Homeಮುಖಪುಟಕಿರುತೆರೆ ತರ ತರ; ಕೂಸೆ ಮುನಿಸಾಮಿ ವೀರಪ್ಪನ್ ಮತ್ತು ಮೂರು ಷೋಗಳು

ಕಿರುತೆರೆ ತರ ತರ; ಕೂಸೆ ಮುನಿಸಾಮಿ ವೀರಪ್ಪನ್ ಮತ್ತು ಮೂರು ಷೋಗಳು

- Advertisement -
- Advertisement -

1. ಕೂಸೆ ಮುನಿಸಾಮಿ ವೀರಪ್ಪನ್

ಕೆಲವು ತಿಂಗಳ ಹಿಂದೆ ನೆಟ್‌ಫ್ಲಿಕ್ಸ್‌ನಲ್ಲಿ ತೆರೆಕಂಡಿದ್ದ ’ದ ಹಂಟ್ ಫಾರ್ ವೀರಪ್ಪನ್’ ಎಂಬ ಸಾಕ್ಷ್ಯಚಿತ್ರ ಬಿಸಿಬಿಸಿ ಚರ್ಚೆಯನ್ನು ಹುಟ್ಟುಹಾಕಿತ್ತು. ’ವರ್ಕ್‌ಶಾಪ್’ ಎಂಬ ಹೆಸರಿನಲ್ಲಿ ಎಸ್‌ಟಿಎಫ್ ಪೊಲೀಸರು, ಅದರಲ್ಲಿಯೂ ಶಂಕರ ಬಿದರಿ ತಂಡ ನಡೆಸಿದ ದೌರ್ಜನ್ಯಗಳ ಬಗ್ಗೆ ಅದರ ಭಾಗವಾಗಿಯೇ ಇದ್ದ ಪೊಲೀಸ್ ಅಧಿಕಾರಿಯೊಬ್ಬರು ನಿವೇದಿಸಿಕೊಂಡಿದ್ದರು. ಆದರೆ ವೀರಪ್ಪನ್ ಒಬ್ಬ ಕಾಡುಗಳ್ಳನಾಗಿ-ಹಂತಕನಾಗಿ ರೂಪುಗೊಂಡಿದ್ದಕ್ಕೆ ಕಾರಣಗಳೇನು ಎಂಬುದರ ಬಗ್ಗೆ ಅದು ಅಷ್ಟು ಮಾತಾಡಿರಲಿಲ್ಲ. ನಾಲ್ಕು ಎಪಿಸೋಡ್ ಇದ್ದ ಈ ಸಾಕ್ಷ್ಯಚಿತ್ರ ಹಲವು ಮುಖ್ಯ ಸಂಗತಿಗಳನ್ನು ಬಿಟ್ಟಿತ್ತು.

ಈ ಕೊರತೆಯನ್ನು ತುಸು ನೀಗಿಸುವ ನಿಟ್ಟಿನಲ್ಲಿ ಈಗ ಝೀ5 ಎಂಬ ಒಟಿಟಿ ವಾಹಿನಿಯಲ್ಲಿ ’ಕೂಸೆ ಮುನಿಸಾಮಿ ವೀರಪ್ಪನ್’ ಎಂಬ ಆರು ಎಪಿಸೋಡ್‌ಗಳ ಸಾಕ್ಷ್ಯಚಿತ್ರ ಬಿಡುಗಡೆಯಾಗಿದೆ. ಇದು ಮೊದಲಭಾಗ ಮಾತ್ರವಾಗಿದ್ದು ಸೀಸನ್-2 ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ನಕ್ಕೀರನ್ ಪತ್ರಿಕೆಯ ಸಂಪಾದಕ ಗೋಪಾಲ್ ಮತ್ತು ತಂಡ ಚಿತ್ರೀಕರಿಸಿದ್ದ ವೀರಪ್ಪನ್‌ನ ವಿಡಿಯೋ ಫುಟೇಜ್‌ಗಳನ್ನು ಯಥೇಚ್ಛವಾಗಿ ಬಳಸಿ ನಿರ್ಮಿಸಿರುವ ಈ ಡಾಕ್ಯುಮೆಂಟರಿ ವೀರಪ್ಪನ್‌ನನ್ನೇ ಮುಖ್ಯ ನಿರೂಪಕನನ್ನಾಗಿ ಕೇಂದ್ರೀಕರಿಸುತ್ತದೆ. ನಾಲ್ಕನೇ ಎಪಿಸೋಡ್ ಪೊಲೀಸರ ಚಿತ್ರಹಿಂಸೆಯ ಭಯಾನಕತೆಯನ್ನು ಚಿತ್ರಿಸಿದರೆ, ಐದನೇ ಎಪಿಸೋಡ್‌ನಲ್ಲಿ ವೀರಪ್ಪನ್ ನಡೆಸುವ ಮೈಂಡ್‌ಲೆಸ್ ಕಿಲ್ಲಿಂಗ್‌ನ ಚಿತ್ರಣ ವಿವರವಾಗಿದೆ. ಒಟ್ಟಿನಲ್ಲಿ ಪೊಲೀಸರ ಮತ್ತು ವೀರಪ್ಪನ್ ದೌರ್ಜನ್ಯದ ನಡುವೆ ಸ್ಪರ್ಧೆ ಇತ್ತೇನೋ ಎಂಬಂತೆ ಭಾಸವಾಗುವಂತೆ ಈ ಸೀರೀಸ್ ಮಾಡುತ್ತದೆ. ಉಳಿದ ಎಲ್ಲಾ ಚಿತ್ರಗಳಿಗೆ ಹೋಲಿಸಿದರೆ ವೀರಪ್ಪನ್ ಮತ್ತು ಸುತ್ತಮುತ್ತಲಿನ ಘಟನೆಗಳ ಬಗ್ಗೆ ತುಸು ಹೆಚ್ಚು ವಿವರಗಳನ್ನು ಈ ಸಾಕ್ಷ್ಯಚಿತ್ರ ಕಟ್ಟಿಕೊಡುತ್ತದೆ.

2. ಲೀವ್ ದ ವರ್ಲ್ಡ್ ಬಿಹೈಂಡ್

ಸ್ಯಾಮ್ ಎಸ್ಮಾಯಿಲ್ ನಿರ್ದೇಶನದ, ಜೂಲಿಯಾ ರಾಬರ್ಟ್ಸ್, ಮಾಹರ್ಶಾಲಾ ಅಲಿ, ಈಥನ್ ಹಾಕ್ ಮತ್ತು ಮೈಹಾ ಲಾ ಹೆರಾಲ್ಡ್ ಮುಖ್ಯಭೂಮಿಕೆಯಲ್ಲಿರುವ 141 ನಿಮಿಷಗಳ ಚಲನಚಿತ್ರ ’ಲೀವ್ ದ ವರ್ಲ್ಡ್ ಬಿಹೈಂಡ್’ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ. ಅಮೆರಿಕನ್ ಅಪೋಕ್ಯಾಲಿಪ್ಟಿಕ್ ಸೈಕಲಾಜಿಕಲ್ ಥ್ರಿಲ್ಲರ್ ಸಿನಿಮಾವಾದ ’ಲೀವ್ ದ ವರ್ಲ್ಡ್ ಬಿಹೈಂಡ್’ಅನ್ನು ರುಮಾನ್ ಆಲಮ್ ಅವರ 2020ರ ಅದೇ ಹೆಸರಿನ ಕಾದಂಬರಿಯಿಂದ ಅಳವಡಿಸಿಕೊಳ್ಳಲಾಗಿದೆ.

ಟೆಕ್ನಾಲಾಜಿಕಲ್ ವಾರ್‌ಫೇರ್‌ನಿಂದ ಆಗುವ ಬ್ಲಾಕ್‌ಔಟ್‌ನಿಂದ ಉಂಟಾಗುವ ಅಲ್ಲೋಲಕಲ್ಲೋಲವನ್ನು, ಐಲ್ಯಾಂಡ್ ಒಂದರಲ್ಲಿ ವೀಕೆಂಡ್ ರಜೆ ಕಳೆಯಲು ಬಂದಿರುವ ಫ್ಯಾಮಿಲಿಯ ದೃಷ್ಟಿಕೋನದಲ್ಲಿ ಈ ಸಿನಿಮಾ ಚಿತ್ರಿಸುತ್ತದೆ. ತುರ್ತು ಸನ್ನಿವೇಶಗಳಲ್ಲಿ ತಂತ್ರಜ್ಞಾನನ ಮೇಲೆ ವಿಪರೀತ ಅವಲಂಬಿಸಿರುವ ಆಧುನಿಕ ಮನುಷ್ಯನ ಅಸಹಾಯಕತೆಯನ್ನು ಕೂಡ ಚಿತ್ರಿಸುವ ಈ ಸಿನಿಮಾ, ಒಂದು ಡಿಸ್ಟೋಪಿಯನ್ ಚಿತ್ರಣವನ್ನು ಕಣ್ಣಮುಂದೆ ತರುತ್ತದೆ. ಜಿಪಿಎಸ್ ಫೇಲ್ ಆದರೆ, ವಿಮಾನಗಳು, ಡ್ರೈವರ್‌ಲೆಸ್ ಕಾರುಗಳು ಹೇಗೆ ಕೆಟಾಸ್ಟ್ರೋಫಿಕ್ ಆಗಬಲ್ಲವು ಎಂಬ ಕರಾಳ ಭವಿಷ್ಯವನ್ನು ಚಿತ್ರಿಸುವುದರ ಜೊತೆಗೆ, ಬಿಳಿಯರ ಜನಾಂಗೀಯ ದ್ವೇಷ, ಜಗತ್ತು ಮುಳುಗುತ್ತಿರುವ ಸನ್ನಿವೇಶದಲ್ಲಿಯೂ ಕಪ್ಪು ಜನರನ್ನು ತುಚ್ಛವಾಗಿ ಕಾಣುವ, ಸಹಜೀವನಕ್ಕೆ ಮುಂದಾಗದ ಬಿಳಿ ಜನರ ಒಣಪ್ರತಿಷ್ಠೆಯನ್ನು ಈ ಸಿನಿಮಾ ಹಿಡಿದಿಡಲು ಪ್ರಯತ್ನಿಸುತ್ತದೆ. ಈ ವಾರ್‌ಫೇರ್ ಹೊರಗಿನವರಿಂದ ಆಗಿರದೆ, ರಾಜಕೀಯ ಲಾಭಕ್ಕಾಗಿ ತಮ್ಮದೇ ದೇಶದ ಸಂಪ್ರದಾಯವಾದಿ ಪಕ್ಷ ನಡೆಸಿರಬಹುದಾದ ಯುದ್ಧ ಇದಾಗಿರಬಹುದು ಎಂದು ಪಾತ್ರವೊಂದು ಹೇಳುವುದು ಗಮನ ಸೆಳೆಯುತ್ತದೆ.

ಇದನ್ನೂ ಓದಿ: ಬಿಳಿಯರ ಪಾಪನಿವೇದನೆಯ ’ಕಿಲ್ಲರ್ಸ್ ಆಫ್ ದ ಫ್ಲವರ್ ಮೂನ್’

 

3. ಟ್ರೆವರ್ ನೋವ: ವೇರ್ ವಾಸ್ ಐ

ಟ್ರೆವರ್ ನೋವ ಸೌಥ್ ಆಫ್ರಿಕಾದ ಕಾಮಿಡಿಯನ್. ಸ್ಟಾಂಡ್ ಅಪ್ ಕಾಮಿಡಿ ಶೋಗಳಿಗೆ ಹೆಸರುವಾಸಿಯಾದ ಟ್ರೆವರ್, ಅಮೆರಿಕದ ಡೆಟ್ರಾಯ್ಟ್ ನಗರದ ತುಂಬಿದ ಸಭಾಂಗಣದಲ್ಲಿ ನಡೆಸಿಕೊಟ್ಟ ಸ್ಟಾಂಡ್ ಅಪ್ ಕಾಮಿಡಿ ಶೋ ಈಗ ನೆಟ್‌ಫ್ಲಿಕ್ಸ್‌ನಲ್ಲಿ ’ಟ್ರೆವರ್ ನೋವ: ವೇರ್ ವಾಸ್ ಐ’ ಹೆಸರಿನಲ್ಲಿ ಪ್ರಸಾರವಾಗುತ್ತಿದೆ.

ತಮ್ಮ ಬರ್ಲಿನ್ ಪ್ರವಾಸದಲ್ಲಿ ನಡೆಸಿಕೊಟ್ಟ ಶೋ ಬಗೆಗಿನ ಅನುಭವದೊಂದಿಗೆ ಶುರುವಾಗುವ ಈ ಕಾರ್ಯಕ್ರಮ ನಾಜಿಗಳನ್ನು, ನಾಜಿಗಳ ರಾಷ್ಟ್ರಗೀತೆಯನ್ನು ವ್ಯಂಗ್ಯ ಮಾಡುವುದಲ್ಲದೆ, ರಾಷ್ಟ್ರಗೀತೆಯ ಸಾಹಿತ್ಯ ಬದಲಿಸಿ, ಮ್ಯೂಸಿಕ್ ಮತ್ತು ಟ್ಯೂನ್‌ಅನ್ನು ಹಾಗೆಯೇ ಉಳಿಸಿಕೊಂಡ ಪೋಸ್ಟ್ ವಾರ್ ಜರ್ಮನಿಯ ನಡೆ ಎಷ್ಟು ವಿಚಿತ್ರವಾದದ್ದು ಮತ್ತು ಉಪಯೋಗವಿಲ್ಲದ್ದು ಎಂದು ಹಾಸ್ಯ ಶೈಲಿಯಲ್ಲಿ, ವೀಕ್ಷಕರನ್ನು ನಗೆಗಡಲಲ್ಲಿ ತೇಲಿಸುವ ಮೂಲಕ ಟ್ರೆವರ್ ಮಾತನಾಡುತ್ತಾರೆ. ಸುಮಾರು 70 ನಿಮಿಷಗಳ ಈ ಶೋನಲ್ಲಿ ಜನಾಂಗೀಯ ತಾರತಮ್ಯ, ಲಿಂಗ ತಾರತಮ್ಯ, ಹುಸಿ ನ್ಯಾಷನಲಿಸಂ ಎಲ್ಲವೂ ಹಾದುಹೋಗುತ್ತವೆ.

2016ರಲ್ಲಿ ಟ್ರೆವರ್ ಬರೆದಿದ್ದ ’ಬಾರ್ನ್ ಇನ್ ಕ್ರೈಮ್’ (ಸ್ಟೋರೀಸ್ ಫ್ರಮ್ ಚೈಲ್ಡ್‌ಹುಡ್) ಎಂಬ ಆತ್ಮಕತೆಗಳ ಪುಸ್ತಕ ಜನಪ್ರಿಯತೆ ಪಡೆದಿತ್ತು.

4. ಚಿತ್ತ

ಅರುಣ್ ಕುಮಾರ್ ನಿರ್ದೇಶನದ ತಮಿಳು ನಟ ಸಿದ್ಧಾರ್ಥ ನಟಿಸಿರುವ ಚಿತ್ತ (ಚಿಕ್ಕಪ್ಪ) ಮೊದಲು ಥಿಯೇಟರ್‌ಗಳಲ್ಲಿ ತೆರೆಕಂಡು, ಈಗ ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಲಭ್ಯವಿದೆ. ಇದು ಮೂಲ ತಮಿಳು ಚಿತ್ರವಾದರೂ, ಕನ್ನಡ, ತೆಲುಗು, ಹಿಂದಿ ಮುಂತಾದ ಭಾಷೆಗಳಲ್ಲಿ ಸಿನಿಮಾದ ಡಬ್ ಅವತರಣಿಕೆ ಕೂಡ ಇದೆ.

ಸುಂದರಿ ಮತ್ತು ಆಕೆಯ ಚಿಕ್ಕಪ್ಪ ಈಶ್ವರನ್ (ಸಿದ್ಧಾರ್ಥ) ನಡುವಿನ ಭಾವನಾತ್ಮಕ ಸಂಬಂಧ ಸುತ್ತ ಸುತ್ತುವ ಚಿತ್ರ, ಮಕ್ಕಳನ್ನು ಅಬ್ಯೂಸ್ ಮಾಡುವ ಥ್ರಿಲ್ಲರ್ ಕಥೆಯಾಗಿ ಬದಲಾಗುತ್ತದೆ. ಈ ಥ್ರಿಲ್ಲರ್ ಸಿನಿಮಾದಲ್ಲಿ, ಕಾಣೆಯಾಗುವ ಸುಂದರಿಯನ್ನು ಈಶು ಹುಡುಕುವ ಕಥೆ ’ಹೀರೋಯಿಕ್’ ಮಾದರಿಯಲ್ಲಿ ಮೂಡಿಬಂದಿದ್ದರೂ, ಆ ಹೀರೋಯಿಸಂಗೆ ಚಿಕಿತ್ಸೆಯಾಗಿ ಸಕ್ತಿ (ನಿಮಿಶಾ ಸಜಯನ್) ಪಾತ್ರ ಕಾಡುತ್ತದೆ. ಪೌರಕಾರ್ಮಿಕಳ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಕ್ತಿ ಈಶುವಿನ ಪ್ರಿಯತಮೆ. ಸಣ್ಣವಯಸ್ಸಿನಲ್ಲಿಯೇ ಸಂಬಂಧಿಕನೊಬ್ಬನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವವಳು. ಅತ್ತ ಅಣ್ಣನ ಮಗಳ ವಿರುದ್ಧ ದೌರ್ಜನ್ಯ ಎಸಗಿದ ವ್ಯಕ್ತಿಯನ್ನು ಕೊಲ್ಲಲು ಮುಂದಾಗುವ ಈಶು, ಸಕ್ತಿಯ ಜತೆಗೆ ಆಗಿರುವ ದೌರ್ಜನ್ಯವನ್ನು ತಿಳಿದುಕೊಳ್ಳುವ, ಅದಕ್ಕೆ ಕೊನೆ ಪಕ್ಷ ಸಂತೈಸುವುದಕ್ಕೂ ಸಂಯಮ ಇಲ್ಲದವನು. ಒಂದು ಪುರುಷಾಧಿಕಾರದ ದೌರ್ಜನ್ಯವನ್ನು ಅದೇ ಪುರುಷ ಅಹಂಕಾರದಿಂದ ಮೆಟ್ಟಬಹುದೇ ಎಂಬ ಪ್ರಶ್ನೆಯನ್ನು ಕೇಳಿಕೊಳ್ಳುವಂತೆ, ಸಕ್ತಿಯ ಪಾತ್ರ ಚಿಕ್ಕ ಅವಧಿಗೆ ಬಂದರೂ ಪ್ರೇರೇಪಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...