Homeಮುಖಪುಟಕೋಲ್ಕತಾ: ದುರ್ಗಾಪೂಜೆಯಲ್ಲಿ ಮಹಾತ್ಮಾ ಗಾಂಧಿಯನ್ನು ರಾಕ್ಷಸನಂತೆ ಬಿಂಬಿಸಿದ ಹಿಂದೂ ಮಹಾಸಭಾ

ಕೋಲ್ಕತಾ: ದುರ್ಗಾಪೂಜೆಯಲ್ಲಿ ಮಹಾತ್ಮಾ ಗಾಂಧಿಯನ್ನು ರಾಕ್ಷಸನಂತೆ ಬಿಂಬಿಸಿದ ಹಿಂದೂ ಮಹಾಸಭಾ

- Advertisement -
- Advertisement -

ದಕ್ಷಿಣ ಕೋಲ್ಕತ್ತಾದಲ್ಲಿ ಹಿಂದೂ ಮಹಾಸಭಾ ಆಯೋಜಿಸಿರುವ ದುರ್ಗಾ ಪೂಜೆಯಲ್ಲಿ ಮಹಿಷಾಸುರನ ಬದಲಿಗೆ ಮಹಾತ್ಮಗಾಂಧಿಯ ಮೂರ್ತಿಯನ್ನು ರಚಿಸಿ ಅವರನ್ನು ರಾಕ್ಷಸ ಎಂಬಂತೆ ಹೋಲಿಸಿರುವ ಘಟನೆ ನಡೆದಿದೆ. ದೇವಿಯು ಮಹಿಷಾಸುರನ ಬದಲಿಗೆ ಮಹಾತ್ಮಾಗಾಂಧಿಯನ್ನು ವಧಿಸುತ್ತಿರುವಂತೆ ಮೂರ್ತಿಯನ್ನು ರಚಿಸಲಾಗಿದೆ. ಆದರೆ ಸಂಘಟನೆಯು ಈ ಸಾಮ್ಯತೆ ಕಾಕತಾಳೀಯ ಎಂದು ಹೇಳಿಕೊಂಡಿದೆ.

ಸಾಂಪ್ರದಾಯಿಕವಾಗಿ ದುರ್ಗಾಪೂಜಾ ಪೆಂಡಾಲ್‌ಗಳಲ್ಲಿನ ವಿಗ್ರಹಗಳಲ್ಲಿ ದೇವಿಯ ಈಟಿಯು ಮಹಿಷಾಸುರನಿಗೆ ಚುಚ್ಚುತ್ತಿರುವಂತೆ ಇರುತ್ತವೆ. ಜೊತೆಗೆ ಮಹಿಷಾಸುರನನ್ನು ಸಾಮಾನ್ಯವಾಗಿ ದಪ್ಪ ಕೂದಲು, ದೊಡ್ಡ ಕಣ್ಣುಗಳು ಮತ್ತು ಸ್ನಾಯುಗಳ ರಚನೆಯೊಂದಿಗೆ ತೋರಿಸಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದೂ ಮಹಾಸಭಾದ ಈ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತಪಡಿಸಲಾಗಿದೆ. ಚಿತ್ರವನ್ನು ಮೊದಲಿಗೆ ಪತ್ರಕರ್ತ ಇಂದ್ರದೀಪ್ ಭಟ್ಟಾಚಾರ್ಯ ಅವರು ಟ್ವೀಟ್ ಮಾಡಿದ್ದರು. ಇದರ ನಂತರ ಅವರು ಅದನ್ನು ಡಿಲೀಟ್ ಮಾಡಿದ್ದರು. ಚಿತ್ರವು ಹಬ್ಬದ ನಡುವೆ ಉದ್ವಿಗ್ನತೆಯನ್ನು ಉಂಟುಮಾಡಬಹುದು ಎಂದು ಕೋಲ್ಕತ್ತಾ ಪೊಲೀಸರು ಅದನ್ನು ಡಿಲೀಟ್ ಮಾಡಲು ಸೂಚನೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದಾದ ಕೆಲವೇ ದಿನಗಳಲ್ಲಿ, ಬಂಗಾಳಿ ಸುದ್ದಿ ವಾಹಿನಿಗಳು ಪೆಂಡಾಲ್ ಮತ್ತು ವಿಗ್ರಹವನ್ನು ತೋರಿಸಲಾರಂಭಿಸಿವೆ. ಕೊನೆಗೆ ಹಿಂದೂ ಮಹಾಸಭಾ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿದೆ.

ಇದನ್ನೂ ಓದಿ: ಶ್ರದ್ಧಾಂಜಲಿ; ಗಾಂಧಿವಾದಿಗಳ ಬಗ್ಗೆ ಇದ್ದ ತಕರಾರುಗಳಿಗೆ ಉತ್ತರ ನೀಡುತ್ತಿದ್ದ ದೊರೆಸ್ವಾಮಿಯವರು..

“ಇಲ್ಲಿ ಪೂಜಿಸಲ್ಪಟ್ಟ ದುರ್ಗಾ ವಿಗ್ರಹದ ಪಕ್ಕದಲ್ಲಿ ಇರುವ ಮುಖವು ಮಹಾತ್ಮ ಗಾಂಧಿಯವರಂತೆಯೇ ಕಾಣುತ್ತದೆ. ಆದರೆ ಸಾಮ್ಯತೆಗಳು ಕೇವಲ ಕಾಕತಾಳೀಯ. ಅದರ ಫೋಟೋಗಳು ವೈರಲ್ ಆದ ನಂತರ, ಪೊಲೀಸ್ ತಂಡವು ಭೇಟಿ ನೀಡಿ ಮುಖವನ್ನು ಬದಲಾಯಿಸುವಂತೆ ನಮ್ಮನ್ನು ಕೇಳಿದೆ” ಎಂದು ಅಖಿಲ ಭಾರತೀಯ ಹಿಂದೂ ಮಹಾಸಭಾ ರಾಜ್ಯ ಕಾರ್ಯಾಧ್ಯಕ್ಷ ಚಂದ್ರಚೂರ್ ಗೋಸ್ವಾಮಿ ಹೇಳಿದ್ದಾರೆ.

ಪೊಲೀಸರು ಅದನ್ನು ಬದಲಾಯಿಸಲು ಕೇಳಿದ ನಂತರ ಅವರು ಮಹಿಷಾಸುರನ ವಿಗ್ರಹಕ್ಕೆ ಮೀಸೆ ಮತ್ತು ಕೂದಲು ಹಾಕಿದ್ದಾಗಿ ಅವರು ಹೇಳಿದ್ದು, ಜೊತಗೆ “ಗಾಂಧಿಯನ್ನು ಟೀಕಿಸುವ ಅಗತ್ಯವಿದೆ” ಎಂದೂ ಹೇಳಿದ್ದಾರೆ.

ಬಿಜೆಪಿ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಮತ್ತು ಹಿಂದೂ ಮಹಾಸಭಾದ ಬಂಗಾಳ ವಿಭಾಗವು ಘಟನೆಯನ್ನು ಖಂಡಿಸಿವೆ.

“ಅಖಿಲ ಭಾರತೀಯ ಹಿಂದೂ ಮಹಾಸಭಾ ಮಾಡಿದ್ದನ್ನು ನಾವು ಬೆಂಬಲಿಸುವುದಿಲ್ಲ. ನಾವು ಅದನ್ನು ಖಂಡಿಸುತ್ತೇವೆ. ಗಾಂಧೀಜಿಯವರ ಅಭಿಪ್ರಾಯಗಳೊಂದಿಗೆ ನಮಗೂ ಭಿನ್ನಾಭಿಪ್ರಾಯಗಳಿವೆ, ಆದರೆ ಇದು ಅದರ ವಿರುದ್ಧ ಪ್ರತಿಭಟಿಸುವ ಮಾರ್ಗವಲ್ಲ” ಎಂದು ಬಂಗಾಳ ಪರಿಷತ್ ಹಿಂದೂ ಮಹಾಸಭಾದ ಅಧ್ಯಕ್ಷ ಸಂದೀಪ್ ಮುಖರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಗಾಂಧಿ ಸ್ಮರಣೆಯ ಕೆಲವು ವೈರುಧ್ಯಗಳು

ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ರಾಜ್ಯ ವಕ್ತಾರ ಕುನಾಲ್ ಘೋಷ್, “ಇದನ್ನು ನಿಜವಾಗಿಯೂ ಮಾಡಿದ್ದರೆ, ಅದು ಅಪರಾಧವಲ್ಲದೇ ಬೇರೇನೂ ಅಲ್ಲ. ಇದು ರಾಷ್ಟ್ರಪಿತನಿಗೆ ಮಾಡಿದ ಅವಮಾನ. ಇದು ದೇಶದ ಪ್ರತಿಯೊಬ್ಬ ಪ್ರಜೆಗೂ ಮಾಡಿದ ಅವಮಾನ. ಇಂತಹ ಅವಮಾನದ ಬಗ್ಗೆ ಬಿಜೆಪಿ ಏನು ಹೇಳುತ್ತದೆ? ಗಾಂಧೀಜಿಯ ಹಂತಕ ಯಾವ ಸೈದ್ಧಾಂತಿಕ ಸಂಘಕ್ಕೆ ಸೇರಿದವನು ಎಂದು ನಮಗೆ ತಿಳಿದಿದೆ” ಎಂದು ಅವರು ಹೇಳಿದ್ದಾರೆ.

“ಇದು ದುರದೃಷ್ಟಕರ ನಡೆ. ನಾವು ಅದನ್ನು ಖಂಡಿಸುತ್ತೇವೆ. ಇದು ಕಳಪೆ ಅಭಿರುಚಿಯಲ್ಲಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಸುದ್ದಿಗಾರರಿಗೆ ತಿಳಿಸಿದರು.

“ಇದಾಗಿದೆ ಬಿಜೆಪಿ ಮತ್ತು ಸಂಘಪರಿವಾರ. ಅವರಿಗೆ ರಾಷ್ಟ್ರವನ್ನು ವಿಭಜಿಸುವುದು ಮಾತ್ರ ಗೊತ್ತು. ಅವರು ಬ್ರಿಟಿಷ್ ವಿರೋಧಿ ಶಕ್ತಿಗಳನ್ನು ‘ಅಸುರ’ ಮತ್ತು ಬ್ರಿಟಿಷರನ್ನು (ಸ್ವಾತಂತ್ರ್ಯ ಪೂರ್ವದ ಅವಧಿಯಲ್ಲಿ ವಸಾಹತುಶಾಹಿ ಬ್ರಿಟಿಷರು) ದುರ್ಗೆ ಎಂದು ಪರಿಗಣಿಸುತ್ತಾರೆ” ಎಂದು ಸಿಪಿಐ(ಎಂ) ಕೇಂದ್ರ ಸಮಿತಿಯ ಸದಸ್ಯ ಸಮಿಕ್ ಲಾಹಿರಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಈ ವರ್ಷ, ಜನವರಿ 31 ರಂದು, ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು, ಹಿಂದೂ ಮಹಾಸಭಾವು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಅವರ ಹಂತಕ ನಾಥೂರಾಂ ಗೋಡ್ಸೆ ಮತ್ತು ಗಾಂಧಿ ಹತ್ಯೆಯ ಪ್ರಕರಣದ ಸಹ ಆರೋಪಿ ನಾರಾಯಣ ಆಪ್ಟೆಗೆ ಶ್ರದ್ಧಾಂಜಲಿ ಸಲ್ಲಿಸಿ “ಸ್ಮೃತಿ ದಿವಸ್” ಆಚರಿಸಿತ್ತು.

ಇದನ್ನೂ ಓದಿ: ಗೋಡ್ಸೆ ವಿಜೃಂಭಿಸುವ ಕಾಲದಲ್ಲಿ ಗಾಂಧಿವಾದದ ಕನವರಿಕೆ..

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿ, ಅವರ ಗೌರವವಾಗಿ ಖಾದಿ ಮತ್ತು ಕರಕುಶಲ ಉತ್ಪನ್ನಗಳನ್ನು ಖರೀದಿಸಲು ಎಲ್ಲರಿಗೂ ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ, ‘‘ಗಾಂಧಿ ಅವರನ್ನು ಕೊಂದ ಸಿದ್ಧಾಂತವು ಕಳೆದ ಎಂಟು ವರ್ಷಗಳಲ್ಲಿ ಅಸಮಾನತೆ, ವಿಭಜನೆ ಮತ್ತು ಕಷ್ಟಪಟ್ಟು ಗೆದ್ದ ಸ್ವಾತಂತ್ರ್ಯವನ್ನು ಮಣ್ಣುಪಾಲು ಮಾಡಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...