Homeಕರ್ನಾಟಕಕೊಪ್ಪ: ನಿವೇಶನರಹಿತ ಎಸ್ಟೇಟ್ ಕಾರ್ಮಿಕರಿಂದ ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಾಣ: ಭೂಮಾಲೀಕ ರಾಘವೇಂದ್ರ ಗುರು ಹೆಬ್ಬಾರ್‌ಗೆ...

ಕೊಪ್ಪ: ನಿವೇಶನರಹಿತ ಎಸ್ಟೇಟ್ ಕಾರ್ಮಿಕರಿಂದ ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಾಣ: ಭೂಮಾಲೀಕ ರಾಘವೇಂದ್ರ ಗುರು ಹೆಬ್ಬಾರ್‌ಗೆ ಕೆ.ಎಲ್.ಅಶೋಕ್ ಎಚ್ಚರಿಕೆ-video

- Advertisement -
- Advertisement -

ಕೊಪ್ಪ: ಕೊಪ್ಪ ತಾಲೂಕಿನ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಲಿತ ಕಾರ್ಮಿಕ ಕುಟುಂಬಗಳು ನಿವೇಶನಕ್ಕಾಗಿ ತೀವ್ರ ಹೋರಾಟಕ್ಕಿಳಿದಿದ್ದು, ಜಯಪುರದಿಂದ 6 ಕಿ.ಮೀ. ದೂರದಲ್ಲಿರುವ ಸರ್ಕಾರಿ ಜಾಗದಲ್ಲಿ ವಾಸ ಮಾಡುವುದಕ್ಕಾಗಿ ಟೆಂಟ್‌ಗಳನ್ನು ನಿರ್ಮಿಸಿಕೊಂಡಿದ್ದಾರೆ. ದಶಕಗಳಿಂದ ನಿವೇಶನಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ, ಭೂಹೀನ ಹಾಗೂ ವಸತಿಹೀನರಾಗಿರುವ ಸುಮಾರು 40 ದಲಿತ ಎಸ್ಟೇಟ್ ಕಾರ್ಮಿಕ ಕುಟುಂಬಗಳು ಇದೀಗ ಸ್ವತಃ ತಾವೇ ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಸಿಸಲು ಮುಂದಾಗಿವೆ. ಈ ಹೋರಾಟಕ್ಕೆ ಕರ್ನಾಟಕ ಜನಶಕ್ತಿ ಸಂಘಟನೆ ಬೆಂಬಲ ವ್ಯಕ್ತಪಡಿಸಿದೆ.

ಈ ದಲಿತ ಎಸ್ಟೇಟ್ ಕಾರ್ಮಿಕರು ಸರಕಾರಿ ಜಾಗದಲ್ಲಿ ಟೆಂಟ್ ನಿರ್ಮಿಸಿ, ವಾಸ ಮಾಡುವುದನ್ನು ಸಾವಿರಾರು ಎಕರೆ ಭೂಮಿಯನ್ನು ಹೊಂದಿರುವ ಸ್ಥಳೀಯ ಭೂಮಾಲೀಕನಾಗಿರುವ ಗುರು ಹೆಬ್ಬಾರ್ ವಿರೋಧಿಸುತ್ತಿದ್ದು ಮಾತ್ರವಲ್ಲದೇ, ದಲಿತರಿಗೆ ನಾನಾ ರೀತಿಯ ಕಿರುಕುಳವನ್ನು ನೀಡುತ್ತಿದ್ದಾನೆ. ಇದಕ್ಕಾಗಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ಜನಶಕ್ತಿಯ ಕೆ.ಎಲ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಆಟೋರಿಕ್ಷಾ ಚಾಲಕ ಮಂಜು, “ಕಳೆದ 40 ವರ್ಷಗಳಿಂದ ನಾವು ನಿವೇಶನಕ್ಕಾಗಿ  ಸಂಬಂಧಪಟ್ಟ ಇಲಾಖೆಗಳಿಗೆ ಅರ್ಜಿಗಳನ್ನು ಸಲ್ಲಿಸುತ್ತಲೇ ಇದ್ದೇವೆ. ಪ್ರತಿ ವರ್ಷವೂ ಗ್ರಾಮ ಪಂಚಾಯತ್‌ಗಳಿಗೆ ಅರ್ಜಿಗಳನ್ನು ಹಾಕಿದ್ದೇವೆ, ಆದರೆ ಯಾವುದೇ ಫಲಿತಾಂಶ ಸಿಕ್ಕಿಲ್ಲ. ಸರ್ಕಾರದಿಂದ ನಮಗೆ ಯಾವುದೇ ಸೌಲಭ್ಯಗಳು ಸಿಗಲಿಲ್ಲ. ಹಾಗಾಗಿ, ಇಲ್ಲಿ ಸುಮಾರು ಎರಡು ಎಕರೆ ಕಂದಾಯ ಜಾಗವಿದೆ ಎಂದು ತಿಳಿದುಬಂದಿದೆ. ನಾವು ಮೊದಲು ಇಲ್ಲಿ ಶೆಡ್‌ಗಳನ್ನು ಹಾಕಿಕೊಂಡು, ಮುಂದಿನ ದಿನಗಳಲ್ಲಿ ಮನೆಗಳನ್ನು ಕಟ್ಟಿಕೊಳ್ಳಲು ಯೋಜಿಸಿದ್ದೇವೆ” ಎಂದು ಅಳಲು ತೋಡಿಕೊಂಡರು. “ಇಲ್ಲಿಯವರೆಗೆ ನಾವೆಲ್ಲರೂ ಎಸ್ಟೇಟ್‌ಗಳಲ್ಲಿ ನೀಡಿದ ವಸತಿಗಳಲ್ಲಿ ವಾಸಿಸುತ್ತಿದ್ದೇವೆ. ಆದರೆ, ಕೆಲವರು ನಿವೃತ್ತಿ ಹೊಂದಿದ್ದು, ಎಸ್ಟೇಟ್ ಮಾಲೀಕರು ವಾಸಿಸಲು ಅವಕಾಶ ನೀಡುತ್ತಿಲ್ಲ. ತಿಂಗಳಿಗೆ 5000 ರೂಪಾಯಿ ಮನೆ ಬಾಡಿಗೆ ಕಟ್ಟಿ ಬದುಕುವುದು ನಮಗೆ ಅಸಾಧ್ಯ” ಎಂದು ಅವರು ಪ್ರಶ್ನಿಸಿದರು.

ಸರ್ಕಾರವು ವಸತಿ ಇಲ್ಲದವರಿಗೆ ವಸತಿ ಮತ್ತು ನಿವೇಶನ ಇಲ್ಲದವರಿಗೆ ನಿವೇಶನ ನೀಡಬೇಕು ಎಂದು ಹೇಳುತ್ತದೆ. ಆದರೆ, ನಮಗೆ ಇನ್ನೂ ನಿವೇಶನ ಸಿಕ್ಕಿಲ್ಲ. ಕೊಪ್ಪ ಕ್ಷೇತ್ರದ ಶಾಸಕ ರಾಜೇಗೌಡ ಅವರನ್ನು ಈ ಬಗ್ಗೆ ಕೇಳಿದಾಗ, “ಜಾಗ ಸಿಕ್ಕರೆ ನಿವೇಶನ ಕೊಡುತ್ತೇನೆ” ಎಂದು ಹೇಳಿದ್ದಾರೆ. ಈಗ ಜಾಗ ಸಿಕ್ಕಿರುವುದರಿಂದ, ಶಾಸಕರು ಈ ಜಾಗವನ್ನು ನಮಗೆ ದೊರಕುವಂತೆ ಮಾಡಬೇಕು ಎಂದು ಕುಟುಂಬಗಳು ಆಗ್ರಹಿಸಿವೆ. ಇನ್ನು, ಈ ಸ್ಥಳೀಯ ಭೂಮಾಲೀಕರಾದ ಹೆಬ್ಬಾರು ಮನೆತನದವರು ದಲಿತ ಕುಟುಂಬಗಳಿಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. “ಮೊದಲು ಅವರು ಬೇರೆಯವರಿಗೆ ಸೈಟ್ ಕೊಟ್ಟಿದ್ದೇವೆ ಎಂದು ಬೆದರಿಸಿದರು. ಈ ಜಾಗದಲ್ಲಿ ಎರಡು ದಿನಗಳ ಹಿಂದೆ ಬಾಳೆ ಗಿಡಗಳನ್ನು ನೆಟ್ಟು ಹೋಗಿದ್ದಾರೆ. ಆದರೆ, ಇದು ನಿಜಕ್ಕೂ ಸರ್ಕಾರಿ ಜಾಗ. ನಮಗೆ ಬೆದರಿಕೆ ಹಾಕಲು ಬಂದಿರುವರುವ ಭೂಮಾಲೀಕರಿಗೆ ಈಗಾಗಲೇ ನೂರಾರು ಎಕರೆ ಜಮೀನು ಇದೆ, ಅವರ ಮನೆಯಲ್ಲಿ ಹಿಂದೆ ಹಲವು ದಲಿತರು ಕೂಲಿಯಾಳುಗಳಾಗಿ ದುಡಿದಿದ್ದರೂ ಸರಿಯಾಗಿ ಸಂಬಳ ನೀಡಿಲ್ಲ. ಸ್ಥಳೀಯರನ್ನು ಹೆದರಿಸಿ ಕಡಿಮೆ ಹಣಕ್ಕೆ ಹಲವರ ಜಮೀನನ್ನು ಸಹ ಖರೀದಿಸಿದ್ದಾರೆ” ಎಂದು ಮಂಜು ದೂರಿದರು.

ಈ ಸಂಬಂಧ ಈಗಾಗಲೇ ತಹಶೀಲ್ದಾರ್ ಗಮನಕ್ಕೆ ತರಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಪಂಚಾಯತ್ ಅಧ್ಯಕ್ಷರು ಸಹ ಸ್ಥಳಕ್ಕೆ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸುವುದಾಗಿ ಹೇಳಿದ್ದಾರೆ. ಜಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ “ಏನೂ ಮಾಡಬೇಡಿ, ಹಾಗೆಯೇ ಇರಲಿ” ಎಂದು ಸೂಚಿಸಿ ಹೋಗಿದ್ದಾರೆ ಎಂದು ಈ ದಲಿತ ಕುಟುಂಬಗಳು ತಿಳಿಸಿವೆ. “ನಮಗೆ ನ್ಯಾಯ ಬೇಕು. ಸರ್ಕಾರಿ ಜಾಗವನ್ನು ಸ್ಥಳೀಯರು ಏಕೆ ವಿರೋಧಿಸಬೇಕು? ಬೇಕಾದರೆ ಸರ್ಕಾರ ಮಧ್ಯಪ್ರವೇಶ ಮಾಡಲಿ” ಎಂದು ದಲಿತ ಕುಟುಂಬಗಳು ಆಗ್ರಹಿಸಿವೆ. ಸರ್ಕಾರದ ಅಧಿಕೃತ ಆದೇಶದಂತೆ ಬಡವರಿಗೆ ನಿವೇಶನ, ಮನೆ ಸಿಗಬೇಕು ಎಂಬುದು ಅವರ ಬೇಡಿಕೆಯಾಗಿದೆ.

ಕಳೆದ ನಾಲ್ಕು ತಿಂಗಳ ಹಿಂದೆ ಸ್ಥಳದ ಜಿಪಿಎಸ್ ಮಾಡಿಕೊಂಡು ಹೋಗಿದ್ದು, ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದು ಹೇಳಲಾಗಿದೆ. ಆದರೆ, ಈ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಕುಟುಂಬಗಳು ಹೇಳಿವೆ. “4-5 ತಿಂಗಳ ಹಿಂದೆ ಜಿಪಿಎಸ್ ಮಾಡಲಾಗಿದೆ, ಆದರೆ 40 ವರ್ಷಗಳಿಂದ ನಾವು ಮನೆ ಮತ್ತು ಜಾಗವಿಲ್ಲದೆ ಅರ್ಜಿ ಹಾಕುತ್ತಲೇ ಇದ್ದೇವೆ. ಈಗ ಎಸ್ಟೇಟ್‌ನಲ್ಲಿ ಕೆಲವರು ನಿವೃತ್ತರಾಗಿದ್ದಾರೆ, ಇನ್ನು ಕೆಲವರು ಸದ್ಯದಲ್ಲೇ ನಿವೃತ್ತರಾಗಲಿದ್ದಾರೆ. ಅನಾರೋಗ್ಯದಿಂದ ಮನೆಯಲ್ಲಿ ಕುಳಿತರೆ ಎಸ್ಟೇಟ್ ಮಾಲೀಕರು ಜಾಗ ಖಾಲಿ ಮಾಡುವಂತೆ ಬೆದರಿಸುತ್ತಿದ್ದಾರೆ” ಎಂದು ಅಳಲು ತೋಡಿಕೊಂಡರು. “ನಾವೆಲ್ಲರೂ ಬಾಳೆಹೊನ್ನೂರು ಟೀ ಎಸ್ಟೇಟ್‌ನಲ್ಲಿ ದುಡಿಯುತ್ತಿದ್ದೇವೆ. ಶತಮಾನದಿಂದ ನಮಗೆ ಮನೆ ಎಂಬುದೇ ಇಲ್ಲ. ಅದಕ್ಕಾಗಿಯೇ ಈ ಜಾಗದಲ್ಲಿ ಬಿಡಾರ ಹೂಡಿದ್ದೇವೆ. ನಾವೆಲ್ಲ ಬಡವರು. ಇದಕ್ಕಾಗಿ ನಾಗರಿಕರು. ಸಂಘಟನೆಗಳು ನಮಗೆ ಬೆಂಬಲ ನೀಡಬೇಕು. ನಮ್ಮದೇ ಎಂದು ಒಂದು ಜಾಗವಿರಲಿಲ್ಲ. ಈಗಲಾದರೂ ನಾವು ಸ್ವತಂತ್ರವಾಗಿ ಬದುಕಲು ಇಲ್ಲಿ ಜಾಗ ಕೊಡಬೇಕು” ಎಂದು ದಲಿತ ಕುಟುಂಬಗಳು ಮನವಿ ಮಾಡಿವೆ.

ಧರ್ಮಸ್ಥಳ ಪ್ರಕರಣ: ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸಲಿ, ಅಪರಾಧಿಗಳಿಗೆ ಶಿಕ್ಷೆಯಾಗಲಿ; ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ವೇದಿಕೆಯ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...