Homeಮುಖಪುಟವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ತನಿಖೆಗೆ ವಹಿಸಿದ ಕಲ್ಕತ್ತಾ ಹೈಕೋರ್ಟ್

ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ತನಿಖೆಗೆ ವಹಿಸಿದ ಕಲ್ಕತ್ತಾ ಹೈಕೋರ್ಟ್

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದಿರುವ ದ್ವಿತೀಯ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯ ಅಮಾನುಷ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಕಲ್ಕತ್ತಾ ಹೈಕೋರ್ಟ್ ಸಿಬಿಐಗೆ ವರ್ಗಾಯಿಸಿದೆ.

ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ಮತ್ತು ನ್ಯಾಯಮೂರ್ತಿ ಹಿರಣ್ಮಯ್ ಭಟ್ಟಾಚಾರ್ಯ ಅವರ ವಿಭಾಗೀಯ ಪೀಠವು, ತನಿಖೆಯನ್ನು ಸ್ವತಂತ್ರ ಏಜೆನ್ಸಿಗೆ ವರ್ಗಾಯಿಸುವಂತೆ ಕೋರಿ ಸಂತ್ರಸ್ತೆಯ ಪೋಷಕರು ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದೆ.

ಅರ್ಜಿಗಳ ವಿಚಾರಣೆ ವೇಳೆ ರಾಜ್ಯ ಪೊಲೀಸರ ತನಿಖೆಯ ಪ್ರಗತಿಯ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, “ಈ ರೀತಿ ತನಿಖೆ ಮುಂದುವರೆದರೆ, ಅದು ಹಳಿ ತಪ್ಪಲಿದೆ ಎಂಬ ಆತಂಕ ಸಂತ್ರಸ್ತೆಯ ಪೋಷಕರಲ್ಲಿದೆ. ಆದ್ದರಿಂದ ಅವರು ಉನ್ನತ ಪರಿಹಾರಕ್ಕಾಗಿ ಕೋರಿದ್ದಾರೆ. ಈ ಪ್ರಕರಣದಲ್ಲಿ ಮತ್ತೊಂದು ಆತಂಕಕಾರಿ ಅಂಶವೆಂದರೆ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ. ಯಾವುದೇ ದೂರು ಇಲ್ಲದಿದ್ದಾಗ ಅಂತಹ ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ಮೃತರು ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರೂ ಪ್ರಾಂಶುಪಾಲರು ಏಕೆ ದೂರು ನೀಡಿಲ್ಲ ಎಂಬುವುದು ಅಚ್ಚರಿ ಮೂಡಿಸಿದೆ. ತನಿಖೆಯಲ್ಲಿ ಯಾವುದೇ ಮಹತ್ವದ ಪ್ರಗತಿಯಾಗಿಲ್ಲ. ಆಡಳಿತವು ಸಂತ್ರಸ್ತೆ ಅಥವಾ ಆಕೆಯ ಕುಟುಂಬದೊಂದಿಗೆ ಇರಲಿಲ್ಲ. ಪ್ರಾಂಶುಪಾಲರು ಹೇಳಿಕೆಯನ್ನೂ ನೀಡಿಲ್ಲ. ತನಿಖೆಯಲ್ಲಿ ಗಮನಾರ್ಹ ಪ್ರಗತಿಯಿಲ್ಲದೆ, ಸಾಕ್ಷಿ ನಾಶವಾಗುತ್ತದೆ ಎಂಬ ಸಂತ್ರಸ್ತೆಯ ಪೋಷಕರ ಅಳಲನ್ನು ನಾವು ಪರಿಗಣಿಸುತ್ತಿದ್ದೇವೆ. ಆದ್ದರಿಂದ ಅರ್ಜಿದಾರರಿಗೆ ನ್ಯಾಯ ಒದಗಿಸಲು ಮತ್ತು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ನಾವು ತನಿಖೆಯನ್ನು ಸಿಬಿಐಗೆ ವರ್ಗಾಯಿಸುತ್ತೀದ್ದೇವೆ” ಎಂದು ಹೇಳಿದೆ.

ಸ್ಥಳೀಯ ವರದಿಗಳ ಪ್ರಕಾರ, ತರಬೇತಿ ವೈದ್ಯೆಯು ತನ್ನ ರಾತ್ರಿ ಪಾಳಿಯನ್ನು ಮುಗಿಸಿ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ವಿಶ್ರಾಂತಿ ಪಡೆಯಲು ಹೋಗಿದ್ದರವರು ಆಗಸ್ಟ್ 9 ರ ಮುಂಜಾನೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಪ್ರಾಥಮಿಕ ತನಿಖೆಯ ನಂತರ, ಕೋಲ್ಕತ್ತಾ ಪೊಲೀಸರು ಸ್ಥಳೀಯ ಪೊಲೀಸ್ ಪಡೆಯೊಂದಿಗೆ ಕೆಲಸ ಮಾಡಿದ ‘ನಾಗರಿಕ ಸ್ವಯಂಸೇವಕ’ನನ್ನು ಬಂಧಿಸಿದ್ದರು. ಇದು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಎಂದು ಆಕ್ರೋಶ ವ್ಯಕ್ತವಾಗಿತ್ತು.

ಈ ಬಂಧನವನ್ನು ಮುಚ್ಚಿಹಾಕಲಾಗಿದೆ ಎಂದು ಬಣ್ಣಿಸಲಾಗಿದೆ, ರಾಜ್ಯ ಪೊಲೀಸರ ತನಿಖೆಯು ದೋಷಪೂರಿತವಾಗಿದೆ ಎಂದು ವಕೀಲರು ಪ್ರತಿಪಾದಿಸಿದ್ದಾರೆ ಮತ್ತು ಅವರು ನೈಜ ಸಂಗತಿಗಳನ್ನು ಮುಚ್ಚಿಡುವ ಪ್ರಯತ್ನದಲ್ಲಿ ಆರೋಪಿಗಳಿಂದ ಬಲಿಪಶು ಮಾಡಲು ಪ್ರಯತ್ನಿಸುತ್ತಿದ್ದಾರೆ.

ಮೃತ ವೈದ್ಯೆಯ ಪೋಷಕರ ಪರ ವಾದ ಮಂಡಿಸಿದ ಹಿರಿಯ ವಕೀಲ ವಿಕಾಶ್ ರಂಜನ್ ಭಟ್ಟಾಚಾರ್ಯ ಅವರು, ಆಕೆ ಅನಾರೋಗ್ಯದಿಂದ ಬಳಲುತ್ತಿದ್ದಾಳೆ ಎಂದು ಆರಂಭದಲ್ಲಿ ದೂರವಾಣಿ ಕರೆ ಬಂದಿದ್ದು, ಕಾಲೇಜಿಗೆ ತಲುಪಿದಾಗ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿಸಲಾಗಿತ್ತಾದರೂ, ಮೂರು ಗಂಟೆಗಳ ಕಾಲ ಕಾದರೂ ಆಕೆಯ ಶವ ನೋಡಲು ಅವಕಾಶ ನೀಡಿರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂನ ಓದಿ : ಆರ್‌ಜಿ ಕರ್ ವೈದ್ಯಕೀಯ ಕಾಲೇಜು ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಘಟನೆ ರಾತ್ರಿ ನಡೆದಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...