Homeಕರ್ನಾಟಕಕೊಪ್ಪ: ನಿವೇಶನರಹಿತ ಎಸ್ಟೇಟ್ ಕಾರ್ಮಿಕರಿಂದ ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಾಣ: ಭೂಮಾಲೀಕ ರಾಘವೇಂದ್ರ ಗುರು ಹೆಬ್ಬಾರ್‌ಗೆ...

ಕೊಪ್ಪ: ನಿವೇಶನರಹಿತ ಎಸ್ಟೇಟ್ ಕಾರ್ಮಿಕರಿಂದ ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಾಣ: ಭೂಮಾಲೀಕ ರಾಘವೇಂದ್ರ ಗುರು ಹೆಬ್ಬಾರ್‌ಗೆ ಕೆ.ಎಲ್.ಅಶೋಕ್ ಎಚ್ಚರಿಕೆ-video

- Advertisement -
- Advertisement -

ಕೊಪ್ಪ: ಕೊಪ್ಪ ತಾಲೂಕಿನ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಲಿತ ಕಾರ್ಮಿಕ ಕುಟುಂಬಗಳು ನಿವೇಶನಕ್ಕಾಗಿ ತೀವ್ರ ಹೋರಾಟಕ್ಕಿಳಿದಿದ್ದು, ಜಯಪುರದಿಂದ 6 ಕಿ.ಮೀ. ದೂರದಲ್ಲಿರುವ ಸರ್ಕಾರಿ ಜಾಗದಲ್ಲಿ ವಾಸ ಮಾಡುವುದಕ್ಕಾಗಿ ಟೆಂಟ್‌ಗಳನ್ನು ನಿರ್ಮಿಸಿಕೊಂಡಿದ್ದಾರೆ. ದಶಕಗಳಿಂದ ನಿವೇಶನಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ, ಭೂಹೀನ ಹಾಗೂ ವಸತಿಹೀನರಾಗಿರುವ ಸುಮಾರು 40 ದಲಿತ ಎಸ್ಟೇಟ್ ಕಾರ್ಮಿಕ ಕುಟುಂಬಗಳು ಇದೀಗ ಸ್ವತಃ ತಾವೇ ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಸಿಸಲು ಮುಂದಾಗಿವೆ. ಈ ಹೋರಾಟಕ್ಕೆ ಕರ್ನಾಟಕ ಜನಶಕ್ತಿ ಸಂಘಟನೆ ಬೆಂಬಲ ವ್ಯಕ್ತಪಡಿಸಿದೆ.

ಈ ದಲಿತ ಎಸ್ಟೇಟ್ ಕಾರ್ಮಿಕರು ಸರಕಾರಿ ಜಾಗದಲ್ಲಿ ಟೆಂಟ್ ನಿರ್ಮಿಸಿ, ವಾಸ ಮಾಡುವುದನ್ನು ಸಾವಿರಾರು ಎಕರೆ ಭೂಮಿಯನ್ನು ಹೊಂದಿರುವ ಸ್ಥಳೀಯ ಭೂಮಾಲೀಕನಾಗಿರುವ ಗುರು ಹೆಬ್ಬಾರ್ ವಿರೋಧಿಸುತ್ತಿದ್ದು ಮಾತ್ರವಲ್ಲದೇ, ದಲಿತರಿಗೆ ನಾನಾ ರೀತಿಯ ಕಿರುಕುಳವನ್ನು ನೀಡುತ್ತಿದ್ದಾನೆ. ಇದಕ್ಕಾಗಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ಜನಶಕ್ತಿಯ ಕೆ.ಎಲ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಆಟೋರಿಕ್ಷಾ ಚಾಲಕ ಮಂಜು, “ಕಳೆದ 40 ವರ್ಷಗಳಿಂದ ನಾವು ನಿವೇಶನಕ್ಕಾಗಿ  ಸಂಬಂಧಪಟ್ಟ ಇಲಾಖೆಗಳಿಗೆ ಅರ್ಜಿಗಳನ್ನು ಸಲ್ಲಿಸುತ್ತಲೇ ಇದ್ದೇವೆ. ಪ್ರತಿ ವರ್ಷವೂ ಗ್ರಾಮ ಪಂಚಾಯತ್‌ಗಳಿಗೆ ಅರ್ಜಿಗಳನ್ನು ಹಾಕಿದ್ದೇವೆ, ಆದರೆ ಯಾವುದೇ ಫಲಿತಾಂಶ ಸಿಕ್ಕಿಲ್ಲ. ಸರ್ಕಾರದಿಂದ ನಮಗೆ ಯಾವುದೇ ಸೌಲಭ್ಯಗಳು ಸಿಗಲಿಲ್ಲ. ಹಾಗಾಗಿ, ಇಲ್ಲಿ ಸುಮಾರು ಎರಡು ಎಕರೆ ಕಂದಾಯ ಜಾಗವಿದೆ ಎಂದು ತಿಳಿದುಬಂದಿದೆ. ನಾವು ಮೊದಲು ಇಲ್ಲಿ ಶೆಡ್‌ಗಳನ್ನು ಹಾಕಿಕೊಂಡು, ಮುಂದಿನ ದಿನಗಳಲ್ಲಿ ಮನೆಗಳನ್ನು ಕಟ್ಟಿಕೊಳ್ಳಲು ಯೋಜಿಸಿದ್ದೇವೆ” ಎಂದು ಅಳಲು ತೋಡಿಕೊಂಡರು. “ಇಲ್ಲಿಯವರೆಗೆ ನಾವೆಲ್ಲರೂ ಎಸ್ಟೇಟ್‌ಗಳಲ್ಲಿ ನೀಡಿದ ವಸತಿಗಳಲ್ಲಿ ವಾಸಿಸುತ್ತಿದ್ದೇವೆ. ಆದರೆ, ಕೆಲವರು ನಿವೃತ್ತಿ ಹೊಂದಿದ್ದು, ಎಸ್ಟೇಟ್ ಮಾಲೀಕರು ವಾಸಿಸಲು ಅವಕಾಶ ನೀಡುತ್ತಿಲ್ಲ. ತಿಂಗಳಿಗೆ 5000 ರೂಪಾಯಿ ಮನೆ ಬಾಡಿಗೆ ಕಟ್ಟಿ ಬದುಕುವುದು ನಮಗೆ ಅಸಾಧ್ಯ” ಎಂದು ಅವರು ಪ್ರಶ್ನಿಸಿದರು.

ಸರ್ಕಾರವು ವಸತಿ ಇಲ್ಲದವರಿಗೆ ವಸತಿ ಮತ್ತು ನಿವೇಶನ ಇಲ್ಲದವರಿಗೆ ನಿವೇಶನ ನೀಡಬೇಕು ಎಂದು ಹೇಳುತ್ತದೆ. ಆದರೆ, ನಮಗೆ ಇನ್ನೂ ನಿವೇಶನ ಸಿಕ್ಕಿಲ್ಲ. ಕೊಪ್ಪ ಕ್ಷೇತ್ರದ ಶಾಸಕ ರಾಜೇಗೌಡ ಅವರನ್ನು ಈ ಬಗ್ಗೆ ಕೇಳಿದಾಗ, “ಜಾಗ ಸಿಕ್ಕರೆ ನಿವೇಶನ ಕೊಡುತ್ತೇನೆ” ಎಂದು ಹೇಳಿದ್ದಾರೆ. ಈಗ ಜಾಗ ಸಿಕ್ಕಿರುವುದರಿಂದ, ಶಾಸಕರು ಈ ಜಾಗವನ್ನು ನಮಗೆ ದೊರಕುವಂತೆ ಮಾಡಬೇಕು ಎಂದು ಕುಟುಂಬಗಳು ಆಗ್ರಹಿಸಿವೆ. ಇನ್ನು, ಈ ಸ್ಥಳೀಯ ಭೂಮಾಲೀಕರಾದ ಹೆಬ್ಬಾರು ಮನೆತನದವರು ದಲಿತ ಕುಟುಂಬಗಳಿಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. “ಮೊದಲು ಅವರು ಬೇರೆಯವರಿಗೆ ಸೈಟ್ ಕೊಟ್ಟಿದ್ದೇವೆ ಎಂದು ಬೆದರಿಸಿದರು. ಈ ಜಾಗದಲ್ಲಿ ಎರಡು ದಿನಗಳ ಹಿಂದೆ ಬಾಳೆ ಗಿಡಗಳನ್ನು ನೆಟ್ಟು ಹೋಗಿದ್ದಾರೆ. ಆದರೆ, ಇದು ನಿಜಕ್ಕೂ ಸರ್ಕಾರಿ ಜಾಗ. ನಮಗೆ ಬೆದರಿಕೆ ಹಾಕಲು ಬಂದಿರುವರುವ ಭೂಮಾಲೀಕರಿಗೆ ಈಗಾಗಲೇ ನೂರಾರು ಎಕರೆ ಜಮೀನು ಇದೆ, ಅವರ ಮನೆಯಲ್ಲಿ ಹಿಂದೆ ಹಲವು ದಲಿತರು ಕೂಲಿಯಾಳುಗಳಾಗಿ ದುಡಿದಿದ್ದರೂ ಸರಿಯಾಗಿ ಸಂಬಳ ನೀಡಿಲ್ಲ. ಸ್ಥಳೀಯರನ್ನು ಹೆದರಿಸಿ ಕಡಿಮೆ ಹಣಕ್ಕೆ ಹಲವರ ಜಮೀನನ್ನು ಸಹ ಖರೀದಿಸಿದ್ದಾರೆ” ಎಂದು ಮಂಜು ದೂರಿದರು.

ಈ ಸಂಬಂಧ ಈಗಾಗಲೇ ತಹಶೀಲ್ದಾರ್ ಗಮನಕ್ಕೆ ತರಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಪಂಚಾಯತ್ ಅಧ್ಯಕ್ಷರು ಸಹ ಸ್ಥಳಕ್ಕೆ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸುವುದಾಗಿ ಹೇಳಿದ್ದಾರೆ. ಜಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ “ಏನೂ ಮಾಡಬೇಡಿ, ಹಾಗೆಯೇ ಇರಲಿ” ಎಂದು ಸೂಚಿಸಿ ಹೋಗಿದ್ದಾರೆ ಎಂದು ಈ ದಲಿತ ಕುಟುಂಬಗಳು ತಿಳಿಸಿವೆ. “ನಮಗೆ ನ್ಯಾಯ ಬೇಕು. ಸರ್ಕಾರಿ ಜಾಗವನ್ನು ಸ್ಥಳೀಯರು ಏಕೆ ವಿರೋಧಿಸಬೇಕು? ಬೇಕಾದರೆ ಸರ್ಕಾರ ಮಧ್ಯಪ್ರವೇಶ ಮಾಡಲಿ” ಎಂದು ದಲಿತ ಕುಟುಂಬಗಳು ಆಗ್ರಹಿಸಿವೆ. ಸರ್ಕಾರದ ಅಧಿಕೃತ ಆದೇಶದಂತೆ ಬಡವರಿಗೆ ನಿವೇಶನ, ಮನೆ ಸಿಗಬೇಕು ಎಂಬುದು ಅವರ ಬೇಡಿಕೆಯಾಗಿದೆ.

ಕಳೆದ ನಾಲ್ಕು ತಿಂಗಳ ಹಿಂದೆ ಸ್ಥಳದ ಜಿಪಿಎಸ್ ಮಾಡಿಕೊಂಡು ಹೋಗಿದ್ದು, ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದು ಹೇಳಲಾಗಿದೆ. ಆದರೆ, ಈ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಕುಟುಂಬಗಳು ಹೇಳಿವೆ. “4-5 ತಿಂಗಳ ಹಿಂದೆ ಜಿಪಿಎಸ್ ಮಾಡಲಾಗಿದೆ, ಆದರೆ 40 ವರ್ಷಗಳಿಂದ ನಾವು ಮನೆ ಮತ್ತು ಜಾಗವಿಲ್ಲದೆ ಅರ್ಜಿ ಹಾಕುತ್ತಲೇ ಇದ್ದೇವೆ. ಈಗ ಎಸ್ಟೇಟ್‌ನಲ್ಲಿ ಕೆಲವರು ನಿವೃತ್ತರಾಗಿದ್ದಾರೆ, ಇನ್ನು ಕೆಲವರು ಸದ್ಯದಲ್ಲೇ ನಿವೃತ್ತರಾಗಲಿದ್ದಾರೆ. ಅನಾರೋಗ್ಯದಿಂದ ಮನೆಯಲ್ಲಿ ಕುಳಿತರೆ ಎಸ್ಟೇಟ್ ಮಾಲೀಕರು ಜಾಗ ಖಾಲಿ ಮಾಡುವಂತೆ ಬೆದರಿಸುತ್ತಿದ್ದಾರೆ” ಎಂದು ಅಳಲು ತೋಡಿಕೊಂಡರು. “ನಾವೆಲ್ಲರೂ ಬಾಳೆಹೊನ್ನೂರು ಟೀ ಎಸ್ಟೇಟ್‌ನಲ್ಲಿ ದುಡಿಯುತ್ತಿದ್ದೇವೆ. ಶತಮಾನದಿಂದ ನಮಗೆ ಮನೆ ಎಂಬುದೇ ಇಲ್ಲ. ಅದಕ್ಕಾಗಿಯೇ ಈ ಜಾಗದಲ್ಲಿ ಬಿಡಾರ ಹೂಡಿದ್ದೇವೆ. ನಾವೆಲ್ಲ ಬಡವರು. ಇದಕ್ಕಾಗಿ ನಾಗರಿಕರು. ಸಂಘಟನೆಗಳು ನಮಗೆ ಬೆಂಬಲ ನೀಡಬೇಕು. ನಮ್ಮದೇ ಎಂದು ಒಂದು ಜಾಗವಿರಲಿಲ್ಲ. ಈಗಲಾದರೂ ನಾವು ಸ್ವತಂತ್ರವಾಗಿ ಬದುಕಲು ಇಲ್ಲಿ ಜಾಗ ಕೊಡಬೇಕು” ಎಂದು ದಲಿತ ಕುಟುಂಬಗಳು ಮನವಿ ಮಾಡಿವೆ.

ಧರ್ಮಸ್ಥಳ ಪ್ರಕರಣ: ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸಲಿ, ಅಪರಾಧಿಗಳಿಗೆ ಶಿಕ್ಷೆಯಾಗಲಿ; ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ವೇದಿಕೆಯ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...