Homeಕರ್ನಾಟಕಕೊಪ್ಪ: ನಿವೇಶನರಹಿತ ಎಸ್ಟೇಟ್ ಕಾರ್ಮಿಕರಿಂದ ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಾಣ: ಭೂಮಾಲೀಕ ರಾಘವೇಂದ್ರ ಗುರು ಹೆಬ್ಬಾರ್‌ಗೆ...

ಕೊಪ್ಪ: ನಿವೇಶನರಹಿತ ಎಸ್ಟೇಟ್ ಕಾರ್ಮಿಕರಿಂದ ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಾಣ: ಭೂಮಾಲೀಕ ರಾಘವೇಂದ್ರ ಗುರು ಹೆಬ್ಬಾರ್‌ಗೆ ಕೆ.ಎಲ್.ಅಶೋಕ್ ಎಚ್ಚರಿಕೆ-video

- Advertisement -
- Advertisement -

ಕೊಪ್ಪ: ಕೊಪ್ಪ ತಾಲೂಕಿನ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಲಿತ ಕಾರ್ಮಿಕ ಕುಟುಂಬಗಳು ನಿವೇಶನಕ್ಕಾಗಿ ತೀವ್ರ ಹೋರಾಟಕ್ಕಿಳಿದಿದ್ದು, ಜಯಪುರದಿಂದ 6 ಕಿ.ಮೀ. ದೂರದಲ್ಲಿರುವ ಸರ್ಕಾರಿ ಜಾಗದಲ್ಲಿ ವಾಸ ಮಾಡುವುದಕ್ಕಾಗಿ ಟೆಂಟ್‌ಗಳನ್ನು ನಿರ್ಮಿಸಿಕೊಂಡಿದ್ದಾರೆ. ದಶಕಗಳಿಂದ ನಿವೇಶನಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ, ಭೂಹೀನ ಹಾಗೂ ವಸತಿಹೀನರಾಗಿರುವ ಸುಮಾರು 40 ದಲಿತ ಎಸ್ಟೇಟ್ ಕಾರ್ಮಿಕ ಕುಟುಂಬಗಳು ಇದೀಗ ಸ್ವತಃ ತಾವೇ ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಸಿಸಲು ಮುಂದಾಗಿವೆ. ಈ ಹೋರಾಟಕ್ಕೆ ಕರ್ನಾಟಕ ಜನಶಕ್ತಿ ಸಂಘಟನೆ ಬೆಂಬಲ ವ್ಯಕ್ತಪಡಿಸಿದೆ.

ಈ ದಲಿತ ಎಸ್ಟೇಟ್ ಕಾರ್ಮಿಕರು ಸರಕಾರಿ ಜಾಗದಲ್ಲಿ ಟೆಂಟ್ ನಿರ್ಮಿಸಿ, ವಾಸ ಮಾಡುವುದನ್ನು ಸಾವಿರಾರು ಎಕರೆ ಭೂಮಿಯನ್ನು ಹೊಂದಿರುವ ಸ್ಥಳೀಯ ಭೂಮಾಲೀಕನಾಗಿರುವ ಗುರು ಹೆಬ್ಬಾರ್ ವಿರೋಧಿಸುತ್ತಿದ್ದು ಮಾತ್ರವಲ್ಲದೇ, ದಲಿತರಿಗೆ ನಾನಾ ರೀತಿಯ ಕಿರುಕುಳವನ್ನು ನೀಡುತ್ತಿದ್ದಾನೆ. ಇದಕ್ಕಾಗಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ಜನಶಕ್ತಿಯ ಕೆ.ಎಲ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಆಟೋರಿಕ್ಷಾ ಚಾಲಕ ಮಂಜು, “ಕಳೆದ 40 ವರ್ಷಗಳಿಂದ ನಾವು ನಿವೇಶನಕ್ಕಾಗಿ  ಸಂಬಂಧಪಟ್ಟ ಇಲಾಖೆಗಳಿಗೆ ಅರ್ಜಿಗಳನ್ನು ಸಲ್ಲಿಸುತ್ತಲೇ ಇದ್ದೇವೆ. ಪ್ರತಿ ವರ್ಷವೂ ಗ್ರಾಮ ಪಂಚಾಯತ್‌ಗಳಿಗೆ ಅರ್ಜಿಗಳನ್ನು ಹಾಕಿದ್ದೇವೆ, ಆದರೆ ಯಾವುದೇ ಫಲಿತಾಂಶ ಸಿಕ್ಕಿಲ್ಲ. ಸರ್ಕಾರದಿಂದ ನಮಗೆ ಯಾವುದೇ ಸೌಲಭ್ಯಗಳು ಸಿಗಲಿಲ್ಲ. ಹಾಗಾಗಿ, ಇಲ್ಲಿ ಸುಮಾರು ಎರಡು ಎಕರೆ ಕಂದಾಯ ಜಾಗವಿದೆ ಎಂದು ತಿಳಿದುಬಂದಿದೆ. ನಾವು ಮೊದಲು ಇಲ್ಲಿ ಶೆಡ್‌ಗಳನ್ನು ಹಾಕಿಕೊಂಡು, ಮುಂದಿನ ದಿನಗಳಲ್ಲಿ ಮನೆಗಳನ್ನು ಕಟ್ಟಿಕೊಳ್ಳಲು ಯೋಜಿಸಿದ್ದೇವೆ” ಎಂದು ಅಳಲು ತೋಡಿಕೊಂಡರು. “ಇಲ್ಲಿಯವರೆಗೆ ನಾವೆಲ್ಲರೂ ಎಸ್ಟೇಟ್‌ಗಳಲ್ಲಿ ನೀಡಿದ ವಸತಿಗಳಲ್ಲಿ ವಾಸಿಸುತ್ತಿದ್ದೇವೆ. ಆದರೆ, ಕೆಲವರು ನಿವೃತ್ತಿ ಹೊಂದಿದ್ದು, ಎಸ್ಟೇಟ್ ಮಾಲೀಕರು ವಾಸಿಸಲು ಅವಕಾಶ ನೀಡುತ್ತಿಲ್ಲ. ತಿಂಗಳಿಗೆ 5000 ರೂಪಾಯಿ ಮನೆ ಬಾಡಿಗೆ ಕಟ್ಟಿ ಬದುಕುವುದು ನಮಗೆ ಅಸಾಧ್ಯ” ಎಂದು ಅವರು ಪ್ರಶ್ನಿಸಿದರು.

ಸರ್ಕಾರವು ವಸತಿ ಇಲ್ಲದವರಿಗೆ ವಸತಿ ಮತ್ತು ನಿವೇಶನ ಇಲ್ಲದವರಿಗೆ ನಿವೇಶನ ನೀಡಬೇಕು ಎಂದು ಹೇಳುತ್ತದೆ. ಆದರೆ, ನಮಗೆ ಇನ್ನೂ ನಿವೇಶನ ಸಿಕ್ಕಿಲ್ಲ. ಕೊಪ್ಪ ಕ್ಷೇತ್ರದ ಶಾಸಕ ರಾಜೇಗೌಡ ಅವರನ್ನು ಈ ಬಗ್ಗೆ ಕೇಳಿದಾಗ, “ಜಾಗ ಸಿಕ್ಕರೆ ನಿವೇಶನ ಕೊಡುತ್ತೇನೆ” ಎಂದು ಹೇಳಿದ್ದಾರೆ. ಈಗ ಜಾಗ ಸಿಕ್ಕಿರುವುದರಿಂದ, ಶಾಸಕರು ಈ ಜಾಗವನ್ನು ನಮಗೆ ದೊರಕುವಂತೆ ಮಾಡಬೇಕು ಎಂದು ಕುಟುಂಬಗಳು ಆಗ್ರಹಿಸಿವೆ. ಇನ್ನು, ಈ ಸ್ಥಳೀಯ ಭೂಮಾಲೀಕರಾದ ಹೆಬ್ಬಾರು ಮನೆತನದವರು ದಲಿತ ಕುಟುಂಬಗಳಿಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. “ಮೊದಲು ಅವರು ಬೇರೆಯವರಿಗೆ ಸೈಟ್ ಕೊಟ್ಟಿದ್ದೇವೆ ಎಂದು ಬೆದರಿಸಿದರು. ಈ ಜಾಗದಲ್ಲಿ ಎರಡು ದಿನಗಳ ಹಿಂದೆ ಬಾಳೆ ಗಿಡಗಳನ್ನು ನೆಟ್ಟು ಹೋಗಿದ್ದಾರೆ. ಆದರೆ, ಇದು ನಿಜಕ್ಕೂ ಸರ್ಕಾರಿ ಜಾಗ. ನಮಗೆ ಬೆದರಿಕೆ ಹಾಕಲು ಬಂದಿರುವರುವ ಭೂಮಾಲೀಕರಿಗೆ ಈಗಾಗಲೇ ನೂರಾರು ಎಕರೆ ಜಮೀನು ಇದೆ, ಅವರ ಮನೆಯಲ್ಲಿ ಹಿಂದೆ ಹಲವು ದಲಿತರು ಕೂಲಿಯಾಳುಗಳಾಗಿ ದುಡಿದಿದ್ದರೂ ಸರಿಯಾಗಿ ಸಂಬಳ ನೀಡಿಲ್ಲ. ಸ್ಥಳೀಯರನ್ನು ಹೆದರಿಸಿ ಕಡಿಮೆ ಹಣಕ್ಕೆ ಹಲವರ ಜಮೀನನ್ನು ಸಹ ಖರೀದಿಸಿದ್ದಾರೆ” ಎಂದು ಮಂಜು ದೂರಿದರು.

ಈ ಸಂಬಂಧ ಈಗಾಗಲೇ ತಹಶೀಲ್ದಾರ್ ಗಮನಕ್ಕೆ ತರಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಪಂಚಾಯತ್ ಅಧ್ಯಕ್ಷರು ಸಹ ಸ್ಥಳಕ್ಕೆ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸುವುದಾಗಿ ಹೇಳಿದ್ದಾರೆ. ಜಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ “ಏನೂ ಮಾಡಬೇಡಿ, ಹಾಗೆಯೇ ಇರಲಿ” ಎಂದು ಸೂಚಿಸಿ ಹೋಗಿದ್ದಾರೆ ಎಂದು ಈ ದಲಿತ ಕುಟುಂಬಗಳು ತಿಳಿಸಿವೆ. “ನಮಗೆ ನ್ಯಾಯ ಬೇಕು. ಸರ್ಕಾರಿ ಜಾಗವನ್ನು ಸ್ಥಳೀಯರು ಏಕೆ ವಿರೋಧಿಸಬೇಕು? ಬೇಕಾದರೆ ಸರ್ಕಾರ ಮಧ್ಯಪ್ರವೇಶ ಮಾಡಲಿ” ಎಂದು ದಲಿತ ಕುಟುಂಬಗಳು ಆಗ್ರಹಿಸಿವೆ. ಸರ್ಕಾರದ ಅಧಿಕೃತ ಆದೇಶದಂತೆ ಬಡವರಿಗೆ ನಿವೇಶನ, ಮನೆ ಸಿಗಬೇಕು ಎಂಬುದು ಅವರ ಬೇಡಿಕೆಯಾಗಿದೆ.

ಕಳೆದ ನಾಲ್ಕು ತಿಂಗಳ ಹಿಂದೆ ಸ್ಥಳದ ಜಿಪಿಎಸ್ ಮಾಡಿಕೊಂಡು ಹೋಗಿದ್ದು, ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದು ಹೇಳಲಾಗಿದೆ. ಆದರೆ, ಈ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಕುಟುಂಬಗಳು ಹೇಳಿವೆ. “4-5 ತಿಂಗಳ ಹಿಂದೆ ಜಿಪಿಎಸ್ ಮಾಡಲಾಗಿದೆ, ಆದರೆ 40 ವರ್ಷಗಳಿಂದ ನಾವು ಮನೆ ಮತ್ತು ಜಾಗವಿಲ್ಲದೆ ಅರ್ಜಿ ಹಾಕುತ್ತಲೇ ಇದ್ದೇವೆ. ಈಗ ಎಸ್ಟೇಟ್‌ನಲ್ಲಿ ಕೆಲವರು ನಿವೃತ್ತರಾಗಿದ್ದಾರೆ, ಇನ್ನು ಕೆಲವರು ಸದ್ಯದಲ್ಲೇ ನಿವೃತ್ತರಾಗಲಿದ್ದಾರೆ. ಅನಾರೋಗ್ಯದಿಂದ ಮನೆಯಲ್ಲಿ ಕುಳಿತರೆ ಎಸ್ಟೇಟ್ ಮಾಲೀಕರು ಜಾಗ ಖಾಲಿ ಮಾಡುವಂತೆ ಬೆದರಿಸುತ್ತಿದ್ದಾರೆ” ಎಂದು ಅಳಲು ತೋಡಿಕೊಂಡರು. “ನಾವೆಲ್ಲರೂ ಬಾಳೆಹೊನ್ನೂರು ಟೀ ಎಸ್ಟೇಟ್‌ನಲ್ಲಿ ದುಡಿಯುತ್ತಿದ್ದೇವೆ. ಶತಮಾನದಿಂದ ನಮಗೆ ಮನೆ ಎಂಬುದೇ ಇಲ್ಲ. ಅದಕ್ಕಾಗಿಯೇ ಈ ಜಾಗದಲ್ಲಿ ಬಿಡಾರ ಹೂಡಿದ್ದೇವೆ. ನಾವೆಲ್ಲ ಬಡವರು. ಇದಕ್ಕಾಗಿ ನಾಗರಿಕರು. ಸಂಘಟನೆಗಳು ನಮಗೆ ಬೆಂಬಲ ನೀಡಬೇಕು. ನಮ್ಮದೇ ಎಂದು ಒಂದು ಜಾಗವಿರಲಿಲ್ಲ. ಈಗಲಾದರೂ ನಾವು ಸ್ವತಂತ್ರವಾಗಿ ಬದುಕಲು ಇಲ್ಲಿ ಜಾಗ ಕೊಡಬೇಕು” ಎಂದು ದಲಿತ ಕುಟುಂಬಗಳು ಮನವಿ ಮಾಡಿವೆ.

ಧರ್ಮಸ್ಥಳ ಪ್ರಕರಣ: ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸಲಿ, ಅಪರಾಧಿಗಳಿಗೆ ಶಿಕ್ಷೆಯಾಗಲಿ; ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ವೇದಿಕೆಯ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...