Homeಕರ್ನಾಟಕಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ

ಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ

ಅಧಿಕಾರ ದುರುಪಯೋಗಿಪಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದರಿಂದ ಕೂಡಲೇ ಪೇದೆ, ಎಸ್‌ಐ ಅಮಾನತ್ತು ಮಾಡಬೇಕೆಂದು ಒತ್ತಾಯಿಸಿ ಸಂವಿಧಾನ ಉಳಿವಿಗಾಗಿ ಕರ್ನಾಟಕದ ಪದಾಧಿಕಾರಿಗಳು ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

- Advertisement -
- Advertisement -

ಕ್ಷುಲ್ಲಕ ಪಾರ್ಕಿಂಗ್ ವಿಚಾರಕ್ಕೆ ಹೋರಾಟಗಾರರಾದ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ರವಿ ಮತ್ತು ಪೇದೆ ರಮೇಶ್ ರವರನ್ನು ಅಮಾನತ್ತು ಮಾಡಬೇಕೆಂದು ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಕೊಪ್ಪ ಪೊಲೀಸರು ಕೆ.ಎಲ್‌ ಅಶೋಕ್‌ರವರನ್ನು ಗುರಿಮಾಡಿ ಉದ್ದೇಶಪೂರ್ವಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿದ್ದಾರೆ. ಈ ರೀತಿ ಅಧಿಕಾರ ದುರುಪಯೋಗಿಪಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದರಿಂದ ಕೂಡಲೇ ಪೇದೆ, ಎಸ್‌ಐ ಅಮಾನತ್ತು ಮಾಡಬೇಕೆಂದು ಒತ್ತಾಯಿಸಿ ಸಂವಿಧಾನ ಉಳಿವಿಗಾಗಿ ಕರ್ನಾಟಕದ ಪದಾಧಿಕಾರಿಗಳು ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಘಟನೆಯ ವಿವರ:

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಕೊಪ್ಪಗೇಟ್‌ಗೆ ಖಾಸಗಿ ಕೆಲಸದ ನಿಮಿತ್ತ ಬಂದಿದ್ದ ಸಂವಿಧಾನ ಉಳಿವಿಗಾಗಿ ಕರ್ನಾಟಕ ಮತ್ತು ಕರ್ನಾಟಕ ಜನಶಕ್ತಿಯ ಮುಖಂಡರಾದ ಕೆ.ಎಲ್‌ ಅಶೋಕ್‌ರವರು ನೋ ಪಾರ್ಕಿಂಗ್‌ ಜಾಗದಲ್ಲಿ ಕಾರು ನಿಲ್ಲಿಸಿದ್ದಾರೆ. ಅಲ್ಲಿಗೆ ಬಂದ ರಮೇಶ್ ಎಂಬ ಪೊಲೀಸ್ ಪೇದೆ ಯೂನಿಫಾರ್ಮ್ ಸಹ ಹಾಕಿರದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಗೊತ್ತಿಲ್ಲದೆ ನಿಲ್ಲಿಸಿದ್ದೇವೆ, ಈಗಲೇ ಹೊರಡುತ್ತೇವೆ ಅಥವಾ ದಂಡ ಕಟ್ಟುತ್ತೇವೆ ಎಂದರೂ ಬಿಡದೆ ಕಾರಿನ ಫೋಟೊ ತೆಗೆದುಕೊಂಡಿದ್ದಲ್ಲದೇ ಕಾರು ಸೀಜ್‌ ಮಾಡಲು ಮುಂದಾದರು ಎಂದು ಕೆ.ಎಲ್ ಅಶೋಕ್‌ ದೂರಿದ್ದಾರೆ.

“ಪೊಲೀಸರು ಅಡ್ರೆಸ್ ಕೇಳಿದಾಗ ನಾನು ಶಿವಮೊಗ್ಗದ ನನ್ನ ಮನೆಯ ವಿಳಾಸ ನೀಡಿದೆ. ಆಗ ಪೇದೆಯು ಚಿಕ್ಕಮಗಳೂರಿನಲ್ಲಿದ್ದು, ಶಿವಮೊಗ್ಗದ ಅಡ್ರೆಸ್‌ ನೀಡುತ್ತೀಯ, ನಾಟಕ ಮಾಡುತ್ತೀಯ ಅಂದರು. ಇದರಿಂದ ನಾನು ಕೋಪಗೊಂಡು ಜೋರಾಗಿ ಮಾತನಾಡಿದಾಗ ಅಧಿಕ ಪ್ರಸಂಗ ಮಾಡಬೇಡಿ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ನಂತರ ಠಾಣೆಗೆ ಹೋದರೆ ಅಲ್ಲಿದ್ದ ಎಸ್‌ಐ  ರವಿ ಎಂಬಾತರೂ ಸಹ ಅನುಚಿತವಾಗಿ ನಡೆದುಕೊಂಡು ಘಾಸಿಗೊಳಿಸಿದರು” ಎಂದು ಕೆ.ಎಲ್ ಅಶೋಕ್ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ತಿಳಿಸಿದ್ದಾರೆ.

ವಿಡಿಯೋ ನೋಡಿ.

ಕ್ಷುಲ್ಲಕ ಕಾರಣಕ್ಕೆ ಹೋರಾಟಗಾರ, ಚಿಂತಕರಾದ ಕೆ. ಎಲ್ ಅಶೋಕ್ ರನ್ನು ಗುರಿ ಮಾಡಿದ ಕೊಪ್ಪ ಪೊಲೀಸರುವಿಡಿಯೋ ನೋಡಿ…#Naanugauri #klashok #police #koppa

Posted by Naanu Gauri on Tuesday, September 8, 2020

ಬೆಳಂಬೆಳಿಗ್ಗೆಯೇ ನಡೆದ ಈ ಘಟನೆಯಿಂದ ನನಗೆ ದಿಗ್ಭಾಂತ್ರಿಯಾಯಿತು. ಒಂದು ಸಣ್ಣ ತಪ್ಪಿಗೆ ಇಷ್ಟೆಲ್ಲಾ ರಾದ್ಧಾಂತ ಮಾಡಬೇಕಿತ್ತೆ ಎನಿಸಿತು. ಅಲ್ಲದೇ ಠಾಣೆಯಲ್ಲಿ ಇನ್ಸ್‌ಪೆಕ್ಟರ್‌ ರವಿ ನನ್ನ ಫೋನ್‌ ಕಿತ್ತುಕೊಂಡರು. ಅವರ ನಡವಳಿಕೆ ನೋಡಿದರೆ ಬೆಳಿಗ್ಗೆಯೇ ಕುಡಿದುಬಂದಿದ್ದರು ಅನ್ನಿಸುತ್ತದೆ. ನಾನು ಸ್ಥಳೀಐ ಎಂಎಲ್‌ಎ ರಾಜೇಗೌಡರಿಗೆ ಫೋನ್ ಮಾಡಲು ಮುಂದಾದಾಗಲೂ ಅವರು ಬಂದರೂ ಸಹ ಕ್ಷಮೆ ಕೇಳಿಸುತ್ತೇನೆ ಎಂದು ದರ್ಪ ಮೆರದಿದ್ದಾರೆ ಎಂದು ಅವರು ದೂರಿದ್ದಾರೆ.

ಸಣ್ಣ ಅವಘಡಕ್ಕೆ ಪೊಲೀಸರು ಅತ್ಯಂತ ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಮಧುಕರ್ ಶೆಟ್ಟಿ, ಬಿಕೆ ಸಿಂಗ್, ವಿಪುಲ್ ಕುಮಾರ್‌ರವರಂತಹ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಗಳನ್ನು ಕಂಡ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂತಹ ಪೊಲೀಸರು ಇರುವುದು ಹೇಗೆ ಸಾಧ್ಯ ಎನಿಸಿತು. ಇವರು ಜನಸಾಮಾನ್ಯರ ಬಗ್ಗೆ ಹೇಗೆ ವರ್ತಿಸುತ್ತಾರೆ? ಇವರು ಹಣವಸೂಲಿ ದಂಧೆ ಮಾಡುತ್ತಾ, ನಿಕೃಷ್ಟವಾಗಿ ವರ್ತಿಸುತ್ತಾರೆ ಎಂಬುದರಲ್ಲಿ ಸಂದೇಹವೇ ಇಲ್ಲ ಎಂದು ಅಶೋಕ್ ತಮ್ಮ ವಿಡಿಯೋದಲ್ಲಿ ತಿಳಿಸಿದ್ದಾರೆ.

ನಾನು ಇದನ್ನು ಅವಮಾನ ಅಂದುಕೊಳ್ಳದೇ ಸುಮ್ಮನೆ ಇರಬಹುದಿತ್ತು. ಆದರೆ ಕೊಪ್ಪ, ಮಲೆನಾಡಿನಲ್ಲಿ ಹಲವು ಜನ ಸಾಮಾನ್ಯರಿಗೂ ಇದೇ ರೀತಿಯ ತೊಂದರೆ ಕೊಡುತ್ತಿದ್ದಾರೆ ಎಂಬ ದೂರುಗಳಿವೆ. ಅದನ್ನು ತಡೆಗಟ್ಟಬೇಕಿದೆ. ಹಾಗಾಗಿ ನನ್ನನ್ನು ನಿಂದಿಸಿದ, ಅವಮಾನಿಸಿದ, ಕಾನೂನು ದುರುಪಯೋಗಪಡಿಸಿಕೊಂಡ ಮತ್ತು ಹಗಲು ಹೊತ್ತಿನಲ್ಲೇ ಕುಡಿದು ಠಾಣೆಗೆ ಬರುವ ಎಸ್‌ಐ ಮತ್ತು ಪೇದೆ ಇಬ್ಬರನ್ನು ಅಮಾನತ್ತು ಮಾಡಬೇಕೆಂದು ಆಗ್ರಹಿಸಿದ್ದಾರೆ.

ಪೊಲೀಸರ ಮೇಲೆ ಕ್ರಮ ಜರುಗಿಸದಿದ್ದರೆ ಪ್ರತಿಭಟನೆ

ಸಂವಿಧಾನ ಉಳಿವಿಗಾಗಿ ಕರ್ನಾಟಕದ ಜಿಲ್ಲಾ ಸಂಚಾಲಕರಾದ ಗೌಸ್ ಮೊಯಿದ್ದೀನ್ ಮಾತನಾಡಿ “ನೋ ಪಾರ್ಕಿಂಗ್ ಸ್ಥಳದಲ್ಲಿ ಕಾರು ನಿಲ್ಲಿಸಿದ್ದ ಕೆ.ಎಲ್ ಅಶೋಕ್‌ರವರು ಇನ್ನು ಡ್ರೈವಿಂಗ್‌ ಸೀಟ್‌ನಲ್ಲೇ ಕುಳಿತಿದ್ದರು. ಈ ಸಮಯದಲ್ಲಿ ಪೊಲೀಸರು ಬೇರೆ ಕಡೆ ನಿಲ್ಲಿಸಿ ಎಂದು ತಿಳಿಹೇಳಬೇಕು. ಆದರೆ ಅವರ ಕುಟುಂಬದವರ ಎದುರೆ ಕೆಟ್ಟದಾಗಿ ನಿಂದಿಸಿರುವುದು ನೋಡಿದರೆ, ಇದು ಉದ್ದೇಶಪೂರ್ವಕ ಕೃತ್ಯ ಎಂಬ ಅನುಮಾನ ಬರುತ್ತದೆ. ಕೆ.ಎಲ್ ಅಶೋಕ್‌ರವರು ಜಿಲ್ಲೆಯಲ್ಲಿ ಹಲವು ಹೋರಾಟಗಳನ್ನು ಮುನ್ನೆಡೆಸಿದವರಾಗಿದ್ದಾರೆ. ಅಂತವರ ಮೇಲಿನ ಈ ಅವಮಾನವನ್ನು ತೀವ್ರ ಖಂಡಿಸುತ್ತೇವೆ. ಎಸ್‌ಪಿಯವರು ಕೂಡಲೇ ಕ್ರಮ ತೆಗೆದುಕೊಳ್ಳದಿದ್ದರೆ ಪ್ರತಿಭಟನೆ ಅನಿವಾರ್ಯ” ಎಂದರು.


ಇದನ್ನೂ ಓದಿ: ಭೀಮಾ ಕೋರೆಗಾಂವ್: ಪ್ರೊ.ಕೆ.ಸತ್ಯನಾರಾಯಣ ಅವರಿಗೆ ಸಮನ್ಸ್ ಹೊರಡಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...