Homeಮುಖಪುಟಕೋಲ್ಕತ್ತಾ ಅತ್ಯಾಚಾರ - ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ

ಕೋಲ್ಕತ್ತಾ ಅತ್ಯಾಚಾರ – ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ

- Advertisement -
- Advertisement -

ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆಯನ್ನು ಪಶ್ಚಿಮ ಬಂಗಾಳದಿಂದ ಹೊರಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನಂತರ ಮತ್ತೊಂದು ತನಿಖೆಗೆ ಆದೇಶಿಸಲು ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರಿಗೆ ಅಧಿಕಾರವಿದೆ ಎಂದು ಹೇಳಿದ್ದಾರೆ. ಕೋಲ್ಕತ್ತಾ ಅತ್ಯಾಚಾರ

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಸಿಬಿಐ ಸಲ್ಲಿಸಿದ ಆರನೇ ಸ್ಥಿತಿ ವರದಿಯನ್ನು ಸಹ ಸುಪ್ರೀಂ ಕೋರ್ಟ್ ಪರಿಶೀಲಿಸಿದ್ದು, ಆದರೆ ತನಿಖೆ ನಡೆಯುತ್ತಿರುವುದರಿಂದ ಪ್ರಕರಣದ ಬಗ್ಗೆ ಅವಲೋಕನ ಮಾಡುವುದನ್ನು ತಪ್ಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೋಲ್ಕತ್ತಾ ನ್ಯಾಯಾಲಯವು ಪ್ರಧಾನ ಆರೋಪಿ ಸಂಜಯ್ ರಾಯ್ ವಿರುದ್ಧ ನವೆಂಬರ್ 4 ರಂದು ಆರೋಪಗಳನ್ನು ರೂಪಿಸಲಾಗಿದ್ದು, ಪ್ರಕರಣದ ದೈನಂದಿನ ವಿಚಾರಣೆ ನವೆಂಬರ್ 11 ರಿಂದ ಪ್ರಾರಂಭವಾಗಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಿಚಾರಣೆಯ ಸಂದರ್ಭದಲ್ಲಿ, ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರ ಸುರಕ್ಷತೆಗಾಗಿ ಪ್ರೋಟೋಕಾಲ್ ಸಿದ್ಧಪಡಿಲು ರಚಿಸಲಾದ ರಾಷ್ಟ್ರೀಯ ಕಾರ್ಯಪಡೆ (ಎನ್‌ಟಿಎಫ್) ತನ್ನ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದೆ.

ಎನ್‌ಟಿಎಫ್‌ನ ವರದಿಯನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಹಂಚಿಕೊಳ್ಳುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದ್ದು, ನಾಲ್ಕು ವಾರಗಳ ನಂತರ ವಿಚಾರಣೆ ನಡೆಸುವುದಾಗಿ ವಿಚಾರಣೆಯನ್ನು ಮುಂದೂಡಿದೆ. ಕೋಲ್ಕತ್ತಾ ಅತ್ಯಾಚಾರ

ರಾಜ್ಯದಲ್ಲಿ ನಾಗರಿಕ ಸ್ವಯಂಸೇವಕರನ್ನು ನೇಮಿಸಿಕೊಳ್ಳುವ ಕುರಿತು ಅಕ್ಟೋಬರ್ 15 ರಂದು ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರವನ್ನು ಪ್ರಶ್ನಿಸಿತ್ತು, ಅವರ ನೇಮಕಾತಿ ಹಾಗೂ ಮತ್ತು ನೇಮಕಾತಿ ಪ್ರಕ್ರಿಯೆಯ ಅಂಕಿ ಅಂಶವನ್ನು ಕೇಳಿದೆ.

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತ್ಯೇಕ ವಿಶ್ರಾಂತಿ ಕೊಠಡಿಗಳನ್ನು ಹೊರತುಪಡಿಸಿ ಸಿಸಿಟಿವಿಗಳನ್ನು ಅಳವಡಿಸುವುದು ಮತ್ತು ಶೌಚಾಲಯಗಳನ್ನು ನಿರ್ಮಿಸುವಲ್ಲಿ ರಾಜ್ಯವು “ವಿಳಂಬ” ಮಾಡುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 30 ರಂದು ಅಸಮಾಧಾನ ವ್ಯಕ್ತಪಡಿಸಿತು ಮತ್ತು ಅಕ್ಟೋಬರ್ 15 ರೊಳಗೆ ಅದನ್ನು ಪೂರ್ಣಗೊಳಿಸಲು ಆದೇಶಿಸಿತ್ತು.

ಇದನ್ನೂ ಓದಿ: ಗಡಿಯಾರ ಚಿಹ್ನೆ ಬಳಕೆ ಕುರಿತು ‘ಸೂಚನೆ’ ಪ್ರಕಟಿಸುತ್ತೇವೆ: ಎನ್‌ಸಿಪಿ ಅಜಿತ್ ಪವಾರ್ ಬಣ

ಗಡಿಯಾರ ಚಿಹ್ನೆ ಬಳಕೆ ಕುರಿತು ‘ಸೂಚನೆ’ ಪ್ರಕಟಿಸುತ್ತೇವೆ: ಎನ್‌ಸಿಪಿ ಅಜಿತ್ ಪವಾರ್ ಬಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...