Homeಕರ್ನಾಟಕಕೊಪ್ಪ: ನಿವೇಶನರಹಿತ ಎಸ್ಟೇಟ್ ಕಾರ್ಮಿಕರಿಂದ ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಾಣ: ಭೂಮಾಲೀಕ ರಾಘವೇಂದ್ರ ಗುರು ಹೆಬ್ಬಾರ್‌ಗೆ...

ಕೊಪ್ಪ: ನಿವೇಶನರಹಿತ ಎಸ್ಟೇಟ್ ಕಾರ್ಮಿಕರಿಂದ ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಾಣ: ಭೂಮಾಲೀಕ ರಾಘವೇಂದ್ರ ಗುರು ಹೆಬ್ಬಾರ್‌ಗೆ ಕೆ.ಎಲ್.ಅಶೋಕ್ ಎಚ್ಚರಿಕೆ-video

- Advertisement -
- Advertisement -

ಕೊಪ್ಪ: ಕೊಪ್ಪ ತಾಲೂಕಿನ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಲಿತ ಕಾರ್ಮಿಕ ಕುಟುಂಬಗಳು ನಿವೇಶನಕ್ಕಾಗಿ ತೀವ್ರ ಹೋರಾಟಕ್ಕಿಳಿದಿದ್ದು, ಜಯಪುರದಿಂದ 6 ಕಿ.ಮೀ. ದೂರದಲ್ಲಿರುವ ಸರ್ಕಾರಿ ಜಾಗದಲ್ಲಿ ವಾಸ ಮಾಡುವುದಕ್ಕಾಗಿ ಟೆಂಟ್‌ಗಳನ್ನು ನಿರ್ಮಿಸಿಕೊಂಡಿದ್ದಾರೆ. ದಶಕಗಳಿಂದ ನಿವೇಶನಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ, ಭೂಹೀನ ಹಾಗೂ ವಸತಿಹೀನರಾಗಿರುವ ಸುಮಾರು 40 ದಲಿತ ಎಸ್ಟೇಟ್ ಕಾರ್ಮಿಕ ಕುಟುಂಬಗಳು ಇದೀಗ ಸ್ವತಃ ತಾವೇ ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಸಿಸಲು ಮುಂದಾಗಿವೆ. ಈ ಹೋರಾಟಕ್ಕೆ ಕರ್ನಾಟಕ ಜನಶಕ್ತಿ ಸಂಘಟನೆ ಬೆಂಬಲ ವ್ಯಕ್ತಪಡಿಸಿದೆ.

ಈ ದಲಿತ ಎಸ್ಟೇಟ್ ಕಾರ್ಮಿಕರು ಸರಕಾರಿ ಜಾಗದಲ್ಲಿ ಟೆಂಟ್ ನಿರ್ಮಿಸಿ, ವಾಸ ಮಾಡುವುದನ್ನು ಸಾವಿರಾರು ಎಕರೆ ಭೂಮಿಯನ್ನು ಹೊಂದಿರುವ ಸ್ಥಳೀಯ ಭೂಮಾಲೀಕನಾಗಿರುವ ಗುರು ಹೆಬ್ಬಾರ್ ವಿರೋಧಿಸುತ್ತಿದ್ದು ಮಾತ್ರವಲ್ಲದೇ, ದಲಿತರಿಗೆ ನಾನಾ ರೀತಿಯ ಕಿರುಕುಳವನ್ನು ನೀಡುತ್ತಿದ್ದಾನೆ. ಇದಕ್ಕಾಗಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ಜನಶಕ್ತಿಯ ಕೆ.ಎಲ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಆಟೋರಿಕ್ಷಾ ಚಾಲಕ ಮಂಜು, “ಕಳೆದ 40 ವರ್ಷಗಳಿಂದ ನಾವು ನಿವೇಶನಕ್ಕಾಗಿ  ಸಂಬಂಧಪಟ್ಟ ಇಲಾಖೆಗಳಿಗೆ ಅರ್ಜಿಗಳನ್ನು ಸಲ್ಲಿಸುತ್ತಲೇ ಇದ್ದೇವೆ. ಪ್ರತಿ ವರ್ಷವೂ ಗ್ರಾಮ ಪಂಚಾಯತ್‌ಗಳಿಗೆ ಅರ್ಜಿಗಳನ್ನು ಹಾಕಿದ್ದೇವೆ, ಆದರೆ ಯಾವುದೇ ಫಲಿತಾಂಶ ಸಿಕ್ಕಿಲ್ಲ. ಸರ್ಕಾರದಿಂದ ನಮಗೆ ಯಾವುದೇ ಸೌಲಭ್ಯಗಳು ಸಿಗಲಿಲ್ಲ. ಹಾಗಾಗಿ, ಇಲ್ಲಿ ಸುಮಾರು ಎರಡು ಎಕರೆ ಕಂದಾಯ ಜಾಗವಿದೆ ಎಂದು ತಿಳಿದುಬಂದಿದೆ. ನಾವು ಮೊದಲು ಇಲ್ಲಿ ಶೆಡ್‌ಗಳನ್ನು ಹಾಕಿಕೊಂಡು, ಮುಂದಿನ ದಿನಗಳಲ್ಲಿ ಮನೆಗಳನ್ನು ಕಟ್ಟಿಕೊಳ್ಳಲು ಯೋಜಿಸಿದ್ದೇವೆ” ಎಂದು ಅಳಲು ತೋಡಿಕೊಂಡರು. “ಇಲ್ಲಿಯವರೆಗೆ ನಾವೆಲ್ಲರೂ ಎಸ್ಟೇಟ್‌ಗಳಲ್ಲಿ ನೀಡಿದ ವಸತಿಗಳಲ್ಲಿ ವಾಸಿಸುತ್ತಿದ್ದೇವೆ. ಆದರೆ, ಕೆಲವರು ನಿವೃತ್ತಿ ಹೊಂದಿದ್ದು, ಎಸ್ಟೇಟ್ ಮಾಲೀಕರು ವಾಸಿಸಲು ಅವಕಾಶ ನೀಡುತ್ತಿಲ್ಲ. ತಿಂಗಳಿಗೆ 5000 ರೂಪಾಯಿ ಮನೆ ಬಾಡಿಗೆ ಕಟ್ಟಿ ಬದುಕುವುದು ನಮಗೆ ಅಸಾಧ್ಯ” ಎಂದು ಅವರು ಪ್ರಶ್ನಿಸಿದರು.

ಸರ್ಕಾರವು ವಸತಿ ಇಲ್ಲದವರಿಗೆ ವಸತಿ ಮತ್ತು ನಿವೇಶನ ಇಲ್ಲದವರಿಗೆ ನಿವೇಶನ ನೀಡಬೇಕು ಎಂದು ಹೇಳುತ್ತದೆ. ಆದರೆ, ನಮಗೆ ಇನ್ನೂ ನಿವೇಶನ ಸಿಕ್ಕಿಲ್ಲ. ಕೊಪ್ಪ ಕ್ಷೇತ್ರದ ಶಾಸಕ ರಾಜೇಗೌಡ ಅವರನ್ನು ಈ ಬಗ್ಗೆ ಕೇಳಿದಾಗ, “ಜಾಗ ಸಿಕ್ಕರೆ ನಿವೇಶನ ಕೊಡುತ್ತೇನೆ” ಎಂದು ಹೇಳಿದ್ದಾರೆ. ಈಗ ಜಾಗ ಸಿಕ್ಕಿರುವುದರಿಂದ, ಶಾಸಕರು ಈ ಜಾಗವನ್ನು ನಮಗೆ ದೊರಕುವಂತೆ ಮಾಡಬೇಕು ಎಂದು ಕುಟುಂಬಗಳು ಆಗ್ರಹಿಸಿವೆ. ಇನ್ನು, ಈ ಸ್ಥಳೀಯ ಭೂಮಾಲೀಕರಾದ ಹೆಬ್ಬಾರು ಮನೆತನದವರು ದಲಿತ ಕುಟುಂಬಗಳಿಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. “ಮೊದಲು ಅವರು ಬೇರೆಯವರಿಗೆ ಸೈಟ್ ಕೊಟ್ಟಿದ್ದೇವೆ ಎಂದು ಬೆದರಿಸಿದರು. ಈ ಜಾಗದಲ್ಲಿ ಎರಡು ದಿನಗಳ ಹಿಂದೆ ಬಾಳೆ ಗಿಡಗಳನ್ನು ನೆಟ್ಟು ಹೋಗಿದ್ದಾರೆ. ಆದರೆ, ಇದು ನಿಜಕ್ಕೂ ಸರ್ಕಾರಿ ಜಾಗ. ನಮಗೆ ಬೆದರಿಕೆ ಹಾಕಲು ಬಂದಿರುವರುವ ಭೂಮಾಲೀಕರಿಗೆ ಈಗಾಗಲೇ ನೂರಾರು ಎಕರೆ ಜಮೀನು ಇದೆ, ಅವರ ಮನೆಯಲ್ಲಿ ಹಿಂದೆ ಹಲವು ದಲಿತರು ಕೂಲಿಯಾಳುಗಳಾಗಿ ದುಡಿದಿದ್ದರೂ ಸರಿಯಾಗಿ ಸಂಬಳ ನೀಡಿಲ್ಲ. ಸ್ಥಳೀಯರನ್ನು ಹೆದರಿಸಿ ಕಡಿಮೆ ಹಣಕ್ಕೆ ಹಲವರ ಜಮೀನನ್ನು ಸಹ ಖರೀದಿಸಿದ್ದಾರೆ” ಎಂದು ಮಂಜು ದೂರಿದರು.

ಈ ಸಂಬಂಧ ಈಗಾಗಲೇ ತಹಶೀಲ್ದಾರ್ ಗಮನಕ್ಕೆ ತರಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಪಂಚಾಯತ್ ಅಧ್ಯಕ್ಷರು ಸಹ ಸ್ಥಳಕ್ಕೆ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸುವುದಾಗಿ ಹೇಳಿದ್ದಾರೆ. ಜಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ “ಏನೂ ಮಾಡಬೇಡಿ, ಹಾಗೆಯೇ ಇರಲಿ” ಎಂದು ಸೂಚಿಸಿ ಹೋಗಿದ್ದಾರೆ ಎಂದು ಈ ದಲಿತ ಕುಟುಂಬಗಳು ತಿಳಿಸಿವೆ. “ನಮಗೆ ನ್ಯಾಯ ಬೇಕು. ಸರ್ಕಾರಿ ಜಾಗವನ್ನು ಸ್ಥಳೀಯರು ಏಕೆ ವಿರೋಧಿಸಬೇಕು? ಬೇಕಾದರೆ ಸರ್ಕಾರ ಮಧ್ಯಪ್ರವೇಶ ಮಾಡಲಿ” ಎಂದು ದಲಿತ ಕುಟುಂಬಗಳು ಆಗ್ರಹಿಸಿವೆ. ಸರ್ಕಾರದ ಅಧಿಕೃತ ಆದೇಶದಂತೆ ಬಡವರಿಗೆ ನಿವೇಶನ, ಮನೆ ಸಿಗಬೇಕು ಎಂಬುದು ಅವರ ಬೇಡಿಕೆಯಾಗಿದೆ.

ಕಳೆದ ನಾಲ್ಕು ತಿಂಗಳ ಹಿಂದೆ ಸ್ಥಳದ ಜಿಪಿಎಸ್ ಮಾಡಿಕೊಂಡು ಹೋಗಿದ್ದು, ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದು ಹೇಳಲಾಗಿದೆ. ಆದರೆ, ಈ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಕುಟುಂಬಗಳು ಹೇಳಿವೆ. “4-5 ತಿಂಗಳ ಹಿಂದೆ ಜಿಪಿಎಸ್ ಮಾಡಲಾಗಿದೆ, ಆದರೆ 40 ವರ್ಷಗಳಿಂದ ನಾವು ಮನೆ ಮತ್ತು ಜಾಗವಿಲ್ಲದೆ ಅರ್ಜಿ ಹಾಕುತ್ತಲೇ ಇದ್ದೇವೆ. ಈಗ ಎಸ್ಟೇಟ್‌ನಲ್ಲಿ ಕೆಲವರು ನಿವೃತ್ತರಾಗಿದ್ದಾರೆ, ಇನ್ನು ಕೆಲವರು ಸದ್ಯದಲ್ಲೇ ನಿವೃತ್ತರಾಗಲಿದ್ದಾರೆ. ಅನಾರೋಗ್ಯದಿಂದ ಮನೆಯಲ್ಲಿ ಕುಳಿತರೆ ಎಸ್ಟೇಟ್ ಮಾಲೀಕರು ಜಾಗ ಖಾಲಿ ಮಾಡುವಂತೆ ಬೆದರಿಸುತ್ತಿದ್ದಾರೆ” ಎಂದು ಅಳಲು ತೋಡಿಕೊಂಡರು. “ನಾವೆಲ್ಲರೂ ಬಾಳೆಹೊನ್ನೂರು ಟೀ ಎಸ್ಟೇಟ್‌ನಲ್ಲಿ ದುಡಿಯುತ್ತಿದ್ದೇವೆ. ಶತಮಾನದಿಂದ ನಮಗೆ ಮನೆ ಎಂಬುದೇ ಇಲ್ಲ. ಅದಕ್ಕಾಗಿಯೇ ಈ ಜಾಗದಲ್ಲಿ ಬಿಡಾರ ಹೂಡಿದ್ದೇವೆ. ನಾವೆಲ್ಲ ಬಡವರು. ಇದಕ್ಕಾಗಿ ನಾಗರಿಕರು. ಸಂಘಟನೆಗಳು ನಮಗೆ ಬೆಂಬಲ ನೀಡಬೇಕು. ನಮ್ಮದೇ ಎಂದು ಒಂದು ಜಾಗವಿರಲಿಲ್ಲ. ಈಗಲಾದರೂ ನಾವು ಸ್ವತಂತ್ರವಾಗಿ ಬದುಕಲು ಇಲ್ಲಿ ಜಾಗ ಕೊಡಬೇಕು” ಎಂದು ದಲಿತ ಕುಟುಂಬಗಳು ಮನವಿ ಮಾಡಿವೆ.

ಧರ್ಮಸ್ಥಳ ಪ್ರಕರಣ: ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸಲಿ, ಅಪರಾಧಿಗಳಿಗೆ ಶಿಕ್ಷೆಯಾಗಲಿ; ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ವೇದಿಕೆಯ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...