Homeಮುಖಪುಟವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ತನಿಖೆಗೆ ವಹಿಸಿದ ಕಲ್ಕತ್ತಾ ಹೈಕೋರ್ಟ್

ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ತನಿಖೆಗೆ ವಹಿಸಿದ ಕಲ್ಕತ್ತಾ ಹೈಕೋರ್ಟ್

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದಿರುವ ದ್ವಿತೀಯ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯ ಅಮಾನುಷ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಕಲ್ಕತ್ತಾ ಹೈಕೋರ್ಟ್ ಸಿಬಿಐಗೆ ವರ್ಗಾಯಿಸಿದೆ.

ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ಮತ್ತು ನ್ಯಾಯಮೂರ್ತಿ ಹಿರಣ್ಮಯ್ ಭಟ್ಟಾಚಾರ್ಯ ಅವರ ವಿಭಾಗೀಯ ಪೀಠವು, ತನಿಖೆಯನ್ನು ಸ್ವತಂತ್ರ ಏಜೆನ್ಸಿಗೆ ವರ್ಗಾಯಿಸುವಂತೆ ಕೋರಿ ಸಂತ್ರಸ್ತೆಯ ಪೋಷಕರು ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದೆ.

ಅರ್ಜಿಗಳ ವಿಚಾರಣೆ ವೇಳೆ ರಾಜ್ಯ ಪೊಲೀಸರ ತನಿಖೆಯ ಪ್ರಗತಿಯ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, “ಈ ರೀತಿ ತನಿಖೆ ಮುಂದುವರೆದರೆ, ಅದು ಹಳಿ ತಪ್ಪಲಿದೆ ಎಂಬ ಆತಂಕ ಸಂತ್ರಸ್ತೆಯ ಪೋಷಕರಲ್ಲಿದೆ. ಆದ್ದರಿಂದ ಅವರು ಉನ್ನತ ಪರಿಹಾರಕ್ಕಾಗಿ ಕೋರಿದ್ದಾರೆ. ಈ ಪ್ರಕರಣದಲ್ಲಿ ಮತ್ತೊಂದು ಆತಂಕಕಾರಿ ಅಂಶವೆಂದರೆ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ. ಯಾವುದೇ ದೂರು ಇಲ್ಲದಿದ್ದಾಗ ಅಂತಹ ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ಮೃತರು ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರೂ ಪ್ರಾಂಶುಪಾಲರು ಏಕೆ ದೂರು ನೀಡಿಲ್ಲ ಎಂಬುವುದು ಅಚ್ಚರಿ ಮೂಡಿಸಿದೆ. ತನಿಖೆಯಲ್ಲಿ ಯಾವುದೇ ಮಹತ್ವದ ಪ್ರಗತಿಯಾಗಿಲ್ಲ. ಆಡಳಿತವು ಸಂತ್ರಸ್ತೆ ಅಥವಾ ಆಕೆಯ ಕುಟುಂಬದೊಂದಿಗೆ ಇರಲಿಲ್ಲ. ಪ್ರಾಂಶುಪಾಲರು ಹೇಳಿಕೆಯನ್ನೂ ನೀಡಿಲ್ಲ. ತನಿಖೆಯಲ್ಲಿ ಗಮನಾರ್ಹ ಪ್ರಗತಿಯಿಲ್ಲದೆ, ಸಾಕ್ಷಿ ನಾಶವಾಗುತ್ತದೆ ಎಂಬ ಸಂತ್ರಸ್ತೆಯ ಪೋಷಕರ ಅಳಲನ್ನು ನಾವು ಪರಿಗಣಿಸುತ್ತಿದ್ದೇವೆ. ಆದ್ದರಿಂದ ಅರ್ಜಿದಾರರಿಗೆ ನ್ಯಾಯ ಒದಗಿಸಲು ಮತ್ತು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ನಾವು ತನಿಖೆಯನ್ನು ಸಿಬಿಐಗೆ ವರ್ಗಾಯಿಸುತ್ತೀದ್ದೇವೆ” ಎಂದು ಹೇಳಿದೆ.

ಸ್ಥಳೀಯ ವರದಿಗಳ ಪ್ರಕಾರ, ತರಬೇತಿ ವೈದ್ಯೆಯು ತನ್ನ ರಾತ್ರಿ ಪಾಳಿಯನ್ನು ಮುಗಿಸಿ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ವಿಶ್ರಾಂತಿ ಪಡೆಯಲು ಹೋಗಿದ್ದರವರು ಆಗಸ್ಟ್ 9 ರ ಮುಂಜಾನೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಪ್ರಾಥಮಿಕ ತನಿಖೆಯ ನಂತರ, ಕೋಲ್ಕತ್ತಾ ಪೊಲೀಸರು ಸ್ಥಳೀಯ ಪೊಲೀಸ್ ಪಡೆಯೊಂದಿಗೆ ಕೆಲಸ ಮಾಡಿದ ‘ನಾಗರಿಕ ಸ್ವಯಂಸೇವಕ’ನನ್ನು ಬಂಧಿಸಿದ್ದರು. ಇದು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಎಂದು ಆಕ್ರೋಶ ವ್ಯಕ್ತವಾಗಿತ್ತು.

ಈ ಬಂಧನವನ್ನು ಮುಚ್ಚಿಹಾಕಲಾಗಿದೆ ಎಂದು ಬಣ್ಣಿಸಲಾಗಿದೆ, ರಾಜ್ಯ ಪೊಲೀಸರ ತನಿಖೆಯು ದೋಷಪೂರಿತವಾಗಿದೆ ಎಂದು ವಕೀಲರು ಪ್ರತಿಪಾದಿಸಿದ್ದಾರೆ ಮತ್ತು ಅವರು ನೈಜ ಸಂಗತಿಗಳನ್ನು ಮುಚ್ಚಿಡುವ ಪ್ರಯತ್ನದಲ್ಲಿ ಆರೋಪಿಗಳಿಂದ ಬಲಿಪಶು ಮಾಡಲು ಪ್ರಯತ್ನಿಸುತ್ತಿದ್ದಾರೆ.

ಮೃತ ವೈದ್ಯೆಯ ಪೋಷಕರ ಪರ ವಾದ ಮಂಡಿಸಿದ ಹಿರಿಯ ವಕೀಲ ವಿಕಾಶ್ ರಂಜನ್ ಭಟ್ಟಾಚಾರ್ಯ ಅವರು, ಆಕೆ ಅನಾರೋಗ್ಯದಿಂದ ಬಳಲುತ್ತಿದ್ದಾಳೆ ಎಂದು ಆರಂಭದಲ್ಲಿ ದೂರವಾಣಿ ಕರೆ ಬಂದಿದ್ದು, ಕಾಲೇಜಿಗೆ ತಲುಪಿದಾಗ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿಸಲಾಗಿತ್ತಾದರೂ, ಮೂರು ಗಂಟೆಗಳ ಕಾಲ ಕಾದರೂ ಆಕೆಯ ಶವ ನೋಡಲು ಅವಕಾಶ ನೀಡಿರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂನ ಓದಿ : ಆರ್‌ಜಿ ಕರ್ ವೈದ್ಯಕೀಯ ಕಾಲೇಜು ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಘಟನೆ ರಾತ್ರಿ ನಡೆದಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...