Homeಮುಖಪುಟವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ತನಿಖೆಗೆ ವಹಿಸಿದ ಕಲ್ಕತ್ತಾ ಹೈಕೋರ್ಟ್

ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ತನಿಖೆಗೆ ವಹಿಸಿದ ಕಲ್ಕತ್ತಾ ಹೈಕೋರ್ಟ್

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದಿರುವ ದ್ವಿತೀಯ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯ ಅಮಾನುಷ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಕಲ್ಕತ್ತಾ ಹೈಕೋರ್ಟ್ ಸಿಬಿಐಗೆ ವರ್ಗಾಯಿಸಿದೆ.

ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ಮತ್ತು ನ್ಯಾಯಮೂರ್ತಿ ಹಿರಣ್ಮಯ್ ಭಟ್ಟಾಚಾರ್ಯ ಅವರ ವಿಭಾಗೀಯ ಪೀಠವು, ತನಿಖೆಯನ್ನು ಸ್ವತಂತ್ರ ಏಜೆನ್ಸಿಗೆ ವರ್ಗಾಯಿಸುವಂತೆ ಕೋರಿ ಸಂತ್ರಸ್ತೆಯ ಪೋಷಕರು ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದೆ.

ಅರ್ಜಿಗಳ ವಿಚಾರಣೆ ವೇಳೆ ರಾಜ್ಯ ಪೊಲೀಸರ ತನಿಖೆಯ ಪ್ರಗತಿಯ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, “ಈ ರೀತಿ ತನಿಖೆ ಮುಂದುವರೆದರೆ, ಅದು ಹಳಿ ತಪ್ಪಲಿದೆ ಎಂಬ ಆತಂಕ ಸಂತ್ರಸ್ತೆಯ ಪೋಷಕರಲ್ಲಿದೆ. ಆದ್ದರಿಂದ ಅವರು ಉನ್ನತ ಪರಿಹಾರಕ್ಕಾಗಿ ಕೋರಿದ್ದಾರೆ. ಈ ಪ್ರಕರಣದಲ್ಲಿ ಮತ್ತೊಂದು ಆತಂಕಕಾರಿ ಅಂಶವೆಂದರೆ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ. ಯಾವುದೇ ದೂರು ಇಲ್ಲದಿದ್ದಾಗ ಅಂತಹ ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ಮೃತರು ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರೂ ಪ್ರಾಂಶುಪಾಲರು ಏಕೆ ದೂರು ನೀಡಿಲ್ಲ ಎಂಬುವುದು ಅಚ್ಚರಿ ಮೂಡಿಸಿದೆ. ತನಿಖೆಯಲ್ಲಿ ಯಾವುದೇ ಮಹತ್ವದ ಪ್ರಗತಿಯಾಗಿಲ್ಲ. ಆಡಳಿತವು ಸಂತ್ರಸ್ತೆ ಅಥವಾ ಆಕೆಯ ಕುಟುಂಬದೊಂದಿಗೆ ಇರಲಿಲ್ಲ. ಪ್ರಾಂಶುಪಾಲರು ಹೇಳಿಕೆಯನ್ನೂ ನೀಡಿಲ್ಲ. ತನಿಖೆಯಲ್ಲಿ ಗಮನಾರ್ಹ ಪ್ರಗತಿಯಿಲ್ಲದೆ, ಸಾಕ್ಷಿ ನಾಶವಾಗುತ್ತದೆ ಎಂಬ ಸಂತ್ರಸ್ತೆಯ ಪೋಷಕರ ಅಳಲನ್ನು ನಾವು ಪರಿಗಣಿಸುತ್ತಿದ್ದೇವೆ. ಆದ್ದರಿಂದ ಅರ್ಜಿದಾರರಿಗೆ ನ್ಯಾಯ ಒದಗಿಸಲು ಮತ್ತು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ನಾವು ತನಿಖೆಯನ್ನು ಸಿಬಿಐಗೆ ವರ್ಗಾಯಿಸುತ್ತೀದ್ದೇವೆ” ಎಂದು ಹೇಳಿದೆ.

ಸ್ಥಳೀಯ ವರದಿಗಳ ಪ್ರಕಾರ, ತರಬೇತಿ ವೈದ್ಯೆಯು ತನ್ನ ರಾತ್ರಿ ಪಾಳಿಯನ್ನು ಮುಗಿಸಿ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ವಿಶ್ರಾಂತಿ ಪಡೆಯಲು ಹೋಗಿದ್ದರವರು ಆಗಸ್ಟ್ 9 ರ ಮುಂಜಾನೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಪ್ರಾಥಮಿಕ ತನಿಖೆಯ ನಂತರ, ಕೋಲ್ಕತ್ತಾ ಪೊಲೀಸರು ಸ್ಥಳೀಯ ಪೊಲೀಸ್ ಪಡೆಯೊಂದಿಗೆ ಕೆಲಸ ಮಾಡಿದ ‘ನಾಗರಿಕ ಸ್ವಯಂಸೇವಕ’ನನ್ನು ಬಂಧಿಸಿದ್ದರು. ಇದು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಎಂದು ಆಕ್ರೋಶ ವ್ಯಕ್ತವಾಗಿತ್ತು.

ಈ ಬಂಧನವನ್ನು ಮುಚ್ಚಿಹಾಕಲಾಗಿದೆ ಎಂದು ಬಣ್ಣಿಸಲಾಗಿದೆ, ರಾಜ್ಯ ಪೊಲೀಸರ ತನಿಖೆಯು ದೋಷಪೂರಿತವಾಗಿದೆ ಎಂದು ವಕೀಲರು ಪ್ರತಿಪಾದಿಸಿದ್ದಾರೆ ಮತ್ತು ಅವರು ನೈಜ ಸಂಗತಿಗಳನ್ನು ಮುಚ್ಚಿಡುವ ಪ್ರಯತ್ನದಲ್ಲಿ ಆರೋಪಿಗಳಿಂದ ಬಲಿಪಶು ಮಾಡಲು ಪ್ರಯತ್ನಿಸುತ್ತಿದ್ದಾರೆ.

ಮೃತ ವೈದ್ಯೆಯ ಪೋಷಕರ ಪರ ವಾದ ಮಂಡಿಸಿದ ಹಿರಿಯ ವಕೀಲ ವಿಕಾಶ್ ರಂಜನ್ ಭಟ್ಟಾಚಾರ್ಯ ಅವರು, ಆಕೆ ಅನಾರೋಗ್ಯದಿಂದ ಬಳಲುತ್ತಿದ್ದಾಳೆ ಎಂದು ಆರಂಭದಲ್ಲಿ ದೂರವಾಣಿ ಕರೆ ಬಂದಿದ್ದು, ಕಾಲೇಜಿಗೆ ತಲುಪಿದಾಗ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿಸಲಾಗಿತ್ತಾದರೂ, ಮೂರು ಗಂಟೆಗಳ ಕಾಲ ಕಾದರೂ ಆಕೆಯ ಶವ ನೋಡಲು ಅವಕಾಶ ನೀಡಿರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂನ ಓದಿ : ಆರ್‌ಜಿ ಕರ್ ವೈದ್ಯಕೀಯ ಕಾಲೇಜು ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಘಟನೆ ರಾತ್ರಿ ನಡೆದಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...