Homeಮುಖಪುಟಕೋಲ್ಕತ್ತಾ ಅತ್ಯಾಚಾರ ಪ್ರಕರಣ - ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯೊಬ್ಬರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಸಂಜಯ್ ರಾಯ್‌ಗೆ ಮರಣದಂಡನೆ ವಿಧಿಸುವಂತೆ ಕೋರಿ ಕೇಂದ್ರ ತನಿಖಾ ದಳ(ಸಿಬಿಐ)ವು ಕಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಗುರುವಾರ ವರದಿ ಮಾಡಿದೆ. ಕೋಲ್ಕತ್ತಾ ಅತ್ಯಾಚಾರ ಪ್ರಕರಣ

ಸಿಪಿಐ ಇದನ್ನು “ಅಪರೂಪದಲ್ಲಿ ಅಪರೂಪದ” ಪ್ರಕರಣ ಎಂದು ಬಣ್ಣಿಸಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ. ನಗರದ ಸೀಲ್ಡಾ ಸಿವಿಲ್ ಮತ್ತು ಕ್ರಿಮಿನಲ್ ನ್ಯಾಯಾಲಯವು ಶನಿವಾರ ಸಂಜಯ್‌ ರಾಯ್ ಅವರನ್ನು ಅಪರಾಧಿ ಎಂದು ಘೋಷಿಸಿತ್ತು. ಸೋಮವಾರ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.

ಕೇಂದ್ರ ತನಿಖಾ ದಳವು ಆರೋಪಿ ಸಂಜಯ್ ರಾಜ್‌ಗೆ ಮರಣದಂಡನೆ ವಿಧಿಸಲು ಕೋರಿತ್ತು, ಆದರೆ ನ್ಯಾಯಾಧೀಶ ಅನಿರ್ಬನ್ ದಾಸ್ ಅದಕ್ಕೆ ನಿರಾಕರಿಸಿದ್ದು, ಮರಣದಂಡನೆಗೆ ವಿಧಿಸಬೇಕಾದರೆ “ಅಪರೂಪದಲ್ಲಿ ಅಪರೂಪದ” ಪ್ರಕರಣ ನಡೆಯಬೇಕು, ಅಂತಹ ಮಾನದಂಡಗಳನ್ನು ಈ ಅಪರಾಧವು ಪೂರೈಸಲಿಲ್ಲ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಶೇಷವಾಗಿ ಕ್ರೂರ, ಘೋರ ದುಷ್ಕೃತ್ಯದ ಪ್ರಕರಣಗಳಲ್ಲಿ ಮರಣದಂಡನೆಯನ್ನು ವಿಧಿಸಬೇಕೆಂದು ನಿರ್ಧರಿಸಲು “ಅಪರೂಪದಲ್ಲಿ ಅಪರೂಪದ” ಸಿದ್ಧಾಂತವನ್ನು ಭಾರತದಲ್ಲಿ ಬಳಸಲಾಗುತ್ತದೆ. ಕೊಲೆ, ಅತ್ಯಾಚಾರ ಮತ್ತು ಇತರ ಗಂಭೀರ ಅಪರಾಧಗಳ ಪ್ರಕರಣಗಳಲ್ಲಿ ಈ ಸಿದ್ಧಾಂತವನ್ನು ಹೆಚ್ಚಾಗಿ ಅನ್ವಯಿಸಲಾಗುತ್ತದೆ. ಕೋಲ್ಕತ್ತಾ ಅತ್ಯಾಚಾರ ಪ್ರಕರಣ

ಅಪರಾಧಿ ರಾಯ್‌ಗೆ ಮರಣದಂಡನೆ ವಿಧಿಸುವಂತೆ ಕೋರಿ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ವಿರೋಧಿಸಿದ ಕೆಲವೇ ಗಂಟೆಗಳ ನಂತರ ವಿಚಾರಣಾ ನ್ಯಾಯಾಲಯದ ಶಿಕ್ಷೆಯನ್ನು ಪ್ರಶ್ನಿಸುವ ನಿರ್ಧಾರವನ್ನು ಸಿಬಿಐ ತೆಗೆದುಕೊಂಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸಂತ್ರಸ್ತರ ಕುಟುಂಬ, ತನಿಖಾ ಪ್ರಾಧಿಕಾರ ಅಥವಾ ಅಪರಾಧಿ ಮಾತ್ರ ಮೇಲ್ಮನವಿ ಸಲ್ಲಿಸಬಹುದು ಎಂದು ಸಿಬಿಐ ವಾದಿಸಿತ್ತು. ಘಟನೆ ಸರ್ಕಾರಿ ಸ್ವಾಮ್ಯದ ಆಸ್ಪತ್ರೆಯಲ್ಲಿ ನಡೆದಿರುವುದರಿಂದ ಮತ್ತು ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯವಾಗಿರುವುದರಿಂದ, ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರ ವಾದಿಸಿತು.

ನ್ಯಾಯಮೂರ್ತಿ ದೇಬಾಂಗ್ಶು ಬಸಕ್ ಮತ್ತು ನ್ಯಾಯಮೂರ್ತಿ ಎಂಡಿ ಶಬ್ಬರ್ ರಶೀದಿ ಅವರ ಪೀಠವು, ರಾಜ್ಯ ಸರ್ಕಾರಕ್ಕೆ ಮರಣದಂಡನೆ ವಿಧಿಸಲು ಅವಕಾಶ ನೀಡಬೇಕೆ ಎಂದು ನಿರ್ಧರಿಸುವ ಮೊದಲು ನ್ಯಾಯಾಲಯವು ಬಲಿಪಶುವಿನ ಕುಟುಂಬ ಮತ್ತು ಅಪರಾಧಿಯ ವಾದಗಳನ್ನು ಆಲಿಸುತ್ತದೆ ಎಂದು ಹೇಳಿದೆ.

ಆಗಸ್ಟ್ 9 ರಂದು ಆಸ್ಪತ್ರೆಯ ಆವರಣದಲ್ಲಿ 31 ವರ್ಷದ ತರಬೇತಿ ವೈದ್ಯೆ ಶವವಾಗಿ ಪತ್ತೆಯಾಗಿದ್ದರು. ಈ ಘಟನೆ ದೇಶಾದ್ಯಂತ ಪ್ರತಿಭಟನೆಗಳನ್ನು ಹುಟ್ಟುಹಾಕಿತ್ತು.

ಸೋಮವಾರ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಪರಾಧಿ ರಾಯ್‌ಗೆ ನೀಡಲಾದ ಶಿಕ್ಷೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದರು. “ಕೋಲ್ಕತ್ತಾ ಪೊಲೀಸರಿಂದ ಪ್ರಕರಣವನ್ನು ಬಲವಂತವಾಗಿ ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಪ್ರಕರಣ ಅವರ ಬಳಿ ಇದ್ದಿದ್ದರೆ, ಅದು ಮರಣದಂಡನೆಯನ್ನು ಖಚಿತಪಡಿಸುತ್ತಿತ್ತು” ಎಂದು ಅವರು ಹೇಳಿದ್ದಾರೆ.

ಈ ಪ್ರಕರಣವನ್ನು ಆರಂಭದಲ್ಲಿ ಪಶ್ಚಿಮ ಬಂಗಾಳ ಪೊಲೀಸರು ತನಿಖೆ ನಡೆಸಿದ್ದರು. ನಂತರ ಹೈಕೋರ್ಟ್ ಕೇಂದ್ರ ತನಿಖಾ ದಳಕ್ಕೆ ಅದನ್ನು ಹಸ್ತಾಂತರಿಸಿತ್ತು. ವಿಚಾರಣಾ ನ್ಯಾಯಾಲಯವು ಈ ಪ್ರಕರಣವು ಅಪರೂಪದಲ್ಲಿ ಅಪರೂಪದ ಸಿದ್ಧಾಂತವನ್ನು ಪೂರೈಸುವುದಿಲ್ಲ ಎಂದು ಕಂಡುಕೊಂಡಾಗ ತಾನು ಆಘಾತಕ್ಕೊಳಗಾಗಿದ್ದೇನೆ ಎಂದು ಸಿಎಂ ಹೇಳಿದ್ದಾರೆ.

ಇದನ್ನೂಓದಿ:  ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ

ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...