Homeಕರ್ನಾಟಕಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ

ಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ

ಅಧಿಕಾರ ದುರುಪಯೋಗಿಪಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದರಿಂದ ಕೂಡಲೇ ಪೇದೆ, ಎಸ್‌ಐ ಅಮಾನತ್ತು ಮಾಡಬೇಕೆಂದು ಒತ್ತಾಯಿಸಿ ಸಂವಿಧಾನ ಉಳಿವಿಗಾಗಿ ಕರ್ನಾಟಕದ ಪದಾಧಿಕಾರಿಗಳು ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

- Advertisement -
- Advertisement -

ಕ್ಷುಲ್ಲಕ ಪಾರ್ಕಿಂಗ್ ವಿಚಾರಕ್ಕೆ ಹೋರಾಟಗಾರರಾದ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ರವಿ ಮತ್ತು ಪೇದೆ ರಮೇಶ್ ರವರನ್ನು ಅಮಾನತ್ತು ಮಾಡಬೇಕೆಂದು ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಕೊಪ್ಪ ಪೊಲೀಸರು ಕೆ.ಎಲ್‌ ಅಶೋಕ್‌ರವರನ್ನು ಗುರಿಮಾಡಿ ಉದ್ದೇಶಪೂರ್ವಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿದ್ದಾರೆ. ಈ ರೀತಿ ಅಧಿಕಾರ ದುರುಪಯೋಗಿಪಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದರಿಂದ ಕೂಡಲೇ ಪೇದೆ, ಎಸ್‌ಐ ಅಮಾನತ್ತು ಮಾಡಬೇಕೆಂದು ಒತ್ತಾಯಿಸಿ ಸಂವಿಧಾನ ಉಳಿವಿಗಾಗಿ ಕರ್ನಾಟಕದ ಪದಾಧಿಕಾರಿಗಳು ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಘಟನೆಯ ವಿವರ:

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಕೊಪ್ಪಗೇಟ್‌ಗೆ ಖಾಸಗಿ ಕೆಲಸದ ನಿಮಿತ್ತ ಬಂದಿದ್ದ ಸಂವಿಧಾನ ಉಳಿವಿಗಾಗಿ ಕರ್ನಾಟಕ ಮತ್ತು ಕರ್ನಾಟಕ ಜನಶಕ್ತಿಯ ಮುಖಂಡರಾದ ಕೆ.ಎಲ್‌ ಅಶೋಕ್‌ರವರು ನೋ ಪಾರ್ಕಿಂಗ್‌ ಜಾಗದಲ್ಲಿ ಕಾರು ನಿಲ್ಲಿಸಿದ್ದಾರೆ. ಅಲ್ಲಿಗೆ ಬಂದ ರಮೇಶ್ ಎಂಬ ಪೊಲೀಸ್ ಪೇದೆ ಯೂನಿಫಾರ್ಮ್ ಸಹ ಹಾಕಿರದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಗೊತ್ತಿಲ್ಲದೆ ನಿಲ್ಲಿಸಿದ್ದೇವೆ, ಈಗಲೇ ಹೊರಡುತ್ತೇವೆ ಅಥವಾ ದಂಡ ಕಟ್ಟುತ್ತೇವೆ ಎಂದರೂ ಬಿಡದೆ ಕಾರಿನ ಫೋಟೊ ತೆಗೆದುಕೊಂಡಿದ್ದಲ್ಲದೇ ಕಾರು ಸೀಜ್‌ ಮಾಡಲು ಮುಂದಾದರು ಎಂದು ಕೆ.ಎಲ್ ಅಶೋಕ್‌ ದೂರಿದ್ದಾರೆ.

“ಪೊಲೀಸರು ಅಡ್ರೆಸ್ ಕೇಳಿದಾಗ ನಾನು ಶಿವಮೊಗ್ಗದ ನನ್ನ ಮನೆಯ ವಿಳಾಸ ನೀಡಿದೆ. ಆಗ ಪೇದೆಯು ಚಿಕ್ಕಮಗಳೂರಿನಲ್ಲಿದ್ದು, ಶಿವಮೊಗ್ಗದ ಅಡ್ರೆಸ್‌ ನೀಡುತ್ತೀಯ, ನಾಟಕ ಮಾಡುತ್ತೀಯ ಅಂದರು. ಇದರಿಂದ ನಾನು ಕೋಪಗೊಂಡು ಜೋರಾಗಿ ಮಾತನಾಡಿದಾಗ ಅಧಿಕ ಪ್ರಸಂಗ ಮಾಡಬೇಡಿ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ನಂತರ ಠಾಣೆಗೆ ಹೋದರೆ ಅಲ್ಲಿದ್ದ ಎಸ್‌ಐ  ರವಿ ಎಂಬಾತರೂ ಸಹ ಅನುಚಿತವಾಗಿ ನಡೆದುಕೊಂಡು ಘಾಸಿಗೊಳಿಸಿದರು” ಎಂದು ಕೆ.ಎಲ್ ಅಶೋಕ್ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ತಿಳಿಸಿದ್ದಾರೆ.

ವಿಡಿಯೋ ನೋಡಿ.

ಕ್ಷುಲ್ಲಕ ಕಾರಣಕ್ಕೆ ಹೋರಾಟಗಾರ, ಚಿಂತಕರಾದ ಕೆ. ಎಲ್ ಅಶೋಕ್ ರನ್ನು ಗುರಿ ಮಾಡಿದ ಕೊಪ್ಪ ಪೊಲೀಸರುವಿಡಿಯೋ ನೋಡಿ…#Naanugauri #klashok #police #koppa

Posted by Naanu Gauri on Tuesday, September 8, 2020

ಬೆಳಂಬೆಳಿಗ್ಗೆಯೇ ನಡೆದ ಈ ಘಟನೆಯಿಂದ ನನಗೆ ದಿಗ್ಭಾಂತ್ರಿಯಾಯಿತು. ಒಂದು ಸಣ್ಣ ತಪ್ಪಿಗೆ ಇಷ್ಟೆಲ್ಲಾ ರಾದ್ಧಾಂತ ಮಾಡಬೇಕಿತ್ತೆ ಎನಿಸಿತು. ಅಲ್ಲದೇ ಠಾಣೆಯಲ್ಲಿ ಇನ್ಸ್‌ಪೆಕ್ಟರ್‌ ರವಿ ನನ್ನ ಫೋನ್‌ ಕಿತ್ತುಕೊಂಡರು. ಅವರ ನಡವಳಿಕೆ ನೋಡಿದರೆ ಬೆಳಿಗ್ಗೆಯೇ ಕುಡಿದುಬಂದಿದ್ದರು ಅನ್ನಿಸುತ್ತದೆ. ನಾನು ಸ್ಥಳೀಐ ಎಂಎಲ್‌ಎ ರಾಜೇಗೌಡರಿಗೆ ಫೋನ್ ಮಾಡಲು ಮುಂದಾದಾಗಲೂ ಅವರು ಬಂದರೂ ಸಹ ಕ್ಷಮೆ ಕೇಳಿಸುತ್ತೇನೆ ಎಂದು ದರ್ಪ ಮೆರದಿದ್ದಾರೆ ಎಂದು ಅವರು ದೂರಿದ್ದಾರೆ.

ಸಣ್ಣ ಅವಘಡಕ್ಕೆ ಪೊಲೀಸರು ಅತ್ಯಂತ ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಮಧುಕರ್ ಶೆಟ್ಟಿ, ಬಿಕೆ ಸಿಂಗ್, ವಿಪುಲ್ ಕುಮಾರ್‌ರವರಂತಹ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಗಳನ್ನು ಕಂಡ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂತಹ ಪೊಲೀಸರು ಇರುವುದು ಹೇಗೆ ಸಾಧ್ಯ ಎನಿಸಿತು. ಇವರು ಜನಸಾಮಾನ್ಯರ ಬಗ್ಗೆ ಹೇಗೆ ವರ್ತಿಸುತ್ತಾರೆ? ಇವರು ಹಣವಸೂಲಿ ದಂಧೆ ಮಾಡುತ್ತಾ, ನಿಕೃಷ್ಟವಾಗಿ ವರ್ತಿಸುತ್ತಾರೆ ಎಂಬುದರಲ್ಲಿ ಸಂದೇಹವೇ ಇಲ್ಲ ಎಂದು ಅಶೋಕ್ ತಮ್ಮ ವಿಡಿಯೋದಲ್ಲಿ ತಿಳಿಸಿದ್ದಾರೆ.

ನಾನು ಇದನ್ನು ಅವಮಾನ ಅಂದುಕೊಳ್ಳದೇ ಸುಮ್ಮನೆ ಇರಬಹುದಿತ್ತು. ಆದರೆ ಕೊಪ್ಪ, ಮಲೆನಾಡಿನಲ್ಲಿ ಹಲವು ಜನ ಸಾಮಾನ್ಯರಿಗೂ ಇದೇ ರೀತಿಯ ತೊಂದರೆ ಕೊಡುತ್ತಿದ್ದಾರೆ ಎಂಬ ದೂರುಗಳಿವೆ. ಅದನ್ನು ತಡೆಗಟ್ಟಬೇಕಿದೆ. ಹಾಗಾಗಿ ನನ್ನನ್ನು ನಿಂದಿಸಿದ, ಅವಮಾನಿಸಿದ, ಕಾನೂನು ದುರುಪಯೋಗಪಡಿಸಿಕೊಂಡ ಮತ್ತು ಹಗಲು ಹೊತ್ತಿನಲ್ಲೇ ಕುಡಿದು ಠಾಣೆಗೆ ಬರುವ ಎಸ್‌ಐ ಮತ್ತು ಪೇದೆ ಇಬ್ಬರನ್ನು ಅಮಾನತ್ತು ಮಾಡಬೇಕೆಂದು ಆಗ್ರಹಿಸಿದ್ದಾರೆ.

ಪೊಲೀಸರ ಮೇಲೆ ಕ್ರಮ ಜರುಗಿಸದಿದ್ದರೆ ಪ್ರತಿಭಟನೆ

ಸಂವಿಧಾನ ಉಳಿವಿಗಾಗಿ ಕರ್ನಾಟಕದ ಜಿಲ್ಲಾ ಸಂಚಾಲಕರಾದ ಗೌಸ್ ಮೊಯಿದ್ದೀನ್ ಮಾತನಾಡಿ “ನೋ ಪಾರ್ಕಿಂಗ್ ಸ್ಥಳದಲ್ಲಿ ಕಾರು ನಿಲ್ಲಿಸಿದ್ದ ಕೆ.ಎಲ್ ಅಶೋಕ್‌ರವರು ಇನ್ನು ಡ್ರೈವಿಂಗ್‌ ಸೀಟ್‌ನಲ್ಲೇ ಕುಳಿತಿದ್ದರು. ಈ ಸಮಯದಲ್ಲಿ ಪೊಲೀಸರು ಬೇರೆ ಕಡೆ ನಿಲ್ಲಿಸಿ ಎಂದು ತಿಳಿಹೇಳಬೇಕು. ಆದರೆ ಅವರ ಕುಟುಂಬದವರ ಎದುರೆ ಕೆಟ್ಟದಾಗಿ ನಿಂದಿಸಿರುವುದು ನೋಡಿದರೆ, ಇದು ಉದ್ದೇಶಪೂರ್ವಕ ಕೃತ್ಯ ಎಂಬ ಅನುಮಾನ ಬರುತ್ತದೆ. ಕೆ.ಎಲ್ ಅಶೋಕ್‌ರವರು ಜಿಲ್ಲೆಯಲ್ಲಿ ಹಲವು ಹೋರಾಟಗಳನ್ನು ಮುನ್ನೆಡೆಸಿದವರಾಗಿದ್ದಾರೆ. ಅಂತವರ ಮೇಲಿನ ಈ ಅವಮಾನವನ್ನು ತೀವ್ರ ಖಂಡಿಸುತ್ತೇವೆ. ಎಸ್‌ಪಿಯವರು ಕೂಡಲೇ ಕ್ರಮ ತೆಗೆದುಕೊಳ್ಳದಿದ್ದರೆ ಪ್ರತಿಭಟನೆ ಅನಿವಾರ್ಯ” ಎಂದರು.


ಇದನ್ನೂ ಓದಿ: ಭೀಮಾ ಕೋರೆಗಾಂವ್: ಪ್ರೊ.ಕೆ.ಸತ್ಯನಾರಾಯಣ ಅವರಿಗೆ ಸಮನ್ಸ್ ಹೊರಡಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...