Homeಮುಖಪುಟಕೋಲ್ಕತ್ತಾ ಅತ್ಯಾಚಾರ ಪ್ರಕರಣ - ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯೊಬ್ಬರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಸಂಜಯ್ ರಾಯ್‌ಗೆ ಮರಣದಂಡನೆ ವಿಧಿಸುವಂತೆ ಕೋರಿ ಕೇಂದ್ರ ತನಿಖಾ ದಳ(ಸಿಬಿಐ)ವು ಕಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಗುರುವಾರ ವರದಿ ಮಾಡಿದೆ. ಕೋಲ್ಕತ್ತಾ ಅತ್ಯಾಚಾರ ಪ್ರಕರಣ

ಸಿಪಿಐ ಇದನ್ನು “ಅಪರೂಪದಲ್ಲಿ ಅಪರೂಪದ” ಪ್ರಕರಣ ಎಂದು ಬಣ್ಣಿಸಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ. ನಗರದ ಸೀಲ್ಡಾ ಸಿವಿಲ್ ಮತ್ತು ಕ್ರಿಮಿನಲ್ ನ್ಯಾಯಾಲಯವು ಶನಿವಾರ ಸಂಜಯ್‌ ರಾಯ್ ಅವರನ್ನು ಅಪರಾಧಿ ಎಂದು ಘೋಷಿಸಿತ್ತು. ಸೋಮವಾರ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.

ಕೇಂದ್ರ ತನಿಖಾ ದಳವು ಆರೋಪಿ ಸಂಜಯ್ ರಾಜ್‌ಗೆ ಮರಣದಂಡನೆ ವಿಧಿಸಲು ಕೋರಿತ್ತು, ಆದರೆ ನ್ಯಾಯಾಧೀಶ ಅನಿರ್ಬನ್ ದಾಸ್ ಅದಕ್ಕೆ ನಿರಾಕರಿಸಿದ್ದು, ಮರಣದಂಡನೆಗೆ ವಿಧಿಸಬೇಕಾದರೆ “ಅಪರೂಪದಲ್ಲಿ ಅಪರೂಪದ” ಪ್ರಕರಣ ನಡೆಯಬೇಕು, ಅಂತಹ ಮಾನದಂಡಗಳನ್ನು ಈ ಅಪರಾಧವು ಪೂರೈಸಲಿಲ್ಲ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಶೇಷವಾಗಿ ಕ್ರೂರ, ಘೋರ ದುಷ್ಕೃತ್ಯದ ಪ್ರಕರಣಗಳಲ್ಲಿ ಮರಣದಂಡನೆಯನ್ನು ವಿಧಿಸಬೇಕೆಂದು ನಿರ್ಧರಿಸಲು “ಅಪರೂಪದಲ್ಲಿ ಅಪರೂಪದ” ಸಿದ್ಧಾಂತವನ್ನು ಭಾರತದಲ್ಲಿ ಬಳಸಲಾಗುತ್ತದೆ. ಕೊಲೆ, ಅತ್ಯಾಚಾರ ಮತ್ತು ಇತರ ಗಂಭೀರ ಅಪರಾಧಗಳ ಪ್ರಕರಣಗಳಲ್ಲಿ ಈ ಸಿದ್ಧಾಂತವನ್ನು ಹೆಚ್ಚಾಗಿ ಅನ್ವಯಿಸಲಾಗುತ್ತದೆ. ಕೋಲ್ಕತ್ತಾ ಅತ್ಯಾಚಾರ ಪ್ರಕರಣ

ಅಪರಾಧಿ ರಾಯ್‌ಗೆ ಮರಣದಂಡನೆ ವಿಧಿಸುವಂತೆ ಕೋರಿ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ವಿರೋಧಿಸಿದ ಕೆಲವೇ ಗಂಟೆಗಳ ನಂತರ ವಿಚಾರಣಾ ನ್ಯಾಯಾಲಯದ ಶಿಕ್ಷೆಯನ್ನು ಪ್ರಶ್ನಿಸುವ ನಿರ್ಧಾರವನ್ನು ಸಿಬಿಐ ತೆಗೆದುಕೊಂಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸಂತ್ರಸ್ತರ ಕುಟುಂಬ, ತನಿಖಾ ಪ್ರಾಧಿಕಾರ ಅಥವಾ ಅಪರಾಧಿ ಮಾತ್ರ ಮೇಲ್ಮನವಿ ಸಲ್ಲಿಸಬಹುದು ಎಂದು ಸಿಬಿಐ ವಾದಿಸಿತ್ತು. ಘಟನೆ ಸರ್ಕಾರಿ ಸ್ವಾಮ್ಯದ ಆಸ್ಪತ್ರೆಯಲ್ಲಿ ನಡೆದಿರುವುದರಿಂದ ಮತ್ತು ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯವಾಗಿರುವುದರಿಂದ, ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರ ವಾದಿಸಿತು.

ನ್ಯಾಯಮೂರ್ತಿ ದೇಬಾಂಗ್ಶು ಬಸಕ್ ಮತ್ತು ನ್ಯಾಯಮೂರ್ತಿ ಎಂಡಿ ಶಬ್ಬರ್ ರಶೀದಿ ಅವರ ಪೀಠವು, ರಾಜ್ಯ ಸರ್ಕಾರಕ್ಕೆ ಮರಣದಂಡನೆ ವಿಧಿಸಲು ಅವಕಾಶ ನೀಡಬೇಕೆ ಎಂದು ನಿರ್ಧರಿಸುವ ಮೊದಲು ನ್ಯಾಯಾಲಯವು ಬಲಿಪಶುವಿನ ಕುಟುಂಬ ಮತ್ತು ಅಪರಾಧಿಯ ವಾದಗಳನ್ನು ಆಲಿಸುತ್ತದೆ ಎಂದು ಹೇಳಿದೆ.

ಆಗಸ್ಟ್ 9 ರಂದು ಆಸ್ಪತ್ರೆಯ ಆವರಣದಲ್ಲಿ 31 ವರ್ಷದ ತರಬೇತಿ ವೈದ್ಯೆ ಶವವಾಗಿ ಪತ್ತೆಯಾಗಿದ್ದರು. ಈ ಘಟನೆ ದೇಶಾದ್ಯಂತ ಪ್ರತಿಭಟನೆಗಳನ್ನು ಹುಟ್ಟುಹಾಕಿತ್ತು.

ಸೋಮವಾರ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಪರಾಧಿ ರಾಯ್‌ಗೆ ನೀಡಲಾದ ಶಿಕ್ಷೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದರು. “ಕೋಲ್ಕತ್ತಾ ಪೊಲೀಸರಿಂದ ಪ್ರಕರಣವನ್ನು ಬಲವಂತವಾಗಿ ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಪ್ರಕರಣ ಅವರ ಬಳಿ ಇದ್ದಿದ್ದರೆ, ಅದು ಮರಣದಂಡನೆಯನ್ನು ಖಚಿತಪಡಿಸುತ್ತಿತ್ತು” ಎಂದು ಅವರು ಹೇಳಿದ್ದಾರೆ.

ಈ ಪ್ರಕರಣವನ್ನು ಆರಂಭದಲ್ಲಿ ಪಶ್ಚಿಮ ಬಂಗಾಳ ಪೊಲೀಸರು ತನಿಖೆ ನಡೆಸಿದ್ದರು. ನಂತರ ಹೈಕೋರ್ಟ್ ಕೇಂದ್ರ ತನಿಖಾ ದಳಕ್ಕೆ ಅದನ್ನು ಹಸ್ತಾಂತರಿಸಿತ್ತು. ವಿಚಾರಣಾ ನ್ಯಾಯಾಲಯವು ಈ ಪ್ರಕರಣವು ಅಪರೂಪದಲ್ಲಿ ಅಪರೂಪದ ಸಿದ್ಧಾಂತವನ್ನು ಪೂರೈಸುವುದಿಲ್ಲ ಎಂದು ಕಂಡುಕೊಂಡಾಗ ತಾನು ಆಘಾತಕ್ಕೊಳಗಾಗಿದ್ದೇನೆ ಎಂದು ಸಿಎಂ ಹೇಳಿದ್ದಾರೆ.

ಇದನ್ನೂಓದಿ:  ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ

ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...