Homeಮುಖಪುಟಕಿರುತೆರೆ ತರ ತರ; ಕೂಸೆ ಮುನಿಸಾಮಿ ವೀರಪ್ಪನ್ ಮತ್ತು ಮೂರು ಷೋಗಳು

ಕಿರುತೆರೆ ತರ ತರ; ಕೂಸೆ ಮುನಿಸಾಮಿ ವೀರಪ್ಪನ್ ಮತ್ತು ಮೂರು ಷೋಗಳು

- Advertisement -
- Advertisement -

1. ಕೂಸೆ ಮುನಿಸಾಮಿ ವೀರಪ್ಪನ್

ಕೆಲವು ತಿಂಗಳ ಹಿಂದೆ ನೆಟ್‌ಫ್ಲಿಕ್ಸ್‌ನಲ್ಲಿ ತೆರೆಕಂಡಿದ್ದ ’ದ ಹಂಟ್ ಫಾರ್ ವೀರಪ್ಪನ್’ ಎಂಬ ಸಾಕ್ಷ್ಯಚಿತ್ರ ಬಿಸಿಬಿಸಿ ಚರ್ಚೆಯನ್ನು ಹುಟ್ಟುಹಾಕಿತ್ತು. ’ವರ್ಕ್‌ಶಾಪ್’ ಎಂಬ ಹೆಸರಿನಲ್ಲಿ ಎಸ್‌ಟಿಎಫ್ ಪೊಲೀಸರು, ಅದರಲ್ಲಿಯೂ ಶಂಕರ ಬಿದರಿ ತಂಡ ನಡೆಸಿದ ದೌರ್ಜನ್ಯಗಳ ಬಗ್ಗೆ ಅದರ ಭಾಗವಾಗಿಯೇ ಇದ್ದ ಪೊಲೀಸ್ ಅಧಿಕಾರಿಯೊಬ್ಬರು ನಿವೇದಿಸಿಕೊಂಡಿದ್ದರು. ಆದರೆ ವೀರಪ್ಪನ್ ಒಬ್ಬ ಕಾಡುಗಳ್ಳನಾಗಿ-ಹಂತಕನಾಗಿ ರೂಪುಗೊಂಡಿದ್ದಕ್ಕೆ ಕಾರಣಗಳೇನು ಎಂಬುದರ ಬಗ್ಗೆ ಅದು ಅಷ್ಟು ಮಾತಾಡಿರಲಿಲ್ಲ. ನಾಲ್ಕು ಎಪಿಸೋಡ್ ಇದ್ದ ಈ ಸಾಕ್ಷ್ಯಚಿತ್ರ ಹಲವು ಮುಖ್ಯ ಸಂಗತಿಗಳನ್ನು ಬಿಟ್ಟಿತ್ತು.

ಈ ಕೊರತೆಯನ್ನು ತುಸು ನೀಗಿಸುವ ನಿಟ್ಟಿನಲ್ಲಿ ಈಗ ಝೀ5 ಎಂಬ ಒಟಿಟಿ ವಾಹಿನಿಯಲ್ಲಿ ’ಕೂಸೆ ಮುನಿಸಾಮಿ ವೀರಪ್ಪನ್’ ಎಂಬ ಆರು ಎಪಿಸೋಡ್‌ಗಳ ಸಾಕ್ಷ್ಯಚಿತ್ರ ಬಿಡುಗಡೆಯಾಗಿದೆ. ಇದು ಮೊದಲಭಾಗ ಮಾತ್ರವಾಗಿದ್ದು ಸೀಸನ್-2 ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ನಕ್ಕೀರನ್ ಪತ್ರಿಕೆಯ ಸಂಪಾದಕ ಗೋಪಾಲ್ ಮತ್ತು ತಂಡ ಚಿತ್ರೀಕರಿಸಿದ್ದ ವೀರಪ್ಪನ್‌ನ ವಿಡಿಯೋ ಫುಟೇಜ್‌ಗಳನ್ನು ಯಥೇಚ್ಛವಾಗಿ ಬಳಸಿ ನಿರ್ಮಿಸಿರುವ ಈ ಡಾಕ್ಯುಮೆಂಟರಿ ವೀರಪ್ಪನ್‌ನನ್ನೇ ಮುಖ್ಯ ನಿರೂಪಕನನ್ನಾಗಿ ಕೇಂದ್ರೀಕರಿಸುತ್ತದೆ. ನಾಲ್ಕನೇ ಎಪಿಸೋಡ್ ಪೊಲೀಸರ ಚಿತ್ರಹಿಂಸೆಯ ಭಯಾನಕತೆಯನ್ನು ಚಿತ್ರಿಸಿದರೆ, ಐದನೇ ಎಪಿಸೋಡ್‌ನಲ್ಲಿ ವೀರಪ್ಪನ್ ನಡೆಸುವ ಮೈಂಡ್‌ಲೆಸ್ ಕಿಲ್ಲಿಂಗ್‌ನ ಚಿತ್ರಣ ವಿವರವಾಗಿದೆ. ಒಟ್ಟಿನಲ್ಲಿ ಪೊಲೀಸರ ಮತ್ತು ವೀರಪ್ಪನ್ ದೌರ್ಜನ್ಯದ ನಡುವೆ ಸ್ಪರ್ಧೆ ಇತ್ತೇನೋ ಎಂಬಂತೆ ಭಾಸವಾಗುವಂತೆ ಈ ಸೀರೀಸ್ ಮಾಡುತ್ತದೆ. ಉಳಿದ ಎಲ್ಲಾ ಚಿತ್ರಗಳಿಗೆ ಹೋಲಿಸಿದರೆ ವೀರಪ್ಪನ್ ಮತ್ತು ಸುತ್ತಮುತ್ತಲಿನ ಘಟನೆಗಳ ಬಗ್ಗೆ ತುಸು ಹೆಚ್ಚು ವಿವರಗಳನ್ನು ಈ ಸಾಕ್ಷ್ಯಚಿತ್ರ ಕಟ್ಟಿಕೊಡುತ್ತದೆ.

2. ಲೀವ್ ದ ವರ್ಲ್ಡ್ ಬಿಹೈಂಡ್

ಸ್ಯಾಮ್ ಎಸ್ಮಾಯಿಲ್ ನಿರ್ದೇಶನದ, ಜೂಲಿಯಾ ರಾಬರ್ಟ್ಸ್, ಮಾಹರ್ಶಾಲಾ ಅಲಿ, ಈಥನ್ ಹಾಕ್ ಮತ್ತು ಮೈಹಾ ಲಾ ಹೆರಾಲ್ಡ್ ಮುಖ್ಯಭೂಮಿಕೆಯಲ್ಲಿರುವ 141 ನಿಮಿಷಗಳ ಚಲನಚಿತ್ರ ’ಲೀವ್ ದ ವರ್ಲ್ಡ್ ಬಿಹೈಂಡ್’ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ. ಅಮೆರಿಕನ್ ಅಪೋಕ್ಯಾಲಿಪ್ಟಿಕ್ ಸೈಕಲಾಜಿಕಲ್ ಥ್ರಿಲ್ಲರ್ ಸಿನಿಮಾವಾದ ’ಲೀವ್ ದ ವರ್ಲ್ಡ್ ಬಿಹೈಂಡ್’ಅನ್ನು ರುಮಾನ್ ಆಲಮ್ ಅವರ 2020ರ ಅದೇ ಹೆಸರಿನ ಕಾದಂಬರಿಯಿಂದ ಅಳವಡಿಸಿಕೊಳ್ಳಲಾಗಿದೆ.

ಟೆಕ್ನಾಲಾಜಿಕಲ್ ವಾರ್‌ಫೇರ್‌ನಿಂದ ಆಗುವ ಬ್ಲಾಕ್‌ಔಟ್‌ನಿಂದ ಉಂಟಾಗುವ ಅಲ್ಲೋಲಕಲ್ಲೋಲವನ್ನು, ಐಲ್ಯಾಂಡ್ ಒಂದರಲ್ಲಿ ವೀಕೆಂಡ್ ರಜೆ ಕಳೆಯಲು ಬಂದಿರುವ ಫ್ಯಾಮಿಲಿಯ ದೃಷ್ಟಿಕೋನದಲ್ಲಿ ಈ ಸಿನಿಮಾ ಚಿತ್ರಿಸುತ್ತದೆ. ತುರ್ತು ಸನ್ನಿವೇಶಗಳಲ್ಲಿ ತಂತ್ರಜ್ಞಾನನ ಮೇಲೆ ವಿಪರೀತ ಅವಲಂಬಿಸಿರುವ ಆಧುನಿಕ ಮನುಷ್ಯನ ಅಸಹಾಯಕತೆಯನ್ನು ಕೂಡ ಚಿತ್ರಿಸುವ ಈ ಸಿನಿಮಾ, ಒಂದು ಡಿಸ್ಟೋಪಿಯನ್ ಚಿತ್ರಣವನ್ನು ಕಣ್ಣಮುಂದೆ ತರುತ್ತದೆ. ಜಿಪಿಎಸ್ ಫೇಲ್ ಆದರೆ, ವಿಮಾನಗಳು, ಡ್ರೈವರ್‌ಲೆಸ್ ಕಾರುಗಳು ಹೇಗೆ ಕೆಟಾಸ್ಟ್ರೋಫಿಕ್ ಆಗಬಲ್ಲವು ಎಂಬ ಕರಾಳ ಭವಿಷ್ಯವನ್ನು ಚಿತ್ರಿಸುವುದರ ಜೊತೆಗೆ, ಬಿಳಿಯರ ಜನಾಂಗೀಯ ದ್ವೇಷ, ಜಗತ್ತು ಮುಳುಗುತ್ತಿರುವ ಸನ್ನಿವೇಶದಲ್ಲಿಯೂ ಕಪ್ಪು ಜನರನ್ನು ತುಚ್ಛವಾಗಿ ಕಾಣುವ, ಸಹಜೀವನಕ್ಕೆ ಮುಂದಾಗದ ಬಿಳಿ ಜನರ ಒಣಪ್ರತಿಷ್ಠೆಯನ್ನು ಈ ಸಿನಿಮಾ ಹಿಡಿದಿಡಲು ಪ್ರಯತ್ನಿಸುತ್ತದೆ. ಈ ವಾರ್‌ಫೇರ್ ಹೊರಗಿನವರಿಂದ ಆಗಿರದೆ, ರಾಜಕೀಯ ಲಾಭಕ್ಕಾಗಿ ತಮ್ಮದೇ ದೇಶದ ಸಂಪ್ರದಾಯವಾದಿ ಪಕ್ಷ ನಡೆಸಿರಬಹುದಾದ ಯುದ್ಧ ಇದಾಗಿರಬಹುದು ಎಂದು ಪಾತ್ರವೊಂದು ಹೇಳುವುದು ಗಮನ ಸೆಳೆಯುತ್ತದೆ.

ಇದನ್ನೂ ಓದಿ: ಬಿಳಿಯರ ಪಾಪನಿವೇದನೆಯ ’ಕಿಲ್ಲರ್ಸ್ ಆಫ್ ದ ಫ್ಲವರ್ ಮೂನ್’

 

3. ಟ್ರೆವರ್ ನೋವ: ವೇರ್ ವಾಸ್ ಐ

ಟ್ರೆವರ್ ನೋವ ಸೌಥ್ ಆಫ್ರಿಕಾದ ಕಾಮಿಡಿಯನ್. ಸ್ಟಾಂಡ್ ಅಪ್ ಕಾಮಿಡಿ ಶೋಗಳಿಗೆ ಹೆಸರುವಾಸಿಯಾದ ಟ್ರೆವರ್, ಅಮೆರಿಕದ ಡೆಟ್ರಾಯ್ಟ್ ನಗರದ ತುಂಬಿದ ಸಭಾಂಗಣದಲ್ಲಿ ನಡೆಸಿಕೊಟ್ಟ ಸ್ಟಾಂಡ್ ಅಪ್ ಕಾಮಿಡಿ ಶೋ ಈಗ ನೆಟ್‌ಫ್ಲಿಕ್ಸ್‌ನಲ್ಲಿ ’ಟ್ರೆವರ್ ನೋವ: ವೇರ್ ವಾಸ್ ಐ’ ಹೆಸರಿನಲ್ಲಿ ಪ್ರಸಾರವಾಗುತ್ತಿದೆ.

ತಮ್ಮ ಬರ್ಲಿನ್ ಪ್ರವಾಸದಲ್ಲಿ ನಡೆಸಿಕೊಟ್ಟ ಶೋ ಬಗೆಗಿನ ಅನುಭವದೊಂದಿಗೆ ಶುರುವಾಗುವ ಈ ಕಾರ್ಯಕ್ರಮ ನಾಜಿಗಳನ್ನು, ನಾಜಿಗಳ ರಾಷ್ಟ್ರಗೀತೆಯನ್ನು ವ್ಯಂಗ್ಯ ಮಾಡುವುದಲ್ಲದೆ, ರಾಷ್ಟ್ರಗೀತೆಯ ಸಾಹಿತ್ಯ ಬದಲಿಸಿ, ಮ್ಯೂಸಿಕ್ ಮತ್ತು ಟ್ಯೂನ್‌ಅನ್ನು ಹಾಗೆಯೇ ಉಳಿಸಿಕೊಂಡ ಪೋಸ್ಟ್ ವಾರ್ ಜರ್ಮನಿಯ ನಡೆ ಎಷ್ಟು ವಿಚಿತ್ರವಾದದ್ದು ಮತ್ತು ಉಪಯೋಗವಿಲ್ಲದ್ದು ಎಂದು ಹಾಸ್ಯ ಶೈಲಿಯಲ್ಲಿ, ವೀಕ್ಷಕರನ್ನು ನಗೆಗಡಲಲ್ಲಿ ತೇಲಿಸುವ ಮೂಲಕ ಟ್ರೆವರ್ ಮಾತನಾಡುತ್ತಾರೆ. ಸುಮಾರು 70 ನಿಮಿಷಗಳ ಈ ಶೋನಲ್ಲಿ ಜನಾಂಗೀಯ ತಾರತಮ್ಯ, ಲಿಂಗ ತಾರತಮ್ಯ, ಹುಸಿ ನ್ಯಾಷನಲಿಸಂ ಎಲ್ಲವೂ ಹಾದುಹೋಗುತ್ತವೆ.

2016ರಲ್ಲಿ ಟ್ರೆವರ್ ಬರೆದಿದ್ದ ’ಬಾರ್ನ್ ಇನ್ ಕ್ರೈಮ್’ (ಸ್ಟೋರೀಸ್ ಫ್ರಮ್ ಚೈಲ್ಡ್‌ಹುಡ್) ಎಂಬ ಆತ್ಮಕತೆಗಳ ಪುಸ್ತಕ ಜನಪ್ರಿಯತೆ ಪಡೆದಿತ್ತು.

4. ಚಿತ್ತ

ಅರುಣ್ ಕುಮಾರ್ ನಿರ್ದೇಶನದ ತಮಿಳು ನಟ ಸಿದ್ಧಾರ್ಥ ನಟಿಸಿರುವ ಚಿತ್ತ (ಚಿಕ್ಕಪ್ಪ) ಮೊದಲು ಥಿಯೇಟರ್‌ಗಳಲ್ಲಿ ತೆರೆಕಂಡು, ಈಗ ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಲಭ್ಯವಿದೆ. ಇದು ಮೂಲ ತಮಿಳು ಚಿತ್ರವಾದರೂ, ಕನ್ನಡ, ತೆಲುಗು, ಹಿಂದಿ ಮುಂತಾದ ಭಾಷೆಗಳಲ್ಲಿ ಸಿನಿಮಾದ ಡಬ್ ಅವತರಣಿಕೆ ಕೂಡ ಇದೆ.

ಸುಂದರಿ ಮತ್ತು ಆಕೆಯ ಚಿಕ್ಕಪ್ಪ ಈಶ್ವರನ್ (ಸಿದ್ಧಾರ್ಥ) ನಡುವಿನ ಭಾವನಾತ್ಮಕ ಸಂಬಂಧ ಸುತ್ತ ಸುತ್ತುವ ಚಿತ್ರ, ಮಕ್ಕಳನ್ನು ಅಬ್ಯೂಸ್ ಮಾಡುವ ಥ್ರಿಲ್ಲರ್ ಕಥೆಯಾಗಿ ಬದಲಾಗುತ್ತದೆ. ಈ ಥ್ರಿಲ್ಲರ್ ಸಿನಿಮಾದಲ್ಲಿ, ಕಾಣೆಯಾಗುವ ಸುಂದರಿಯನ್ನು ಈಶು ಹುಡುಕುವ ಕಥೆ ’ಹೀರೋಯಿಕ್’ ಮಾದರಿಯಲ್ಲಿ ಮೂಡಿಬಂದಿದ್ದರೂ, ಆ ಹೀರೋಯಿಸಂಗೆ ಚಿಕಿತ್ಸೆಯಾಗಿ ಸಕ್ತಿ (ನಿಮಿಶಾ ಸಜಯನ್) ಪಾತ್ರ ಕಾಡುತ್ತದೆ. ಪೌರಕಾರ್ಮಿಕಳ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಕ್ತಿ ಈಶುವಿನ ಪ್ರಿಯತಮೆ. ಸಣ್ಣವಯಸ್ಸಿನಲ್ಲಿಯೇ ಸಂಬಂಧಿಕನೊಬ್ಬನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವವಳು. ಅತ್ತ ಅಣ್ಣನ ಮಗಳ ವಿರುದ್ಧ ದೌರ್ಜನ್ಯ ಎಸಗಿದ ವ್ಯಕ್ತಿಯನ್ನು ಕೊಲ್ಲಲು ಮುಂದಾಗುವ ಈಶು, ಸಕ್ತಿಯ ಜತೆಗೆ ಆಗಿರುವ ದೌರ್ಜನ್ಯವನ್ನು ತಿಳಿದುಕೊಳ್ಳುವ, ಅದಕ್ಕೆ ಕೊನೆ ಪಕ್ಷ ಸಂತೈಸುವುದಕ್ಕೂ ಸಂಯಮ ಇಲ್ಲದವನು. ಒಂದು ಪುರುಷಾಧಿಕಾರದ ದೌರ್ಜನ್ಯವನ್ನು ಅದೇ ಪುರುಷ ಅಹಂಕಾರದಿಂದ ಮೆಟ್ಟಬಹುದೇ ಎಂಬ ಪ್ರಶ್ನೆಯನ್ನು ಕೇಳಿಕೊಳ್ಳುವಂತೆ, ಸಕ್ತಿಯ ಪಾತ್ರ ಚಿಕ್ಕ ಅವಧಿಗೆ ಬಂದರೂ ಪ್ರೇರೇಪಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...