Homeಮುಖಪುಟಕೊಲ್ಕತ್ತಾ ಮುನ್ಸಿಪಲ್ ಚುನಾವಣೆ: ಠೇವಣಿ ಕಳೆದುಕೊಂಡ ಅತೀ ದೊಡ್ಡ ಪಕ್ಷ ಬಿಜೆಪಿ!

ಕೊಲ್ಕತ್ತಾ ಮುನ್ಸಿಪಲ್ ಚುನಾವಣೆ: ಠೇವಣಿ ಕಳೆದುಕೊಂಡ ಅತೀ ದೊಡ್ಡ ಪಕ್ಷ ಬಿಜೆಪಿ!

- Advertisement -
- Advertisement -

ಕೊಲ್ಕತ್ತಾ ಮುನ್ಸಿಪಲ್‌ ಕಾರ್ಪೊರೇಷನ್‌ ಚುನಾವಣೆಯಲ್ಲಿ ಆಡಳಿತರೂಢ ಟಿಎಂಸಿ ಭರ್ಜರಿ ಗೆಲುವು ಸಾಧಿಸಿದ್ದು ಇತ್ತೀಚೆಗೆ ಹೊರಬಿದ್ದಿತ್ತು. 144 ವಾರ್ಡ್‌ಗಳ ಪೈಕಿ ಟಿಎಂಸಿ ಬರೋಬ್ಬರಿ 134 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ಈ ಚುನಾವಣೆ ಅತ್ಯದಿಕ ಠೇವಣಿ ಮೊತ್ತವನ್ನು ಕಳೆದುಕೊಂಡಿದ್ದು, ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಗಳಾಗಿದ್ದಾರೆ.

ಠೇವಣಿ ಕಳೆದುಕೊಂಡಿರುವ ಅತೀದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದರೆ, ಕಾಂಗ್ರೆಸ್‌ ನಂತರದ ಸ್ಥಾನದಲ್ಲಿದೆ. ಎರಡು ರಾಷ್ಟ್ರೀಯ ಪಕ್ಷಗಳಿಗೆ ಹೋಲಿಸಿದರೆ, ಎಡರಂಗದ ಸಾಧನೆ ಉತ್ತಮಮಾಗಿದೆ.

ಇದನ್ನೂ ಓದಿ:‘ನೀತಿಗೆಟ್ಟವರು, ದ್ರೋಹಿಗಳ ಗುಂಪು ಪಕ್ಷ ನಡೆಸುತ್ತಿದೆ’: ಕೊಲ್ಕತ್ತಾ ಪಾಲಿಕೆ ಚುನಾವಣೆ ಸೋಲಿನ ಬಳಿಕ ಸ್ವಪಕ್ಷದ ವಿರುದ್ಧ ಬಿಜೆಪಿ ಹಿರಿಯ ನಾಯಕ ಆಕ್ರೊಶ

144 ವಾರ್ಡ್‌ಗಳ ಕೊಲ್ಕತ್ತಾ ಮುನ್ಸಿಪಲ್‌‌ನಲ್ಲಿ ಬಿಜೆಪಿಯು 142 ವಾರ್ಡ್‌ಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಇವುಗಳಲ್ಲಿ 116 ಅಭ್ಯರ್ಥಿಗಳ ಠೇವಣಿ ಕೈತಪ್ಪಿದೆ. ಚಲಾವಣೆ ಆಗಿರುವ ಮತಗಳ ಪೈಕಿ, ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಯು ಆರನೇ ಒಂದು ಭಾಗವನ್ನು ಗಳಿಸಲು ವಿಫಲವಾದರೆ ಠೇವಣಿ ಕಳೆದುಕೊಳ್ಳಬೇಕಾಗುತ್ತದೆ.

“ಇದು ವಾಸ್ತವ, ಇದು ಮುನ್ಸಿಪಲ್‌ ಚುನಾವಣೆಯಲ್ಲಿ ನಮ್ಮ ಪಕ್ಷದ ಕಳಪೆ ಪ್ರದರ್ಶನವಾಗಿದೆ. 2010ರಲ್ಲಿ ರಾಜ್ಯದಲ್ಲಿ ನಮ್ಮ ಪಕ್ಷಕ್ಕೆ ಶಾಸಕರೇ ಇಲ್ಲದಿದ್ದಾಗ ಕೊಲ್ಕತ್ತಾ ಮುನ್ಸಿಪಲ್ 144 ವಾರ್ಡ್‌ಗಳಲ್ಲಿ ಮೂರು ವಾರ್ಡ್‌ಗಳನ್ನು ಗೆದ್ದಿದ್ದೆವು. ಈ ಬಾರಿ 70 ಶಾಸಕರು ಮತ್ತು 17 ಸಂಸದರ ದಂಡು ಹೊಂದಿದ್ದರೂ, ಪಕ್ಷವು ಮೂರಕ್ಕಿಂತ ಹೆಚ್ಚು ಸ್ಥಾನಗಳನ್ನು ಗಳಿಸಲು ವಿಫಲವಾಗಿದೆ. 2015 ರಲ್ಲಿ ಏಳು ವಾರ್ಡ್‌ಗಳಲ್ಲಿ ಗೆಲ್ಲುವ ಮೂಲಕ ಪಕ್ಷವು ಉತ್ತಮ ಸಾಧನೆ ಮಾಡಿತ್ತು” ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಚುನಾವಣಾ ಆಯೋಗವು ಮುನ್ಸಿಪಲ್‌‌ ಚುನಾವಣೆಯಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ತಲಾ ರೂ 500 ರೂ ಹಾಗೂ ಮಹಿಳಾ ಅಭ್ಯರ್ಥಿಗಳು ಮತ್ತು ಎಸ್‌ಸಿ ಅಭ್ಯರ್ಥಿಗಳಿಗೆ 250 ರೂ.ಗಳನ್ನು ಠೇವಣಿ ಪಡೆಯುತ್ತದೆ.

ಇದನ್ನೂ ಓದಿ:ಕೊಲ್ಕತ್ತಾ ಮುನ್ಸಿಪಲ್‌‌ನಲ್ಲಿ ಟಿಎಂಸಿ ಅಭೂತಪೂರ್ವ ಜಯ; BJP ಹೀನಾಯ ಸೋಲು

ರಾಜ್ಯದ ರಾಜಕೀಯ ವಿಶ್ಲೇಷಕರ ಪ್ರಕಾರ, ಕೊಲ್ಕತ್ತಾ ಮುನ್ಸಿಪಲ್ ಚುನಾವಣೆಯಲ್ಲಿ ಸಿಪಿಐ(ಎಂ) ತನ್ನ ಗಳಿಯಲ್ಲಿ ಹೆಚ್ಚು ಸಾಧನೆ ಮಾಡಿರುವುದು ಬಿಜೆಪಿಗೆ ದೊಡ್ಡ ಹೊಡೆತ ಬಿದ್ದಿದ್ದು, ಹೀನಾಯ ಸೋಲಿಗೆ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಎಡರಂಗದ ಮತಬ್ಯಾಂಕ್‌‌‌‌ ಅನ್ನು ಒಡೆದು ಬಂಗಾಳದ ಈ ಹಿಂದಿನ ಎರಡು ಚುನಾವಣೆಗಳಲ್ಲಿ ಬಿಜೆಪಿ ಮತಗಳಿಸಿತ್ತು. ಆದರೆ ಕೊಲ್ಕತ್ತಾ ಮುನ್ಸಿಪಲ್‌ ಚುನಾವಣೆಯಲ್ಲಿ ಬಿಜೆಪಿಯು ಹೀನಾಯವಾಗಿ ಸೋಲಲು ಎಡರಂಗ ಕಾರಣ. ಯಾಕೆಂದರೆ ಎಡರಂಗವು ತನ್ನ ಹಿಂದಿನ ಮತ ಹಂಚಿಕೆಯ ಒಂದು ಭಾಗವನ್ನು ಮರಳಿ ಪಡೆದಿದೆ” ಎಂದು ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ.ಬಿಷ್ಣುಪ್ರಿಯಾ ದತ್ತಾ ಗುಪ್ತಾ ಹೇಳಿದ್ದಾರೆ ಎಂದು TNIE ವರದಿ ಹೇಳಿದೆ.

ಡಿಸೆಂಬರ್ 19 ರಂದ ಪಾಲಿಕೆಯ 144 ವಾರ್ಡ್‌ಗಳಿಗೆ ಚುನಾವಣೆ ನಡೆದಿತ್ತು. 144 ಕಾರ್ಪೊರೇಟರ್‌ಗಳ ಸ್ಥಾನಕ್ಕೆ ಒಟ್ಟು 950 ಅಭ್ಯರ್ಥಿಗಳು ಕಣದಲ್ಲಿದ್ದರು. ಪಾಲಿಕೆಯ ಈ ಹಿಂದಿನ ಚುನಾವಣೆಗಳು 2015 ರಲ್ಲಿ ನಡೆದಿದ್ದವು. ಡಿಸೆಂಬರ್‌ 21 ರ ಮಂಗಳವಾರದಂದು ಫಲಿತಾಂಶ ಹೊಬಿದ್ದಿದ್ದು, ಇದರಲ್ಲಿ ಟಿಎಂಸಿ 134 ವಾರ್ಡ್‌ಗಳಲ್ಲಿ ಗೆದ್ದರೆ, ಬಿಜೆಪಿ ಕೇವಲ 3 ವಾರ್ಡ್‌‌ಗಳಲ್ಲಷ್ಟೇ ಗೆಲುವು ಪಡೆದುಕೊಂಡಿದೆ.

ಇದನ್ನೂ ಓದಿ:ಕೊಲ್ಕತ್ತಾದಲ್ಲಿ ಹೊಸ ಕಾರ್ಯಕ್ರಮ ಘೋಷಿಸಿದ ಮುನಾವರ್‌ ಫಾರೂಖಿ!

ಉಳಿದಂತೆ ಸಿಪಿಐಎಂ 1 ವಾರ್ಡ್‌, ಸಿಪಿಐ ಒಂದು ವಾರ್ಡ್‌, ಕಾಂಗ್ರೆಸ್‌ 2 ಮತ್ತು ಪಕ್ಷೇತರ ಅಭ್ಯರ್ಥಿಗಳು ಮೂರು ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ.

2015 ರ ಪಾಲಿಕೆ ಚುನಾವಣೆಯಲ್ಲಿ ಟಿಎಂಸಿ 114 ವಾರ್ಡ್‌ಗಳಲ್ಲಿ, ಸಿಪಿಎಂ 10, ಬಿಜೆಪಿ 7, ಕಾಂಗ್ರೆಸ್‌ 5, ಸಿಪಿಐ 2, ಐಎನ್‌ಡಿ 3, ಆರ್‌ಎಸ್‌ಪಿ 2 ಮತ್ತು ಎಐಎಫ್‌ಬಿ 1 ಗೆದ್ದಿದ್ದವು. ಆದರೆ ಈ ಬಾರಿ ಟಿಎಂಸಿ ಬಹುತೇಕ ಏಕಮೇವ ಪಕ್ಷವಾಗಿ ಹೊರಹೊಮ್ಮಿದೆ.

ಸುಮಾರು 40.5 ಲಕ್ಷ ಮತದಾರರಲ್ಲಿ ಶೇಕಡಾ 63 ರಷ್ಟು ಮತದಾರರು ಪಾಲಿಕೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದರೂ ಸಹ, ಎರಡು ಬೂತ್‌ಗಳಲ್ಲಿ ಬಾಂಬ್‌ಗಳನ್ನು ಎಸೆಯುವುದು ಸೇರಿದಂತೆ ಹಿಂಸಾಚಾರದ ಘಟನೆಗಳು ನಡೆದಿದ್ದವು.

ಇದನ್ನೂ ಓದಿ:ಪದವಿ ಮತ್ತು ಸ್ನಾತಕೋತ್ತರ ತರಗತಿಗಳ ಶುಲ್ಕ ಮನ್ನಾ ಘೋಷಿಸಿದ ಕೊಲ್ಕತ್ತಾ ವಿಶ್ವವಿದ್ಯಾಲಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...