Homeಮುಖಪುಟಕೊಲ್ಕತ್ತಾ: ಗಣರಾಜ್ಯೋತ್ಸವ ಪೂರ್ವಾಭ್ಯಾಸದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಸ್ತಬ್ಧಚಿತ್ರ ಪ್ರದರ್ಶನ

ಕೊಲ್ಕತ್ತಾ: ಗಣರಾಜ್ಯೋತ್ಸವ ಪೂರ್ವಾಭ್ಯಾಸದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಸ್ತಬ್ಧಚಿತ್ರ ಪ್ರದರ್ಶನ

- Advertisement -
- Advertisement -

ಒಕ್ಕೂಟ ಸರ್ಕಾರದಿಂದ ತಿರಸ್ಕರಿಸಲ್ಪಟ್ಟ ಪಶ್ಚಿಮ ಬಂಗಾಳ ಸರ್ಕಾರದ ಗಣರಾಜ್ಯೋತ್ಸವದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸ್ತಬ್ಧಚಿತ್ರವನ್ನು ಸೋಮವಾರ ಕೊಲ್ಕತ್ತಾದಲ್ಲಿ ಸಂಪೂರ್ಣ ಡ್ರೆಸ್ ರಿಹರ್ಸಲ್‌ನಲ್ಲಿ ಪ್ರದರ್ಶಿಸುತ್ತಿರುವುದು ಕಂಡುಬಂದಿದೆ.

ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ನೇತಾಜಿ ಸ್ತಬ್ಧಚಿತ್ರವನ್ನು ಸೇರಿಸಬೇಕೆಂದು ಒತ್ತಾಯಿಸಿ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.  ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪಾತ್ರವನ್ನು ಗೌರವಿಸಲು ಈ ಸ್ತಬ್ಧಚಿತ್ರವನ್ನು ರಚಿಸಲಾಗಿತ್ತು.

ಕೋವಿಡ್ ಮಾರ್ಗಸೂಚಿಗಳ ಕಾರಣದಿಂದಾಗಿ ಸೀಮಿತ ಸಮಯ ಮತ್ತು ಸ್ಥಳಾವಕಾಶದ ಕಾರಣ, ಒಕ್ಕೂಟ ಸರ್ಕಾರ ಈ ವರ್ಷ ಗಣರಾಜ್ಯೋತ್ಸವ ಪರೇಡ್‌ಗೆ ಕೇವಲ 12 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಒಂಬತ್ತು ಸಚಿವಾಲಯಗಳನ್ನು ಮಾತ್ರ ಆಯ್ಕೆ ಮಾಡಿದೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಒಕ್ಕೂಟ ಸರ್ಕಾರ ತಿರಸ್ಕರಿಸಿದ ಸುಭಾಷ್ ಚಂದ್ರ ಬೋಸ್ ಸ್ತಬ್ಧಚಿತ್ರ ಕೊಲ್ಕತ್ತಾದಲ್ಲಿ ಪ್ರದರ್ಶನ: ಬಂಗಾಳ ಸರ್ಕಾರ

ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳದ ಸ್ತಬ್ಧಚಿತ್ರಗಳನ್ನು ತಿರಸ್ಕರಿಸಿರುವುದನ್ನು ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಪರೇಡ್‌ಗೆ ತಮ್ಮ ಸ್ತಬ್ಧಚಿತ್ರ ಆಯ್ಕೆ ಮಾಡದ ನಿರ್ಧಾರದ ವಿರುದ್ಧ ಧ್ವನಿ ಎತ್ತಿದರು.

ಸುಭಾಷ್ ಚಂದ್ರ ಬೋಸ್ ಅವರ ಸ್ತಬ್ಧಚಿತ್ರ ತಿರದ್ಕರಿಸುವ ಮೂಲಕ ಕೇಂದ್ರ ಸರ್ಕಾರ ನೇತಾಜಿಯನ್ನು ಅವಮಾನಿಸಿ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದರು.

“ನಾವು ಕೋಲ್ಕತ್ತಾದಲ್ಲಿ ರೆಡ್ ರೋಡ್‌ನಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಟ್ಯಾಬ್ಲೋವನ್ನು ಪ್ರದರ್ಶಿಸುತ್ತೇವೆ” ಎಂದು  ಈ ಹಿಂದೆ ಮಮತಾ ಬ್ಯಾನರ್ಜಿ ತಿಳಿಸಿದ್ದರು.

ಸ್ವಾತಂತ್ರ್ಯ ಹೋರಾಟಗಾರನ ಪ್ರಾಮುಖ್ಯತೆ ಬಿಂಬಿಸುವ ಪಶ್ಚಿಮ ಬಂಗಾಳದ ಟ್ಯಾಬ್ಲೋವನ್ನು ತಿರಸ್ಕರಿಸಿ, ದೆಹಲಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ನಿರ್ಮಿಸುತ್ತಿರುವುದಕ್ಕಾಗಿ ಮಮತಾ ಬ್ಯಾನರ್ಜಿ ಒಕ್ಕೂಟ ಸರ್ಕಾರವನ್ನು ಟೀಕಿಸಿದ್ದಾರೆ. ಇದು ರಾಜ್ಯದ ಬಗ್ಗೆ ಕೇಂದ್ರದ ಅಸಡ್ಡೆ ಧೋರಣೆಯನ್ನು ಎತ್ತಿ ತೋರಿಸುತ್ತದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇನ್ನು,ನೇತಾಜಿ ಅವರ 125 ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಮಾರಂಭದಲ್ಲಿ ಮಾತನಾಡಿರುವ ಅವರು, ಬಿಜೆಪಿ ನೇತೃತ್ವದ ಸರ್ಕಾರ ನೇತಾಜಿ ಕಣ್ಮರೆಯ ಹಿಂದಿನ ರಹಸ್ಯವನ್ನು ಬಹಿರಂಗಪಡಿಸುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಸರ್ಕಾರ ಏಕೆ ನೇತಾಜಿ ಸುಭಾಷ್ ಚಂದ್ರ ಬೋಸ್‌ ಅವರ ಸಾವಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಿಲ್ಲ ಎಂದು ಒಕ್ಕೂಟ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಇದನ್ನೂ ಓದಿ: ಸುಭಾಷ್ ಚಂದ್ರ ಬೋಸ್ ಸಾವಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಲು ಮಮತಾ ಬ್ಯಾನರ್ಜಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...