Homeಕರ್ನಾಟಕಕೊಳ್ಳೇಗಾಲ: ಪ್ರಚಾರ ವೇಳೆ ಹಲವೆಡೆ ಎನ್.ಮಹೇಶ್ ವಿರುದ್ಧ ಮತದಾರರ ಧಿಕ್ಕಾರ

ಕೊಳ್ಳೇಗಾಲ: ಪ್ರಚಾರ ವೇಳೆ ಹಲವೆಡೆ ಎನ್.ಮಹೇಶ್ ವಿರುದ್ಧ ಮತದಾರರ ಧಿಕ್ಕಾರ

- Advertisement -
- Advertisement -

ಕೊಳ್ಳೇಗಾಲ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎನ್.ಮಹೇಶ್ ಅವರಿಗೆ ಅನೇಕ ಕಡೆಯಲ್ಲಿ ಪ್ರತಿಭಟನೆಯ ಬಿಸಿ ತಟ್ಟುತ್ತಿದೆ. ಕ್ಷೇತ್ರದ ಮತದಾರರು ಘೇರಾವ್ ಹಾಕುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ.

ಬಹುಜನ ಚಳವಳಿಯ ಮೂಲಕ ಮುಂಚೂಣಿಗೆ ಬಂದು ಬಿಎಸ್ಪಿ ರಾಜ್ಯಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದ ಮಹೇಶ್ ಅವರು ಸತತ ಸೋಲುಗಳನ್ನು ಕಂಡಿದ್ದರು. ಈ ಅನುಕಂಪದ ಹಿನ್ನೆಲೆಯಲ್ಲಿ ಮಹೇಶ್ ಅವರನ್ನು 2018ರ ಚುನಾವಣೆಯಲ್ಲಿ ದೊಡ್ಡ ಮಟ್ಟದಲ್ಲಿ ಮತದಾರರು ಬೆಂಬಲಿಸಿದ್ದರು.

ಬಿಎಸ್ಪಿಯಿಂದ ಆಯ್ಕೆಯಾದ ಏಕೈಕ ಶಾಸಕರೂ ಅವರಾಗಿದ್ದರು. ಚುನಾವಣೆ ಮುಂಚಿತವಾಗಿ ಜೆಡಿಎಸ್- ಬಿಎಸ್ಪಿ ಹೊಂದಾಣಿಕೆ ಮಾಡಿಕೊಂಡಿದ್ದರ ಫಲವಾಗಿ, ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಎನ್.ಮಹೇಶ್ ಅವರು ಪ್ರಾಥಮಿಕ ಶಿಕ್ಷಣ ಸಚಿವರೂ ಆಗಿದ್ದರು. ಆದರೆ ಮೈತ್ರಿ ಮುರಿದುಬಿದ್ದ ಬಳಿಕ ಎನ್.ಮಹೇಶ್ ಬಿಜೆಪಿ ಪಾಳೆಯದಲ್ಲಿ ಗುರುತಿಸಿಕೊಂಡರು.

ಆಪರೇಷನ್ ಕಮಲ ನಡೆದು ಬಿಜೆಪಿ ಸರ್ಕಾರ ರಚನೆಯಾಗುವ ವೇಳೆ ಕೇಸರಿ ಪಡೆಯ ಜೊತೆಯಲ್ಲಿ ನಿಂತರು. ಇದು ಬಿಎಸ್ಪಿ ರಾಷ್ಟ್ರಾಧ್ಯಕ್ಷೆ ಮಾಯಾವತಿಯವರ ಕಣ್ಣು ಕೆಂಪಾಗಲು ಕಾರಣವಾಗಿತ್ತು. ಬಿಎಸ್ಪಿಯಿಂದ ಉಚ್ಚಾಟನೆಗೆ ಒಳಗಾದರು. ಆದರೆ ಬಿಎಸ್ಪಿಯ ಏಕೈಕ ಶಾಸಕರು ಅವರಾಗಿದ್ದರಿಂದ ಪಕ್ಷಾಂತರ ನಿಷೇಧದ ನಿಯಮಗಳು ಅನ್ವಯವಾಗದೆ ಬಚಾವಾಗಿ ಕ್ಷೇತ್ರದ ಶಾಸಕರಾಗಿ ಮುಂದುವರಿದರು. ಬಳಿಕ ಅಧಿಕೃತವಾಗಿ ಬಿಜೆಪಿ ಸೇರಿಕೊಂಡು ಹಿಂದುತ್ವ ಸಿದ್ಧಾಂತದ ಸಖರಾದರು.

ಹಿಂದುತ್ವ ಸಿದ್ಧಾಂತದ ಪ್ರವರ್ತಕ ವಿ.ಡಿ.ಸಾವರ್ಕರ್ ಜಪವನ್ನು ಎನ್.ಮಹೇಶ್ ಅವರು ಆರಂಭಿಸಿದ್ದು, ದಲಿತ ಮತ್ತು ಇತರ ಹಿಂದುಳಿದ ವರ್ಗಗಳಲ್ಲಿ ಆಕ್ರೋಶ ವ್ಯಕ್ತವಾಗಲು ಕಾರಣವಾಯಿತು. ಈ ಚುನಾವಣೆಯಲ್ಲಿ ಎನ್.ಮಹೇಶ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಪ್ರಚಾರಕ್ಕೆ ಹೋದ ಬಹುತೇಕ ಕಡೆಯಲ್ಲಿ ಎನ್.ಮಹೇಶ್ ವಿರುದ್ಧ ಮತದಾರರು ಧಿಕ್ಕಾರ ಕೂಗುತ್ತಿದ್ದಾರೆ.

“ನೀವು ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಮುಖ್ಯವಾಗಿ ತತ್ವ ಸಿದ್ಧಾಂತವನ್ನು ಗಾಳಿಗೆ ತೂರಿ ಏಕಾಏಕಿ ಬಿಜೆಪಿಗೆ ಹೋದಿರಿ ಎಂಬುದು ನಮ್ಮ ಆಕ್ರೋಶಕ್ಕೆ ಪ್ರಮುಖ ಕಾರಣವಾಗಿದೆ’’ ಎಂದು `ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿದ ಕ್ಷೇತ್ರದ ಮತದಾರರೊಬ್ಬರು ತಿಳಿಸಿದರು.

“ದಲಿತ ಮತದಾರರು ಇರುವಲ್ಲಿ ಎನ್.ಮಹೇಶ್ ಅವರಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಅನೇಕರು ಎನ್.ಮಹೇಶ್ ಅವರಿಂದ ದೂರವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ’’ ಎಂದು ಅವರು ಮಾಹಿತಿ ನೀಡಿದರು.
ಕ್ಷೇತ್ರದ ಯಳಂದೂರು ತಾಲ್ಲೂಕಿನ ಮಸಣಪುರ ಗ್ರಾಮದಲ್ಲಿ ಉಪ್ಪಾರ ಸಮುದಾಯದ ಮುಖಂಡರು ಮಹೇಶ್ ಅವರಿಗೆ ಘೇರಾವ್ ಹಾಕಿದ್ದರು. ಈವರೆಗೆ ಗ್ರಾಮಕ್ಕೆ ನೀವು ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಒಂದು ದಿನದ ನಂತರ ಗ್ರಾಮಸ್ಥರು ಘಟನೆಗೆ ವಿಷಾದ ವ್ಯಕ್ತಪಡಿಸಿರುವ ವರದಿಯೂ ಆಗಿದೆ.

“ಎನ್. ಮಹೇಶ್ ಸತತವಾಗಿ ಸೋಲುತ್ತಿದ್ದರು ಎಂದು ಜನರು ಬೆಂಬಲಿಸಿದರು. ವರ್ತಕ ಸಮುದಾಯ ಅವರ ಬೆನ್ನೆಲುಬಾಗಿ ನಿಂತಿತು. ಎನ್.ಮಹೇಶ್ ಅವರಂತೆಯೇ ನಿರಂತರವಾಗಿ ಕಾಂಗ್ರೆಸ್ಸಿನ ಎ.ಆರ್.ಕೃಷ್ಣಮೂರ್ತಿಯವರೂ ಸೋಲಿದ್ದಾರೆ. ಎನ್.ಮಹೇಶ್ ಅವರ ಮೇಲೆ ಇದ್ದ ಅನುಕಂಪ ಈಗ ಎ.ಆರ್.ಕೆ.ಯತ್ತ ತಿರುಗಿದೆ’’ ಎಂದು ಮತ್ತೊಬ್ಬ ಮತದಾರರು ಹೇಳಿದರು.

ಕ್ಷೇತ್ರದ ಇರಸವಾಡಿ ಗ್ರಾಮದಲ್ಲಿ, ಕೊಳ್ಳೇಗಾಲ ಪಟ್ಟಣದ ಒಂದು ಕಡೆ ಘೇರಾವ್ ಹಾಕಿರುವ ಘಟನೆ ನಡೆದಿದೆ. ಉಮ್ಮತ್ತೂರು ಗ್ರಾಮದಲ್ಲಿ ದೊಡ್ಡ ಮಟ್ಟದಲ್ಲಿ ವಿರೋಧವನ್ನು ಮಹೇಶ್ ಎದುರಿಸಿದ್ದಾರೆ.

ಉಮ್ಮತ್ತೂರಿಗೆ ಪ್ರಚಾರಕ್ಕೆ ಬಂದಿದ್ದ ಮಹೇಶ್ ಅವರು, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಅಥವಾ ಚಿತ್ರಕ್ಕೆ ಮಾಲಾರ್ಪಣೆ ಮಾಡದೆ, ಬಸವಣ್ಣನವರ ಪುತ್ಥಳಿಯತ್ತ ತೆರಳಿದ್ದು ಇಲ್ಲಿನ ದಲಿತರನ್ನು ಕೆರಳಿಸಿದೆ.

“ಅಂಬೇಡ್ಕರ್ ಅವರಿಗೆ ನಮಿಸದೆ, ನೀವು ಬಸವಣ್ಣನವರ ಪುತ್ಥಳಿಯತ್ತ ಹೋದಿರಿ. ನಿಮಗೆ ಲಿಂಗಾಯತ ಮತಗಳು ಬೇಕೇ, ಹೊರತು ದಲಿತರು ಬೇಡವಾಗಿದ್ದಾರೆ. ಅಂಬೇಡ್ಕರ್ ಅವರನ್ನು ಕಡೆಗಣಿಸಿದ್ದೀರಿ’’ ಎಂದು ಪ್ರತಿರೋಧ ತೋರಿದ್ದಾರೆ.

ಯಳಂದೂರು ಪಟ್ಟಣದ ಗೌತಮ್ ಬಡಾವಣೆಯಲ್ಲಿ ಪ್ರಚಾರಕ್ಕೆ ಬಂದ ವೇಳೆಯೂ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದಾರೆಂದು ವರದಿಯಾಗಿದೆ.

ಮತ್ತೊಂದೆಡೆ ಎನ್.ಮಹೇಶ್ ಬೆಂಬಲಿಗರು ಈ ಘಟನೆಗಳನ್ನು ತೀವ್ರವಾಗಿ ಖಂಡಿಸುತ್ತಿದ್ದಾರೆ. ಈ ಘೇರಾವ್ ಘಟನೆಗಳ ಹಿಂದೆ ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಇದ್ದಾರೆಂದು ಆರೋಪಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...