Homeಮುಖಪುಟವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ತನಿಖೆಗೆ ವಹಿಸಿದ ಕಲ್ಕತ್ತಾ ಹೈಕೋರ್ಟ್

ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ತನಿಖೆಗೆ ವಹಿಸಿದ ಕಲ್ಕತ್ತಾ ಹೈಕೋರ್ಟ್

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದಿರುವ ದ್ವಿತೀಯ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯ ಅಮಾನುಷ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಕಲ್ಕತ್ತಾ ಹೈಕೋರ್ಟ್ ಸಿಬಿಐಗೆ ವರ್ಗಾಯಿಸಿದೆ.

ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ಮತ್ತು ನ್ಯಾಯಮೂರ್ತಿ ಹಿರಣ್ಮಯ್ ಭಟ್ಟಾಚಾರ್ಯ ಅವರ ವಿಭಾಗೀಯ ಪೀಠವು, ತನಿಖೆಯನ್ನು ಸ್ವತಂತ್ರ ಏಜೆನ್ಸಿಗೆ ವರ್ಗಾಯಿಸುವಂತೆ ಕೋರಿ ಸಂತ್ರಸ್ತೆಯ ಪೋಷಕರು ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದೆ.

ಅರ್ಜಿಗಳ ವಿಚಾರಣೆ ವೇಳೆ ರಾಜ್ಯ ಪೊಲೀಸರ ತನಿಖೆಯ ಪ್ರಗತಿಯ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, “ಈ ರೀತಿ ತನಿಖೆ ಮುಂದುವರೆದರೆ, ಅದು ಹಳಿ ತಪ್ಪಲಿದೆ ಎಂಬ ಆತಂಕ ಸಂತ್ರಸ್ತೆಯ ಪೋಷಕರಲ್ಲಿದೆ. ಆದ್ದರಿಂದ ಅವರು ಉನ್ನತ ಪರಿಹಾರಕ್ಕಾಗಿ ಕೋರಿದ್ದಾರೆ. ಈ ಪ್ರಕರಣದಲ್ಲಿ ಮತ್ತೊಂದು ಆತಂಕಕಾರಿ ಅಂಶವೆಂದರೆ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ. ಯಾವುದೇ ದೂರು ಇಲ್ಲದಿದ್ದಾಗ ಅಂತಹ ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ಮೃತರು ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರೂ ಪ್ರಾಂಶುಪಾಲರು ಏಕೆ ದೂರು ನೀಡಿಲ್ಲ ಎಂಬುವುದು ಅಚ್ಚರಿ ಮೂಡಿಸಿದೆ. ತನಿಖೆಯಲ್ಲಿ ಯಾವುದೇ ಮಹತ್ವದ ಪ್ರಗತಿಯಾಗಿಲ್ಲ. ಆಡಳಿತವು ಸಂತ್ರಸ್ತೆ ಅಥವಾ ಆಕೆಯ ಕುಟುಂಬದೊಂದಿಗೆ ಇರಲಿಲ್ಲ. ಪ್ರಾಂಶುಪಾಲರು ಹೇಳಿಕೆಯನ್ನೂ ನೀಡಿಲ್ಲ. ತನಿಖೆಯಲ್ಲಿ ಗಮನಾರ್ಹ ಪ್ರಗತಿಯಿಲ್ಲದೆ, ಸಾಕ್ಷಿ ನಾಶವಾಗುತ್ತದೆ ಎಂಬ ಸಂತ್ರಸ್ತೆಯ ಪೋಷಕರ ಅಳಲನ್ನು ನಾವು ಪರಿಗಣಿಸುತ್ತಿದ್ದೇವೆ. ಆದ್ದರಿಂದ ಅರ್ಜಿದಾರರಿಗೆ ನ್ಯಾಯ ಒದಗಿಸಲು ಮತ್ತು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ನಾವು ತನಿಖೆಯನ್ನು ಸಿಬಿಐಗೆ ವರ್ಗಾಯಿಸುತ್ತೀದ್ದೇವೆ” ಎಂದು ಹೇಳಿದೆ.

ಸ್ಥಳೀಯ ವರದಿಗಳ ಪ್ರಕಾರ, ತರಬೇತಿ ವೈದ್ಯೆಯು ತನ್ನ ರಾತ್ರಿ ಪಾಳಿಯನ್ನು ಮುಗಿಸಿ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ವಿಶ್ರಾಂತಿ ಪಡೆಯಲು ಹೋಗಿದ್ದರವರು ಆಗಸ್ಟ್ 9 ರ ಮುಂಜಾನೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಪ್ರಾಥಮಿಕ ತನಿಖೆಯ ನಂತರ, ಕೋಲ್ಕತ್ತಾ ಪೊಲೀಸರು ಸ್ಥಳೀಯ ಪೊಲೀಸ್ ಪಡೆಯೊಂದಿಗೆ ಕೆಲಸ ಮಾಡಿದ ‘ನಾಗರಿಕ ಸ್ವಯಂಸೇವಕ’ನನ್ನು ಬಂಧಿಸಿದ್ದರು. ಇದು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಎಂದು ಆಕ್ರೋಶ ವ್ಯಕ್ತವಾಗಿತ್ತು.

ಈ ಬಂಧನವನ್ನು ಮುಚ್ಚಿಹಾಕಲಾಗಿದೆ ಎಂದು ಬಣ್ಣಿಸಲಾಗಿದೆ, ರಾಜ್ಯ ಪೊಲೀಸರ ತನಿಖೆಯು ದೋಷಪೂರಿತವಾಗಿದೆ ಎಂದು ವಕೀಲರು ಪ್ರತಿಪಾದಿಸಿದ್ದಾರೆ ಮತ್ತು ಅವರು ನೈಜ ಸಂಗತಿಗಳನ್ನು ಮುಚ್ಚಿಡುವ ಪ್ರಯತ್ನದಲ್ಲಿ ಆರೋಪಿಗಳಿಂದ ಬಲಿಪಶು ಮಾಡಲು ಪ್ರಯತ್ನಿಸುತ್ತಿದ್ದಾರೆ.

ಮೃತ ವೈದ್ಯೆಯ ಪೋಷಕರ ಪರ ವಾದ ಮಂಡಿಸಿದ ಹಿರಿಯ ವಕೀಲ ವಿಕಾಶ್ ರಂಜನ್ ಭಟ್ಟಾಚಾರ್ಯ ಅವರು, ಆಕೆ ಅನಾರೋಗ್ಯದಿಂದ ಬಳಲುತ್ತಿದ್ದಾಳೆ ಎಂದು ಆರಂಭದಲ್ಲಿ ದೂರವಾಣಿ ಕರೆ ಬಂದಿದ್ದು, ಕಾಲೇಜಿಗೆ ತಲುಪಿದಾಗ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿಸಲಾಗಿತ್ತಾದರೂ, ಮೂರು ಗಂಟೆಗಳ ಕಾಲ ಕಾದರೂ ಆಕೆಯ ಶವ ನೋಡಲು ಅವಕಾಶ ನೀಡಿರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂನ ಓದಿ : ಆರ್‌ಜಿ ಕರ್ ವೈದ್ಯಕೀಯ ಕಾಲೇಜು ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಘಟನೆ ರಾತ್ರಿ ನಡೆದಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...