Homeಕರ್ನಾಟಕಕೊಪ್ಪಳ | ಮಾದಿಗ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ : ಪ್ರಕರಣ ದಾಖಲು

ಕೊಪ್ಪಳ | ಮಾದಿಗ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ : ಪ್ರಕರಣ ದಾಖಲು

- Advertisement -
- Advertisement -

‘ಮಾದಿಗ’ ಸಮುದಾಯದ ಯುವಕನೊಬ್ಬನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಕೊಪ್ಪಳ ತಾಲೂಕಿನ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ವರದಿಗಳು ಹೇಳಿವೆ.

ಸಂತ್ರಸ್ತ ಯುವಕನನ್ನು ಗುಡದಪ್ಪ ಮುಳ್ಳಣ್ಣ (21) ಎಂದು ಗುರುತಿಸಲಾಗಿದೆ. ಗ್ರಾಮದ ನಾಗನಗೌಡ, ಯಲ್ಲಪ್ಪ, ಭೀಮಪ್ಪ, ಹನುಮಗೌಡ , ಪ್ರಜ್ವಲ್ ಹಾಗೂ ನವೀನ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

“ಆರೋಪಿಗಳು ಮಾದಿಗ ಎಂಬ ಕಾರಣಕ್ಕೆ ಗುಡದಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಈ ದಿನ.ಕಾಮ್ ವರದಿ ಮಾಡಿದೆ.

“ಸೆ.9ರಂದು ಬೆಳಗ್ಗೆ ಗ್ರಾಮದ ಕಟ್ಟೆಯ ಮೇಲೆ ಕುಳಿತುಕೊಂಡು ಸಿಗರೇಟ್ ಸೇದುತ್ತಿದ್ದೆ. ಅಲ್ಲಿಗೆ ಬಂದ ವಾಲ್ಮೀಕಿ ಸಮುದಾಯದ ಯುವಕರು ಸಿಗರೇಟ್ ಸೇದಬಾರದು ಎಂದು ನನ್ನ ಮೇಲೆ ಹಲ್ಲೆ ಮಾಡುವುದಕ್ಕೆ ಮುಂದಾದರು. ನಾನು ಭಯಗೊಂಡು ಅಲ್ಲಿಂದ ಮನೆ ಕಡೆಗೆ ಹೋದೆ” ಎಂದು ಸಂತ್ರಸ್ತ ಯುವಕ ತಿಳಿಸಿರುವುದಾಗಿ ವರದಿ ಹೇಳಿದೆ.

“ಅದೇ ದಿನ ಸಂಜೆ ಗಣಪತಿ ವಿಸರ್ಜನೆ ವೀಕ್ಷಿಸಲು ಹೋದಾಗ ಮದ್ಯ ಸೇವಿಸಿದ್ದ ಅದೇ ಯುವಕರು ನನ್ನ ಮೇಲೆ ಹಲ್ಲೆ ಮಾಡಿ, ತಲೆಗೆ ಹೊಡೆದಿದ್ದಾರೆ. ಬಳಿಕ ನಾನು ತೊಟ್ಟಿದ್ದ ಬಟ್ಟೆಯನ್ನು ಬಿಚ್ಚಿಸಿದ್ದಾರೆ. ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಕೈಗೆ ಸಿಕ್ಕ ಬಡಿಗೆ, ಚಪ್ಪಲಿಯಲ್ಲಿ ಹೊಡೆದಿದ್ದಾರೆ” ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಸಂತ್ರಸ್ತ ಯುವಕ ಗುಡದಪ್ಪ ವಿವರಿಸಿದ್ದಾರೆ. ಈ ಸಂಬಂಧ ಅಳವಂಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ವರದಿ ತಿಳಿಸಿದೆ.

ಘಟನೆಯ ಬಗ್ಗೆ ಈ ದಿನ.ಕಾಮ್ ಜೊತೆ ಮಾತನಾಡಿರುವ ಹಲ್ಲೆಗೊಳಗಾದ ಯುವಕ ಗುಡದಪ್ಪ ಮುಳ್ಳಣ್ಣ, “ಮಾದಿಗ ಜಾತಿ ಎಂಬ ಕಾರಣಕ್ಕೆ ಮದ್ಯದ ಅಮಲಿನಲ್ಲಿ ಕಂಬಕ್ಕೆ ಕಟ್ಟಿ ಹೊಡೆದಿದ್ದಾರೆ. ಬೆಳಿಗ್ಗೆ ನಾನು ಸಿಗರೇಟ್ ಸೇದಲು ಕುಳಿತಿದ್ದಾಗ ಯುವಕರ ತಂಡ ಸಿಗರೇಟ್ ಸೇದಬಾರದು, ಇಲ್ಲಿಂದ ಹೋಗು ಎಂದಾಗ ಮಾತಿನ ಚಕಮಕಿ ನಡೆದಿತ್ತು. ಅಂದು ಸಂಜೆ 6ರ ಸುಮಾರಿಗೆ ಕಿರಾಣಿ ಅಂಗಡಿಗೆ ತೆರಳುತ್ತಿದ್ದಾಗ ನಾಗನಗೌಡ ಎಂಬಾತ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ. ಆ ಬಳಿಕ ಕಂಬಕ್ಕೆ ಕಟ್ಟಿ, ಸಿಕ್ಕ ಸಿಕ್ಕ ವಸ್ತುವಿನಲ್ಲಿ ಇತರರೂ ಹಲ್ಲೆ ಮಾಡಿದ್ದಾರೆ. ಗಲಾಟೆಯ ವಿಷಯ ತಿಳಿದು ನಮ್ಮ ಕುಟುಂಬಸ್ಥರು ಜಗಳ ಬಿಡಿಸಲು ಬಂದಾಗ, ಅವರನ್ನೂ ಕೂಡ ಅವಾಚ್ಯ ಪದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ” ಎಂದು ತಿಳಿಸಿದ್ದಾನೆ.

ಇದನ್ನೂ ಓದಿ : ಯಾದಗಿರಿ| ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದವನ ಮೇಲೆ ದೂರು ದಾಖಲಿಸಿದ ಪೋಷಕರು; ಸಂಧಾನಕ್ಕೆ ಒಪ್ಪದ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...