Homeಕರ್ನಾಟಕಕೊಳ್ಳೇಗಾಲ: ಪ್ರಚಾರ ವೇಳೆ ಹಲವೆಡೆ ಎನ್.ಮಹೇಶ್ ವಿರುದ್ಧ ಮತದಾರರ ಧಿಕ್ಕಾರ

ಕೊಳ್ಳೇಗಾಲ: ಪ್ರಚಾರ ವೇಳೆ ಹಲವೆಡೆ ಎನ್.ಮಹೇಶ್ ವಿರುದ್ಧ ಮತದಾರರ ಧಿಕ್ಕಾರ

- Advertisement -
- Advertisement -

ಕೊಳ್ಳೇಗಾಲ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎನ್.ಮಹೇಶ್ ಅವರಿಗೆ ಅನೇಕ ಕಡೆಯಲ್ಲಿ ಪ್ರತಿಭಟನೆಯ ಬಿಸಿ ತಟ್ಟುತ್ತಿದೆ. ಕ್ಷೇತ್ರದ ಮತದಾರರು ಘೇರಾವ್ ಹಾಕುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ.

ಬಹುಜನ ಚಳವಳಿಯ ಮೂಲಕ ಮುಂಚೂಣಿಗೆ ಬಂದು ಬಿಎಸ್ಪಿ ರಾಜ್ಯಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದ ಮಹೇಶ್ ಅವರು ಸತತ ಸೋಲುಗಳನ್ನು ಕಂಡಿದ್ದರು. ಈ ಅನುಕಂಪದ ಹಿನ್ನೆಲೆಯಲ್ಲಿ ಮಹೇಶ್ ಅವರನ್ನು 2018ರ ಚುನಾವಣೆಯಲ್ಲಿ ದೊಡ್ಡ ಮಟ್ಟದಲ್ಲಿ ಮತದಾರರು ಬೆಂಬಲಿಸಿದ್ದರು.

ಬಿಎಸ್ಪಿಯಿಂದ ಆಯ್ಕೆಯಾದ ಏಕೈಕ ಶಾಸಕರೂ ಅವರಾಗಿದ್ದರು. ಚುನಾವಣೆ ಮುಂಚಿತವಾಗಿ ಜೆಡಿಎಸ್- ಬಿಎಸ್ಪಿ ಹೊಂದಾಣಿಕೆ ಮಾಡಿಕೊಂಡಿದ್ದರ ಫಲವಾಗಿ, ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಎನ್.ಮಹೇಶ್ ಅವರು ಪ್ರಾಥಮಿಕ ಶಿಕ್ಷಣ ಸಚಿವರೂ ಆಗಿದ್ದರು. ಆದರೆ ಮೈತ್ರಿ ಮುರಿದುಬಿದ್ದ ಬಳಿಕ ಎನ್.ಮಹೇಶ್ ಬಿಜೆಪಿ ಪಾಳೆಯದಲ್ಲಿ ಗುರುತಿಸಿಕೊಂಡರು.

ಆಪರೇಷನ್ ಕಮಲ ನಡೆದು ಬಿಜೆಪಿ ಸರ್ಕಾರ ರಚನೆಯಾಗುವ ವೇಳೆ ಕೇಸರಿ ಪಡೆಯ ಜೊತೆಯಲ್ಲಿ ನಿಂತರು. ಇದು ಬಿಎಸ್ಪಿ ರಾಷ್ಟ್ರಾಧ್ಯಕ್ಷೆ ಮಾಯಾವತಿಯವರ ಕಣ್ಣು ಕೆಂಪಾಗಲು ಕಾರಣವಾಗಿತ್ತು. ಬಿಎಸ್ಪಿಯಿಂದ ಉಚ್ಚಾಟನೆಗೆ ಒಳಗಾದರು. ಆದರೆ ಬಿಎಸ್ಪಿಯ ಏಕೈಕ ಶಾಸಕರು ಅವರಾಗಿದ್ದರಿಂದ ಪಕ್ಷಾಂತರ ನಿಷೇಧದ ನಿಯಮಗಳು ಅನ್ವಯವಾಗದೆ ಬಚಾವಾಗಿ ಕ್ಷೇತ್ರದ ಶಾಸಕರಾಗಿ ಮುಂದುವರಿದರು. ಬಳಿಕ ಅಧಿಕೃತವಾಗಿ ಬಿಜೆಪಿ ಸೇರಿಕೊಂಡು ಹಿಂದುತ್ವ ಸಿದ್ಧಾಂತದ ಸಖರಾದರು.

ಹಿಂದುತ್ವ ಸಿದ್ಧಾಂತದ ಪ್ರವರ್ತಕ ವಿ.ಡಿ.ಸಾವರ್ಕರ್ ಜಪವನ್ನು ಎನ್.ಮಹೇಶ್ ಅವರು ಆರಂಭಿಸಿದ್ದು, ದಲಿತ ಮತ್ತು ಇತರ ಹಿಂದುಳಿದ ವರ್ಗಗಳಲ್ಲಿ ಆಕ್ರೋಶ ವ್ಯಕ್ತವಾಗಲು ಕಾರಣವಾಯಿತು. ಈ ಚುನಾವಣೆಯಲ್ಲಿ ಎನ್.ಮಹೇಶ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಪ್ರಚಾರಕ್ಕೆ ಹೋದ ಬಹುತೇಕ ಕಡೆಯಲ್ಲಿ ಎನ್.ಮಹೇಶ್ ವಿರುದ್ಧ ಮತದಾರರು ಧಿಕ್ಕಾರ ಕೂಗುತ್ತಿದ್ದಾರೆ.

“ನೀವು ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಮುಖ್ಯವಾಗಿ ತತ್ವ ಸಿದ್ಧಾಂತವನ್ನು ಗಾಳಿಗೆ ತೂರಿ ಏಕಾಏಕಿ ಬಿಜೆಪಿಗೆ ಹೋದಿರಿ ಎಂಬುದು ನಮ್ಮ ಆಕ್ರೋಶಕ್ಕೆ ಪ್ರಮುಖ ಕಾರಣವಾಗಿದೆ’’ ಎಂದು `ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿದ ಕ್ಷೇತ್ರದ ಮತದಾರರೊಬ್ಬರು ತಿಳಿಸಿದರು.

“ದಲಿತ ಮತದಾರರು ಇರುವಲ್ಲಿ ಎನ್.ಮಹೇಶ್ ಅವರಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಅನೇಕರು ಎನ್.ಮಹೇಶ್ ಅವರಿಂದ ದೂರವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ’’ ಎಂದು ಅವರು ಮಾಹಿತಿ ನೀಡಿದರು.
ಕ್ಷೇತ್ರದ ಯಳಂದೂರು ತಾಲ್ಲೂಕಿನ ಮಸಣಪುರ ಗ್ರಾಮದಲ್ಲಿ ಉಪ್ಪಾರ ಸಮುದಾಯದ ಮುಖಂಡರು ಮಹೇಶ್ ಅವರಿಗೆ ಘೇರಾವ್ ಹಾಕಿದ್ದರು. ಈವರೆಗೆ ಗ್ರಾಮಕ್ಕೆ ನೀವು ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಒಂದು ದಿನದ ನಂತರ ಗ್ರಾಮಸ್ಥರು ಘಟನೆಗೆ ವಿಷಾದ ವ್ಯಕ್ತಪಡಿಸಿರುವ ವರದಿಯೂ ಆಗಿದೆ.

“ಎನ್. ಮಹೇಶ್ ಸತತವಾಗಿ ಸೋಲುತ್ತಿದ್ದರು ಎಂದು ಜನರು ಬೆಂಬಲಿಸಿದರು. ವರ್ತಕ ಸಮುದಾಯ ಅವರ ಬೆನ್ನೆಲುಬಾಗಿ ನಿಂತಿತು. ಎನ್.ಮಹೇಶ್ ಅವರಂತೆಯೇ ನಿರಂತರವಾಗಿ ಕಾಂಗ್ರೆಸ್ಸಿನ ಎ.ಆರ್.ಕೃಷ್ಣಮೂರ್ತಿಯವರೂ ಸೋಲಿದ್ದಾರೆ. ಎನ್.ಮಹೇಶ್ ಅವರ ಮೇಲೆ ಇದ್ದ ಅನುಕಂಪ ಈಗ ಎ.ಆರ್.ಕೆ.ಯತ್ತ ತಿರುಗಿದೆ’’ ಎಂದು ಮತ್ತೊಬ್ಬ ಮತದಾರರು ಹೇಳಿದರು.

ಕ್ಷೇತ್ರದ ಇರಸವಾಡಿ ಗ್ರಾಮದಲ್ಲಿ, ಕೊಳ್ಳೇಗಾಲ ಪಟ್ಟಣದ ಒಂದು ಕಡೆ ಘೇರಾವ್ ಹಾಕಿರುವ ಘಟನೆ ನಡೆದಿದೆ. ಉಮ್ಮತ್ತೂರು ಗ್ರಾಮದಲ್ಲಿ ದೊಡ್ಡ ಮಟ್ಟದಲ್ಲಿ ವಿರೋಧವನ್ನು ಮಹೇಶ್ ಎದುರಿಸಿದ್ದಾರೆ.

ಉಮ್ಮತ್ತೂರಿಗೆ ಪ್ರಚಾರಕ್ಕೆ ಬಂದಿದ್ದ ಮಹೇಶ್ ಅವರು, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಅಥವಾ ಚಿತ್ರಕ್ಕೆ ಮಾಲಾರ್ಪಣೆ ಮಾಡದೆ, ಬಸವಣ್ಣನವರ ಪುತ್ಥಳಿಯತ್ತ ತೆರಳಿದ್ದು ಇಲ್ಲಿನ ದಲಿತರನ್ನು ಕೆರಳಿಸಿದೆ.

“ಅಂಬೇಡ್ಕರ್ ಅವರಿಗೆ ನಮಿಸದೆ, ನೀವು ಬಸವಣ್ಣನವರ ಪುತ್ಥಳಿಯತ್ತ ಹೋದಿರಿ. ನಿಮಗೆ ಲಿಂಗಾಯತ ಮತಗಳು ಬೇಕೇ, ಹೊರತು ದಲಿತರು ಬೇಡವಾಗಿದ್ದಾರೆ. ಅಂಬೇಡ್ಕರ್ ಅವರನ್ನು ಕಡೆಗಣಿಸಿದ್ದೀರಿ’’ ಎಂದು ಪ್ರತಿರೋಧ ತೋರಿದ್ದಾರೆ.

ಯಳಂದೂರು ಪಟ್ಟಣದ ಗೌತಮ್ ಬಡಾವಣೆಯಲ್ಲಿ ಪ್ರಚಾರಕ್ಕೆ ಬಂದ ವೇಳೆಯೂ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದಾರೆಂದು ವರದಿಯಾಗಿದೆ.

ಮತ್ತೊಂದೆಡೆ ಎನ್.ಮಹೇಶ್ ಬೆಂಬಲಿಗರು ಈ ಘಟನೆಗಳನ್ನು ತೀವ್ರವಾಗಿ ಖಂಡಿಸುತ್ತಿದ್ದಾರೆ. ಈ ಘೇರಾವ್ ಘಟನೆಗಳ ಹಿಂದೆ ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಇದ್ದಾರೆಂದು ಆರೋಪಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...