Homeಕರ್ನಾಟಕಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ

ಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ

ಅಧಿಕಾರ ದುರುಪಯೋಗಿಪಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದರಿಂದ ಕೂಡಲೇ ಪೇದೆ, ಎಸ್‌ಐ ಅಮಾನತ್ತು ಮಾಡಬೇಕೆಂದು ಒತ್ತಾಯಿಸಿ ಸಂವಿಧಾನ ಉಳಿವಿಗಾಗಿ ಕರ್ನಾಟಕದ ಪದಾಧಿಕಾರಿಗಳು ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

- Advertisement -
- Advertisement -

ಕ್ಷುಲ್ಲಕ ಪಾರ್ಕಿಂಗ್ ವಿಚಾರಕ್ಕೆ ಹೋರಾಟಗಾರರಾದ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ರವಿ ಮತ್ತು ಪೇದೆ ರಮೇಶ್ ರವರನ್ನು ಅಮಾನತ್ತು ಮಾಡಬೇಕೆಂದು ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಕೊಪ್ಪ ಪೊಲೀಸರು ಕೆ.ಎಲ್‌ ಅಶೋಕ್‌ರವರನ್ನು ಗುರಿಮಾಡಿ ಉದ್ದೇಶಪೂರ್ವಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿದ್ದಾರೆ. ಈ ರೀತಿ ಅಧಿಕಾರ ದುರುಪಯೋಗಿಪಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದರಿಂದ ಕೂಡಲೇ ಪೇದೆ, ಎಸ್‌ಐ ಅಮಾನತ್ತು ಮಾಡಬೇಕೆಂದು ಒತ್ತಾಯಿಸಿ ಸಂವಿಧಾನ ಉಳಿವಿಗಾಗಿ ಕರ್ನಾಟಕದ ಪದಾಧಿಕಾರಿಗಳು ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಘಟನೆಯ ವಿವರ:

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಕೊಪ್ಪಗೇಟ್‌ಗೆ ಖಾಸಗಿ ಕೆಲಸದ ನಿಮಿತ್ತ ಬಂದಿದ್ದ ಸಂವಿಧಾನ ಉಳಿವಿಗಾಗಿ ಕರ್ನಾಟಕ ಮತ್ತು ಕರ್ನಾಟಕ ಜನಶಕ್ತಿಯ ಮುಖಂಡರಾದ ಕೆ.ಎಲ್‌ ಅಶೋಕ್‌ರವರು ನೋ ಪಾರ್ಕಿಂಗ್‌ ಜಾಗದಲ್ಲಿ ಕಾರು ನಿಲ್ಲಿಸಿದ್ದಾರೆ. ಅಲ್ಲಿಗೆ ಬಂದ ರಮೇಶ್ ಎಂಬ ಪೊಲೀಸ್ ಪೇದೆ ಯೂನಿಫಾರ್ಮ್ ಸಹ ಹಾಕಿರದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಗೊತ್ತಿಲ್ಲದೆ ನಿಲ್ಲಿಸಿದ್ದೇವೆ, ಈಗಲೇ ಹೊರಡುತ್ತೇವೆ ಅಥವಾ ದಂಡ ಕಟ್ಟುತ್ತೇವೆ ಎಂದರೂ ಬಿಡದೆ ಕಾರಿನ ಫೋಟೊ ತೆಗೆದುಕೊಂಡಿದ್ದಲ್ಲದೇ ಕಾರು ಸೀಜ್‌ ಮಾಡಲು ಮುಂದಾದರು ಎಂದು ಕೆ.ಎಲ್ ಅಶೋಕ್‌ ದೂರಿದ್ದಾರೆ.

“ಪೊಲೀಸರು ಅಡ್ರೆಸ್ ಕೇಳಿದಾಗ ನಾನು ಶಿವಮೊಗ್ಗದ ನನ್ನ ಮನೆಯ ವಿಳಾಸ ನೀಡಿದೆ. ಆಗ ಪೇದೆಯು ಚಿಕ್ಕಮಗಳೂರಿನಲ್ಲಿದ್ದು, ಶಿವಮೊಗ್ಗದ ಅಡ್ರೆಸ್‌ ನೀಡುತ್ತೀಯ, ನಾಟಕ ಮಾಡುತ್ತೀಯ ಅಂದರು. ಇದರಿಂದ ನಾನು ಕೋಪಗೊಂಡು ಜೋರಾಗಿ ಮಾತನಾಡಿದಾಗ ಅಧಿಕ ಪ್ರಸಂಗ ಮಾಡಬೇಡಿ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ನಂತರ ಠಾಣೆಗೆ ಹೋದರೆ ಅಲ್ಲಿದ್ದ ಎಸ್‌ಐ  ರವಿ ಎಂಬಾತರೂ ಸಹ ಅನುಚಿತವಾಗಿ ನಡೆದುಕೊಂಡು ಘಾಸಿಗೊಳಿಸಿದರು” ಎಂದು ಕೆ.ಎಲ್ ಅಶೋಕ್ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ತಿಳಿಸಿದ್ದಾರೆ.

ವಿಡಿಯೋ ನೋಡಿ.

ಕ್ಷುಲ್ಲಕ ಕಾರಣಕ್ಕೆ ಹೋರಾಟಗಾರ, ಚಿಂತಕರಾದ ಕೆ. ಎಲ್ ಅಶೋಕ್ ರನ್ನು ಗುರಿ ಮಾಡಿದ ಕೊಪ್ಪ ಪೊಲೀಸರುವಿಡಿಯೋ ನೋಡಿ…#Naanugauri #klashok #police #koppa

Posted by Naanu Gauri on Tuesday, September 8, 2020

ಬೆಳಂಬೆಳಿಗ್ಗೆಯೇ ನಡೆದ ಈ ಘಟನೆಯಿಂದ ನನಗೆ ದಿಗ್ಭಾಂತ್ರಿಯಾಯಿತು. ಒಂದು ಸಣ್ಣ ತಪ್ಪಿಗೆ ಇಷ್ಟೆಲ್ಲಾ ರಾದ್ಧಾಂತ ಮಾಡಬೇಕಿತ್ತೆ ಎನಿಸಿತು. ಅಲ್ಲದೇ ಠಾಣೆಯಲ್ಲಿ ಇನ್ಸ್‌ಪೆಕ್ಟರ್‌ ರವಿ ನನ್ನ ಫೋನ್‌ ಕಿತ್ತುಕೊಂಡರು. ಅವರ ನಡವಳಿಕೆ ನೋಡಿದರೆ ಬೆಳಿಗ್ಗೆಯೇ ಕುಡಿದುಬಂದಿದ್ದರು ಅನ್ನಿಸುತ್ತದೆ. ನಾನು ಸ್ಥಳೀಐ ಎಂಎಲ್‌ಎ ರಾಜೇಗೌಡರಿಗೆ ಫೋನ್ ಮಾಡಲು ಮುಂದಾದಾಗಲೂ ಅವರು ಬಂದರೂ ಸಹ ಕ್ಷಮೆ ಕೇಳಿಸುತ್ತೇನೆ ಎಂದು ದರ್ಪ ಮೆರದಿದ್ದಾರೆ ಎಂದು ಅವರು ದೂರಿದ್ದಾರೆ.

ಸಣ್ಣ ಅವಘಡಕ್ಕೆ ಪೊಲೀಸರು ಅತ್ಯಂತ ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಮಧುಕರ್ ಶೆಟ್ಟಿ, ಬಿಕೆ ಸಿಂಗ್, ವಿಪುಲ್ ಕುಮಾರ್‌ರವರಂತಹ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಗಳನ್ನು ಕಂಡ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂತಹ ಪೊಲೀಸರು ಇರುವುದು ಹೇಗೆ ಸಾಧ್ಯ ಎನಿಸಿತು. ಇವರು ಜನಸಾಮಾನ್ಯರ ಬಗ್ಗೆ ಹೇಗೆ ವರ್ತಿಸುತ್ತಾರೆ? ಇವರು ಹಣವಸೂಲಿ ದಂಧೆ ಮಾಡುತ್ತಾ, ನಿಕೃಷ್ಟವಾಗಿ ವರ್ತಿಸುತ್ತಾರೆ ಎಂಬುದರಲ್ಲಿ ಸಂದೇಹವೇ ಇಲ್ಲ ಎಂದು ಅಶೋಕ್ ತಮ್ಮ ವಿಡಿಯೋದಲ್ಲಿ ತಿಳಿಸಿದ್ದಾರೆ.

ನಾನು ಇದನ್ನು ಅವಮಾನ ಅಂದುಕೊಳ್ಳದೇ ಸುಮ್ಮನೆ ಇರಬಹುದಿತ್ತು. ಆದರೆ ಕೊಪ್ಪ, ಮಲೆನಾಡಿನಲ್ಲಿ ಹಲವು ಜನ ಸಾಮಾನ್ಯರಿಗೂ ಇದೇ ರೀತಿಯ ತೊಂದರೆ ಕೊಡುತ್ತಿದ್ದಾರೆ ಎಂಬ ದೂರುಗಳಿವೆ. ಅದನ್ನು ತಡೆಗಟ್ಟಬೇಕಿದೆ. ಹಾಗಾಗಿ ನನ್ನನ್ನು ನಿಂದಿಸಿದ, ಅವಮಾನಿಸಿದ, ಕಾನೂನು ದುರುಪಯೋಗಪಡಿಸಿಕೊಂಡ ಮತ್ತು ಹಗಲು ಹೊತ್ತಿನಲ್ಲೇ ಕುಡಿದು ಠಾಣೆಗೆ ಬರುವ ಎಸ್‌ಐ ಮತ್ತು ಪೇದೆ ಇಬ್ಬರನ್ನು ಅಮಾನತ್ತು ಮಾಡಬೇಕೆಂದು ಆಗ್ರಹಿಸಿದ್ದಾರೆ.

ಪೊಲೀಸರ ಮೇಲೆ ಕ್ರಮ ಜರುಗಿಸದಿದ್ದರೆ ಪ್ರತಿಭಟನೆ

ಸಂವಿಧಾನ ಉಳಿವಿಗಾಗಿ ಕರ್ನಾಟಕದ ಜಿಲ್ಲಾ ಸಂಚಾಲಕರಾದ ಗೌಸ್ ಮೊಯಿದ್ದೀನ್ ಮಾತನಾಡಿ “ನೋ ಪಾರ್ಕಿಂಗ್ ಸ್ಥಳದಲ್ಲಿ ಕಾರು ನಿಲ್ಲಿಸಿದ್ದ ಕೆ.ಎಲ್ ಅಶೋಕ್‌ರವರು ಇನ್ನು ಡ್ರೈವಿಂಗ್‌ ಸೀಟ್‌ನಲ್ಲೇ ಕುಳಿತಿದ್ದರು. ಈ ಸಮಯದಲ್ಲಿ ಪೊಲೀಸರು ಬೇರೆ ಕಡೆ ನಿಲ್ಲಿಸಿ ಎಂದು ತಿಳಿಹೇಳಬೇಕು. ಆದರೆ ಅವರ ಕುಟುಂಬದವರ ಎದುರೆ ಕೆಟ್ಟದಾಗಿ ನಿಂದಿಸಿರುವುದು ನೋಡಿದರೆ, ಇದು ಉದ್ದೇಶಪೂರ್ವಕ ಕೃತ್ಯ ಎಂಬ ಅನುಮಾನ ಬರುತ್ತದೆ. ಕೆ.ಎಲ್ ಅಶೋಕ್‌ರವರು ಜಿಲ್ಲೆಯಲ್ಲಿ ಹಲವು ಹೋರಾಟಗಳನ್ನು ಮುನ್ನೆಡೆಸಿದವರಾಗಿದ್ದಾರೆ. ಅಂತವರ ಮೇಲಿನ ಈ ಅವಮಾನವನ್ನು ತೀವ್ರ ಖಂಡಿಸುತ್ತೇವೆ. ಎಸ್‌ಪಿಯವರು ಕೂಡಲೇ ಕ್ರಮ ತೆಗೆದುಕೊಳ್ಳದಿದ್ದರೆ ಪ್ರತಿಭಟನೆ ಅನಿವಾರ್ಯ” ಎಂದರು.


ಇದನ್ನೂ ಓದಿ: ಭೀಮಾ ಕೋರೆಗಾಂವ್: ಪ್ರೊ.ಕೆ.ಸತ್ಯನಾರಾಯಣ ಅವರಿಗೆ ಸಮನ್ಸ್ ಹೊರಡಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...