Homeಮುಖಪುಟಕೋಲ್ಕತಾ: ದುರ್ಗಾಪೂಜೆಯಲ್ಲಿ ಮಹಾತ್ಮಾ ಗಾಂಧಿಯನ್ನು ರಾಕ್ಷಸನಂತೆ ಬಿಂಬಿಸಿದ ಹಿಂದೂ ಮಹಾಸಭಾ

ಕೋಲ್ಕತಾ: ದುರ್ಗಾಪೂಜೆಯಲ್ಲಿ ಮಹಾತ್ಮಾ ಗಾಂಧಿಯನ್ನು ರಾಕ್ಷಸನಂತೆ ಬಿಂಬಿಸಿದ ಹಿಂದೂ ಮಹಾಸಭಾ

- Advertisement -
- Advertisement -

ದಕ್ಷಿಣ ಕೋಲ್ಕತ್ತಾದಲ್ಲಿ ಹಿಂದೂ ಮಹಾಸಭಾ ಆಯೋಜಿಸಿರುವ ದುರ್ಗಾ ಪೂಜೆಯಲ್ಲಿ ಮಹಿಷಾಸುರನ ಬದಲಿಗೆ ಮಹಾತ್ಮಗಾಂಧಿಯ ಮೂರ್ತಿಯನ್ನು ರಚಿಸಿ ಅವರನ್ನು ರಾಕ್ಷಸ ಎಂಬಂತೆ ಹೋಲಿಸಿರುವ ಘಟನೆ ನಡೆದಿದೆ. ದೇವಿಯು ಮಹಿಷಾಸುರನ ಬದಲಿಗೆ ಮಹಾತ್ಮಾಗಾಂಧಿಯನ್ನು ವಧಿಸುತ್ತಿರುವಂತೆ ಮೂರ್ತಿಯನ್ನು ರಚಿಸಲಾಗಿದೆ. ಆದರೆ ಸಂಘಟನೆಯು ಈ ಸಾಮ್ಯತೆ ಕಾಕತಾಳೀಯ ಎಂದು ಹೇಳಿಕೊಂಡಿದೆ.

ಸಾಂಪ್ರದಾಯಿಕವಾಗಿ ದುರ್ಗಾಪೂಜಾ ಪೆಂಡಾಲ್‌ಗಳಲ್ಲಿನ ವಿಗ್ರಹಗಳಲ್ಲಿ ದೇವಿಯ ಈಟಿಯು ಮಹಿಷಾಸುರನಿಗೆ ಚುಚ್ಚುತ್ತಿರುವಂತೆ ಇರುತ್ತವೆ. ಜೊತೆಗೆ ಮಹಿಷಾಸುರನನ್ನು ಸಾಮಾನ್ಯವಾಗಿ ದಪ್ಪ ಕೂದಲು, ದೊಡ್ಡ ಕಣ್ಣುಗಳು ಮತ್ತು ಸ್ನಾಯುಗಳ ರಚನೆಯೊಂದಿಗೆ ತೋರಿಸಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದೂ ಮಹಾಸಭಾದ ಈ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತಪಡಿಸಲಾಗಿದೆ. ಚಿತ್ರವನ್ನು ಮೊದಲಿಗೆ ಪತ್ರಕರ್ತ ಇಂದ್ರದೀಪ್ ಭಟ್ಟಾಚಾರ್ಯ ಅವರು ಟ್ವೀಟ್ ಮಾಡಿದ್ದರು. ಇದರ ನಂತರ ಅವರು ಅದನ್ನು ಡಿಲೀಟ್ ಮಾಡಿದ್ದರು. ಚಿತ್ರವು ಹಬ್ಬದ ನಡುವೆ ಉದ್ವಿಗ್ನತೆಯನ್ನು ಉಂಟುಮಾಡಬಹುದು ಎಂದು ಕೋಲ್ಕತ್ತಾ ಪೊಲೀಸರು ಅದನ್ನು ಡಿಲೀಟ್ ಮಾಡಲು ಸೂಚನೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದಾದ ಕೆಲವೇ ದಿನಗಳಲ್ಲಿ, ಬಂಗಾಳಿ ಸುದ್ದಿ ವಾಹಿನಿಗಳು ಪೆಂಡಾಲ್ ಮತ್ತು ವಿಗ್ರಹವನ್ನು ತೋರಿಸಲಾರಂಭಿಸಿವೆ. ಕೊನೆಗೆ ಹಿಂದೂ ಮಹಾಸಭಾ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿದೆ.

ಇದನ್ನೂ ಓದಿ: ಶ್ರದ್ಧಾಂಜಲಿ; ಗಾಂಧಿವಾದಿಗಳ ಬಗ್ಗೆ ಇದ್ದ ತಕರಾರುಗಳಿಗೆ ಉತ್ತರ ನೀಡುತ್ತಿದ್ದ ದೊರೆಸ್ವಾಮಿಯವರು..

“ಇಲ್ಲಿ ಪೂಜಿಸಲ್ಪಟ್ಟ ದುರ್ಗಾ ವಿಗ್ರಹದ ಪಕ್ಕದಲ್ಲಿ ಇರುವ ಮುಖವು ಮಹಾತ್ಮ ಗಾಂಧಿಯವರಂತೆಯೇ ಕಾಣುತ್ತದೆ. ಆದರೆ ಸಾಮ್ಯತೆಗಳು ಕೇವಲ ಕಾಕತಾಳೀಯ. ಅದರ ಫೋಟೋಗಳು ವೈರಲ್ ಆದ ನಂತರ, ಪೊಲೀಸ್ ತಂಡವು ಭೇಟಿ ನೀಡಿ ಮುಖವನ್ನು ಬದಲಾಯಿಸುವಂತೆ ನಮ್ಮನ್ನು ಕೇಳಿದೆ” ಎಂದು ಅಖಿಲ ಭಾರತೀಯ ಹಿಂದೂ ಮಹಾಸಭಾ ರಾಜ್ಯ ಕಾರ್ಯಾಧ್ಯಕ್ಷ ಚಂದ್ರಚೂರ್ ಗೋಸ್ವಾಮಿ ಹೇಳಿದ್ದಾರೆ.

ಪೊಲೀಸರು ಅದನ್ನು ಬದಲಾಯಿಸಲು ಕೇಳಿದ ನಂತರ ಅವರು ಮಹಿಷಾಸುರನ ವಿಗ್ರಹಕ್ಕೆ ಮೀಸೆ ಮತ್ತು ಕೂದಲು ಹಾಕಿದ್ದಾಗಿ ಅವರು ಹೇಳಿದ್ದು, ಜೊತಗೆ “ಗಾಂಧಿಯನ್ನು ಟೀಕಿಸುವ ಅಗತ್ಯವಿದೆ” ಎಂದೂ ಹೇಳಿದ್ದಾರೆ.

ಬಿಜೆಪಿ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಮತ್ತು ಹಿಂದೂ ಮಹಾಸಭಾದ ಬಂಗಾಳ ವಿಭಾಗವು ಘಟನೆಯನ್ನು ಖಂಡಿಸಿವೆ.

“ಅಖಿಲ ಭಾರತೀಯ ಹಿಂದೂ ಮಹಾಸಭಾ ಮಾಡಿದ್ದನ್ನು ನಾವು ಬೆಂಬಲಿಸುವುದಿಲ್ಲ. ನಾವು ಅದನ್ನು ಖಂಡಿಸುತ್ತೇವೆ. ಗಾಂಧೀಜಿಯವರ ಅಭಿಪ್ರಾಯಗಳೊಂದಿಗೆ ನಮಗೂ ಭಿನ್ನಾಭಿಪ್ರಾಯಗಳಿವೆ, ಆದರೆ ಇದು ಅದರ ವಿರುದ್ಧ ಪ್ರತಿಭಟಿಸುವ ಮಾರ್ಗವಲ್ಲ” ಎಂದು ಬಂಗಾಳ ಪರಿಷತ್ ಹಿಂದೂ ಮಹಾಸಭಾದ ಅಧ್ಯಕ್ಷ ಸಂದೀಪ್ ಮುಖರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಗಾಂಧಿ ಸ್ಮರಣೆಯ ಕೆಲವು ವೈರುಧ್ಯಗಳು

ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ರಾಜ್ಯ ವಕ್ತಾರ ಕುನಾಲ್ ಘೋಷ್, “ಇದನ್ನು ನಿಜವಾಗಿಯೂ ಮಾಡಿದ್ದರೆ, ಅದು ಅಪರಾಧವಲ್ಲದೇ ಬೇರೇನೂ ಅಲ್ಲ. ಇದು ರಾಷ್ಟ್ರಪಿತನಿಗೆ ಮಾಡಿದ ಅವಮಾನ. ಇದು ದೇಶದ ಪ್ರತಿಯೊಬ್ಬ ಪ್ರಜೆಗೂ ಮಾಡಿದ ಅವಮಾನ. ಇಂತಹ ಅವಮಾನದ ಬಗ್ಗೆ ಬಿಜೆಪಿ ಏನು ಹೇಳುತ್ತದೆ? ಗಾಂಧೀಜಿಯ ಹಂತಕ ಯಾವ ಸೈದ್ಧಾಂತಿಕ ಸಂಘಕ್ಕೆ ಸೇರಿದವನು ಎಂದು ನಮಗೆ ತಿಳಿದಿದೆ” ಎಂದು ಅವರು ಹೇಳಿದ್ದಾರೆ.

“ಇದು ದುರದೃಷ್ಟಕರ ನಡೆ. ನಾವು ಅದನ್ನು ಖಂಡಿಸುತ್ತೇವೆ. ಇದು ಕಳಪೆ ಅಭಿರುಚಿಯಲ್ಲಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಸುದ್ದಿಗಾರರಿಗೆ ತಿಳಿಸಿದರು.

“ಇದಾಗಿದೆ ಬಿಜೆಪಿ ಮತ್ತು ಸಂಘಪರಿವಾರ. ಅವರಿಗೆ ರಾಷ್ಟ್ರವನ್ನು ವಿಭಜಿಸುವುದು ಮಾತ್ರ ಗೊತ್ತು. ಅವರು ಬ್ರಿಟಿಷ್ ವಿರೋಧಿ ಶಕ್ತಿಗಳನ್ನು ‘ಅಸುರ’ ಮತ್ತು ಬ್ರಿಟಿಷರನ್ನು (ಸ್ವಾತಂತ್ರ್ಯ ಪೂರ್ವದ ಅವಧಿಯಲ್ಲಿ ವಸಾಹತುಶಾಹಿ ಬ್ರಿಟಿಷರು) ದುರ್ಗೆ ಎಂದು ಪರಿಗಣಿಸುತ್ತಾರೆ” ಎಂದು ಸಿಪಿಐ(ಎಂ) ಕೇಂದ್ರ ಸಮಿತಿಯ ಸದಸ್ಯ ಸಮಿಕ್ ಲಾಹಿರಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಈ ವರ್ಷ, ಜನವರಿ 31 ರಂದು, ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು, ಹಿಂದೂ ಮಹಾಸಭಾವು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಅವರ ಹಂತಕ ನಾಥೂರಾಂ ಗೋಡ್ಸೆ ಮತ್ತು ಗಾಂಧಿ ಹತ್ಯೆಯ ಪ್ರಕರಣದ ಸಹ ಆರೋಪಿ ನಾರಾಯಣ ಆಪ್ಟೆಗೆ ಶ್ರದ್ಧಾಂಜಲಿ ಸಲ್ಲಿಸಿ “ಸ್ಮೃತಿ ದಿವಸ್” ಆಚರಿಸಿತ್ತು.

ಇದನ್ನೂ ಓದಿ: ಗೋಡ್ಸೆ ವಿಜೃಂಭಿಸುವ ಕಾಲದಲ್ಲಿ ಗಾಂಧಿವಾದದ ಕನವರಿಕೆ..

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿ, ಅವರ ಗೌರವವಾಗಿ ಖಾದಿ ಮತ್ತು ಕರಕುಶಲ ಉತ್ಪನ್ನಗಳನ್ನು ಖರೀದಿಸಲು ಎಲ್ಲರಿಗೂ ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ, ‘‘ಗಾಂಧಿ ಅವರನ್ನು ಕೊಂದ ಸಿದ್ಧಾಂತವು ಕಳೆದ ಎಂಟು ವರ್ಷಗಳಲ್ಲಿ ಅಸಮಾನತೆ, ವಿಭಜನೆ ಮತ್ತು ಕಷ್ಟಪಟ್ಟು ಗೆದ್ದ ಸ್ವಾತಂತ್ರ್ಯವನ್ನು ಮಣ್ಣುಪಾಲು ಮಾಡಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...