Homeಕರ್ನಾಟಕಕೊಪ್ಪಳ | ಮಾದಿಗ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ : ಪ್ರಕರಣ ದಾಖಲು

ಕೊಪ್ಪಳ | ಮಾದಿಗ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ : ಪ್ರಕರಣ ದಾಖಲು

- Advertisement -
- Advertisement -

‘ಮಾದಿಗ’ ಸಮುದಾಯದ ಯುವಕನೊಬ್ಬನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಕೊಪ್ಪಳ ತಾಲೂಕಿನ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ವರದಿಗಳು ಹೇಳಿವೆ.

ಸಂತ್ರಸ್ತ ಯುವಕನನ್ನು ಗುಡದಪ್ಪ ಮುಳ್ಳಣ್ಣ (21) ಎಂದು ಗುರುತಿಸಲಾಗಿದೆ. ಗ್ರಾಮದ ನಾಗನಗೌಡ, ಯಲ್ಲಪ್ಪ, ಭೀಮಪ್ಪ, ಹನುಮಗೌಡ , ಪ್ರಜ್ವಲ್ ಹಾಗೂ ನವೀನ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

“ಆರೋಪಿಗಳು ಮಾದಿಗ ಎಂಬ ಕಾರಣಕ್ಕೆ ಗುಡದಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಈ ದಿನ.ಕಾಮ್ ವರದಿ ಮಾಡಿದೆ.

“ಸೆ.9ರಂದು ಬೆಳಗ್ಗೆ ಗ್ರಾಮದ ಕಟ್ಟೆಯ ಮೇಲೆ ಕುಳಿತುಕೊಂಡು ಸಿಗರೇಟ್ ಸೇದುತ್ತಿದ್ದೆ. ಅಲ್ಲಿಗೆ ಬಂದ ವಾಲ್ಮೀಕಿ ಸಮುದಾಯದ ಯುವಕರು ಸಿಗರೇಟ್ ಸೇದಬಾರದು ಎಂದು ನನ್ನ ಮೇಲೆ ಹಲ್ಲೆ ಮಾಡುವುದಕ್ಕೆ ಮುಂದಾದರು. ನಾನು ಭಯಗೊಂಡು ಅಲ್ಲಿಂದ ಮನೆ ಕಡೆಗೆ ಹೋದೆ” ಎಂದು ಸಂತ್ರಸ್ತ ಯುವಕ ತಿಳಿಸಿರುವುದಾಗಿ ವರದಿ ಹೇಳಿದೆ.

“ಅದೇ ದಿನ ಸಂಜೆ ಗಣಪತಿ ವಿಸರ್ಜನೆ ವೀಕ್ಷಿಸಲು ಹೋದಾಗ ಮದ್ಯ ಸೇವಿಸಿದ್ದ ಅದೇ ಯುವಕರು ನನ್ನ ಮೇಲೆ ಹಲ್ಲೆ ಮಾಡಿ, ತಲೆಗೆ ಹೊಡೆದಿದ್ದಾರೆ. ಬಳಿಕ ನಾನು ತೊಟ್ಟಿದ್ದ ಬಟ್ಟೆಯನ್ನು ಬಿಚ್ಚಿಸಿದ್ದಾರೆ. ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಕೈಗೆ ಸಿಕ್ಕ ಬಡಿಗೆ, ಚಪ್ಪಲಿಯಲ್ಲಿ ಹೊಡೆದಿದ್ದಾರೆ” ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಸಂತ್ರಸ್ತ ಯುವಕ ಗುಡದಪ್ಪ ವಿವರಿಸಿದ್ದಾರೆ. ಈ ಸಂಬಂಧ ಅಳವಂಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ವರದಿ ತಿಳಿಸಿದೆ.

ಘಟನೆಯ ಬಗ್ಗೆ ಈ ದಿನ.ಕಾಮ್ ಜೊತೆ ಮಾತನಾಡಿರುವ ಹಲ್ಲೆಗೊಳಗಾದ ಯುವಕ ಗುಡದಪ್ಪ ಮುಳ್ಳಣ್ಣ, “ಮಾದಿಗ ಜಾತಿ ಎಂಬ ಕಾರಣಕ್ಕೆ ಮದ್ಯದ ಅಮಲಿನಲ್ಲಿ ಕಂಬಕ್ಕೆ ಕಟ್ಟಿ ಹೊಡೆದಿದ್ದಾರೆ. ಬೆಳಿಗ್ಗೆ ನಾನು ಸಿಗರೇಟ್ ಸೇದಲು ಕುಳಿತಿದ್ದಾಗ ಯುವಕರ ತಂಡ ಸಿಗರೇಟ್ ಸೇದಬಾರದು, ಇಲ್ಲಿಂದ ಹೋಗು ಎಂದಾಗ ಮಾತಿನ ಚಕಮಕಿ ನಡೆದಿತ್ತು. ಅಂದು ಸಂಜೆ 6ರ ಸುಮಾರಿಗೆ ಕಿರಾಣಿ ಅಂಗಡಿಗೆ ತೆರಳುತ್ತಿದ್ದಾಗ ನಾಗನಗೌಡ ಎಂಬಾತ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ. ಆ ಬಳಿಕ ಕಂಬಕ್ಕೆ ಕಟ್ಟಿ, ಸಿಕ್ಕ ಸಿಕ್ಕ ವಸ್ತುವಿನಲ್ಲಿ ಇತರರೂ ಹಲ್ಲೆ ಮಾಡಿದ್ದಾರೆ. ಗಲಾಟೆಯ ವಿಷಯ ತಿಳಿದು ನಮ್ಮ ಕುಟುಂಬಸ್ಥರು ಜಗಳ ಬಿಡಿಸಲು ಬಂದಾಗ, ಅವರನ್ನೂ ಕೂಡ ಅವಾಚ್ಯ ಪದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ” ಎಂದು ತಿಳಿಸಿದ್ದಾನೆ.

ಇದನ್ನೂ ಓದಿ : ಯಾದಗಿರಿ| ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದವನ ಮೇಲೆ ದೂರು ದಾಖಲಿಸಿದ ಪೋಷಕರು; ಸಂಧಾನಕ್ಕೆ ಒಪ್ಪದ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...