Homeಕರ್ನಾಟಕಕೊಪ್ಪ: ನಿವೇಶನರಹಿತ ಎಸ್ಟೇಟ್ ಕಾರ್ಮಿಕರಿಂದ ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಾಣ: ಭೂಮಾಲೀಕ ರಾಘವೇಂದ್ರ ಗುರು ಹೆಬ್ಬಾರ್‌ಗೆ...

ಕೊಪ್ಪ: ನಿವೇಶನರಹಿತ ಎಸ್ಟೇಟ್ ಕಾರ್ಮಿಕರಿಂದ ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಾಣ: ಭೂಮಾಲೀಕ ರಾಘವೇಂದ್ರ ಗುರು ಹೆಬ್ಬಾರ್‌ಗೆ ಕೆ.ಎಲ್.ಅಶೋಕ್ ಎಚ್ಚರಿಕೆ-video

- Advertisement -
- Advertisement -

ಕೊಪ್ಪ: ಕೊಪ್ಪ ತಾಲೂಕಿನ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಲಿತ ಕಾರ್ಮಿಕ ಕುಟುಂಬಗಳು ನಿವೇಶನಕ್ಕಾಗಿ ತೀವ್ರ ಹೋರಾಟಕ್ಕಿಳಿದಿದ್ದು, ಜಯಪುರದಿಂದ 6 ಕಿ.ಮೀ. ದೂರದಲ್ಲಿರುವ ಸರ್ಕಾರಿ ಜಾಗದಲ್ಲಿ ವಾಸ ಮಾಡುವುದಕ್ಕಾಗಿ ಟೆಂಟ್‌ಗಳನ್ನು ನಿರ್ಮಿಸಿಕೊಂಡಿದ್ದಾರೆ. ದಶಕಗಳಿಂದ ನಿವೇಶನಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ, ಭೂಹೀನ ಹಾಗೂ ವಸತಿಹೀನರಾಗಿರುವ ಸುಮಾರು 40 ದಲಿತ ಎಸ್ಟೇಟ್ ಕಾರ್ಮಿಕ ಕುಟುಂಬಗಳು ಇದೀಗ ಸ್ವತಃ ತಾವೇ ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಸಿಸಲು ಮುಂದಾಗಿವೆ. ಈ ಹೋರಾಟಕ್ಕೆ ಕರ್ನಾಟಕ ಜನಶಕ್ತಿ ಸಂಘಟನೆ ಬೆಂಬಲ ವ್ಯಕ್ತಪಡಿಸಿದೆ.

ಈ ದಲಿತ ಎಸ್ಟೇಟ್ ಕಾರ್ಮಿಕರು ಸರಕಾರಿ ಜಾಗದಲ್ಲಿ ಟೆಂಟ್ ನಿರ್ಮಿಸಿ, ವಾಸ ಮಾಡುವುದನ್ನು ಸಾವಿರಾರು ಎಕರೆ ಭೂಮಿಯನ್ನು ಹೊಂದಿರುವ ಸ್ಥಳೀಯ ಭೂಮಾಲೀಕನಾಗಿರುವ ಗುರು ಹೆಬ್ಬಾರ್ ವಿರೋಧಿಸುತ್ತಿದ್ದು ಮಾತ್ರವಲ್ಲದೇ, ದಲಿತರಿಗೆ ನಾನಾ ರೀತಿಯ ಕಿರುಕುಳವನ್ನು ನೀಡುತ್ತಿದ್ದಾನೆ. ಇದಕ್ಕಾಗಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ಜನಶಕ್ತಿಯ ಕೆ.ಎಲ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಆಟೋರಿಕ್ಷಾ ಚಾಲಕ ಮಂಜು, “ಕಳೆದ 40 ವರ್ಷಗಳಿಂದ ನಾವು ನಿವೇಶನಕ್ಕಾಗಿ  ಸಂಬಂಧಪಟ್ಟ ಇಲಾಖೆಗಳಿಗೆ ಅರ್ಜಿಗಳನ್ನು ಸಲ್ಲಿಸುತ್ತಲೇ ಇದ್ದೇವೆ. ಪ್ರತಿ ವರ್ಷವೂ ಗ್ರಾಮ ಪಂಚಾಯತ್‌ಗಳಿಗೆ ಅರ್ಜಿಗಳನ್ನು ಹಾಕಿದ್ದೇವೆ, ಆದರೆ ಯಾವುದೇ ಫಲಿತಾಂಶ ಸಿಕ್ಕಿಲ್ಲ. ಸರ್ಕಾರದಿಂದ ನಮಗೆ ಯಾವುದೇ ಸೌಲಭ್ಯಗಳು ಸಿಗಲಿಲ್ಲ. ಹಾಗಾಗಿ, ಇಲ್ಲಿ ಸುಮಾರು ಎರಡು ಎಕರೆ ಕಂದಾಯ ಜಾಗವಿದೆ ಎಂದು ತಿಳಿದುಬಂದಿದೆ. ನಾವು ಮೊದಲು ಇಲ್ಲಿ ಶೆಡ್‌ಗಳನ್ನು ಹಾಕಿಕೊಂಡು, ಮುಂದಿನ ದಿನಗಳಲ್ಲಿ ಮನೆಗಳನ್ನು ಕಟ್ಟಿಕೊಳ್ಳಲು ಯೋಜಿಸಿದ್ದೇವೆ” ಎಂದು ಅಳಲು ತೋಡಿಕೊಂಡರು. “ಇಲ್ಲಿಯವರೆಗೆ ನಾವೆಲ್ಲರೂ ಎಸ್ಟೇಟ್‌ಗಳಲ್ಲಿ ನೀಡಿದ ವಸತಿಗಳಲ್ಲಿ ವಾಸಿಸುತ್ತಿದ್ದೇವೆ. ಆದರೆ, ಕೆಲವರು ನಿವೃತ್ತಿ ಹೊಂದಿದ್ದು, ಎಸ್ಟೇಟ್ ಮಾಲೀಕರು ವಾಸಿಸಲು ಅವಕಾಶ ನೀಡುತ್ತಿಲ್ಲ. ತಿಂಗಳಿಗೆ 5000 ರೂಪಾಯಿ ಮನೆ ಬಾಡಿಗೆ ಕಟ್ಟಿ ಬದುಕುವುದು ನಮಗೆ ಅಸಾಧ್ಯ” ಎಂದು ಅವರು ಪ್ರಶ್ನಿಸಿದರು.

ಸರ್ಕಾರವು ವಸತಿ ಇಲ್ಲದವರಿಗೆ ವಸತಿ ಮತ್ತು ನಿವೇಶನ ಇಲ್ಲದವರಿಗೆ ನಿವೇಶನ ನೀಡಬೇಕು ಎಂದು ಹೇಳುತ್ತದೆ. ಆದರೆ, ನಮಗೆ ಇನ್ನೂ ನಿವೇಶನ ಸಿಕ್ಕಿಲ್ಲ. ಕೊಪ್ಪ ಕ್ಷೇತ್ರದ ಶಾಸಕ ರಾಜೇಗೌಡ ಅವರನ್ನು ಈ ಬಗ್ಗೆ ಕೇಳಿದಾಗ, “ಜಾಗ ಸಿಕ್ಕರೆ ನಿವೇಶನ ಕೊಡುತ್ತೇನೆ” ಎಂದು ಹೇಳಿದ್ದಾರೆ. ಈಗ ಜಾಗ ಸಿಕ್ಕಿರುವುದರಿಂದ, ಶಾಸಕರು ಈ ಜಾಗವನ್ನು ನಮಗೆ ದೊರಕುವಂತೆ ಮಾಡಬೇಕು ಎಂದು ಕುಟುಂಬಗಳು ಆಗ್ರಹಿಸಿವೆ. ಇನ್ನು, ಈ ಸ್ಥಳೀಯ ಭೂಮಾಲೀಕರಾದ ಹೆಬ್ಬಾರು ಮನೆತನದವರು ದಲಿತ ಕುಟುಂಬಗಳಿಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. “ಮೊದಲು ಅವರು ಬೇರೆಯವರಿಗೆ ಸೈಟ್ ಕೊಟ್ಟಿದ್ದೇವೆ ಎಂದು ಬೆದರಿಸಿದರು. ಈ ಜಾಗದಲ್ಲಿ ಎರಡು ದಿನಗಳ ಹಿಂದೆ ಬಾಳೆ ಗಿಡಗಳನ್ನು ನೆಟ್ಟು ಹೋಗಿದ್ದಾರೆ. ಆದರೆ, ಇದು ನಿಜಕ್ಕೂ ಸರ್ಕಾರಿ ಜಾಗ. ನಮಗೆ ಬೆದರಿಕೆ ಹಾಕಲು ಬಂದಿರುವರುವ ಭೂಮಾಲೀಕರಿಗೆ ಈಗಾಗಲೇ ನೂರಾರು ಎಕರೆ ಜಮೀನು ಇದೆ, ಅವರ ಮನೆಯಲ್ಲಿ ಹಿಂದೆ ಹಲವು ದಲಿತರು ಕೂಲಿಯಾಳುಗಳಾಗಿ ದುಡಿದಿದ್ದರೂ ಸರಿಯಾಗಿ ಸಂಬಳ ನೀಡಿಲ್ಲ. ಸ್ಥಳೀಯರನ್ನು ಹೆದರಿಸಿ ಕಡಿಮೆ ಹಣಕ್ಕೆ ಹಲವರ ಜಮೀನನ್ನು ಸಹ ಖರೀದಿಸಿದ್ದಾರೆ” ಎಂದು ಮಂಜು ದೂರಿದರು.

ಈ ಸಂಬಂಧ ಈಗಾಗಲೇ ತಹಶೀಲ್ದಾರ್ ಗಮನಕ್ಕೆ ತರಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಪಂಚಾಯತ್ ಅಧ್ಯಕ್ಷರು ಸಹ ಸ್ಥಳಕ್ಕೆ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸುವುದಾಗಿ ಹೇಳಿದ್ದಾರೆ. ಜಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ “ಏನೂ ಮಾಡಬೇಡಿ, ಹಾಗೆಯೇ ಇರಲಿ” ಎಂದು ಸೂಚಿಸಿ ಹೋಗಿದ್ದಾರೆ ಎಂದು ಈ ದಲಿತ ಕುಟುಂಬಗಳು ತಿಳಿಸಿವೆ. “ನಮಗೆ ನ್ಯಾಯ ಬೇಕು. ಸರ್ಕಾರಿ ಜಾಗವನ್ನು ಸ್ಥಳೀಯರು ಏಕೆ ವಿರೋಧಿಸಬೇಕು? ಬೇಕಾದರೆ ಸರ್ಕಾರ ಮಧ್ಯಪ್ರವೇಶ ಮಾಡಲಿ” ಎಂದು ದಲಿತ ಕುಟುಂಬಗಳು ಆಗ್ರಹಿಸಿವೆ. ಸರ್ಕಾರದ ಅಧಿಕೃತ ಆದೇಶದಂತೆ ಬಡವರಿಗೆ ನಿವೇಶನ, ಮನೆ ಸಿಗಬೇಕು ಎಂಬುದು ಅವರ ಬೇಡಿಕೆಯಾಗಿದೆ.

ಕಳೆದ ನಾಲ್ಕು ತಿಂಗಳ ಹಿಂದೆ ಸ್ಥಳದ ಜಿಪಿಎಸ್ ಮಾಡಿಕೊಂಡು ಹೋಗಿದ್ದು, ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದು ಹೇಳಲಾಗಿದೆ. ಆದರೆ, ಈ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಕುಟುಂಬಗಳು ಹೇಳಿವೆ. “4-5 ತಿಂಗಳ ಹಿಂದೆ ಜಿಪಿಎಸ್ ಮಾಡಲಾಗಿದೆ, ಆದರೆ 40 ವರ್ಷಗಳಿಂದ ನಾವು ಮನೆ ಮತ್ತು ಜಾಗವಿಲ್ಲದೆ ಅರ್ಜಿ ಹಾಕುತ್ತಲೇ ಇದ್ದೇವೆ. ಈಗ ಎಸ್ಟೇಟ್‌ನಲ್ಲಿ ಕೆಲವರು ನಿವೃತ್ತರಾಗಿದ್ದಾರೆ, ಇನ್ನು ಕೆಲವರು ಸದ್ಯದಲ್ಲೇ ನಿವೃತ್ತರಾಗಲಿದ್ದಾರೆ. ಅನಾರೋಗ್ಯದಿಂದ ಮನೆಯಲ್ಲಿ ಕುಳಿತರೆ ಎಸ್ಟೇಟ್ ಮಾಲೀಕರು ಜಾಗ ಖಾಲಿ ಮಾಡುವಂತೆ ಬೆದರಿಸುತ್ತಿದ್ದಾರೆ” ಎಂದು ಅಳಲು ತೋಡಿಕೊಂಡರು. “ನಾವೆಲ್ಲರೂ ಬಾಳೆಹೊನ್ನೂರು ಟೀ ಎಸ್ಟೇಟ್‌ನಲ್ಲಿ ದುಡಿಯುತ್ತಿದ್ದೇವೆ. ಶತಮಾನದಿಂದ ನಮಗೆ ಮನೆ ಎಂಬುದೇ ಇಲ್ಲ. ಅದಕ್ಕಾಗಿಯೇ ಈ ಜಾಗದಲ್ಲಿ ಬಿಡಾರ ಹೂಡಿದ್ದೇವೆ. ನಾವೆಲ್ಲ ಬಡವರು. ಇದಕ್ಕಾಗಿ ನಾಗರಿಕರು. ಸಂಘಟನೆಗಳು ನಮಗೆ ಬೆಂಬಲ ನೀಡಬೇಕು. ನಮ್ಮದೇ ಎಂದು ಒಂದು ಜಾಗವಿರಲಿಲ್ಲ. ಈಗಲಾದರೂ ನಾವು ಸ್ವತಂತ್ರವಾಗಿ ಬದುಕಲು ಇಲ್ಲಿ ಜಾಗ ಕೊಡಬೇಕು” ಎಂದು ದಲಿತ ಕುಟುಂಬಗಳು ಮನವಿ ಮಾಡಿವೆ.

ಧರ್ಮಸ್ಥಳ ಪ್ರಕರಣ: ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸಲಿ, ಅಪರಾಧಿಗಳಿಗೆ ಶಿಕ್ಷೆಯಾಗಲಿ; ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ವೇದಿಕೆಯ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...