Homeಮುಖಪುಟಕೋಲ್ಕತಾ: ದುರ್ಗಾಪೂಜೆಯಲ್ಲಿ ಮಹಾತ್ಮಾ ಗಾಂಧಿಯನ್ನು ರಾಕ್ಷಸನಂತೆ ಬಿಂಬಿಸಿದ ಹಿಂದೂ ಮಹಾಸಭಾ

ಕೋಲ್ಕತಾ: ದುರ್ಗಾಪೂಜೆಯಲ್ಲಿ ಮಹಾತ್ಮಾ ಗಾಂಧಿಯನ್ನು ರಾಕ್ಷಸನಂತೆ ಬಿಂಬಿಸಿದ ಹಿಂದೂ ಮಹಾಸಭಾ

- Advertisement -
- Advertisement -

ದಕ್ಷಿಣ ಕೋಲ್ಕತ್ತಾದಲ್ಲಿ ಹಿಂದೂ ಮಹಾಸಭಾ ಆಯೋಜಿಸಿರುವ ದುರ್ಗಾ ಪೂಜೆಯಲ್ಲಿ ಮಹಿಷಾಸುರನ ಬದಲಿಗೆ ಮಹಾತ್ಮಗಾಂಧಿಯ ಮೂರ್ತಿಯನ್ನು ರಚಿಸಿ ಅವರನ್ನು ರಾಕ್ಷಸ ಎಂಬಂತೆ ಹೋಲಿಸಿರುವ ಘಟನೆ ನಡೆದಿದೆ. ದೇವಿಯು ಮಹಿಷಾಸುರನ ಬದಲಿಗೆ ಮಹಾತ್ಮಾಗಾಂಧಿಯನ್ನು ವಧಿಸುತ್ತಿರುವಂತೆ ಮೂರ್ತಿಯನ್ನು ರಚಿಸಲಾಗಿದೆ. ಆದರೆ ಸಂಘಟನೆಯು ಈ ಸಾಮ್ಯತೆ ಕಾಕತಾಳೀಯ ಎಂದು ಹೇಳಿಕೊಂಡಿದೆ.

ಸಾಂಪ್ರದಾಯಿಕವಾಗಿ ದುರ್ಗಾಪೂಜಾ ಪೆಂಡಾಲ್‌ಗಳಲ್ಲಿನ ವಿಗ್ರಹಗಳಲ್ಲಿ ದೇವಿಯ ಈಟಿಯು ಮಹಿಷಾಸುರನಿಗೆ ಚುಚ್ಚುತ್ತಿರುವಂತೆ ಇರುತ್ತವೆ. ಜೊತೆಗೆ ಮಹಿಷಾಸುರನನ್ನು ಸಾಮಾನ್ಯವಾಗಿ ದಪ್ಪ ಕೂದಲು, ದೊಡ್ಡ ಕಣ್ಣುಗಳು ಮತ್ತು ಸ್ನಾಯುಗಳ ರಚನೆಯೊಂದಿಗೆ ತೋರಿಸಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದೂ ಮಹಾಸಭಾದ ಈ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತಪಡಿಸಲಾಗಿದೆ. ಚಿತ್ರವನ್ನು ಮೊದಲಿಗೆ ಪತ್ರಕರ್ತ ಇಂದ್ರದೀಪ್ ಭಟ್ಟಾಚಾರ್ಯ ಅವರು ಟ್ವೀಟ್ ಮಾಡಿದ್ದರು. ಇದರ ನಂತರ ಅವರು ಅದನ್ನು ಡಿಲೀಟ್ ಮಾಡಿದ್ದರು. ಚಿತ್ರವು ಹಬ್ಬದ ನಡುವೆ ಉದ್ವಿಗ್ನತೆಯನ್ನು ಉಂಟುಮಾಡಬಹುದು ಎಂದು ಕೋಲ್ಕತ್ತಾ ಪೊಲೀಸರು ಅದನ್ನು ಡಿಲೀಟ್ ಮಾಡಲು ಸೂಚನೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದಾದ ಕೆಲವೇ ದಿನಗಳಲ್ಲಿ, ಬಂಗಾಳಿ ಸುದ್ದಿ ವಾಹಿನಿಗಳು ಪೆಂಡಾಲ್ ಮತ್ತು ವಿಗ್ರಹವನ್ನು ತೋರಿಸಲಾರಂಭಿಸಿವೆ. ಕೊನೆಗೆ ಹಿಂದೂ ಮಹಾಸಭಾ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿದೆ.

ಇದನ್ನೂ ಓದಿ: ಶ್ರದ್ಧಾಂಜಲಿ; ಗಾಂಧಿವಾದಿಗಳ ಬಗ್ಗೆ ಇದ್ದ ತಕರಾರುಗಳಿಗೆ ಉತ್ತರ ನೀಡುತ್ತಿದ್ದ ದೊರೆಸ್ವಾಮಿಯವರು..

“ಇಲ್ಲಿ ಪೂಜಿಸಲ್ಪಟ್ಟ ದುರ್ಗಾ ವಿಗ್ರಹದ ಪಕ್ಕದಲ್ಲಿ ಇರುವ ಮುಖವು ಮಹಾತ್ಮ ಗಾಂಧಿಯವರಂತೆಯೇ ಕಾಣುತ್ತದೆ. ಆದರೆ ಸಾಮ್ಯತೆಗಳು ಕೇವಲ ಕಾಕತಾಳೀಯ. ಅದರ ಫೋಟೋಗಳು ವೈರಲ್ ಆದ ನಂತರ, ಪೊಲೀಸ್ ತಂಡವು ಭೇಟಿ ನೀಡಿ ಮುಖವನ್ನು ಬದಲಾಯಿಸುವಂತೆ ನಮ್ಮನ್ನು ಕೇಳಿದೆ” ಎಂದು ಅಖಿಲ ಭಾರತೀಯ ಹಿಂದೂ ಮಹಾಸಭಾ ರಾಜ್ಯ ಕಾರ್ಯಾಧ್ಯಕ್ಷ ಚಂದ್ರಚೂರ್ ಗೋಸ್ವಾಮಿ ಹೇಳಿದ್ದಾರೆ.

ಪೊಲೀಸರು ಅದನ್ನು ಬದಲಾಯಿಸಲು ಕೇಳಿದ ನಂತರ ಅವರು ಮಹಿಷಾಸುರನ ವಿಗ್ರಹಕ್ಕೆ ಮೀಸೆ ಮತ್ತು ಕೂದಲು ಹಾಕಿದ್ದಾಗಿ ಅವರು ಹೇಳಿದ್ದು, ಜೊತಗೆ “ಗಾಂಧಿಯನ್ನು ಟೀಕಿಸುವ ಅಗತ್ಯವಿದೆ” ಎಂದೂ ಹೇಳಿದ್ದಾರೆ.

ಬಿಜೆಪಿ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಮತ್ತು ಹಿಂದೂ ಮಹಾಸಭಾದ ಬಂಗಾಳ ವಿಭಾಗವು ಘಟನೆಯನ್ನು ಖಂಡಿಸಿವೆ.

“ಅಖಿಲ ಭಾರತೀಯ ಹಿಂದೂ ಮಹಾಸಭಾ ಮಾಡಿದ್ದನ್ನು ನಾವು ಬೆಂಬಲಿಸುವುದಿಲ್ಲ. ನಾವು ಅದನ್ನು ಖಂಡಿಸುತ್ತೇವೆ. ಗಾಂಧೀಜಿಯವರ ಅಭಿಪ್ರಾಯಗಳೊಂದಿಗೆ ನಮಗೂ ಭಿನ್ನಾಭಿಪ್ರಾಯಗಳಿವೆ, ಆದರೆ ಇದು ಅದರ ವಿರುದ್ಧ ಪ್ರತಿಭಟಿಸುವ ಮಾರ್ಗವಲ್ಲ” ಎಂದು ಬಂಗಾಳ ಪರಿಷತ್ ಹಿಂದೂ ಮಹಾಸಭಾದ ಅಧ್ಯಕ್ಷ ಸಂದೀಪ್ ಮುಖರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಗಾಂಧಿ ಸ್ಮರಣೆಯ ಕೆಲವು ವೈರುಧ್ಯಗಳು

ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ರಾಜ್ಯ ವಕ್ತಾರ ಕುನಾಲ್ ಘೋಷ್, “ಇದನ್ನು ನಿಜವಾಗಿಯೂ ಮಾಡಿದ್ದರೆ, ಅದು ಅಪರಾಧವಲ್ಲದೇ ಬೇರೇನೂ ಅಲ್ಲ. ಇದು ರಾಷ್ಟ್ರಪಿತನಿಗೆ ಮಾಡಿದ ಅವಮಾನ. ಇದು ದೇಶದ ಪ್ರತಿಯೊಬ್ಬ ಪ್ರಜೆಗೂ ಮಾಡಿದ ಅವಮಾನ. ಇಂತಹ ಅವಮಾನದ ಬಗ್ಗೆ ಬಿಜೆಪಿ ಏನು ಹೇಳುತ್ತದೆ? ಗಾಂಧೀಜಿಯ ಹಂತಕ ಯಾವ ಸೈದ್ಧಾಂತಿಕ ಸಂಘಕ್ಕೆ ಸೇರಿದವನು ಎಂದು ನಮಗೆ ತಿಳಿದಿದೆ” ಎಂದು ಅವರು ಹೇಳಿದ್ದಾರೆ.

“ಇದು ದುರದೃಷ್ಟಕರ ನಡೆ. ನಾವು ಅದನ್ನು ಖಂಡಿಸುತ್ತೇವೆ. ಇದು ಕಳಪೆ ಅಭಿರುಚಿಯಲ್ಲಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಸುದ್ದಿಗಾರರಿಗೆ ತಿಳಿಸಿದರು.

“ಇದಾಗಿದೆ ಬಿಜೆಪಿ ಮತ್ತು ಸಂಘಪರಿವಾರ. ಅವರಿಗೆ ರಾಷ್ಟ್ರವನ್ನು ವಿಭಜಿಸುವುದು ಮಾತ್ರ ಗೊತ್ತು. ಅವರು ಬ್ರಿಟಿಷ್ ವಿರೋಧಿ ಶಕ್ತಿಗಳನ್ನು ‘ಅಸುರ’ ಮತ್ತು ಬ್ರಿಟಿಷರನ್ನು (ಸ್ವಾತಂತ್ರ್ಯ ಪೂರ್ವದ ಅವಧಿಯಲ್ಲಿ ವಸಾಹತುಶಾಹಿ ಬ್ರಿಟಿಷರು) ದುರ್ಗೆ ಎಂದು ಪರಿಗಣಿಸುತ್ತಾರೆ” ಎಂದು ಸಿಪಿಐ(ಎಂ) ಕೇಂದ್ರ ಸಮಿತಿಯ ಸದಸ್ಯ ಸಮಿಕ್ ಲಾಹಿರಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಈ ವರ್ಷ, ಜನವರಿ 31 ರಂದು, ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು, ಹಿಂದೂ ಮಹಾಸಭಾವು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಅವರ ಹಂತಕ ನಾಥೂರಾಂ ಗೋಡ್ಸೆ ಮತ್ತು ಗಾಂಧಿ ಹತ್ಯೆಯ ಪ್ರಕರಣದ ಸಹ ಆರೋಪಿ ನಾರಾಯಣ ಆಪ್ಟೆಗೆ ಶ್ರದ್ಧಾಂಜಲಿ ಸಲ್ಲಿಸಿ “ಸ್ಮೃತಿ ದಿವಸ್” ಆಚರಿಸಿತ್ತು.

ಇದನ್ನೂ ಓದಿ: ಗೋಡ್ಸೆ ವಿಜೃಂಭಿಸುವ ಕಾಲದಲ್ಲಿ ಗಾಂಧಿವಾದದ ಕನವರಿಕೆ..

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿ, ಅವರ ಗೌರವವಾಗಿ ಖಾದಿ ಮತ್ತು ಕರಕುಶಲ ಉತ್ಪನ್ನಗಳನ್ನು ಖರೀದಿಸಲು ಎಲ್ಲರಿಗೂ ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ, ‘‘ಗಾಂಧಿ ಅವರನ್ನು ಕೊಂದ ಸಿದ್ಧಾಂತವು ಕಳೆದ ಎಂಟು ವರ್ಷಗಳಲ್ಲಿ ಅಸಮಾನತೆ, ವಿಭಜನೆ ಮತ್ತು ಕಷ್ಟಪಟ್ಟು ಗೆದ್ದ ಸ್ವಾತಂತ್ರ್ಯವನ್ನು ಮಣ್ಣುಪಾಲು ಮಾಡಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...