Homeಮುಖಪುಟಕಿರುತೆರೆ ತರ ತರ; ಕೂಸೆ ಮುನಿಸಾಮಿ ವೀರಪ್ಪನ್ ಮತ್ತು ಮೂರು ಷೋಗಳು

ಕಿರುತೆರೆ ತರ ತರ; ಕೂಸೆ ಮುನಿಸಾಮಿ ವೀರಪ್ಪನ್ ಮತ್ತು ಮೂರು ಷೋಗಳು

- Advertisement -
- Advertisement -

1. ಕೂಸೆ ಮುನಿಸಾಮಿ ವೀರಪ್ಪನ್

ಕೆಲವು ತಿಂಗಳ ಹಿಂದೆ ನೆಟ್‌ಫ್ಲಿಕ್ಸ್‌ನಲ್ಲಿ ತೆರೆಕಂಡಿದ್ದ ’ದ ಹಂಟ್ ಫಾರ್ ವೀರಪ್ಪನ್’ ಎಂಬ ಸಾಕ್ಷ್ಯಚಿತ್ರ ಬಿಸಿಬಿಸಿ ಚರ್ಚೆಯನ್ನು ಹುಟ್ಟುಹಾಕಿತ್ತು. ’ವರ್ಕ್‌ಶಾಪ್’ ಎಂಬ ಹೆಸರಿನಲ್ಲಿ ಎಸ್‌ಟಿಎಫ್ ಪೊಲೀಸರು, ಅದರಲ್ಲಿಯೂ ಶಂಕರ ಬಿದರಿ ತಂಡ ನಡೆಸಿದ ದೌರ್ಜನ್ಯಗಳ ಬಗ್ಗೆ ಅದರ ಭಾಗವಾಗಿಯೇ ಇದ್ದ ಪೊಲೀಸ್ ಅಧಿಕಾರಿಯೊಬ್ಬರು ನಿವೇದಿಸಿಕೊಂಡಿದ್ದರು. ಆದರೆ ವೀರಪ್ಪನ್ ಒಬ್ಬ ಕಾಡುಗಳ್ಳನಾಗಿ-ಹಂತಕನಾಗಿ ರೂಪುಗೊಂಡಿದ್ದಕ್ಕೆ ಕಾರಣಗಳೇನು ಎಂಬುದರ ಬಗ್ಗೆ ಅದು ಅಷ್ಟು ಮಾತಾಡಿರಲಿಲ್ಲ. ನಾಲ್ಕು ಎಪಿಸೋಡ್ ಇದ್ದ ಈ ಸಾಕ್ಷ್ಯಚಿತ್ರ ಹಲವು ಮುಖ್ಯ ಸಂಗತಿಗಳನ್ನು ಬಿಟ್ಟಿತ್ತು.

ಈ ಕೊರತೆಯನ್ನು ತುಸು ನೀಗಿಸುವ ನಿಟ್ಟಿನಲ್ಲಿ ಈಗ ಝೀ5 ಎಂಬ ಒಟಿಟಿ ವಾಹಿನಿಯಲ್ಲಿ ’ಕೂಸೆ ಮುನಿಸಾಮಿ ವೀರಪ್ಪನ್’ ಎಂಬ ಆರು ಎಪಿಸೋಡ್‌ಗಳ ಸಾಕ್ಷ್ಯಚಿತ್ರ ಬಿಡುಗಡೆಯಾಗಿದೆ. ಇದು ಮೊದಲಭಾಗ ಮಾತ್ರವಾಗಿದ್ದು ಸೀಸನ್-2 ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ನಕ್ಕೀರನ್ ಪತ್ರಿಕೆಯ ಸಂಪಾದಕ ಗೋಪಾಲ್ ಮತ್ತು ತಂಡ ಚಿತ್ರೀಕರಿಸಿದ್ದ ವೀರಪ್ಪನ್‌ನ ವಿಡಿಯೋ ಫುಟೇಜ್‌ಗಳನ್ನು ಯಥೇಚ್ಛವಾಗಿ ಬಳಸಿ ನಿರ್ಮಿಸಿರುವ ಈ ಡಾಕ್ಯುಮೆಂಟರಿ ವೀರಪ್ಪನ್‌ನನ್ನೇ ಮುಖ್ಯ ನಿರೂಪಕನನ್ನಾಗಿ ಕೇಂದ್ರೀಕರಿಸುತ್ತದೆ. ನಾಲ್ಕನೇ ಎಪಿಸೋಡ್ ಪೊಲೀಸರ ಚಿತ್ರಹಿಂಸೆಯ ಭಯಾನಕತೆಯನ್ನು ಚಿತ್ರಿಸಿದರೆ, ಐದನೇ ಎಪಿಸೋಡ್‌ನಲ್ಲಿ ವೀರಪ್ಪನ್ ನಡೆಸುವ ಮೈಂಡ್‌ಲೆಸ್ ಕಿಲ್ಲಿಂಗ್‌ನ ಚಿತ್ರಣ ವಿವರವಾಗಿದೆ. ಒಟ್ಟಿನಲ್ಲಿ ಪೊಲೀಸರ ಮತ್ತು ವೀರಪ್ಪನ್ ದೌರ್ಜನ್ಯದ ನಡುವೆ ಸ್ಪರ್ಧೆ ಇತ್ತೇನೋ ಎಂಬಂತೆ ಭಾಸವಾಗುವಂತೆ ಈ ಸೀರೀಸ್ ಮಾಡುತ್ತದೆ. ಉಳಿದ ಎಲ್ಲಾ ಚಿತ್ರಗಳಿಗೆ ಹೋಲಿಸಿದರೆ ವೀರಪ್ಪನ್ ಮತ್ತು ಸುತ್ತಮುತ್ತಲಿನ ಘಟನೆಗಳ ಬಗ್ಗೆ ತುಸು ಹೆಚ್ಚು ವಿವರಗಳನ್ನು ಈ ಸಾಕ್ಷ್ಯಚಿತ್ರ ಕಟ್ಟಿಕೊಡುತ್ತದೆ.

2. ಲೀವ್ ದ ವರ್ಲ್ಡ್ ಬಿಹೈಂಡ್

ಸ್ಯಾಮ್ ಎಸ್ಮಾಯಿಲ್ ನಿರ್ದೇಶನದ, ಜೂಲಿಯಾ ರಾಬರ್ಟ್ಸ್, ಮಾಹರ್ಶಾಲಾ ಅಲಿ, ಈಥನ್ ಹಾಕ್ ಮತ್ತು ಮೈಹಾ ಲಾ ಹೆರಾಲ್ಡ್ ಮುಖ್ಯಭೂಮಿಕೆಯಲ್ಲಿರುವ 141 ನಿಮಿಷಗಳ ಚಲನಚಿತ್ರ ’ಲೀವ್ ದ ವರ್ಲ್ಡ್ ಬಿಹೈಂಡ್’ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ. ಅಮೆರಿಕನ್ ಅಪೋಕ್ಯಾಲಿಪ್ಟಿಕ್ ಸೈಕಲಾಜಿಕಲ್ ಥ್ರಿಲ್ಲರ್ ಸಿನಿಮಾವಾದ ’ಲೀವ್ ದ ವರ್ಲ್ಡ್ ಬಿಹೈಂಡ್’ಅನ್ನು ರುಮಾನ್ ಆಲಮ್ ಅವರ 2020ರ ಅದೇ ಹೆಸರಿನ ಕಾದಂಬರಿಯಿಂದ ಅಳವಡಿಸಿಕೊಳ್ಳಲಾಗಿದೆ.

ಟೆಕ್ನಾಲಾಜಿಕಲ್ ವಾರ್‌ಫೇರ್‌ನಿಂದ ಆಗುವ ಬ್ಲಾಕ್‌ಔಟ್‌ನಿಂದ ಉಂಟಾಗುವ ಅಲ್ಲೋಲಕಲ್ಲೋಲವನ್ನು, ಐಲ್ಯಾಂಡ್ ಒಂದರಲ್ಲಿ ವೀಕೆಂಡ್ ರಜೆ ಕಳೆಯಲು ಬಂದಿರುವ ಫ್ಯಾಮಿಲಿಯ ದೃಷ್ಟಿಕೋನದಲ್ಲಿ ಈ ಸಿನಿಮಾ ಚಿತ್ರಿಸುತ್ತದೆ. ತುರ್ತು ಸನ್ನಿವೇಶಗಳಲ್ಲಿ ತಂತ್ರಜ್ಞಾನನ ಮೇಲೆ ವಿಪರೀತ ಅವಲಂಬಿಸಿರುವ ಆಧುನಿಕ ಮನುಷ್ಯನ ಅಸಹಾಯಕತೆಯನ್ನು ಕೂಡ ಚಿತ್ರಿಸುವ ಈ ಸಿನಿಮಾ, ಒಂದು ಡಿಸ್ಟೋಪಿಯನ್ ಚಿತ್ರಣವನ್ನು ಕಣ್ಣಮುಂದೆ ತರುತ್ತದೆ. ಜಿಪಿಎಸ್ ಫೇಲ್ ಆದರೆ, ವಿಮಾನಗಳು, ಡ್ರೈವರ್‌ಲೆಸ್ ಕಾರುಗಳು ಹೇಗೆ ಕೆಟಾಸ್ಟ್ರೋಫಿಕ್ ಆಗಬಲ್ಲವು ಎಂಬ ಕರಾಳ ಭವಿಷ್ಯವನ್ನು ಚಿತ್ರಿಸುವುದರ ಜೊತೆಗೆ, ಬಿಳಿಯರ ಜನಾಂಗೀಯ ದ್ವೇಷ, ಜಗತ್ತು ಮುಳುಗುತ್ತಿರುವ ಸನ್ನಿವೇಶದಲ್ಲಿಯೂ ಕಪ್ಪು ಜನರನ್ನು ತುಚ್ಛವಾಗಿ ಕಾಣುವ, ಸಹಜೀವನಕ್ಕೆ ಮುಂದಾಗದ ಬಿಳಿ ಜನರ ಒಣಪ್ರತಿಷ್ಠೆಯನ್ನು ಈ ಸಿನಿಮಾ ಹಿಡಿದಿಡಲು ಪ್ರಯತ್ನಿಸುತ್ತದೆ. ಈ ವಾರ್‌ಫೇರ್ ಹೊರಗಿನವರಿಂದ ಆಗಿರದೆ, ರಾಜಕೀಯ ಲಾಭಕ್ಕಾಗಿ ತಮ್ಮದೇ ದೇಶದ ಸಂಪ್ರದಾಯವಾದಿ ಪಕ್ಷ ನಡೆಸಿರಬಹುದಾದ ಯುದ್ಧ ಇದಾಗಿರಬಹುದು ಎಂದು ಪಾತ್ರವೊಂದು ಹೇಳುವುದು ಗಮನ ಸೆಳೆಯುತ್ತದೆ.

ಇದನ್ನೂ ಓದಿ: ಬಿಳಿಯರ ಪಾಪನಿವೇದನೆಯ ’ಕಿಲ್ಲರ್ಸ್ ಆಫ್ ದ ಫ್ಲವರ್ ಮೂನ್’

 

3. ಟ್ರೆವರ್ ನೋವ: ವೇರ್ ವಾಸ್ ಐ

ಟ್ರೆವರ್ ನೋವ ಸೌಥ್ ಆಫ್ರಿಕಾದ ಕಾಮಿಡಿಯನ್. ಸ್ಟಾಂಡ್ ಅಪ್ ಕಾಮಿಡಿ ಶೋಗಳಿಗೆ ಹೆಸರುವಾಸಿಯಾದ ಟ್ರೆವರ್, ಅಮೆರಿಕದ ಡೆಟ್ರಾಯ್ಟ್ ನಗರದ ತುಂಬಿದ ಸಭಾಂಗಣದಲ್ಲಿ ನಡೆಸಿಕೊಟ್ಟ ಸ್ಟಾಂಡ್ ಅಪ್ ಕಾಮಿಡಿ ಶೋ ಈಗ ನೆಟ್‌ಫ್ಲಿಕ್ಸ್‌ನಲ್ಲಿ ’ಟ್ರೆವರ್ ನೋವ: ವೇರ್ ವಾಸ್ ಐ’ ಹೆಸರಿನಲ್ಲಿ ಪ್ರಸಾರವಾಗುತ್ತಿದೆ.

ತಮ್ಮ ಬರ್ಲಿನ್ ಪ್ರವಾಸದಲ್ಲಿ ನಡೆಸಿಕೊಟ್ಟ ಶೋ ಬಗೆಗಿನ ಅನುಭವದೊಂದಿಗೆ ಶುರುವಾಗುವ ಈ ಕಾರ್ಯಕ್ರಮ ನಾಜಿಗಳನ್ನು, ನಾಜಿಗಳ ರಾಷ್ಟ್ರಗೀತೆಯನ್ನು ವ್ಯಂಗ್ಯ ಮಾಡುವುದಲ್ಲದೆ, ರಾಷ್ಟ್ರಗೀತೆಯ ಸಾಹಿತ್ಯ ಬದಲಿಸಿ, ಮ್ಯೂಸಿಕ್ ಮತ್ತು ಟ್ಯೂನ್‌ಅನ್ನು ಹಾಗೆಯೇ ಉಳಿಸಿಕೊಂಡ ಪೋಸ್ಟ್ ವಾರ್ ಜರ್ಮನಿಯ ನಡೆ ಎಷ್ಟು ವಿಚಿತ್ರವಾದದ್ದು ಮತ್ತು ಉಪಯೋಗವಿಲ್ಲದ್ದು ಎಂದು ಹಾಸ್ಯ ಶೈಲಿಯಲ್ಲಿ, ವೀಕ್ಷಕರನ್ನು ನಗೆಗಡಲಲ್ಲಿ ತೇಲಿಸುವ ಮೂಲಕ ಟ್ರೆವರ್ ಮಾತನಾಡುತ್ತಾರೆ. ಸುಮಾರು 70 ನಿಮಿಷಗಳ ಈ ಶೋನಲ್ಲಿ ಜನಾಂಗೀಯ ತಾರತಮ್ಯ, ಲಿಂಗ ತಾರತಮ್ಯ, ಹುಸಿ ನ್ಯಾಷನಲಿಸಂ ಎಲ್ಲವೂ ಹಾದುಹೋಗುತ್ತವೆ.

2016ರಲ್ಲಿ ಟ್ರೆವರ್ ಬರೆದಿದ್ದ ’ಬಾರ್ನ್ ಇನ್ ಕ್ರೈಮ್’ (ಸ್ಟೋರೀಸ್ ಫ್ರಮ್ ಚೈಲ್ಡ್‌ಹುಡ್) ಎಂಬ ಆತ್ಮಕತೆಗಳ ಪುಸ್ತಕ ಜನಪ್ರಿಯತೆ ಪಡೆದಿತ್ತು.

4. ಚಿತ್ತ

ಅರುಣ್ ಕುಮಾರ್ ನಿರ್ದೇಶನದ ತಮಿಳು ನಟ ಸಿದ್ಧಾರ್ಥ ನಟಿಸಿರುವ ಚಿತ್ತ (ಚಿಕ್ಕಪ್ಪ) ಮೊದಲು ಥಿಯೇಟರ್‌ಗಳಲ್ಲಿ ತೆರೆಕಂಡು, ಈಗ ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಲಭ್ಯವಿದೆ. ಇದು ಮೂಲ ತಮಿಳು ಚಿತ್ರವಾದರೂ, ಕನ್ನಡ, ತೆಲುಗು, ಹಿಂದಿ ಮುಂತಾದ ಭಾಷೆಗಳಲ್ಲಿ ಸಿನಿಮಾದ ಡಬ್ ಅವತರಣಿಕೆ ಕೂಡ ಇದೆ.

ಸುಂದರಿ ಮತ್ತು ಆಕೆಯ ಚಿಕ್ಕಪ್ಪ ಈಶ್ವರನ್ (ಸಿದ್ಧಾರ್ಥ) ನಡುವಿನ ಭಾವನಾತ್ಮಕ ಸಂಬಂಧ ಸುತ್ತ ಸುತ್ತುವ ಚಿತ್ರ, ಮಕ್ಕಳನ್ನು ಅಬ್ಯೂಸ್ ಮಾಡುವ ಥ್ರಿಲ್ಲರ್ ಕಥೆಯಾಗಿ ಬದಲಾಗುತ್ತದೆ. ಈ ಥ್ರಿಲ್ಲರ್ ಸಿನಿಮಾದಲ್ಲಿ, ಕಾಣೆಯಾಗುವ ಸುಂದರಿಯನ್ನು ಈಶು ಹುಡುಕುವ ಕಥೆ ’ಹೀರೋಯಿಕ್’ ಮಾದರಿಯಲ್ಲಿ ಮೂಡಿಬಂದಿದ್ದರೂ, ಆ ಹೀರೋಯಿಸಂಗೆ ಚಿಕಿತ್ಸೆಯಾಗಿ ಸಕ್ತಿ (ನಿಮಿಶಾ ಸಜಯನ್) ಪಾತ್ರ ಕಾಡುತ್ತದೆ. ಪೌರಕಾರ್ಮಿಕಳ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಕ್ತಿ ಈಶುವಿನ ಪ್ರಿಯತಮೆ. ಸಣ್ಣವಯಸ್ಸಿನಲ್ಲಿಯೇ ಸಂಬಂಧಿಕನೊಬ್ಬನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವವಳು. ಅತ್ತ ಅಣ್ಣನ ಮಗಳ ವಿರುದ್ಧ ದೌರ್ಜನ್ಯ ಎಸಗಿದ ವ್ಯಕ್ತಿಯನ್ನು ಕೊಲ್ಲಲು ಮುಂದಾಗುವ ಈಶು, ಸಕ್ತಿಯ ಜತೆಗೆ ಆಗಿರುವ ದೌರ್ಜನ್ಯವನ್ನು ತಿಳಿದುಕೊಳ್ಳುವ, ಅದಕ್ಕೆ ಕೊನೆ ಪಕ್ಷ ಸಂತೈಸುವುದಕ್ಕೂ ಸಂಯಮ ಇಲ್ಲದವನು. ಒಂದು ಪುರುಷಾಧಿಕಾರದ ದೌರ್ಜನ್ಯವನ್ನು ಅದೇ ಪುರುಷ ಅಹಂಕಾರದಿಂದ ಮೆಟ್ಟಬಹುದೇ ಎಂಬ ಪ್ರಶ್ನೆಯನ್ನು ಕೇಳಿಕೊಳ್ಳುವಂತೆ, ಸಕ್ತಿಯ ಪಾತ್ರ ಚಿಕ್ಕ ಅವಧಿಗೆ ಬಂದರೂ ಪ್ರೇರೇಪಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...