Homeಕರ್ನಾಟಕಕೊಳ್ಳೇಗಾಲ: ಪ್ರಚಾರ ವೇಳೆ ಹಲವೆಡೆ ಎನ್.ಮಹೇಶ್ ವಿರುದ್ಧ ಮತದಾರರ ಧಿಕ್ಕಾರ

ಕೊಳ್ಳೇಗಾಲ: ಪ್ರಚಾರ ವೇಳೆ ಹಲವೆಡೆ ಎನ್.ಮಹೇಶ್ ವಿರುದ್ಧ ಮತದಾರರ ಧಿಕ್ಕಾರ

- Advertisement -
- Advertisement -

ಕೊಳ್ಳೇಗಾಲ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎನ್.ಮಹೇಶ್ ಅವರಿಗೆ ಅನೇಕ ಕಡೆಯಲ್ಲಿ ಪ್ರತಿಭಟನೆಯ ಬಿಸಿ ತಟ್ಟುತ್ತಿದೆ. ಕ್ಷೇತ್ರದ ಮತದಾರರು ಘೇರಾವ್ ಹಾಕುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ.

ಬಹುಜನ ಚಳವಳಿಯ ಮೂಲಕ ಮುಂಚೂಣಿಗೆ ಬಂದು ಬಿಎಸ್ಪಿ ರಾಜ್ಯಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದ ಮಹೇಶ್ ಅವರು ಸತತ ಸೋಲುಗಳನ್ನು ಕಂಡಿದ್ದರು. ಈ ಅನುಕಂಪದ ಹಿನ್ನೆಲೆಯಲ್ಲಿ ಮಹೇಶ್ ಅವರನ್ನು 2018ರ ಚುನಾವಣೆಯಲ್ಲಿ ದೊಡ್ಡ ಮಟ್ಟದಲ್ಲಿ ಮತದಾರರು ಬೆಂಬಲಿಸಿದ್ದರು.

ಬಿಎಸ್ಪಿಯಿಂದ ಆಯ್ಕೆಯಾದ ಏಕೈಕ ಶಾಸಕರೂ ಅವರಾಗಿದ್ದರು. ಚುನಾವಣೆ ಮುಂಚಿತವಾಗಿ ಜೆಡಿಎಸ್- ಬಿಎಸ್ಪಿ ಹೊಂದಾಣಿಕೆ ಮಾಡಿಕೊಂಡಿದ್ದರ ಫಲವಾಗಿ, ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಎನ್.ಮಹೇಶ್ ಅವರು ಪ್ರಾಥಮಿಕ ಶಿಕ್ಷಣ ಸಚಿವರೂ ಆಗಿದ್ದರು. ಆದರೆ ಮೈತ್ರಿ ಮುರಿದುಬಿದ್ದ ಬಳಿಕ ಎನ್.ಮಹೇಶ್ ಬಿಜೆಪಿ ಪಾಳೆಯದಲ್ಲಿ ಗುರುತಿಸಿಕೊಂಡರು.

ಆಪರೇಷನ್ ಕಮಲ ನಡೆದು ಬಿಜೆಪಿ ಸರ್ಕಾರ ರಚನೆಯಾಗುವ ವೇಳೆ ಕೇಸರಿ ಪಡೆಯ ಜೊತೆಯಲ್ಲಿ ನಿಂತರು. ಇದು ಬಿಎಸ್ಪಿ ರಾಷ್ಟ್ರಾಧ್ಯಕ್ಷೆ ಮಾಯಾವತಿಯವರ ಕಣ್ಣು ಕೆಂಪಾಗಲು ಕಾರಣವಾಗಿತ್ತು. ಬಿಎಸ್ಪಿಯಿಂದ ಉಚ್ಚಾಟನೆಗೆ ಒಳಗಾದರು. ಆದರೆ ಬಿಎಸ್ಪಿಯ ಏಕೈಕ ಶಾಸಕರು ಅವರಾಗಿದ್ದರಿಂದ ಪಕ್ಷಾಂತರ ನಿಷೇಧದ ನಿಯಮಗಳು ಅನ್ವಯವಾಗದೆ ಬಚಾವಾಗಿ ಕ್ಷೇತ್ರದ ಶಾಸಕರಾಗಿ ಮುಂದುವರಿದರು. ಬಳಿಕ ಅಧಿಕೃತವಾಗಿ ಬಿಜೆಪಿ ಸೇರಿಕೊಂಡು ಹಿಂದುತ್ವ ಸಿದ್ಧಾಂತದ ಸಖರಾದರು.

ಹಿಂದುತ್ವ ಸಿದ್ಧಾಂತದ ಪ್ರವರ್ತಕ ವಿ.ಡಿ.ಸಾವರ್ಕರ್ ಜಪವನ್ನು ಎನ್.ಮಹೇಶ್ ಅವರು ಆರಂಭಿಸಿದ್ದು, ದಲಿತ ಮತ್ತು ಇತರ ಹಿಂದುಳಿದ ವರ್ಗಗಳಲ್ಲಿ ಆಕ್ರೋಶ ವ್ಯಕ್ತವಾಗಲು ಕಾರಣವಾಯಿತು. ಈ ಚುನಾವಣೆಯಲ್ಲಿ ಎನ್.ಮಹೇಶ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಪ್ರಚಾರಕ್ಕೆ ಹೋದ ಬಹುತೇಕ ಕಡೆಯಲ್ಲಿ ಎನ್.ಮಹೇಶ್ ವಿರುದ್ಧ ಮತದಾರರು ಧಿಕ್ಕಾರ ಕೂಗುತ್ತಿದ್ದಾರೆ.

“ನೀವು ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಮುಖ್ಯವಾಗಿ ತತ್ವ ಸಿದ್ಧಾಂತವನ್ನು ಗಾಳಿಗೆ ತೂರಿ ಏಕಾಏಕಿ ಬಿಜೆಪಿಗೆ ಹೋದಿರಿ ಎಂಬುದು ನಮ್ಮ ಆಕ್ರೋಶಕ್ಕೆ ಪ್ರಮುಖ ಕಾರಣವಾಗಿದೆ’’ ಎಂದು `ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿದ ಕ್ಷೇತ್ರದ ಮತದಾರರೊಬ್ಬರು ತಿಳಿಸಿದರು.

“ದಲಿತ ಮತದಾರರು ಇರುವಲ್ಲಿ ಎನ್.ಮಹೇಶ್ ಅವರಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಅನೇಕರು ಎನ್.ಮಹೇಶ್ ಅವರಿಂದ ದೂರವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ’’ ಎಂದು ಅವರು ಮಾಹಿತಿ ನೀಡಿದರು.
ಕ್ಷೇತ್ರದ ಯಳಂದೂರು ತಾಲ್ಲೂಕಿನ ಮಸಣಪುರ ಗ್ರಾಮದಲ್ಲಿ ಉಪ್ಪಾರ ಸಮುದಾಯದ ಮುಖಂಡರು ಮಹೇಶ್ ಅವರಿಗೆ ಘೇರಾವ್ ಹಾಕಿದ್ದರು. ಈವರೆಗೆ ಗ್ರಾಮಕ್ಕೆ ನೀವು ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಒಂದು ದಿನದ ನಂತರ ಗ್ರಾಮಸ್ಥರು ಘಟನೆಗೆ ವಿಷಾದ ವ್ಯಕ್ತಪಡಿಸಿರುವ ವರದಿಯೂ ಆಗಿದೆ.

“ಎನ್. ಮಹೇಶ್ ಸತತವಾಗಿ ಸೋಲುತ್ತಿದ್ದರು ಎಂದು ಜನರು ಬೆಂಬಲಿಸಿದರು. ವರ್ತಕ ಸಮುದಾಯ ಅವರ ಬೆನ್ನೆಲುಬಾಗಿ ನಿಂತಿತು. ಎನ್.ಮಹೇಶ್ ಅವರಂತೆಯೇ ನಿರಂತರವಾಗಿ ಕಾಂಗ್ರೆಸ್ಸಿನ ಎ.ಆರ್.ಕೃಷ್ಣಮೂರ್ತಿಯವರೂ ಸೋಲಿದ್ದಾರೆ. ಎನ್.ಮಹೇಶ್ ಅವರ ಮೇಲೆ ಇದ್ದ ಅನುಕಂಪ ಈಗ ಎ.ಆರ್.ಕೆ.ಯತ್ತ ತಿರುಗಿದೆ’’ ಎಂದು ಮತ್ತೊಬ್ಬ ಮತದಾರರು ಹೇಳಿದರು.

ಕ್ಷೇತ್ರದ ಇರಸವಾಡಿ ಗ್ರಾಮದಲ್ಲಿ, ಕೊಳ್ಳೇಗಾಲ ಪಟ್ಟಣದ ಒಂದು ಕಡೆ ಘೇರಾವ್ ಹಾಕಿರುವ ಘಟನೆ ನಡೆದಿದೆ. ಉಮ್ಮತ್ತೂರು ಗ್ರಾಮದಲ್ಲಿ ದೊಡ್ಡ ಮಟ್ಟದಲ್ಲಿ ವಿರೋಧವನ್ನು ಮಹೇಶ್ ಎದುರಿಸಿದ್ದಾರೆ.

ಉಮ್ಮತ್ತೂರಿಗೆ ಪ್ರಚಾರಕ್ಕೆ ಬಂದಿದ್ದ ಮಹೇಶ್ ಅವರು, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಅಥವಾ ಚಿತ್ರಕ್ಕೆ ಮಾಲಾರ್ಪಣೆ ಮಾಡದೆ, ಬಸವಣ್ಣನವರ ಪುತ್ಥಳಿಯತ್ತ ತೆರಳಿದ್ದು ಇಲ್ಲಿನ ದಲಿತರನ್ನು ಕೆರಳಿಸಿದೆ.

“ಅಂಬೇಡ್ಕರ್ ಅವರಿಗೆ ನಮಿಸದೆ, ನೀವು ಬಸವಣ್ಣನವರ ಪುತ್ಥಳಿಯತ್ತ ಹೋದಿರಿ. ನಿಮಗೆ ಲಿಂಗಾಯತ ಮತಗಳು ಬೇಕೇ, ಹೊರತು ದಲಿತರು ಬೇಡವಾಗಿದ್ದಾರೆ. ಅಂಬೇಡ್ಕರ್ ಅವರನ್ನು ಕಡೆಗಣಿಸಿದ್ದೀರಿ’’ ಎಂದು ಪ್ರತಿರೋಧ ತೋರಿದ್ದಾರೆ.

ಯಳಂದೂರು ಪಟ್ಟಣದ ಗೌತಮ್ ಬಡಾವಣೆಯಲ್ಲಿ ಪ್ರಚಾರಕ್ಕೆ ಬಂದ ವೇಳೆಯೂ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದಾರೆಂದು ವರದಿಯಾಗಿದೆ.

ಮತ್ತೊಂದೆಡೆ ಎನ್.ಮಹೇಶ್ ಬೆಂಬಲಿಗರು ಈ ಘಟನೆಗಳನ್ನು ತೀವ್ರವಾಗಿ ಖಂಡಿಸುತ್ತಿದ್ದಾರೆ. ಈ ಘೇರಾವ್ ಘಟನೆಗಳ ಹಿಂದೆ ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಇದ್ದಾರೆಂದು ಆರೋಪಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...