Homeಕರ್ನಾಟಕಕೊಪ್ಪ: ನಿವೇಶನರಹಿತ ಎಸ್ಟೇಟ್ ಕಾರ್ಮಿಕರಿಂದ ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಾಣ: ಭೂಮಾಲೀಕ ರಾಘವೇಂದ್ರ ಗುರು ಹೆಬ್ಬಾರ್‌ಗೆ...

ಕೊಪ್ಪ: ನಿವೇಶನರಹಿತ ಎಸ್ಟೇಟ್ ಕಾರ್ಮಿಕರಿಂದ ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಾಣ: ಭೂಮಾಲೀಕ ರಾಘವೇಂದ್ರ ಗುರು ಹೆಬ್ಬಾರ್‌ಗೆ ಕೆ.ಎಲ್.ಅಶೋಕ್ ಎಚ್ಚರಿಕೆ-video

- Advertisement -
- Advertisement -

ಕೊಪ್ಪ: ಕೊಪ್ಪ ತಾಲೂಕಿನ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಲಿತ ಕಾರ್ಮಿಕ ಕುಟುಂಬಗಳು ನಿವೇಶನಕ್ಕಾಗಿ ತೀವ್ರ ಹೋರಾಟಕ್ಕಿಳಿದಿದ್ದು, ಜಯಪುರದಿಂದ 6 ಕಿ.ಮೀ. ದೂರದಲ್ಲಿರುವ ಸರ್ಕಾರಿ ಜಾಗದಲ್ಲಿ ವಾಸ ಮಾಡುವುದಕ್ಕಾಗಿ ಟೆಂಟ್‌ಗಳನ್ನು ನಿರ್ಮಿಸಿಕೊಂಡಿದ್ದಾರೆ. ದಶಕಗಳಿಂದ ನಿವೇಶನಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ, ಭೂಹೀನ ಹಾಗೂ ವಸತಿಹೀನರಾಗಿರುವ ಸುಮಾರು 40 ದಲಿತ ಎಸ್ಟೇಟ್ ಕಾರ್ಮಿಕ ಕುಟುಂಬಗಳು ಇದೀಗ ಸ್ವತಃ ತಾವೇ ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಸಿಸಲು ಮುಂದಾಗಿವೆ. ಈ ಹೋರಾಟಕ್ಕೆ ಕರ್ನಾಟಕ ಜನಶಕ್ತಿ ಸಂಘಟನೆ ಬೆಂಬಲ ವ್ಯಕ್ತಪಡಿಸಿದೆ.

ಈ ದಲಿತ ಎಸ್ಟೇಟ್ ಕಾರ್ಮಿಕರು ಸರಕಾರಿ ಜಾಗದಲ್ಲಿ ಟೆಂಟ್ ನಿರ್ಮಿಸಿ, ವಾಸ ಮಾಡುವುದನ್ನು ಸಾವಿರಾರು ಎಕರೆ ಭೂಮಿಯನ್ನು ಹೊಂದಿರುವ ಸ್ಥಳೀಯ ಭೂಮಾಲೀಕನಾಗಿರುವ ಗುರು ಹೆಬ್ಬಾರ್ ವಿರೋಧಿಸುತ್ತಿದ್ದು ಮಾತ್ರವಲ್ಲದೇ, ದಲಿತರಿಗೆ ನಾನಾ ರೀತಿಯ ಕಿರುಕುಳವನ್ನು ನೀಡುತ್ತಿದ್ದಾನೆ. ಇದಕ್ಕಾಗಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ಜನಶಕ್ತಿಯ ಕೆ.ಎಲ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಆಟೋರಿಕ್ಷಾ ಚಾಲಕ ಮಂಜು, “ಕಳೆದ 40 ವರ್ಷಗಳಿಂದ ನಾವು ನಿವೇಶನಕ್ಕಾಗಿ  ಸಂಬಂಧಪಟ್ಟ ಇಲಾಖೆಗಳಿಗೆ ಅರ್ಜಿಗಳನ್ನು ಸಲ್ಲಿಸುತ್ತಲೇ ಇದ್ದೇವೆ. ಪ್ರತಿ ವರ್ಷವೂ ಗ್ರಾಮ ಪಂಚಾಯತ್‌ಗಳಿಗೆ ಅರ್ಜಿಗಳನ್ನು ಹಾಕಿದ್ದೇವೆ, ಆದರೆ ಯಾವುದೇ ಫಲಿತಾಂಶ ಸಿಕ್ಕಿಲ್ಲ. ಸರ್ಕಾರದಿಂದ ನಮಗೆ ಯಾವುದೇ ಸೌಲಭ್ಯಗಳು ಸಿಗಲಿಲ್ಲ. ಹಾಗಾಗಿ, ಇಲ್ಲಿ ಸುಮಾರು ಎರಡು ಎಕರೆ ಕಂದಾಯ ಜಾಗವಿದೆ ಎಂದು ತಿಳಿದುಬಂದಿದೆ. ನಾವು ಮೊದಲು ಇಲ್ಲಿ ಶೆಡ್‌ಗಳನ್ನು ಹಾಕಿಕೊಂಡು, ಮುಂದಿನ ದಿನಗಳಲ್ಲಿ ಮನೆಗಳನ್ನು ಕಟ್ಟಿಕೊಳ್ಳಲು ಯೋಜಿಸಿದ್ದೇವೆ” ಎಂದು ಅಳಲು ತೋಡಿಕೊಂಡರು. “ಇಲ್ಲಿಯವರೆಗೆ ನಾವೆಲ್ಲರೂ ಎಸ್ಟೇಟ್‌ಗಳಲ್ಲಿ ನೀಡಿದ ವಸತಿಗಳಲ್ಲಿ ವಾಸಿಸುತ್ತಿದ್ದೇವೆ. ಆದರೆ, ಕೆಲವರು ನಿವೃತ್ತಿ ಹೊಂದಿದ್ದು, ಎಸ್ಟೇಟ್ ಮಾಲೀಕರು ವಾಸಿಸಲು ಅವಕಾಶ ನೀಡುತ್ತಿಲ್ಲ. ತಿಂಗಳಿಗೆ 5000 ರೂಪಾಯಿ ಮನೆ ಬಾಡಿಗೆ ಕಟ್ಟಿ ಬದುಕುವುದು ನಮಗೆ ಅಸಾಧ್ಯ” ಎಂದು ಅವರು ಪ್ರಶ್ನಿಸಿದರು.

ಸರ್ಕಾರವು ವಸತಿ ಇಲ್ಲದವರಿಗೆ ವಸತಿ ಮತ್ತು ನಿವೇಶನ ಇಲ್ಲದವರಿಗೆ ನಿವೇಶನ ನೀಡಬೇಕು ಎಂದು ಹೇಳುತ್ತದೆ. ಆದರೆ, ನಮಗೆ ಇನ್ನೂ ನಿವೇಶನ ಸಿಕ್ಕಿಲ್ಲ. ಕೊಪ್ಪ ಕ್ಷೇತ್ರದ ಶಾಸಕ ರಾಜೇಗೌಡ ಅವರನ್ನು ಈ ಬಗ್ಗೆ ಕೇಳಿದಾಗ, “ಜಾಗ ಸಿಕ್ಕರೆ ನಿವೇಶನ ಕೊಡುತ್ತೇನೆ” ಎಂದು ಹೇಳಿದ್ದಾರೆ. ಈಗ ಜಾಗ ಸಿಕ್ಕಿರುವುದರಿಂದ, ಶಾಸಕರು ಈ ಜಾಗವನ್ನು ನಮಗೆ ದೊರಕುವಂತೆ ಮಾಡಬೇಕು ಎಂದು ಕುಟುಂಬಗಳು ಆಗ್ರಹಿಸಿವೆ. ಇನ್ನು, ಈ ಸ್ಥಳೀಯ ಭೂಮಾಲೀಕರಾದ ಹೆಬ್ಬಾರು ಮನೆತನದವರು ದಲಿತ ಕುಟುಂಬಗಳಿಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. “ಮೊದಲು ಅವರು ಬೇರೆಯವರಿಗೆ ಸೈಟ್ ಕೊಟ್ಟಿದ್ದೇವೆ ಎಂದು ಬೆದರಿಸಿದರು. ಈ ಜಾಗದಲ್ಲಿ ಎರಡು ದಿನಗಳ ಹಿಂದೆ ಬಾಳೆ ಗಿಡಗಳನ್ನು ನೆಟ್ಟು ಹೋಗಿದ್ದಾರೆ. ಆದರೆ, ಇದು ನಿಜಕ್ಕೂ ಸರ್ಕಾರಿ ಜಾಗ. ನಮಗೆ ಬೆದರಿಕೆ ಹಾಕಲು ಬಂದಿರುವರುವ ಭೂಮಾಲೀಕರಿಗೆ ಈಗಾಗಲೇ ನೂರಾರು ಎಕರೆ ಜಮೀನು ಇದೆ, ಅವರ ಮನೆಯಲ್ಲಿ ಹಿಂದೆ ಹಲವು ದಲಿತರು ಕೂಲಿಯಾಳುಗಳಾಗಿ ದುಡಿದಿದ್ದರೂ ಸರಿಯಾಗಿ ಸಂಬಳ ನೀಡಿಲ್ಲ. ಸ್ಥಳೀಯರನ್ನು ಹೆದರಿಸಿ ಕಡಿಮೆ ಹಣಕ್ಕೆ ಹಲವರ ಜಮೀನನ್ನು ಸಹ ಖರೀದಿಸಿದ್ದಾರೆ” ಎಂದು ಮಂಜು ದೂರಿದರು.

ಈ ಸಂಬಂಧ ಈಗಾಗಲೇ ತಹಶೀಲ್ದಾರ್ ಗಮನಕ್ಕೆ ತರಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಪಂಚಾಯತ್ ಅಧ್ಯಕ್ಷರು ಸಹ ಸ್ಥಳಕ್ಕೆ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸುವುದಾಗಿ ಹೇಳಿದ್ದಾರೆ. ಜಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ “ಏನೂ ಮಾಡಬೇಡಿ, ಹಾಗೆಯೇ ಇರಲಿ” ಎಂದು ಸೂಚಿಸಿ ಹೋಗಿದ್ದಾರೆ ಎಂದು ಈ ದಲಿತ ಕುಟುಂಬಗಳು ತಿಳಿಸಿವೆ. “ನಮಗೆ ನ್ಯಾಯ ಬೇಕು. ಸರ್ಕಾರಿ ಜಾಗವನ್ನು ಸ್ಥಳೀಯರು ಏಕೆ ವಿರೋಧಿಸಬೇಕು? ಬೇಕಾದರೆ ಸರ್ಕಾರ ಮಧ್ಯಪ್ರವೇಶ ಮಾಡಲಿ” ಎಂದು ದಲಿತ ಕುಟುಂಬಗಳು ಆಗ್ರಹಿಸಿವೆ. ಸರ್ಕಾರದ ಅಧಿಕೃತ ಆದೇಶದಂತೆ ಬಡವರಿಗೆ ನಿವೇಶನ, ಮನೆ ಸಿಗಬೇಕು ಎಂಬುದು ಅವರ ಬೇಡಿಕೆಯಾಗಿದೆ.

ಕಳೆದ ನಾಲ್ಕು ತಿಂಗಳ ಹಿಂದೆ ಸ್ಥಳದ ಜಿಪಿಎಸ್ ಮಾಡಿಕೊಂಡು ಹೋಗಿದ್ದು, ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದು ಹೇಳಲಾಗಿದೆ. ಆದರೆ, ಈ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಕುಟುಂಬಗಳು ಹೇಳಿವೆ. “4-5 ತಿಂಗಳ ಹಿಂದೆ ಜಿಪಿಎಸ್ ಮಾಡಲಾಗಿದೆ, ಆದರೆ 40 ವರ್ಷಗಳಿಂದ ನಾವು ಮನೆ ಮತ್ತು ಜಾಗವಿಲ್ಲದೆ ಅರ್ಜಿ ಹಾಕುತ್ತಲೇ ಇದ್ದೇವೆ. ಈಗ ಎಸ್ಟೇಟ್‌ನಲ್ಲಿ ಕೆಲವರು ನಿವೃತ್ತರಾಗಿದ್ದಾರೆ, ಇನ್ನು ಕೆಲವರು ಸದ್ಯದಲ್ಲೇ ನಿವೃತ್ತರಾಗಲಿದ್ದಾರೆ. ಅನಾರೋಗ್ಯದಿಂದ ಮನೆಯಲ್ಲಿ ಕುಳಿತರೆ ಎಸ್ಟೇಟ್ ಮಾಲೀಕರು ಜಾಗ ಖಾಲಿ ಮಾಡುವಂತೆ ಬೆದರಿಸುತ್ತಿದ್ದಾರೆ” ಎಂದು ಅಳಲು ತೋಡಿಕೊಂಡರು. “ನಾವೆಲ್ಲರೂ ಬಾಳೆಹೊನ್ನೂರು ಟೀ ಎಸ್ಟೇಟ್‌ನಲ್ಲಿ ದುಡಿಯುತ್ತಿದ್ದೇವೆ. ಶತಮಾನದಿಂದ ನಮಗೆ ಮನೆ ಎಂಬುದೇ ಇಲ್ಲ. ಅದಕ್ಕಾಗಿಯೇ ಈ ಜಾಗದಲ್ಲಿ ಬಿಡಾರ ಹೂಡಿದ್ದೇವೆ. ನಾವೆಲ್ಲ ಬಡವರು. ಇದಕ್ಕಾಗಿ ನಾಗರಿಕರು. ಸಂಘಟನೆಗಳು ನಮಗೆ ಬೆಂಬಲ ನೀಡಬೇಕು. ನಮ್ಮದೇ ಎಂದು ಒಂದು ಜಾಗವಿರಲಿಲ್ಲ. ಈಗಲಾದರೂ ನಾವು ಸ್ವತಂತ್ರವಾಗಿ ಬದುಕಲು ಇಲ್ಲಿ ಜಾಗ ಕೊಡಬೇಕು” ಎಂದು ದಲಿತ ಕುಟುಂಬಗಳು ಮನವಿ ಮಾಡಿವೆ.

ಧರ್ಮಸ್ಥಳ ಪ್ರಕರಣ: ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸಲಿ, ಅಪರಾಧಿಗಳಿಗೆ ಶಿಕ್ಷೆಯಾಗಲಿ; ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ವೇದಿಕೆಯ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...