Homeಮುಖಪುಟಕೊಲ್ಕತ್ತಾ ಮುನ್ಸಿಪಲ್ ಚುನಾವಣೆ: ಠೇವಣಿ ಕಳೆದುಕೊಂಡ ಅತೀ ದೊಡ್ಡ ಪಕ್ಷ ಬಿಜೆಪಿ!

ಕೊಲ್ಕತ್ತಾ ಮುನ್ಸಿಪಲ್ ಚುನಾವಣೆ: ಠೇವಣಿ ಕಳೆದುಕೊಂಡ ಅತೀ ದೊಡ್ಡ ಪಕ್ಷ ಬಿಜೆಪಿ!

- Advertisement -
- Advertisement -

ಕೊಲ್ಕತ್ತಾ ಮುನ್ಸಿಪಲ್‌ ಕಾರ್ಪೊರೇಷನ್‌ ಚುನಾವಣೆಯಲ್ಲಿ ಆಡಳಿತರೂಢ ಟಿಎಂಸಿ ಭರ್ಜರಿ ಗೆಲುವು ಸಾಧಿಸಿದ್ದು ಇತ್ತೀಚೆಗೆ ಹೊರಬಿದ್ದಿತ್ತು. 144 ವಾರ್ಡ್‌ಗಳ ಪೈಕಿ ಟಿಎಂಸಿ ಬರೋಬ್ಬರಿ 134 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ಈ ಚುನಾವಣೆ ಅತ್ಯದಿಕ ಠೇವಣಿ ಮೊತ್ತವನ್ನು ಕಳೆದುಕೊಂಡಿದ್ದು, ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಗಳಾಗಿದ್ದಾರೆ.

ಠೇವಣಿ ಕಳೆದುಕೊಂಡಿರುವ ಅತೀದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದರೆ, ಕಾಂಗ್ರೆಸ್‌ ನಂತರದ ಸ್ಥಾನದಲ್ಲಿದೆ. ಎರಡು ರಾಷ್ಟ್ರೀಯ ಪಕ್ಷಗಳಿಗೆ ಹೋಲಿಸಿದರೆ, ಎಡರಂಗದ ಸಾಧನೆ ಉತ್ತಮಮಾಗಿದೆ.

ಇದನ್ನೂ ಓದಿ:‘ನೀತಿಗೆಟ್ಟವರು, ದ್ರೋಹಿಗಳ ಗುಂಪು ಪಕ್ಷ ನಡೆಸುತ್ತಿದೆ’: ಕೊಲ್ಕತ್ತಾ ಪಾಲಿಕೆ ಚುನಾವಣೆ ಸೋಲಿನ ಬಳಿಕ ಸ್ವಪಕ್ಷದ ವಿರುದ್ಧ ಬಿಜೆಪಿ ಹಿರಿಯ ನಾಯಕ ಆಕ್ರೊಶ

144 ವಾರ್ಡ್‌ಗಳ ಕೊಲ್ಕತ್ತಾ ಮುನ್ಸಿಪಲ್‌‌ನಲ್ಲಿ ಬಿಜೆಪಿಯು 142 ವಾರ್ಡ್‌ಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಇವುಗಳಲ್ಲಿ 116 ಅಭ್ಯರ್ಥಿಗಳ ಠೇವಣಿ ಕೈತಪ್ಪಿದೆ. ಚಲಾವಣೆ ಆಗಿರುವ ಮತಗಳ ಪೈಕಿ, ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಯು ಆರನೇ ಒಂದು ಭಾಗವನ್ನು ಗಳಿಸಲು ವಿಫಲವಾದರೆ ಠೇವಣಿ ಕಳೆದುಕೊಳ್ಳಬೇಕಾಗುತ್ತದೆ.

“ಇದು ವಾಸ್ತವ, ಇದು ಮುನ್ಸಿಪಲ್‌ ಚುನಾವಣೆಯಲ್ಲಿ ನಮ್ಮ ಪಕ್ಷದ ಕಳಪೆ ಪ್ರದರ್ಶನವಾಗಿದೆ. 2010ರಲ್ಲಿ ರಾಜ್ಯದಲ್ಲಿ ನಮ್ಮ ಪಕ್ಷಕ್ಕೆ ಶಾಸಕರೇ ಇಲ್ಲದಿದ್ದಾಗ ಕೊಲ್ಕತ್ತಾ ಮುನ್ಸಿಪಲ್ 144 ವಾರ್ಡ್‌ಗಳಲ್ಲಿ ಮೂರು ವಾರ್ಡ್‌ಗಳನ್ನು ಗೆದ್ದಿದ್ದೆವು. ಈ ಬಾರಿ 70 ಶಾಸಕರು ಮತ್ತು 17 ಸಂಸದರ ದಂಡು ಹೊಂದಿದ್ದರೂ, ಪಕ್ಷವು ಮೂರಕ್ಕಿಂತ ಹೆಚ್ಚು ಸ್ಥಾನಗಳನ್ನು ಗಳಿಸಲು ವಿಫಲವಾಗಿದೆ. 2015 ರಲ್ಲಿ ಏಳು ವಾರ್ಡ್‌ಗಳಲ್ಲಿ ಗೆಲ್ಲುವ ಮೂಲಕ ಪಕ್ಷವು ಉತ್ತಮ ಸಾಧನೆ ಮಾಡಿತ್ತು” ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಚುನಾವಣಾ ಆಯೋಗವು ಮುನ್ಸಿಪಲ್‌‌ ಚುನಾವಣೆಯಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ತಲಾ ರೂ 500 ರೂ ಹಾಗೂ ಮಹಿಳಾ ಅಭ್ಯರ್ಥಿಗಳು ಮತ್ತು ಎಸ್‌ಸಿ ಅಭ್ಯರ್ಥಿಗಳಿಗೆ 250 ರೂ.ಗಳನ್ನು ಠೇವಣಿ ಪಡೆಯುತ್ತದೆ.

ಇದನ್ನೂ ಓದಿ:ಕೊಲ್ಕತ್ತಾ ಮುನ್ಸಿಪಲ್‌‌ನಲ್ಲಿ ಟಿಎಂಸಿ ಅಭೂತಪೂರ್ವ ಜಯ; BJP ಹೀನಾಯ ಸೋಲು

ರಾಜ್ಯದ ರಾಜಕೀಯ ವಿಶ್ಲೇಷಕರ ಪ್ರಕಾರ, ಕೊಲ್ಕತ್ತಾ ಮುನ್ಸಿಪಲ್ ಚುನಾವಣೆಯಲ್ಲಿ ಸಿಪಿಐ(ಎಂ) ತನ್ನ ಗಳಿಯಲ್ಲಿ ಹೆಚ್ಚು ಸಾಧನೆ ಮಾಡಿರುವುದು ಬಿಜೆಪಿಗೆ ದೊಡ್ಡ ಹೊಡೆತ ಬಿದ್ದಿದ್ದು, ಹೀನಾಯ ಸೋಲಿಗೆ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಎಡರಂಗದ ಮತಬ್ಯಾಂಕ್‌‌‌‌ ಅನ್ನು ಒಡೆದು ಬಂಗಾಳದ ಈ ಹಿಂದಿನ ಎರಡು ಚುನಾವಣೆಗಳಲ್ಲಿ ಬಿಜೆಪಿ ಮತಗಳಿಸಿತ್ತು. ಆದರೆ ಕೊಲ್ಕತ್ತಾ ಮುನ್ಸಿಪಲ್‌ ಚುನಾವಣೆಯಲ್ಲಿ ಬಿಜೆಪಿಯು ಹೀನಾಯವಾಗಿ ಸೋಲಲು ಎಡರಂಗ ಕಾರಣ. ಯಾಕೆಂದರೆ ಎಡರಂಗವು ತನ್ನ ಹಿಂದಿನ ಮತ ಹಂಚಿಕೆಯ ಒಂದು ಭಾಗವನ್ನು ಮರಳಿ ಪಡೆದಿದೆ” ಎಂದು ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ.ಬಿಷ್ಣುಪ್ರಿಯಾ ದತ್ತಾ ಗುಪ್ತಾ ಹೇಳಿದ್ದಾರೆ ಎಂದು TNIE ವರದಿ ಹೇಳಿದೆ.

ಡಿಸೆಂಬರ್ 19 ರಂದ ಪಾಲಿಕೆಯ 144 ವಾರ್ಡ್‌ಗಳಿಗೆ ಚುನಾವಣೆ ನಡೆದಿತ್ತು. 144 ಕಾರ್ಪೊರೇಟರ್‌ಗಳ ಸ್ಥಾನಕ್ಕೆ ಒಟ್ಟು 950 ಅಭ್ಯರ್ಥಿಗಳು ಕಣದಲ್ಲಿದ್ದರು. ಪಾಲಿಕೆಯ ಈ ಹಿಂದಿನ ಚುನಾವಣೆಗಳು 2015 ರಲ್ಲಿ ನಡೆದಿದ್ದವು. ಡಿಸೆಂಬರ್‌ 21 ರ ಮಂಗಳವಾರದಂದು ಫಲಿತಾಂಶ ಹೊಬಿದ್ದಿದ್ದು, ಇದರಲ್ಲಿ ಟಿಎಂಸಿ 134 ವಾರ್ಡ್‌ಗಳಲ್ಲಿ ಗೆದ್ದರೆ, ಬಿಜೆಪಿ ಕೇವಲ 3 ವಾರ್ಡ್‌‌ಗಳಲ್ಲಷ್ಟೇ ಗೆಲುವು ಪಡೆದುಕೊಂಡಿದೆ.

ಇದನ್ನೂ ಓದಿ:ಕೊಲ್ಕತ್ತಾದಲ್ಲಿ ಹೊಸ ಕಾರ್ಯಕ್ರಮ ಘೋಷಿಸಿದ ಮುನಾವರ್‌ ಫಾರೂಖಿ!

ಉಳಿದಂತೆ ಸಿಪಿಐಎಂ 1 ವಾರ್ಡ್‌, ಸಿಪಿಐ ಒಂದು ವಾರ್ಡ್‌, ಕಾಂಗ್ರೆಸ್‌ 2 ಮತ್ತು ಪಕ್ಷೇತರ ಅಭ್ಯರ್ಥಿಗಳು ಮೂರು ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ.

2015 ರ ಪಾಲಿಕೆ ಚುನಾವಣೆಯಲ್ಲಿ ಟಿಎಂಸಿ 114 ವಾರ್ಡ್‌ಗಳಲ್ಲಿ, ಸಿಪಿಎಂ 10, ಬಿಜೆಪಿ 7, ಕಾಂಗ್ರೆಸ್‌ 5, ಸಿಪಿಐ 2, ಐಎನ್‌ಡಿ 3, ಆರ್‌ಎಸ್‌ಪಿ 2 ಮತ್ತು ಎಐಎಫ್‌ಬಿ 1 ಗೆದ್ದಿದ್ದವು. ಆದರೆ ಈ ಬಾರಿ ಟಿಎಂಸಿ ಬಹುತೇಕ ಏಕಮೇವ ಪಕ್ಷವಾಗಿ ಹೊರಹೊಮ್ಮಿದೆ.

ಸುಮಾರು 40.5 ಲಕ್ಷ ಮತದಾರರಲ್ಲಿ ಶೇಕಡಾ 63 ರಷ್ಟು ಮತದಾರರು ಪಾಲಿಕೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದರೂ ಸಹ, ಎರಡು ಬೂತ್‌ಗಳಲ್ಲಿ ಬಾಂಬ್‌ಗಳನ್ನು ಎಸೆಯುವುದು ಸೇರಿದಂತೆ ಹಿಂಸಾಚಾರದ ಘಟನೆಗಳು ನಡೆದಿದ್ದವು.

ಇದನ್ನೂ ಓದಿ:ಪದವಿ ಮತ್ತು ಸ್ನಾತಕೋತ್ತರ ತರಗತಿಗಳ ಶುಲ್ಕ ಮನ್ನಾ ಘೋಷಿಸಿದ ಕೊಲ್ಕತ್ತಾ ವಿಶ್ವವಿದ್ಯಾಲಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...