Homeಕರ್ನಾಟಕಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ

ಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ

ಅಧಿಕಾರ ದುರುಪಯೋಗಿಪಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದರಿಂದ ಕೂಡಲೇ ಪೇದೆ, ಎಸ್‌ಐ ಅಮಾನತ್ತು ಮಾಡಬೇಕೆಂದು ಒತ್ತಾಯಿಸಿ ಸಂವಿಧಾನ ಉಳಿವಿಗಾಗಿ ಕರ್ನಾಟಕದ ಪದಾಧಿಕಾರಿಗಳು ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

- Advertisement -
- Advertisement -

ಕ್ಷುಲ್ಲಕ ಪಾರ್ಕಿಂಗ್ ವಿಚಾರಕ್ಕೆ ಹೋರಾಟಗಾರರಾದ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ರವಿ ಮತ್ತು ಪೇದೆ ರಮೇಶ್ ರವರನ್ನು ಅಮಾನತ್ತು ಮಾಡಬೇಕೆಂದು ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಕೊಪ್ಪ ಪೊಲೀಸರು ಕೆ.ಎಲ್‌ ಅಶೋಕ್‌ರವರನ್ನು ಗುರಿಮಾಡಿ ಉದ್ದೇಶಪೂರ್ವಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿದ್ದಾರೆ. ಈ ರೀತಿ ಅಧಿಕಾರ ದುರುಪಯೋಗಿಪಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದರಿಂದ ಕೂಡಲೇ ಪೇದೆ, ಎಸ್‌ಐ ಅಮಾನತ್ತು ಮಾಡಬೇಕೆಂದು ಒತ್ತಾಯಿಸಿ ಸಂವಿಧಾನ ಉಳಿವಿಗಾಗಿ ಕರ್ನಾಟಕದ ಪದಾಧಿಕಾರಿಗಳು ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಘಟನೆಯ ವಿವರ:

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಕೊಪ್ಪಗೇಟ್‌ಗೆ ಖಾಸಗಿ ಕೆಲಸದ ನಿಮಿತ್ತ ಬಂದಿದ್ದ ಸಂವಿಧಾನ ಉಳಿವಿಗಾಗಿ ಕರ್ನಾಟಕ ಮತ್ತು ಕರ್ನಾಟಕ ಜನಶಕ್ತಿಯ ಮುಖಂಡರಾದ ಕೆ.ಎಲ್‌ ಅಶೋಕ್‌ರವರು ನೋ ಪಾರ್ಕಿಂಗ್‌ ಜಾಗದಲ್ಲಿ ಕಾರು ನಿಲ್ಲಿಸಿದ್ದಾರೆ. ಅಲ್ಲಿಗೆ ಬಂದ ರಮೇಶ್ ಎಂಬ ಪೊಲೀಸ್ ಪೇದೆ ಯೂನಿಫಾರ್ಮ್ ಸಹ ಹಾಕಿರದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಗೊತ್ತಿಲ್ಲದೆ ನಿಲ್ಲಿಸಿದ್ದೇವೆ, ಈಗಲೇ ಹೊರಡುತ್ತೇವೆ ಅಥವಾ ದಂಡ ಕಟ್ಟುತ್ತೇವೆ ಎಂದರೂ ಬಿಡದೆ ಕಾರಿನ ಫೋಟೊ ತೆಗೆದುಕೊಂಡಿದ್ದಲ್ಲದೇ ಕಾರು ಸೀಜ್‌ ಮಾಡಲು ಮುಂದಾದರು ಎಂದು ಕೆ.ಎಲ್ ಅಶೋಕ್‌ ದೂರಿದ್ದಾರೆ.

“ಪೊಲೀಸರು ಅಡ್ರೆಸ್ ಕೇಳಿದಾಗ ನಾನು ಶಿವಮೊಗ್ಗದ ನನ್ನ ಮನೆಯ ವಿಳಾಸ ನೀಡಿದೆ. ಆಗ ಪೇದೆಯು ಚಿಕ್ಕಮಗಳೂರಿನಲ್ಲಿದ್ದು, ಶಿವಮೊಗ್ಗದ ಅಡ್ರೆಸ್‌ ನೀಡುತ್ತೀಯ, ನಾಟಕ ಮಾಡುತ್ತೀಯ ಅಂದರು. ಇದರಿಂದ ನಾನು ಕೋಪಗೊಂಡು ಜೋರಾಗಿ ಮಾತನಾಡಿದಾಗ ಅಧಿಕ ಪ್ರಸಂಗ ಮಾಡಬೇಡಿ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ನಂತರ ಠಾಣೆಗೆ ಹೋದರೆ ಅಲ್ಲಿದ್ದ ಎಸ್‌ಐ  ರವಿ ಎಂಬಾತರೂ ಸಹ ಅನುಚಿತವಾಗಿ ನಡೆದುಕೊಂಡು ಘಾಸಿಗೊಳಿಸಿದರು” ಎಂದು ಕೆ.ಎಲ್ ಅಶೋಕ್ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ತಿಳಿಸಿದ್ದಾರೆ.

ವಿಡಿಯೋ ನೋಡಿ.

ಕ್ಷುಲ್ಲಕ ಕಾರಣಕ್ಕೆ ಹೋರಾಟಗಾರ, ಚಿಂತಕರಾದ ಕೆ. ಎಲ್ ಅಶೋಕ್ ರನ್ನು ಗುರಿ ಮಾಡಿದ ಕೊಪ್ಪ ಪೊಲೀಸರುವಿಡಿಯೋ ನೋಡಿ…#Naanugauri #klashok #police #koppa

Posted by Naanu Gauri on Tuesday, September 8, 2020

ಬೆಳಂಬೆಳಿಗ್ಗೆಯೇ ನಡೆದ ಈ ಘಟನೆಯಿಂದ ನನಗೆ ದಿಗ್ಭಾಂತ್ರಿಯಾಯಿತು. ಒಂದು ಸಣ್ಣ ತಪ್ಪಿಗೆ ಇಷ್ಟೆಲ್ಲಾ ರಾದ್ಧಾಂತ ಮಾಡಬೇಕಿತ್ತೆ ಎನಿಸಿತು. ಅಲ್ಲದೇ ಠಾಣೆಯಲ್ಲಿ ಇನ್ಸ್‌ಪೆಕ್ಟರ್‌ ರವಿ ನನ್ನ ಫೋನ್‌ ಕಿತ್ತುಕೊಂಡರು. ಅವರ ನಡವಳಿಕೆ ನೋಡಿದರೆ ಬೆಳಿಗ್ಗೆಯೇ ಕುಡಿದುಬಂದಿದ್ದರು ಅನ್ನಿಸುತ್ತದೆ. ನಾನು ಸ್ಥಳೀಐ ಎಂಎಲ್‌ಎ ರಾಜೇಗೌಡರಿಗೆ ಫೋನ್ ಮಾಡಲು ಮುಂದಾದಾಗಲೂ ಅವರು ಬಂದರೂ ಸಹ ಕ್ಷಮೆ ಕೇಳಿಸುತ್ತೇನೆ ಎಂದು ದರ್ಪ ಮೆರದಿದ್ದಾರೆ ಎಂದು ಅವರು ದೂರಿದ್ದಾರೆ.

ಸಣ್ಣ ಅವಘಡಕ್ಕೆ ಪೊಲೀಸರು ಅತ್ಯಂತ ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಮಧುಕರ್ ಶೆಟ್ಟಿ, ಬಿಕೆ ಸಿಂಗ್, ವಿಪುಲ್ ಕುಮಾರ್‌ರವರಂತಹ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಗಳನ್ನು ಕಂಡ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂತಹ ಪೊಲೀಸರು ಇರುವುದು ಹೇಗೆ ಸಾಧ್ಯ ಎನಿಸಿತು. ಇವರು ಜನಸಾಮಾನ್ಯರ ಬಗ್ಗೆ ಹೇಗೆ ವರ್ತಿಸುತ್ತಾರೆ? ಇವರು ಹಣವಸೂಲಿ ದಂಧೆ ಮಾಡುತ್ತಾ, ನಿಕೃಷ್ಟವಾಗಿ ವರ್ತಿಸುತ್ತಾರೆ ಎಂಬುದರಲ್ಲಿ ಸಂದೇಹವೇ ಇಲ್ಲ ಎಂದು ಅಶೋಕ್ ತಮ್ಮ ವಿಡಿಯೋದಲ್ಲಿ ತಿಳಿಸಿದ್ದಾರೆ.

ನಾನು ಇದನ್ನು ಅವಮಾನ ಅಂದುಕೊಳ್ಳದೇ ಸುಮ್ಮನೆ ಇರಬಹುದಿತ್ತು. ಆದರೆ ಕೊಪ್ಪ, ಮಲೆನಾಡಿನಲ್ಲಿ ಹಲವು ಜನ ಸಾಮಾನ್ಯರಿಗೂ ಇದೇ ರೀತಿಯ ತೊಂದರೆ ಕೊಡುತ್ತಿದ್ದಾರೆ ಎಂಬ ದೂರುಗಳಿವೆ. ಅದನ್ನು ತಡೆಗಟ್ಟಬೇಕಿದೆ. ಹಾಗಾಗಿ ನನ್ನನ್ನು ನಿಂದಿಸಿದ, ಅವಮಾನಿಸಿದ, ಕಾನೂನು ದುರುಪಯೋಗಪಡಿಸಿಕೊಂಡ ಮತ್ತು ಹಗಲು ಹೊತ್ತಿನಲ್ಲೇ ಕುಡಿದು ಠಾಣೆಗೆ ಬರುವ ಎಸ್‌ಐ ಮತ್ತು ಪೇದೆ ಇಬ್ಬರನ್ನು ಅಮಾನತ್ತು ಮಾಡಬೇಕೆಂದು ಆಗ್ರಹಿಸಿದ್ದಾರೆ.

ಪೊಲೀಸರ ಮೇಲೆ ಕ್ರಮ ಜರುಗಿಸದಿದ್ದರೆ ಪ್ರತಿಭಟನೆ

ಸಂವಿಧಾನ ಉಳಿವಿಗಾಗಿ ಕರ್ನಾಟಕದ ಜಿಲ್ಲಾ ಸಂಚಾಲಕರಾದ ಗೌಸ್ ಮೊಯಿದ್ದೀನ್ ಮಾತನಾಡಿ “ನೋ ಪಾರ್ಕಿಂಗ್ ಸ್ಥಳದಲ್ಲಿ ಕಾರು ನಿಲ್ಲಿಸಿದ್ದ ಕೆ.ಎಲ್ ಅಶೋಕ್‌ರವರು ಇನ್ನು ಡ್ರೈವಿಂಗ್‌ ಸೀಟ್‌ನಲ್ಲೇ ಕುಳಿತಿದ್ದರು. ಈ ಸಮಯದಲ್ಲಿ ಪೊಲೀಸರು ಬೇರೆ ಕಡೆ ನಿಲ್ಲಿಸಿ ಎಂದು ತಿಳಿಹೇಳಬೇಕು. ಆದರೆ ಅವರ ಕುಟುಂಬದವರ ಎದುರೆ ಕೆಟ್ಟದಾಗಿ ನಿಂದಿಸಿರುವುದು ನೋಡಿದರೆ, ಇದು ಉದ್ದೇಶಪೂರ್ವಕ ಕೃತ್ಯ ಎಂಬ ಅನುಮಾನ ಬರುತ್ತದೆ. ಕೆ.ಎಲ್ ಅಶೋಕ್‌ರವರು ಜಿಲ್ಲೆಯಲ್ಲಿ ಹಲವು ಹೋರಾಟಗಳನ್ನು ಮುನ್ನೆಡೆಸಿದವರಾಗಿದ್ದಾರೆ. ಅಂತವರ ಮೇಲಿನ ಈ ಅವಮಾನವನ್ನು ತೀವ್ರ ಖಂಡಿಸುತ್ತೇವೆ. ಎಸ್‌ಪಿಯವರು ಕೂಡಲೇ ಕ್ರಮ ತೆಗೆದುಕೊಳ್ಳದಿದ್ದರೆ ಪ್ರತಿಭಟನೆ ಅನಿವಾರ್ಯ” ಎಂದರು.


ಇದನ್ನೂ ಓದಿ: ಭೀಮಾ ಕೋರೆಗಾಂವ್: ಪ್ರೊ.ಕೆ.ಸತ್ಯನಾರಾಯಣ ಅವರಿಗೆ ಸಮನ್ಸ್ ಹೊರಡಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...