Homeಕರ್ನಾಟಕಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ

ಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ

ಅಧಿಕಾರ ದುರುಪಯೋಗಿಪಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದರಿಂದ ಕೂಡಲೇ ಪೇದೆ, ಎಸ್‌ಐ ಅಮಾನತ್ತು ಮಾಡಬೇಕೆಂದು ಒತ್ತಾಯಿಸಿ ಸಂವಿಧಾನ ಉಳಿವಿಗಾಗಿ ಕರ್ನಾಟಕದ ಪದಾಧಿಕಾರಿಗಳು ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

- Advertisement -
- Advertisement -

ಕ್ಷುಲ್ಲಕ ಪಾರ್ಕಿಂಗ್ ವಿಚಾರಕ್ಕೆ ಹೋರಾಟಗಾರರಾದ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ರವಿ ಮತ್ತು ಪೇದೆ ರಮೇಶ್ ರವರನ್ನು ಅಮಾನತ್ತು ಮಾಡಬೇಕೆಂದು ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಕೊಪ್ಪ ಪೊಲೀಸರು ಕೆ.ಎಲ್‌ ಅಶೋಕ್‌ರವರನ್ನು ಗುರಿಮಾಡಿ ಉದ್ದೇಶಪೂರ್ವಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿದ್ದಾರೆ. ಈ ರೀತಿ ಅಧಿಕಾರ ದುರುಪಯೋಗಿಪಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದರಿಂದ ಕೂಡಲೇ ಪೇದೆ, ಎಸ್‌ಐ ಅಮಾನತ್ತು ಮಾಡಬೇಕೆಂದು ಒತ್ತಾಯಿಸಿ ಸಂವಿಧಾನ ಉಳಿವಿಗಾಗಿ ಕರ್ನಾಟಕದ ಪದಾಧಿಕಾರಿಗಳು ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಘಟನೆಯ ವಿವರ:

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಕೊಪ್ಪಗೇಟ್‌ಗೆ ಖಾಸಗಿ ಕೆಲಸದ ನಿಮಿತ್ತ ಬಂದಿದ್ದ ಸಂವಿಧಾನ ಉಳಿವಿಗಾಗಿ ಕರ್ನಾಟಕ ಮತ್ತು ಕರ್ನಾಟಕ ಜನಶಕ್ತಿಯ ಮುಖಂಡರಾದ ಕೆ.ಎಲ್‌ ಅಶೋಕ್‌ರವರು ನೋ ಪಾರ್ಕಿಂಗ್‌ ಜಾಗದಲ್ಲಿ ಕಾರು ನಿಲ್ಲಿಸಿದ್ದಾರೆ. ಅಲ್ಲಿಗೆ ಬಂದ ರಮೇಶ್ ಎಂಬ ಪೊಲೀಸ್ ಪೇದೆ ಯೂನಿಫಾರ್ಮ್ ಸಹ ಹಾಕಿರದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಗೊತ್ತಿಲ್ಲದೆ ನಿಲ್ಲಿಸಿದ್ದೇವೆ, ಈಗಲೇ ಹೊರಡುತ್ತೇವೆ ಅಥವಾ ದಂಡ ಕಟ್ಟುತ್ತೇವೆ ಎಂದರೂ ಬಿಡದೆ ಕಾರಿನ ಫೋಟೊ ತೆಗೆದುಕೊಂಡಿದ್ದಲ್ಲದೇ ಕಾರು ಸೀಜ್‌ ಮಾಡಲು ಮುಂದಾದರು ಎಂದು ಕೆ.ಎಲ್ ಅಶೋಕ್‌ ದೂರಿದ್ದಾರೆ.

“ಪೊಲೀಸರು ಅಡ್ರೆಸ್ ಕೇಳಿದಾಗ ನಾನು ಶಿವಮೊಗ್ಗದ ನನ್ನ ಮನೆಯ ವಿಳಾಸ ನೀಡಿದೆ. ಆಗ ಪೇದೆಯು ಚಿಕ್ಕಮಗಳೂರಿನಲ್ಲಿದ್ದು, ಶಿವಮೊಗ್ಗದ ಅಡ್ರೆಸ್‌ ನೀಡುತ್ತೀಯ, ನಾಟಕ ಮಾಡುತ್ತೀಯ ಅಂದರು. ಇದರಿಂದ ನಾನು ಕೋಪಗೊಂಡು ಜೋರಾಗಿ ಮಾತನಾಡಿದಾಗ ಅಧಿಕ ಪ್ರಸಂಗ ಮಾಡಬೇಡಿ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ನಂತರ ಠಾಣೆಗೆ ಹೋದರೆ ಅಲ್ಲಿದ್ದ ಎಸ್‌ಐ  ರವಿ ಎಂಬಾತರೂ ಸಹ ಅನುಚಿತವಾಗಿ ನಡೆದುಕೊಂಡು ಘಾಸಿಗೊಳಿಸಿದರು” ಎಂದು ಕೆ.ಎಲ್ ಅಶೋಕ್ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ತಿಳಿಸಿದ್ದಾರೆ.

ವಿಡಿಯೋ ನೋಡಿ.

ಕ್ಷುಲ್ಲಕ ಕಾರಣಕ್ಕೆ ಹೋರಾಟಗಾರ, ಚಿಂತಕರಾದ ಕೆ. ಎಲ್ ಅಶೋಕ್ ರನ್ನು ಗುರಿ ಮಾಡಿದ ಕೊಪ್ಪ ಪೊಲೀಸರುವಿಡಿಯೋ ನೋಡಿ…#Naanugauri #klashok #police #koppa

Posted by Naanu Gauri on Tuesday, September 8, 2020

ಬೆಳಂಬೆಳಿಗ್ಗೆಯೇ ನಡೆದ ಈ ಘಟನೆಯಿಂದ ನನಗೆ ದಿಗ್ಭಾಂತ್ರಿಯಾಯಿತು. ಒಂದು ಸಣ್ಣ ತಪ್ಪಿಗೆ ಇಷ್ಟೆಲ್ಲಾ ರಾದ್ಧಾಂತ ಮಾಡಬೇಕಿತ್ತೆ ಎನಿಸಿತು. ಅಲ್ಲದೇ ಠಾಣೆಯಲ್ಲಿ ಇನ್ಸ್‌ಪೆಕ್ಟರ್‌ ರವಿ ನನ್ನ ಫೋನ್‌ ಕಿತ್ತುಕೊಂಡರು. ಅವರ ನಡವಳಿಕೆ ನೋಡಿದರೆ ಬೆಳಿಗ್ಗೆಯೇ ಕುಡಿದುಬಂದಿದ್ದರು ಅನ್ನಿಸುತ್ತದೆ. ನಾನು ಸ್ಥಳೀಐ ಎಂಎಲ್‌ಎ ರಾಜೇಗೌಡರಿಗೆ ಫೋನ್ ಮಾಡಲು ಮುಂದಾದಾಗಲೂ ಅವರು ಬಂದರೂ ಸಹ ಕ್ಷಮೆ ಕೇಳಿಸುತ್ತೇನೆ ಎಂದು ದರ್ಪ ಮೆರದಿದ್ದಾರೆ ಎಂದು ಅವರು ದೂರಿದ್ದಾರೆ.

ಸಣ್ಣ ಅವಘಡಕ್ಕೆ ಪೊಲೀಸರು ಅತ್ಯಂತ ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಮಧುಕರ್ ಶೆಟ್ಟಿ, ಬಿಕೆ ಸಿಂಗ್, ವಿಪುಲ್ ಕುಮಾರ್‌ರವರಂತಹ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಗಳನ್ನು ಕಂಡ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂತಹ ಪೊಲೀಸರು ಇರುವುದು ಹೇಗೆ ಸಾಧ್ಯ ಎನಿಸಿತು. ಇವರು ಜನಸಾಮಾನ್ಯರ ಬಗ್ಗೆ ಹೇಗೆ ವರ್ತಿಸುತ್ತಾರೆ? ಇವರು ಹಣವಸೂಲಿ ದಂಧೆ ಮಾಡುತ್ತಾ, ನಿಕೃಷ್ಟವಾಗಿ ವರ್ತಿಸುತ್ತಾರೆ ಎಂಬುದರಲ್ಲಿ ಸಂದೇಹವೇ ಇಲ್ಲ ಎಂದು ಅಶೋಕ್ ತಮ್ಮ ವಿಡಿಯೋದಲ್ಲಿ ತಿಳಿಸಿದ್ದಾರೆ.

ನಾನು ಇದನ್ನು ಅವಮಾನ ಅಂದುಕೊಳ್ಳದೇ ಸುಮ್ಮನೆ ಇರಬಹುದಿತ್ತು. ಆದರೆ ಕೊಪ್ಪ, ಮಲೆನಾಡಿನಲ್ಲಿ ಹಲವು ಜನ ಸಾಮಾನ್ಯರಿಗೂ ಇದೇ ರೀತಿಯ ತೊಂದರೆ ಕೊಡುತ್ತಿದ್ದಾರೆ ಎಂಬ ದೂರುಗಳಿವೆ. ಅದನ್ನು ತಡೆಗಟ್ಟಬೇಕಿದೆ. ಹಾಗಾಗಿ ನನ್ನನ್ನು ನಿಂದಿಸಿದ, ಅವಮಾನಿಸಿದ, ಕಾನೂನು ದುರುಪಯೋಗಪಡಿಸಿಕೊಂಡ ಮತ್ತು ಹಗಲು ಹೊತ್ತಿನಲ್ಲೇ ಕುಡಿದು ಠಾಣೆಗೆ ಬರುವ ಎಸ್‌ಐ ಮತ್ತು ಪೇದೆ ಇಬ್ಬರನ್ನು ಅಮಾನತ್ತು ಮಾಡಬೇಕೆಂದು ಆಗ್ರಹಿಸಿದ್ದಾರೆ.

ಪೊಲೀಸರ ಮೇಲೆ ಕ್ರಮ ಜರುಗಿಸದಿದ್ದರೆ ಪ್ರತಿಭಟನೆ

ಸಂವಿಧಾನ ಉಳಿವಿಗಾಗಿ ಕರ್ನಾಟಕದ ಜಿಲ್ಲಾ ಸಂಚಾಲಕರಾದ ಗೌಸ್ ಮೊಯಿದ್ದೀನ್ ಮಾತನಾಡಿ “ನೋ ಪಾರ್ಕಿಂಗ್ ಸ್ಥಳದಲ್ಲಿ ಕಾರು ನಿಲ್ಲಿಸಿದ್ದ ಕೆ.ಎಲ್ ಅಶೋಕ್‌ರವರು ಇನ್ನು ಡ್ರೈವಿಂಗ್‌ ಸೀಟ್‌ನಲ್ಲೇ ಕುಳಿತಿದ್ದರು. ಈ ಸಮಯದಲ್ಲಿ ಪೊಲೀಸರು ಬೇರೆ ಕಡೆ ನಿಲ್ಲಿಸಿ ಎಂದು ತಿಳಿಹೇಳಬೇಕು. ಆದರೆ ಅವರ ಕುಟುಂಬದವರ ಎದುರೆ ಕೆಟ್ಟದಾಗಿ ನಿಂದಿಸಿರುವುದು ನೋಡಿದರೆ, ಇದು ಉದ್ದೇಶಪೂರ್ವಕ ಕೃತ್ಯ ಎಂಬ ಅನುಮಾನ ಬರುತ್ತದೆ. ಕೆ.ಎಲ್ ಅಶೋಕ್‌ರವರು ಜಿಲ್ಲೆಯಲ್ಲಿ ಹಲವು ಹೋರಾಟಗಳನ್ನು ಮುನ್ನೆಡೆಸಿದವರಾಗಿದ್ದಾರೆ. ಅಂತವರ ಮೇಲಿನ ಈ ಅವಮಾನವನ್ನು ತೀವ್ರ ಖಂಡಿಸುತ್ತೇವೆ. ಎಸ್‌ಪಿಯವರು ಕೂಡಲೇ ಕ್ರಮ ತೆಗೆದುಕೊಳ್ಳದಿದ್ದರೆ ಪ್ರತಿಭಟನೆ ಅನಿವಾರ್ಯ” ಎಂದರು.


ಇದನ್ನೂ ಓದಿ: ಭೀಮಾ ಕೋರೆಗಾಂವ್: ಪ್ರೊ.ಕೆ.ಸತ್ಯನಾರಾಯಣ ಅವರಿಗೆ ಸಮನ್ಸ್ ಹೊರಡಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...