Homeಕರ್ನಾಟಕಕೊಳ್ಳೇಗಾಲ: ಪ್ರಚಾರ ವೇಳೆ ಹಲವೆಡೆ ಎನ್.ಮಹೇಶ್ ವಿರುದ್ಧ ಮತದಾರರ ಧಿಕ್ಕಾರ

ಕೊಳ್ಳೇಗಾಲ: ಪ್ರಚಾರ ವೇಳೆ ಹಲವೆಡೆ ಎನ್.ಮಹೇಶ್ ವಿರುದ್ಧ ಮತದಾರರ ಧಿಕ್ಕಾರ

- Advertisement -
- Advertisement -

ಕೊಳ್ಳೇಗಾಲ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎನ್.ಮಹೇಶ್ ಅವರಿಗೆ ಅನೇಕ ಕಡೆಯಲ್ಲಿ ಪ್ರತಿಭಟನೆಯ ಬಿಸಿ ತಟ್ಟುತ್ತಿದೆ. ಕ್ಷೇತ್ರದ ಮತದಾರರು ಘೇರಾವ್ ಹಾಕುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ.

ಬಹುಜನ ಚಳವಳಿಯ ಮೂಲಕ ಮುಂಚೂಣಿಗೆ ಬಂದು ಬಿಎಸ್ಪಿ ರಾಜ್ಯಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದ ಮಹೇಶ್ ಅವರು ಸತತ ಸೋಲುಗಳನ್ನು ಕಂಡಿದ್ದರು. ಈ ಅನುಕಂಪದ ಹಿನ್ನೆಲೆಯಲ್ಲಿ ಮಹೇಶ್ ಅವರನ್ನು 2018ರ ಚುನಾವಣೆಯಲ್ಲಿ ದೊಡ್ಡ ಮಟ್ಟದಲ್ಲಿ ಮತದಾರರು ಬೆಂಬಲಿಸಿದ್ದರು.

ಬಿಎಸ್ಪಿಯಿಂದ ಆಯ್ಕೆಯಾದ ಏಕೈಕ ಶಾಸಕರೂ ಅವರಾಗಿದ್ದರು. ಚುನಾವಣೆ ಮುಂಚಿತವಾಗಿ ಜೆಡಿಎಸ್- ಬಿಎಸ್ಪಿ ಹೊಂದಾಣಿಕೆ ಮಾಡಿಕೊಂಡಿದ್ದರ ಫಲವಾಗಿ, ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಎನ್.ಮಹೇಶ್ ಅವರು ಪ್ರಾಥಮಿಕ ಶಿಕ್ಷಣ ಸಚಿವರೂ ಆಗಿದ್ದರು. ಆದರೆ ಮೈತ್ರಿ ಮುರಿದುಬಿದ್ದ ಬಳಿಕ ಎನ್.ಮಹೇಶ್ ಬಿಜೆಪಿ ಪಾಳೆಯದಲ್ಲಿ ಗುರುತಿಸಿಕೊಂಡರು.

ಆಪರೇಷನ್ ಕಮಲ ನಡೆದು ಬಿಜೆಪಿ ಸರ್ಕಾರ ರಚನೆಯಾಗುವ ವೇಳೆ ಕೇಸರಿ ಪಡೆಯ ಜೊತೆಯಲ್ಲಿ ನಿಂತರು. ಇದು ಬಿಎಸ್ಪಿ ರಾಷ್ಟ್ರಾಧ್ಯಕ್ಷೆ ಮಾಯಾವತಿಯವರ ಕಣ್ಣು ಕೆಂಪಾಗಲು ಕಾರಣವಾಗಿತ್ತು. ಬಿಎಸ್ಪಿಯಿಂದ ಉಚ್ಚಾಟನೆಗೆ ಒಳಗಾದರು. ಆದರೆ ಬಿಎಸ್ಪಿಯ ಏಕೈಕ ಶಾಸಕರು ಅವರಾಗಿದ್ದರಿಂದ ಪಕ್ಷಾಂತರ ನಿಷೇಧದ ನಿಯಮಗಳು ಅನ್ವಯವಾಗದೆ ಬಚಾವಾಗಿ ಕ್ಷೇತ್ರದ ಶಾಸಕರಾಗಿ ಮುಂದುವರಿದರು. ಬಳಿಕ ಅಧಿಕೃತವಾಗಿ ಬಿಜೆಪಿ ಸೇರಿಕೊಂಡು ಹಿಂದುತ್ವ ಸಿದ್ಧಾಂತದ ಸಖರಾದರು.

ಹಿಂದುತ್ವ ಸಿದ್ಧಾಂತದ ಪ್ರವರ್ತಕ ವಿ.ಡಿ.ಸಾವರ್ಕರ್ ಜಪವನ್ನು ಎನ್.ಮಹೇಶ್ ಅವರು ಆರಂಭಿಸಿದ್ದು, ದಲಿತ ಮತ್ತು ಇತರ ಹಿಂದುಳಿದ ವರ್ಗಗಳಲ್ಲಿ ಆಕ್ರೋಶ ವ್ಯಕ್ತವಾಗಲು ಕಾರಣವಾಯಿತು. ಈ ಚುನಾವಣೆಯಲ್ಲಿ ಎನ್.ಮಹೇಶ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಪ್ರಚಾರಕ್ಕೆ ಹೋದ ಬಹುತೇಕ ಕಡೆಯಲ್ಲಿ ಎನ್.ಮಹೇಶ್ ವಿರುದ್ಧ ಮತದಾರರು ಧಿಕ್ಕಾರ ಕೂಗುತ್ತಿದ್ದಾರೆ.

“ನೀವು ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಮುಖ್ಯವಾಗಿ ತತ್ವ ಸಿದ್ಧಾಂತವನ್ನು ಗಾಳಿಗೆ ತೂರಿ ಏಕಾಏಕಿ ಬಿಜೆಪಿಗೆ ಹೋದಿರಿ ಎಂಬುದು ನಮ್ಮ ಆಕ್ರೋಶಕ್ಕೆ ಪ್ರಮುಖ ಕಾರಣವಾಗಿದೆ’’ ಎಂದು `ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿದ ಕ್ಷೇತ್ರದ ಮತದಾರರೊಬ್ಬರು ತಿಳಿಸಿದರು.

“ದಲಿತ ಮತದಾರರು ಇರುವಲ್ಲಿ ಎನ್.ಮಹೇಶ್ ಅವರಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಅನೇಕರು ಎನ್.ಮಹೇಶ್ ಅವರಿಂದ ದೂರವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ’’ ಎಂದು ಅವರು ಮಾಹಿತಿ ನೀಡಿದರು.
ಕ್ಷೇತ್ರದ ಯಳಂದೂರು ತಾಲ್ಲೂಕಿನ ಮಸಣಪುರ ಗ್ರಾಮದಲ್ಲಿ ಉಪ್ಪಾರ ಸಮುದಾಯದ ಮುಖಂಡರು ಮಹೇಶ್ ಅವರಿಗೆ ಘೇರಾವ್ ಹಾಕಿದ್ದರು. ಈವರೆಗೆ ಗ್ರಾಮಕ್ಕೆ ನೀವು ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಒಂದು ದಿನದ ನಂತರ ಗ್ರಾಮಸ್ಥರು ಘಟನೆಗೆ ವಿಷಾದ ವ್ಯಕ್ತಪಡಿಸಿರುವ ವರದಿಯೂ ಆಗಿದೆ.

“ಎನ್. ಮಹೇಶ್ ಸತತವಾಗಿ ಸೋಲುತ್ತಿದ್ದರು ಎಂದು ಜನರು ಬೆಂಬಲಿಸಿದರು. ವರ್ತಕ ಸಮುದಾಯ ಅವರ ಬೆನ್ನೆಲುಬಾಗಿ ನಿಂತಿತು. ಎನ್.ಮಹೇಶ್ ಅವರಂತೆಯೇ ನಿರಂತರವಾಗಿ ಕಾಂಗ್ರೆಸ್ಸಿನ ಎ.ಆರ್.ಕೃಷ್ಣಮೂರ್ತಿಯವರೂ ಸೋಲಿದ್ದಾರೆ. ಎನ್.ಮಹೇಶ್ ಅವರ ಮೇಲೆ ಇದ್ದ ಅನುಕಂಪ ಈಗ ಎ.ಆರ್.ಕೆ.ಯತ್ತ ತಿರುಗಿದೆ’’ ಎಂದು ಮತ್ತೊಬ್ಬ ಮತದಾರರು ಹೇಳಿದರು.

ಕ್ಷೇತ್ರದ ಇರಸವಾಡಿ ಗ್ರಾಮದಲ್ಲಿ, ಕೊಳ್ಳೇಗಾಲ ಪಟ್ಟಣದ ಒಂದು ಕಡೆ ಘೇರಾವ್ ಹಾಕಿರುವ ಘಟನೆ ನಡೆದಿದೆ. ಉಮ್ಮತ್ತೂರು ಗ್ರಾಮದಲ್ಲಿ ದೊಡ್ಡ ಮಟ್ಟದಲ್ಲಿ ವಿರೋಧವನ್ನು ಮಹೇಶ್ ಎದುರಿಸಿದ್ದಾರೆ.

ಉಮ್ಮತ್ತೂರಿಗೆ ಪ್ರಚಾರಕ್ಕೆ ಬಂದಿದ್ದ ಮಹೇಶ್ ಅವರು, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಅಥವಾ ಚಿತ್ರಕ್ಕೆ ಮಾಲಾರ್ಪಣೆ ಮಾಡದೆ, ಬಸವಣ್ಣನವರ ಪುತ್ಥಳಿಯತ್ತ ತೆರಳಿದ್ದು ಇಲ್ಲಿನ ದಲಿತರನ್ನು ಕೆರಳಿಸಿದೆ.

“ಅಂಬೇಡ್ಕರ್ ಅವರಿಗೆ ನಮಿಸದೆ, ನೀವು ಬಸವಣ್ಣನವರ ಪುತ್ಥಳಿಯತ್ತ ಹೋದಿರಿ. ನಿಮಗೆ ಲಿಂಗಾಯತ ಮತಗಳು ಬೇಕೇ, ಹೊರತು ದಲಿತರು ಬೇಡವಾಗಿದ್ದಾರೆ. ಅಂಬೇಡ್ಕರ್ ಅವರನ್ನು ಕಡೆಗಣಿಸಿದ್ದೀರಿ’’ ಎಂದು ಪ್ರತಿರೋಧ ತೋರಿದ್ದಾರೆ.

ಯಳಂದೂರು ಪಟ್ಟಣದ ಗೌತಮ್ ಬಡಾವಣೆಯಲ್ಲಿ ಪ್ರಚಾರಕ್ಕೆ ಬಂದ ವೇಳೆಯೂ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದಾರೆಂದು ವರದಿಯಾಗಿದೆ.

ಮತ್ತೊಂದೆಡೆ ಎನ್.ಮಹೇಶ್ ಬೆಂಬಲಿಗರು ಈ ಘಟನೆಗಳನ್ನು ತೀವ್ರವಾಗಿ ಖಂಡಿಸುತ್ತಿದ್ದಾರೆ. ಈ ಘೇರಾವ್ ಘಟನೆಗಳ ಹಿಂದೆ ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಇದ್ದಾರೆಂದು ಆರೋಪಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...