Homeಮುಖಪುಟಕೊಲ್ಕತ್ತಾ: ಸರ್ಕಾರಿ ಹುದ್ದೆ ಪಡೆದ ಕಾರಣ ಹೆಂಡತಿಯ ಅಂಗೈ ಕತ್ತರಿಸಿದ ಪತಿ

ಕೊಲ್ಕತ್ತಾ: ಸರ್ಕಾರಿ ಹುದ್ದೆ ಪಡೆದ ಕಾರಣ ಹೆಂಡತಿಯ ಅಂಗೈ ಕತ್ತರಿಸಿದ ಪತಿ

- Advertisement -
- Advertisement -

ಕೊಲ್ಕತ್ತಾದ ಪೂರ್ವ ಬುರ್ದ್ವಾನ್‌ನ ಕೇತುಗ್ರಾಮ್‌ನಲ್ಲಿ ಪತ್ನಿಗೆ ಸರ್ಕಾರಿ ನೌಕರಿ ಸಿಕ್ಕಿದ್ದಕ್ಕೆ ಪತಿಯೇ ಆಕೆಯ ಬಲ ಅಂಗೈಯನ್ನು ಕತ್ತರಿಸಿರುವ ಅಮಾನವೀಯ ಘಟನೆ ನಡೆದಿದೆ.

ಸಂತ್ರಸ್ತೆ ರೇಣು ಖಾತುನ್ ಕಳೆದ ಮೂರು ವರ್ಷಗಳಿಂದ ಸರ್ಕಾರಿ ನೌಕರಿ ಪಡೆಯಲು ತಯಾರಿ ನಡೆಸುತ್ತಿದ್ದರು. ಇದಕ್ಕೆ ಆಕೆಯ ಆರೋಪಿ ಪತಿ ಮತ್ತು ಆತನ ಹೆತ್ತವರು ವಿರೋಧಿಸಿದ್ದರು. ಆದರೂ ಛಲ ಬಿಡದೆ ಸಂತ್ರಸ್ತೆ ಸರ್ಕಾರಿ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್‌ ಆಗಿ ಕೆಲಸ ಪಡೆದಿದ್ದರು. ಮುಂದಿನ ವಾರದಿಂದ ಕೆಲಸಕ್ಕೆ ತೆರಳಬೇಕಿದ್ದ ಆಕೆಯ ಬಲ ಅಂಗೈಯನ್ನು ಭಾನುವಾರ ಪತಿ ಕತ್ತರಿಸಿದ್ದಾರೆ.

“ಕಿರಾಣಿ ಅಂಗಡಿ ಮಾಲೀಕನಾಗಿರುವ ಆಕೆಯ ಪತಿ ಮೊಹಮ್ಮದ್ ಮತ್ತು ಆತನ ಮನೆಯವರು ಸರ್ಕಾರಿ ಉದ್ಯೋಗಿಯಾಗಿ ಕೆಲಸ ಮಾಡುವ ರೇಣು ಅವರ ಆಸೆಗೆ ವಿರೋಧ ವ್ಯಕ್ತಪಡಿಸುತ್ತಿದ್ದರು. ಮೊಹಮ್ಮದ್ ಮತ್ತು ಅವರ ಪೋಷಕರು ಪ್ರಸ್ತುತ ತಲೆಮರೆಸಿಕೊಂಡಿದ್ದಾರೆ” ಎಂದು ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಜನಪ್ರಿಯ ಸಿನಿಮಾಗಳ ಗುಣಮಟ್ಟದ ಜೊತೆಗೇ ಪಾತಾಳಕ್ಕೆ ಕುಸಿದ ಸಿನಿಮಾ ಬರೆಹಗಳು

ಮೊಹಮ್ಮದ್ ಮೊದಲು ರೇಣು ಅವರನ್ನು ದಿಂಬಿನಿಂದ ಉಸಿರುಗಟ್ಟುವಂತೆ ಮಾಡಿ ನಂತರ ಆಕೆಯ ಅಂಗೈ ಕತ್ತರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. “ರೇಣು ಪ್ರಜ್ಞಾಹೀನರಾದ ನಂತರ, ಮೊಹಮ್ಮದ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು, ಕತ್ತರಿಸಿದ ಅಂಗೈಯನ್ನು ಮನೆಯಲ್ಲಿ ಅಡಗಿಸಿಟ್ಟಿದ್ದರು. ಆಕೆಗೆ ಪ್ರಜ್ಞೆ ಬಂದು ತನ್ನ ಸ್ಥಿತಿಯನ್ನು ವಿವರಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

“ನಮ್ಮ ಮಗಳು ಮದುವೆಗೆ ಮೊದಲು ಖಾಸಗಿ ಆರೋಗ್ಯ ಘಟಕದಲ್ಲಿ ಕೆಲಸ ಮಾಡುತ್ತಿದ್ದಳು. ಆಕೆಯ ಕೆಲಸ ಮಾಡುವ ನಿರ್ಧಾರಕ್ಕೆ ಆಕೆಯ ಪತಿ ಮತ್ತು ಮನೆಯವರು ವಿರೋಧ ವ್ಯಕ್ತಪಡಿಸುತ್ತಿದ್ದರು. ಇತ್ತೀಚೆಗೆ ಆಕೆ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಹುದ್ದೆಗೆ ಆಯ್ಕೆಯಾಗಿದ್ದರು. ಆದರೆ, ತನ್ನ ಗುರಿ ಸಾಧಿಸಲು ನಮ್ಮ ಮಗಳು ಇಂತಹ ಬೆಲೆ ತೆರಬೇಕಾಗುತ್ತದೆ ಎಂಬುದನ್ನು ನಾನು ಊಹಿಸಿರಲಿಲ್ಲ” ಎಂದು ರೇಣು ಅವರ ತಂದೆ ಅಜೀಜುಲ್ ಹಕ್ ನೋವು ಹೊರಹಾಕಿದ್ದಾರೆ.

ಸಂತ್ರಸ್ತೆ ರೇಣು ಸರ್ಕಾರಿ ಆಸ್ಪತ್ರೆಗೆ ಸೇರಿಸಿದ ನಂತರ ತನ್ನನ್ನು ಬಿಟ್ಟು ಹೋಗಬಹುದು ಎಂಬ ಅನುಮಾನವನ್ನು ಆರೋಪಿ ಮೊಹಮ್ಮದ್ ತನ್ನ ಸ್ನೇಹಿತರ ಬಳಿ ವ್ಯಕ್ತಪಡಿಸಿರುವುದು ತನಿಖೆಯ ವೇಳೆ ಪೊಲೀಸರಿಗೆ ತಿಳಿದು ಬಂದಿದೆ.


ಇದನ್ನೂ ಓದಿ: ಕಾರ್ಕಳ: ರಸ್ತೆಗೆ ಗೋಡ್ಸೆ ಹೆಸರು; ಬೋರ್ಡ್ ತೆರವು ಮಾಡಿಸಿದ ಕಾಂಗ್ರೆಸ್ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...