Homeಕರ್ನಾಟಕಕೊಪ್ಪ: ನಿವೇಶನರಹಿತ ಎಸ್ಟೇಟ್ ಕಾರ್ಮಿಕರಿಂದ ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಾಣ: ಭೂಮಾಲೀಕ ರಾಘವೇಂದ್ರ ಗುರು ಹೆಬ್ಬಾರ್‌ಗೆ...

ಕೊಪ್ಪ: ನಿವೇಶನರಹಿತ ಎಸ್ಟೇಟ್ ಕಾರ್ಮಿಕರಿಂದ ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಾಣ: ಭೂಮಾಲೀಕ ರಾಘವೇಂದ್ರ ಗುರು ಹೆಬ್ಬಾರ್‌ಗೆ ಕೆ.ಎಲ್.ಅಶೋಕ್ ಎಚ್ಚರಿಕೆ-video

- Advertisement -
- Advertisement -

ಕೊಪ್ಪ: ಕೊಪ್ಪ ತಾಲೂಕಿನ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಲಿತ ಕಾರ್ಮಿಕ ಕುಟುಂಬಗಳು ನಿವೇಶನಕ್ಕಾಗಿ ತೀವ್ರ ಹೋರಾಟಕ್ಕಿಳಿದಿದ್ದು, ಜಯಪುರದಿಂದ 6 ಕಿ.ಮೀ. ದೂರದಲ್ಲಿರುವ ಸರ್ಕಾರಿ ಜಾಗದಲ್ಲಿ ವಾಸ ಮಾಡುವುದಕ್ಕಾಗಿ ಟೆಂಟ್‌ಗಳನ್ನು ನಿರ್ಮಿಸಿಕೊಂಡಿದ್ದಾರೆ. ದಶಕಗಳಿಂದ ನಿವೇಶನಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ, ಭೂಹೀನ ಹಾಗೂ ವಸತಿಹೀನರಾಗಿರುವ ಸುಮಾರು 40 ದಲಿತ ಎಸ್ಟೇಟ್ ಕಾರ್ಮಿಕ ಕುಟುಂಬಗಳು ಇದೀಗ ಸ್ವತಃ ತಾವೇ ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಸಿಸಲು ಮುಂದಾಗಿವೆ. ಈ ಹೋರಾಟಕ್ಕೆ ಕರ್ನಾಟಕ ಜನಶಕ್ತಿ ಸಂಘಟನೆ ಬೆಂಬಲ ವ್ಯಕ್ತಪಡಿಸಿದೆ.

ಈ ದಲಿತ ಎಸ್ಟೇಟ್ ಕಾರ್ಮಿಕರು ಸರಕಾರಿ ಜಾಗದಲ್ಲಿ ಟೆಂಟ್ ನಿರ್ಮಿಸಿ, ವಾಸ ಮಾಡುವುದನ್ನು ಸಾವಿರಾರು ಎಕರೆ ಭೂಮಿಯನ್ನು ಹೊಂದಿರುವ ಸ್ಥಳೀಯ ಭೂಮಾಲೀಕನಾಗಿರುವ ಗುರು ಹೆಬ್ಬಾರ್ ವಿರೋಧಿಸುತ್ತಿದ್ದು ಮಾತ್ರವಲ್ಲದೇ, ದಲಿತರಿಗೆ ನಾನಾ ರೀತಿಯ ಕಿರುಕುಳವನ್ನು ನೀಡುತ್ತಿದ್ದಾನೆ. ಇದಕ್ಕಾಗಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ಜನಶಕ್ತಿಯ ಕೆ.ಎಲ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಆಟೋರಿಕ್ಷಾ ಚಾಲಕ ಮಂಜು, “ಕಳೆದ 40 ವರ್ಷಗಳಿಂದ ನಾವು ನಿವೇಶನಕ್ಕಾಗಿ  ಸಂಬಂಧಪಟ್ಟ ಇಲಾಖೆಗಳಿಗೆ ಅರ್ಜಿಗಳನ್ನು ಸಲ್ಲಿಸುತ್ತಲೇ ಇದ್ದೇವೆ. ಪ್ರತಿ ವರ್ಷವೂ ಗ್ರಾಮ ಪಂಚಾಯತ್‌ಗಳಿಗೆ ಅರ್ಜಿಗಳನ್ನು ಹಾಕಿದ್ದೇವೆ, ಆದರೆ ಯಾವುದೇ ಫಲಿತಾಂಶ ಸಿಕ್ಕಿಲ್ಲ. ಸರ್ಕಾರದಿಂದ ನಮಗೆ ಯಾವುದೇ ಸೌಲಭ್ಯಗಳು ಸಿಗಲಿಲ್ಲ. ಹಾಗಾಗಿ, ಇಲ್ಲಿ ಸುಮಾರು ಎರಡು ಎಕರೆ ಕಂದಾಯ ಜಾಗವಿದೆ ಎಂದು ತಿಳಿದುಬಂದಿದೆ. ನಾವು ಮೊದಲು ಇಲ್ಲಿ ಶೆಡ್‌ಗಳನ್ನು ಹಾಕಿಕೊಂಡು, ಮುಂದಿನ ದಿನಗಳಲ್ಲಿ ಮನೆಗಳನ್ನು ಕಟ್ಟಿಕೊಳ್ಳಲು ಯೋಜಿಸಿದ್ದೇವೆ” ಎಂದು ಅಳಲು ತೋಡಿಕೊಂಡರು. “ಇಲ್ಲಿಯವರೆಗೆ ನಾವೆಲ್ಲರೂ ಎಸ್ಟೇಟ್‌ಗಳಲ್ಲಿ ನೀಡಿದ ವಸತಿಗಳಲ್ಲಿ ವಾಸಿಸುತ್ತಿದ್ದೇವೆ. ಆದರೆ, ಕೆಲವರು ನಿವೃತ್ತಿ ಹೊಂದಿದ್ದು, ಎಸ್ಟೇಟ್ ಮಾಲೀಕರು ವಾಸಿಸಲು ಅವಕಾಶ ನೀಡುತ್ತಿಲ್ಲ. ತಿಂಗಳಿಗೆ 5000 ರೂಪಾಯಿ ಮನೆ ಬಾಡಿಗೆ ಕಟ್ಟಿ ಬದುಕುವುದು ನಮಗೆ ಅಸಾಧ್ಯ” ಎಂದು ಅವರು ಪ್ರಶ್ನಿಸಿದರು.

ಸರ್ಕಾರವು ವಸತಿ ಇಲ್ಲದವರಿಗೆ ವಸತಿ ಮತ್ತು ನಿವೇಶನ ಇಲ್ಲದವರಿಗೆ ನಿವೇಶನ ನೀಡಬೇಕು ಎಂದು ಹೇಳುತ್ತದೆ. ಆದರೆ, ನಮಗೆ ಇನ್ನೂ ನಿವೇಶನ ಸಿಕ್ಕಿಲ್ಲ. ಕೊಪ್ಪ ಕ್ಷೇತ್ರದ ಶಾಸಕ ರಾಜೇಗೌಡ ಅವರನ್ನು ಈ ಬಗ್ಗೆ ಕೇಳಿದಾಗ, “ಜಾಗ ಸಿಕ್ಕರೆ ನಿವೇಶನ ಕೊಡುತ್ತೇನೆ” ಎಂದು ಹೇಳಿದ್ದಾರೆ. ಈಗ ಜಾಗ ಸಿಕ್ಕಿರುವುದರಿಂದ, ಶಾಸಕರು ಈ ಜಾಗವನ್ನು ನಮಗೆ ದೊರಕುವಂತೆ ಮಾಡಬೇಕು ಎಂದು ಕುಟುಂಬಗಳು ಆಗ್ರಹಿಸಿವೆ. ಇನ್ನು, ಈ ಸ್ಥಳೀಯ ಭೂಮಾಲೀಕರಾದ ಹೆಬ್ಬಾರು ಮನೆತನದವರು ದಲಿತ ಕುಟುಂಬಗಳಿಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. “ಮೊದಲು ಅವರು ಬೇರೆಯವರಿಗೆ ಸೈಟ್ ಕೊಟ್ಟಿದ್ದೇವೆ ಎಂದು ಬೆದರಿಸಿದರು. ಈ ಜಾಗದಲ್ಲಿ ಎರಡು ದಿನಗಳ ಹಿಂದೆ ಬಾಳೆ ಗಿಡಗಳನ್ನು ನೆಟ್ಟು ಹೋಗಿದ್ದಾರೆ. ಆದರೆ, ಇದು ನಿಜಕ್ಕೂ ಸರ್ಕಾರಿ ಜಾಗ. ನಮಗೆ ಬೆದರಿಕೆ ಹಾಕಲು ಬಂದಿರುವರುವ ಭೂಮಾಲೀಕರಿಗೆ ಈಗಾಗಲೇ ನೂರಾರು ಎಕರೆ ಜಮೀನು ಇದೆ, ಅವರ ಮನೆಯಲ್ಲಿ ಹಿಂದೆ ಹಲವು ದಲಿತರು ಕೂಲಿಯಾಳುಗಳಾಗಿ ದುಡಿದಿದ್ದರೂ ಸರಿಯಾಗಿ ಸಂಬಳ ನೀಡಿಲ್ಲ. ಸ್ಥಳೀಯರನ್ನು ಹೆದರಿಸಿ ಕಡಿಮೆ ಹಣಕ್ಕೆ ಹಲವರ ಜಮೀನನ್ನು ಸಹ ಖರೀದಿಸಿದ್ದಾರೆ” ಎಂದು ಮಂಜು ದೂರಿದರು.

ಈ ಸಂಬಂಧ ಈಗಾಗಲೇ ತಹಶೀಲ್ದಾರ್ ಗಮನಕ್ಕೆ ತರಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಪಂಚಾಯತ್ ಅಧ್ಯಕ್ಷರು ಸಹ ಸ್ಥಳಕ್ಕೆ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸುವುದಾಗಿ ಹೇಳಿದ್ದಾರೆ. ಜಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ “ಏನೂ ಮಾಡಬೇಡಿ, ಹಾಗೆಯೇ ಇರಲಿ” ಎಂದು ಸೂಚಿಸಿ ಹೋಗಿದ್ದಾರೆ ಎಂದು ಈ ದಲಿತ ಕುಟುಂಬಗಳು ತಿಳಿಸಿವೆ. “ನಮಗೆ ನ್ಯಾಯ ಬೇಕು. ಸರ್ಕಾರಿ ಜಾಗವನ್ನು ಸ್ಥಳೀಯರು ಏಕೆ ವಿರೋಧಿಸಬೇಕು? ಬೇಕಾದರೆ ಸರ್ಕಾರ ಮಧ್ಯಪ್ರವೇಶ ಮಾಡಲಿ” ಎಂದು ದಲಿತ ಕುಟುಂಬಗಳು ಆಗ್ರಹಿಸಿವೆ. ಸರ್ಕಾರದ ಅಧಿಕೃತ ಆದೇಶದಂತೆ ಬಡವರಿಗೆ ನಿವೇಶನ, ಮನೆ ಸಿಗಬೇಕು ಎಂಬುದು ಅವರ ಬೇಡಿಕೆಯಾಗಿದೆ.

ಕಳೆದ ನಾಲ್ಕು ತಿಂಗಳ ಹಿಂದೆ ಸ್ಥಳದ ಜಿಪಿಎಸ್ ಮಾಡಿಕೊಂಡು ಹೋಗಿದ್ದು, ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದು ಹೇಳಲಾಗಿದೆ. ಆದರೆ, ಈ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಕುಟುಂಬಗಳು ಹೇಳಿವೆ. “4-5 ತಿಂಗಳ ಹಿಂದೆ ಜಿಪಿಎಸ್ ಮಾಡಲಾಗಿದೆ, ಆದರೆ 40 ವರ್ಷಗಳಿಂದ ನಾವು ಮನೆ ಮತ್ತು ಜಾಗವಿಲ್ಲದೆ ಅರ್ಜಿ ಹಾಕುತ್ತಲೇ ಇದ್ದೇವೆ. ಈಗ ಎಸ್ಟೇಟ್‌ನಲ್ಲಿ ಕೆಲವರು ನಿವೃತ್ತರಾಗಿದ್ದಾರೆ, ಇನ್ನು ಕೆಲವರು ಸದ್ಯದಲ್ಲೇ ನಿವೃತ್ತರಾಗಲಿದ್ದಾರೆ. ಅನಾರೋಗ್ಯದಿಂದ ಮನೆಯಲ್ಲಿ ಕುಳಿತರೆ ಎಸ್ಟೇಟ್ ಮಾಲೀಕರು ಜಾಗ ಖಾಲಿ ಮಾಡುವಂತೆ ಬೆದರಿಸುತ್ತಿದ್ದಾರೆ” ಎಂದು ಅಳಲು ತೋಡಿಕೊಂಡರು. “ನಾವೆಲ್ಲರೂ ಬಾಳೆಹೊನ್ನೂರು ಟೀ ಎಸ್ಟೇಟ್‌ನಲ್ಲಿ ದುಡಿಯುತ್ತಿದ್ದೇವೆ. ಶತಮಾನದಿಂದ ನಮಗೆ ಮನೆ ಎಂಬುದೇ ಇಲ್ಲ. ಅದಕ್ಕಾಗಿಯೇ ಈ ಜಾಗದಲ್ಲಿ ಬಿಡಾರ ಹೂಡಿದ್ದೇವೆ. ನಾವೆಲ್ಲ ಬಡವರು. ಇದಕ್ಕಾಗಿ ನಾಗರಿಕರು. ಸಂಘಟನೆಗಳು ನಮಗೆ ಬೆಂಬಲ ನೀಡಬೇಕು. ನಮ್ಮದೇ ಎಂದು ಒಂದು ಜಾಗವಿರಲಿಲ್ಲ. ಈಗಲಾದರೂ ನಾವು ಸ್ವತಂತ್ರವಾಗಿ ಬದುಕಲು ಇಲ್ಲಿ ಜಾಗ ಕೊಡಬೇಕು” ಎಂದು ದಲಿತ ಕುಟುಂಬಗಳು ಮನವಿ ಮಾಡಿವೆ.

ಧರ್ಮಸ್ಥಳ ಪ್ರಕರಣ: ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸಲಿ, ಅಪರಾಧಿಗಳಿಗೆ ಶಿಕ್ಷೆಯಾಗಲಿ; ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ವೇದಿಕೆಯ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...