ್ಮಕ ರೂಪ ಪಡೆದಿದೆ. ನೂರಾರು ಬಿಜೆಪಿ ಕಾರ್ಯಕರ್ತರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದಾಗ, ಕಲ್ಲು ತೂರಾಟ ನಡೆಸಿದಾಗ ಗುಂಪು ಚದುರಿಸಲು ಪೊಲೀಸರು ಲಾಠೀ ಚಾರ್ಜ್‌ ಮತ್ತು ಅಶ್ರುವಾಯು ಪ್ರಯೋಗಿಸಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ಅಡಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಬಿಜೆಪಿ ‘ನಬನ್ನಾ ಚಲೋ’ ರ್‍ಯಾಲಿ ಆಯೋಜಿಸಿತ್ತು.

ಕೊರೊನಾ ಸಾಂಕ್ರಾಮಿಕ ಹೆಚ್ಚಾಗುತ್ತಿದ್ದು, ಜನರು ಗುಂಪು ಸೇರುವಂತಿಲ್ಲ ಎಂದು ಸೂಚಿಸಿದ್ದ ರಾಜ್ಯ ಸರ್ಕಾರ ಬಿಜೆಪಿ ಆಯೋಜಿಸಿದ್ದ ‘ನಬನ್ನಾ ಚಲೋ’ ಪ್ರತಿಭಟನೆಗೆ ಅನುಮತಿ ನಿರಾಕರಿಸಿತ್ತು. ಬಿಜೆಪಿ ಯುವ ಘಟಕದ ಅಧ್ಯಕ್ಷ ತೇಜಸ್ವಿ ಸೂರ್ಯ ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲೆಂದು ಕೊಲ್ಕತ್ತಾಗೆ ಬಂದಿದ್ದರು.

ಇದನ್ನೂ ಓದಿ: ’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

“ನಾವು ಶಾಂತಿಯುವಾಗಿ ಪ್ರತಿಭಟಿಸುತ್ತಿದ್ದೇವೆ, ಆದರೆ ಮಮತಾ ಜಿ ನಮ್ಮ ಶಾಂತಿಯುತ ಪ್ರದರ್ಶನವನ್ನು ಹಿಂಸಾತ್ಮಕ ಪ್ರತಿಭಟನೆಯನ್ನಾಗಿ ಮಾಡಲು ಪ್ರಯತ್ನಿಸಿದ್ದಾರೆ. ಗೂಂಡಾಗಳು, ಪೊಲೀಸರೊಂದಿಗೆ ನಮ್ಮ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ” ಎಂದು ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.

‘ಪೊಲೀಸರು ಬಿಜೆಪಿ ಕಾರ್ಯಕರ್ತರನ್ನೇ ಗುರಿಯಾಗಿಸಿಕೊಂಡು ಲಾಠೀ ಚಾರ್ಜ್ ಮಾಡುತ್ತಿದ್ದಾರೆ. ಕಲ್ಲುತೂರಾಟದಲ್ಲಿ ನಮ್ಮ ಕಾರ್ಯಕರ್ತರು ಪಾಲ್ಗೊಂಡಿಲ್ಲ. ಖಿದಿರ್ಪುರ ಕಡೆಯಿಂದ ಕಲ್ಲು ತೂರಾಟ ನಡೆಸಲಾಗುತ್ತಿದೆ. ಪೊಲೀಸರು ಅದನ್ನು ಯಾಕೆ ನೋಡುತ್ತಿಲ್ಲ’ ಎಂದು ಬಿಜೆಪಿ ನಾಯಕ ಲೋಕೆತ್ ಚಟರ್ಜಿ ಆಕ್ರೋಶ ವ್ಯಕ್ತಪಡಿಸಿದರು.

ಘಟನೆಯನ್ನು ಖಂಡಿಸಿರುವ ಬಿಜೆಪಿ ಯುವ ಮೋರ್ಚಾದ ಮುಖ್ಯಸ್ಥ, ’ ಟಿಸಿಎಂ ಗೂಂಡಾಗಳು ನಮ್ಮ ಮೇಲೆ ಕಂಟ್ರಿ ಬಾಂಬ್‌ಗಳನ್ನು ಎಸೆದಿದ್ದಾರೆ. ಫ್ಯಾಸಿಸಂ ಅಂದರೆ ಇದೆ’ ಎಂದು ಟ್ವೀಟ್ ಮಾಡಿದ್ದಾರೆ.

ರ್‍ಯಾಲಿಯಲ್ಲಿ ಬಿಜೆಪಿ ವರ್ತನೆ ಬಗ್ಗೆ ಕಿಡಿಕಾರಿರುವ ಟಿಎಂಸಿ ಮುಖಂಡ ಬರ್ತ್ಯಾ ಬಸು ’ನಿಮ್ಮ ಗೂಂಡಾಗಿರಿಯಿಂದಾಗಿ ಪ್ರತಿ ಬಾರಿ ಎಷ್ಟು ಸಾರ್ವಜನಿಕ ಆಸ್ತಿ ನಾಶವಾಗುತ್ತದೆ ಎಂಬುದರ ಬಗ್ಗೆ ಕಾಳಜಿ ವಹಿಸುತ್ತೀರಾ? ಎಂದು ಪ್ರಶ್ನಿಸಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿಗೆ ಟ್ಯಾಗ್ ಮಾಡಿ ’ನಿಮ್ಮ ಬಾಡಿಗೆ ಗೂಂಡಾಗಳು ಮತ್ತು ಹೊರಗಿನವರು ಮಾಡಿದ ಈ ಹಾನಿಗಳಿಗೆ ಯಾರು ಹಣ ಪಾವತಿಸುತ್ತಾರೆ..?’ ಎಂದು ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಸ್ಯಾನಿಟೈಸೇಶನ್‌ ಮಾಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಚೇರಿಯೂ ಇರುವ ಸಚಿವಾಲಯವನ್ನು ಎರಡು ದಿನಗಳ ಅವಧಿಗೆ ಮುಚ್ಚಲಾಗಿದೆ. ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಖಂಡಿಸಿದೆ. “ನೈರ್ಮಲ್ಯೀಕರಣದ ಉದ್ದೇಶಕ್ಕಾಗಿ” ಸಚಿವಾಲಯದ ಕಟ್ಟಡದ ಎಲ್ಲಾ ಕಚೇರಿಗಳನ್ನು ಎರಡು ದಿನಗಳವರೆಗೆ ಮುಚ್ಚಲಾಗುವುದು ಎಂದು ರಾಜ್ಯ ಸರ್ಕಾರ ನಿನ್ನೆ ಸಂಜೆಯೇ  ಘೋಷಿಸಿತ್ತು.


ಇದನ್ನೂ ಓದಿ: ತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...