Homeಕರ್ನಾಟಕಕೊಪ್ಪಳ ಎಲೆಕ್ಷನ್ ರೌಂಡ್ ಅಪ್ : ಹಗಲಲ್ಲೆ ಕರಡಿಗೆ ಸೋಲಿನ ಜಾಮೂನು ಗ್ಯಾರಂಟಿ ರೀ!

ಕೊಪ್ಪಳ ಎಲೆಕ್ಷನ್ ರೌಂಡ್ ಅಪ್ : ಹಗಲಲ್ಲೆ ಕರಡಿಗೆ ಸೋಲಿನ ಜಾಮೂನು ಗ್ಯಾರಂಟಿ ರೀ!

- Advertisement -
- Advertisement -

| ಮಲ್ಲಿ |
ಕೊನೆಗೂ ಬಿಜೆಪಿ ಜಗ್ಗಾಡಿ, ಅಲುಗಾಡಿ, ಒಂದಿಷ್ಟು ಡ್ರಾಮಾ ಮಾಡಿ ಟಿಕೆಟನ್ನು ನೀಡಿದೆ. ಹಾಲಿ ಸಂಸದ ಕರಡಿ ಸಂಗಣ್ಣ ಪ್ರಯಾಸಪಟ್ಟು ಅಂತಿಮ ಹಂತದಲ್ಲಿ ಬಿ ಫಾರಂ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಲ ಕರಡಿ ಸೋಲುತ್ತಾರೆ ಎಂದೇ ಬಿಜೆಪಿಯ ಆಂತರಿಕ ಸಮೀಕ್ಷೆ ಹೇಳಿತ್ತಂತೆ. ಅದಕ್ಕೇ ಇಲ್ಲಿಗೆ ರಾಮುಲುರನ್ನು ತರಲು ಅದು ಯೋಚಿಸಿತು. ರಾಮುಲು ನೋ ಎಂದ ಮೇಲೆ ಸ್ಥಳೀಯ ಅಭ್ಯರ್ಥಿಗಳ ಹುಡುಕಾಟ ನಡೆಸಿತು. ಆದರೆ ಅಂತಹ ಸಮರ್ಥರು ಸಿಗದೇ ಇದ್ದಾಗ ಮತ್ತೆ ಅನಿವಾರ್ಯವಾಗಿ ಕರಡಿ ಸಂಗಣ್ಣರಿಗೇ ಟಿಕೆಟ್ ನೀಡಿದೆ. ಇತ್ತ ಕಾಂಗ್ರೆಸ್ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್‍ರ ಸಹೋದರ ಜಿಪಂ ಸದಸ್ಯ ರಾಜಶೇಖರ ಹಿಟ್ನಾಳರಿಗೆ ವಾರದ ಹಿಂದೆನೇ ಟಿಕೆಟ್ ಘೋಷಿಸಿರುವುದರಿಂದ ಅವರಾಗಲೇ ಪ್ರಚಾರದಲ್ಲಿ ಕರಡಿಗಿಂತ ತುಂಬ ಮುಂದೆ ಇದ್ದಾರೆ.

ಕಾಂಗ್ರೆಸ್ ಬುಟ್ಟಿಗೆ ಈ ಸಲ ಹೊಸದಾಗಿ ಬೀಳಬಹುದಾದ ಎಂಪಿ ಕ್ಷೇತ್ರಗಳಲ್ಲಿ ಕೊಪ್ಪಳವೂ ಒಂದು ಎನ್ನಲಾಗುತ್ತಿದೆ. ಇದು ಬಿಜೆಪಿಯನ್ನೂ ಕಾಡುತ್ತಿದ್ದರ ಪರಿಣಾಮವಾಗಿ, ಅದು ಅಭ್ಯರ್ಥಿ ಬದಲಾವಣೆಗೆ ಚಿಂತಿಸಿತ್ತು. ಆದರೆ ಅಂತಿಮವಾಗಿ ಅದು ಮತ್ತೆ ಹಾಲಿ ಸಂಸದ ಕರಡಿ ಸಂಗಣ್ಣರನ್ನೇ ಕಣಕ್ಕೆ ಇಳಿಸುವ ನಿರ್ಧಾರಕ್ಕೆ ಬಂದಿದೆ.
ಕಾಂಗ್ರೆಸ್‍ನಲ್ಲಿ ಅಭ್ಯರ್ಥಿಗಳಾಗಲು ಮೂರ್ನಾಲ್ಕು ಜನ ಪೈಪೋಟಿ ನಡೆಸುತ್ತಿದ್ದರೂ, ಅಂತಿಮವಾಗಿ ರಾಜಶೇಖರ ಹಿಟ್ನಾಳ್‍ಗೆ ಟಿಕೆಟ್ ಸಿಕ್ಕಿದೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ, ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರರ ಅಣ್ಣನ ಮಗ ಶರಣೇಗೌಡ, ವಿರೂಪಾಕ್ಷಪ್ಪ ಸಿಂಗನಾಳ ಮತ್ತು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೆಸರುಗಳು ಚಾಲ್ತಿಗೆ ಬಂದಿದ್ದವು. ಆದರೆ ಅಂತಿಮವಾಗಿ ಹಿಟ್ನಾಳ್‍ಗೆ ಟಿಕೆಟ್ ಸಿಕ್ಕಿದೆ.

ಹಾಲಿ ಸಂಸದ ಕರಡಿ ಸಂಗಣ್ಣ ಹಿಂದೆ 4 ಬಾರಿ ಕೊಪ್ಪಳದ ಶಾಸಕರಾಗಿದ್ದವರು. ಅವರು ಪಂಚಮಸಾಲಿ ರಾಜಕೀಯ ಮಾಡುತ್ತ ಬಂದಿರುವುದು ಕ್ಷೇತ್ರದಲ್ಲಿ ಅಸಮಾಧಾನ ಹುಟ್ಟಿಸಿದೆ. ಪಂಚಮಸಾಲಿಗಳ ಸಮಸ್ಯೆಗೂ ಅವರು ಸ್ಪಂದಿಸಿಲ್ಲ, ಮಣ್ಣಿಗೆ ಹೋಗುವ, ಮದುವೆಗಳಿಗೆ ಹಾಜರಾಗುವುದನ್ನೇ ಜನಸೇವೆ ಎಂದು ಭ್ರಮಿಸಿರುವ ಕರಡಿ ಸಂಗಣ್ಣ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೂ ಮುಜುಗರವಾಗುವಂತೆ ನಡೆದುಕೊಂಡರು.

ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ಮಗನಿಗೇ ಟಿಕೆಟ್ ಕೊಡಬೇಕೆಂದು ಕರಡಿ ಸಂಗಣ್ಣ ಮಾಡಿದ ರಂಪಕ್ಕೆ ಬಿಜೆಪಿ ಹೈಕಮಾಂಡೇ ಬೆಚ್ಚಿಬಿದ್ದಿತ್ತು. ತನ್ನ ಮಗನಿಗೆ ಟಿಕೆಟ್ ಕೊಡದಿದ್ದರೆ ಬಿಜೆಪಿ ತೊರೆಯುವುದಾಗಿ ಬೆದರಿಸಿದ ಸಂಗಣ್ಣ, ಪಂಚಮಸಾಲಿ ವೇದಿಕೆಯೊಂದನ್ನು ಮಾಡಿ, ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಪಂಚಮಸಾಲಿ ಅಭ್ಯರ್ಥಿಗಳನ್ನು ಹಾಕುವುದಾಗಿ ಬಿಜೆಪಿಯನ್ನೇ ಬ್ಲ್ಯಾಕ್‍ಮೇಲ್ ಮಾಡಿದ್ದರು. ಆಗಲೇ ಜನ ಸಂಗಣ್ಣರ ಈ ಪುತ್ರವ್ಯಾಮೋಹವನ್ನು ಕಂಡು ರೋಸಿದ್ದರೂ, ಬಿಜೆಪಿ ಸಂಗಣ್ಣರ ಒತ್ತಡಕ್ಕೆ ಮಣಿದು ಅವರ ಮಗನಿಗೇ ಕೊಪ್ಪಳ ವಿಧಾನಸಭಾದÀ ಟಿಕೆಟ್ ನೀಡಿತ್ತು. ಅಷ್ಟರಲ್ಲಾಗಲೇ ಬಿಜೆಪಿಯಿಂದ ಬಿ ಫಾರಂ ಪಡೆದು ಪ್ರಚಾರ ಆರಂಭಿಸಿದ್ದ ಚಂದ್ರಶೇಖರ್‍ಗೆ ಕೈಕೊಟ್ಟ ಬಿಜೆಪಿ ನಾಯಕರು ಕೊನೆ ಕ್ಷಣದಲ್ಲಿ ಬಿ ಫಾರಂ ಅನ್ನು ಕರಡಿ ಮಗನಿಗೆ ನೀಡಿದರು. ಚಂದ್ರಶೇಖರ್‍ಗೆ ಟಿಕೆಟ್ ತಪ್ಪಿಸಿದ್ದಕ್ಕೆ ಗಮನಾರ್ಹ ಸಂಖ್ಯೆಯಲ್ಲಿ ಇರುವ ರೆಡ್ಡಿ ಲಿಂಗಾಯತರು ಕಾಂಗ್ರೆಸ್ ಪರ ನಿಂತರು. ಕಾಂಗ್ರೆಸ್‍ನ ರಾಘವೇಂದ್ರ ಹಿಟ್ನಾಳ್ ಎರಡನೇ ಬಾರಿಗೆ ನಿರಾಯಾಸವಾಗಿ ಗೆದ್ದರು.

ಆಗಿಂದಲೂ ಕರಡಿ ಸಂಗಣ್ಣರಿಗೆ ಪಾಠ ಕಲಿಸಲು ರೆಡ್ಡಿ ಮತ್ತು ಇತರ ಲಿಂಗಾಯತ ಸಮುದಾಯಗಳು ಕಾಯುತ್ತಿವೆ. ರೈಲ್ವೇ ಬ್ರಿಡ್ಜ್ ಮಾಡಿಸಿದ್ದೇ ಸಾಧನೆ ಎನ್ನುತ್ತಿರುವ ಕರಡಿಯವರಿಗೆ ಈ ಸಲ ಗೆಲುವು ಮರೀಚಿಕೆ ಆಗುವ ಎಲ್ಲ ಸಾಧ್ಯತೆಗಳೂ ದಟ್ಟವಾಗಿವೆ. ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಜನರ ಒಲವು ಗಳಿಸಿದ್ದಾರೆ. ಕುರುಬ ಸಮುದಾಯಕ್ಕೆ ಸೇರಿರುವ ರಾಜಶೇಖರ್ ಈಗಾಗಲೇ ಪ್ರಚಾರ ಶುರು ಮಾಡಿಯಾಗಿದೆ.
ಇಲ್ಲಿ ಕುರುಬರು, ಮುಸ್ಲಿಮರು ಮತ್ತು ಲಿಂಗಾಯತರ ಮತಗಳು ನಿರ್ಣಾಯಕವಾಗಿದ್ದು, ಈ ಮೂರೂ ಸಮುದಾಯಗಳು ಕರಡಿ ವಿರುದ್ಧ ನಿಲ್ಲುವ ಸೂಚನೆಗಳು ಕಾಣಿಸುತ್ತಿವೆ. ಹೀಗಾಗಿ ಈ ಸಲ ಕತ್ತಲಲ್ಲಿ ಅಲ್ಲ, ಹಾಡಹಗಲೇ ಕರಡಿಗೆ ಸೋಲಿನ ಜಾಮೂನು ತಿನ್ನಿಸುವುದು ಬಹುತೇಕ ಖಚಿತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...