Homeಕರ್ನಾಟಕಕೊಳ್ಳೇಗಾಲ: ಪ್ರಚಾರ ವೇಳೆ ಹಲವೆಡೆ ಎನ್.ಮಹೇಶ್ ವಿರುದ್ಧ ಮತದಾರರ ಧಿಕ್ಕಾರ

ಕೊಳ್ಳೇಗಾಲ: ಪ್ರಚಾರ ವೇಳೆ ಹಲವೆಡೆ ಎನ್.ಮಹೇಶ್ ವಿರುದ್ಧ ಮತದಾರರ ಧಿಕ್ಕಾರ

- Advertisement -
- Advertisement -

ಕೊಳ್ಳೇಗಾಲ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎನ್.ಮಹೇಶ್ ಅವರಿಗೆ ಅನೇಕ ಕಡೆಯಲ್ಲಿ ಪ್ರತಿಭಟನೆಯ ಬಿಸಿ ತಟ್ಟುತ್ತಿದೆ. ಕ್ಷೇತ್ರದ ಮತದಾರರು ಘೇರಾವ್ ಹಾಕುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ.

ಬಹುಜನ ಚಳವಳಿಯ ಮೂಲಕ ಮುಂಚೂಣಿಗೆ ಬಂದು ಬಿಎಸ್ಪಿ ರಾಜ್ಯಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದ ಮಹೇಶ್ ಅವರು ಸತತ ಸೋಲುಗಳನ್ನು ಕಂಡಿದ್ದರು. ಈ ಅನುಕಂಪದ ಹಿನ್ನೆಲೆಯಲ್ಲಿ ಮಹೇಶ್ ಅವರನ್ನು 2018ರ ಚುನಾವಣೆಯಲ್ಲಿ ದೊಡ್ಡ ಮಟ್ಟದಲ್ಲಿ ಮತದಾರರು ಬೆಂಬಲಿಸಿದ್ದರು.

ಬಿಎಸ್ಪಿಯಿಂದ ಆಯ್ಕೆಯಾದ ಏಕೈಕ ಶಾಸಕರೂ ಅವರಾಗಿದ್ದರು. ಚುನಾವಣೆ ಮುಂಚಿತವಾಗಿ ಜೆಡಿಎಸ್- ಬಿಎಸ್ಪಿ ಹೊಂದಾಣಿಕೆ ಮಾಡಿಕೊಂಡಿದ್ದರ ಫಲವಾಗಿ, ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಎನ್.ಮಹೇಶ್ ಅವರು ಪ್ರಾಥಮಿಕ ಶಿಕ್ಷಣ ಸಚಿವರೂ ಆಗಿದ್ದರು. ಆದರೆ ಮೈತ್ರಿ ಮುರಿದುಬಿದ್ದ ಬಳಿಕ ಎನ್.ಮಹೇಶ್ ಬಿಜೆಪಿ ಪಾಳೆಯದಲ್ಲಿ ಗುರುತಿಸಿಕೊಂಡರು.

ಆಪರೇಷನ್ ಕಮಲ ನಡೆದು ಬಿಜೆಪಿ ಸರ್ಕಾರ ರಚನೆಯಾಗುವ ವೇಳೆ ಕೇಸರಿ ಪಡೆಯ ಜೊತೆಯಲ್ಲಿ ನಿಂತರು. ಇದು ಬಿಎಸ್ಪಿ ರಾಷ್ಟ್ರಾಧ್ಯಕ್ಷೆ ಮಾಯಾವತಿಯವರ ಕಣ್ಣು ಕೆಂಪಾಗಲು ಕಾರಣವಾಗಿತ್ತು. ಬಿಎಸ್ಪಿಯಿಂದ ಉಚ್ಚಾಟನೆಗೆ ಒಳಗಾದರು. ಆದರೆ ಬಿಎಸ್ಪಿಯ ಏಕೈಕ ಶಾಸಕರು ಅವರಾಗಿದ್ದರಿಂದ ಪಕ್ಷಾಂತರ ನಿಷೇಧದ ನಿಯಮಗಳು ಅನ್ವಯವಾಗದೆ ಬಚಾವಾಗಿ ಕ್ಷೇತ್ರದ ಶಾಸಕರಾಗಿ ಮುಂದುವರಿದರು. ಬಳಿಕ ಅಧಿಕೃತವಾಗಿ ಬಿಜೆಪಿ ಸೇರಿಕೊಂಡು ಹಿಂದುತ್ವ ಸಿದ್ಧಾಂತದ ಸಖರಾದರು.

ಹಿಂದುತ್ವ ಸಿದ್ಧಾಂತದ ಪ್ರವರ್ತಕ ವಿ.ಡಿ.ಸಾವರ್ಕರ್ ಜಪವನ್ನು ಎನ್.ಮಹೇಶ್ ಅವರು ಆರಂಭಿಸಿದ್ದು, ದಲಿತ ಮತ್ತು ಇತರ ಹಿಂದುಳಿದ ವರ್ಗಗಳಲ್ಲಿ ಆಕ್ರೋಶ ವ್ಯಕ್ತವಾಗಲು ಕಾರಣವಾಯಿತು. ಈ ಚುನಾವಣೆಯಲ್ಲಿ ಎನ್.ಮಹೇಶ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಪ್ರಚಾರಕ್ಕೆ ಹೋದ ಬಹುತೇಕ ಕಡೆಯಲ್ಲಿ ಎನ್.ಮಹೇಶ್ ವಿರುದ್ಧ ಮತದಾರರು ಧಿಕ್ಕಾರ ಕೂಗುತ್ತಿದ್ದಾರೆ.

“ನೀವು ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಮುಖ್ಯವಾಗಿ ತತ್ವ ಸಿದ್ಧಾಂತವನ್ನು ಗಾಳಿಗೆ ತೂರಿ ಏಕಾಏಕಿ ಬಿಜೆಪಿಗೆ ಹೋದಿರಿ ಎಂಬುದು ನಮ್ಮ ಆಕ್ರೋಶಕ್ಕೆ ಪ್ರಮುಖ ಕಾರಣವಾಗಿದೆ’’ ಎಂದು `ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿದ ಕ್ಷೇತ್ರದ ಮತದಾರರೊಬ್ಬರು ತಿಳಿಸಿದರು.

“ದಲಿತ ಮತದಾರರು ಇರುವಲ್ಲಿ ಎನ್.ಮಹೇಶ್ ಅವರಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಅನೇಕರು ಎನ್.ಮಹೇಶ್ ಅವರಿಂದ ದೂರವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ’’ ಎಂದು ಅವರು ಮಾಹಿತಿ ನೀಡಿದರು.
ಕ್ಷೇತ್ರದ ಯಳಂದೂರು ತಾಲ್ಲೂಕಿನ ಮಸಣಪುರ ಗ್ರಾಮದಲ್ಲಿ ಉಪ್ಪಾರ ಸಮುದಾಯದ ಮುಖಂಡರು ಮಹೇಶ್ ಅವರಿಗೆ ಘೇರಾವ್ ಹಾಕಿದ್ದರು. ಈವರೆಗೆ ಗ್ರಾಮಕ್ಕೆ ನೀವು ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಒಂದು ದಿನದ ನಂತರ ಗ್ರಾಮಸ್ಥರು ಘಟನೆಗೆ ವಿಷಾದ ವ್ಯಕ್ತಪಡಿಸಿರುವ ವರದಿಯೂ ಆಗಿದೆ.

“ಎನ್. ಮಹೇಶ್ ಸತತವಾಗಿ ಸೋಲುತ್ತಿದ್ದರು ಎಂದು ಜನರು ಬೆಂಬಲಿಸಿದರು. ವರ್ತಕ ಸಮುದಾಯ ಅವರ ಬೆನ್ನೆಲುಬಾಗಿ ನಿಂತಿತು. ಎನ್.ಮಹೇಶ್ ಅವರಂತೆಯೇ ನಿರಂತರವಾಗಿ ಕಾಂಗ್ರೆಸ್ಸಿನ ಎ.ಆರ್.ಕೃಷ್ಣಮೂರ್ತಿಯವರೂ ಸೋಲಿದ್ದಾರೆ. ಎನ್.ಮಹೇಶ್ ಅವರ ಮೇಲೆ ಇದ್ದ ಅನುಕಂಪ ಈಗ ಎ.ಆರ್.ಕೆ.ಯತ್ತ ತಿರುಗಿದೆ’’ ಎಂದು ಮತ್ತೊಬ್ಬ ಮತದಾರರು ಹೇಳಿದರು.

ಕ್ಷೇತ್ರದ ಇರಸವಾಡಿ ಗ್ರಾಮದಲ್ಲಿ, ಕೊಳ್ಳೇಗಾಲ ಪಟ್ಟಣದ ಒಂದು ಕಡೆ ಘೇರಾವ್ ಹಾಕಿರುವ ಘಟನೆ ನಡೆದಿದೆ. ಉಮ್ಮತ್ತೂರು ಗ್ರಾಮದಲ್ಲಿ ದೊಡ್ಡ ಮಟ್ಟದಲ್ಲಿ ವಿರೋಧವನ್ನು ಮಹೇಶ್ ಎದುರಿಸಿದ್ದಾರೆ.

ಉಮ್ಮತ್ತೂರಿಗೆ ಪ್ರಚಾರಕ್ಕೆ ಬಂದಿದ್ದ ಮಹೇಶ್ ಅವರು, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಅಥವಾ ಚಿತ್ರಕ್ಕೆ ಮಾಲಾರ್ಪಣೆ ಮಾಡದೆ, ಬಸವಣ್ಣನವರ ಪುತ್ಥಳಿಯತ್ತ ತೆರಳಿದ್ದು ಇಲ್ಲಿನ ದಲಿತರನ್ನು ಕೆರಳಿಸಿದೆ.

“ಅಂಬೇಡ್ಕರ್ ಅವರಿಗೆ ನಮಿಸದೆ, ನೀವು ಬಸವಣ್ಣನವರ ಪುತ್ಥಳಿಯತ್ತ ಹೋದಿರಿ. ನಿಮಗೆ ಲಿಂಗಾಯತ ಮತಗಳು ಬೇಕೇ, ಹೊರತು ದಲಿತರು ಬೇಡವಾಗಿದ್ದಾರೆ. ಅಂಬೇಡ್ಕರ್ ಅವರನ್ನು ಕಡೆಗಣಿಸಿದ್ದೀರಿ’’ ಎಂದು ಪ್ರತಿರೋಧ ತೋರಿದ್ದಾರೆ.

ಯಳಂದೂರು ಪಟ್ಟಣದ ಗೌತಮ್ ಬಡಾವಣೆಯಲ್ಲಿ ಪ್ರಚಾರಕ್ಕೆ ಬಂದ ವೇಳೆಯೂ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದಾರೆಂದು ವರದಿಯಾಗಿದೆ.

ಮತ್ತೊಂದೆಡೆ ಎನ್.ಮಹೇಶ್ ಬೆಂಬಲಿಗರು ಈ ಘಟನೆಗಳನ್ನು ತೀವ್ರವಾಗಿ ಖಂಡಿಸುತ್ತಿದ್ದಾರೆ. ಈ ಘೇರಾವ್ ಘಟನೆಗಳ ಹಿಂದೆ ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಇದ್ದಾರೆಂದು ಆರೋಪಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...