Homeಮುಖಪುಟಕೊಲ್ಕತ್ತಾ ಪಾಲಿಕೆ ಚುನಾವಣೆ: ಬಹುತೇಕ ವಾರ್ಡ್‌ಗಳಲ್ಲಿ ಆಡಳಿತಾರೂಢ ಟಿಎಂಸಿ ಮುನ್ನಡೆ

ಕೊಲ್ಕತ್ತಾ ಪಾಲಿಕೆ ಚುನಾವಣೆ: ಬಹುತೇಕ ವಾರ್ಡ್‌ಗಳಲ್ಲಿ ಆಡಳಿತಾರೂಢ ಟಿಎಂಸಿ ಮುನ್ನಡೆ

- Advertisement -
- Advertisement -

ಪಶ್ಚಿಮ ಬಂಗಾಳದ ಕೊಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ರಾಜ್ಯ ಚುನಾವಣಾ ಆಯೋಗದ ಇತ್ತೀಚಿನ ಅಂಕಿಅಂಶಗಳ ಪ್ರಕಾರ ಆಡಳಿತಾರೂಢ ಟಿಎಂಸಿ ಬಹುತೇಕ ವಾರ್ಡ್‌ಗಳಲ್ಲಿ ಮುನ್ನಡೆ ಸಾಧಿಸಿದೆ.

ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ (ಕೆಎಂಸಿ) 144 ವಾರ್ಡ್‌ಗಳ ಮತ ಎಣಿಕೆ ನಡೆಯುತ್ತಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಏಳು ಸ್ಥಾನಗಳಲ್ಲಿ ಈಗಾಗಲೇ ವಿಜಯಶಾಲಿ ಎಂದು ಘೋಷಿಸಲಾಗಿದೆ. ಪ್ರಸ್ತುತ 108 ವಾರ್ಡ್‌ಗಳಲ್ಲಿ ಮುನ್ನಡೆ ಸಾಧಿಸಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಲ್ಕು ಸ್ಥಾನಗಳಲ್ಲಿ, ಕಾಂಗ್ರೆಸ್ ಮತ್ತು ಸಿಪಿಐ(ಎಂ) ತಲಾ ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಮೂರು ವಾರ್ಡ್‌ಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಬಿಲ್ಲವರಿಗೆ ದೈವಸ್ಥಾನ ಪ್ರವೇಶ ನಿರಾಕರಣೆ

ಉತ್ತರ ಕೊಲ್ಕತ್ತಾ ವಾರ್ಡ್ ಸಂಖ್ಯೆ 11 ರಲ್ಲಿ ಟಿಎಂಸಿ ಶಾಸಕ ಮತ್ತು ಹಾಲಿ ಕೌನ್ಸಿಲರ್ ಅತೀನ್ ಘೋಷ್ ಮುನ್ನಡೆ ಸಾಧಿಸಿದ್ದಾರೆ. ವಾರ್ಡ್ ಸಂಖ್ಯೆ 13 ರಲ್ಲಿ ಟಿಎಂಸಿಯ ಹಾಲಿ ಕೌನ್ಸಿಲರ್ ಅನಿಂದ್ಯಾ ರೌತ್ ಇತರರಿಗಿಂತ ಮುಂದಿದ್ದರು.

ವಾರ್ಡ್ ಸಂಖ್ಯೆ 22 ಮತ್ತು 23 ರಲ್ಲಿ ಬಿಜೆಪಿ ಮತ್ತು ವಾರ್ಡ್ ಸಂಖ್ಯೆ 45 ರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ವಾರ್ಡ್ ಸಂಖ್ಯೆ 103, 98 ರಲ್ಲಿ ಸಿಪಿಐ(ಎಂ) ಮುನ್ನಡೆ ಸಾಧಿಸಿದೆ.

ವಾರ್ಡ್ ಸಂಖ್ಯೆ 22 ರಲ್ಲಿ, ಬಿಜೆಪಿಯ ಹಾಲಿ ಕೌನ್ಸಿಲರ್ ಮಿನಾ ದೇವಿ ಪುರೋಹಿತ್ ಮತ್ತು ಟಿಎಂಸಿಯ ಅಭ್ಯರ್ಥಿ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ವಾರ್ಡ್ ಸಂಖ್ಯೆ 45 ರಲ್ಲಿ, ಕಾಂಗ್ರೆಸ್‌ನ ಹಾಲಿ ಕೌನ್ಸಿಲರ್ ಸಂತೋಷ್ ಪಾಠಕ್ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಟಿಎಂಸಿಗಿಂತ ಮುಂದಿದ್ದಾರೆ.

ಸುಮಾರು 40.5 ಲಕ್ಷ ಮತದಾರರಲ್ಲಿ ಶೇಕಡಾ 63 ರಷ್ಟು ಮತದಾರರು ಪಾಳಿಕೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದರೂ ಸಹ, ಎರಡು ಬೂತ್‌ಗಳಲ್ಲಿ ಬಾಂಬ್‌ಗಳನ್ನು ಎಸೆಯುವುದು ಸೇರಿದಂತೆ ಹಿಂಸಾಚಾರದ ಘಟನೆಗಳು ನಡೆದಿದ್ದವು.


ಇದನ್ನೂ ಓದಿ: ಕೊಲ್ಕತ್ತಾದಲ್ಲಿ ಹೊಸ ಕಾರ್ಯಕ್ರಮ ಘೋಷಿಸಿದ ಮುನಾವರ್‌ ಫಾರೂಖಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...