Homeಕರ್ನಾಟಕಕೊಪ್ಪಳ ಎಲೆಕ್ಷನ್ ರೌಂಡ್ ಅಪ್ : ಹಗಲಲ್ಲೆ ಕರಡಿಗೆ ಸೋಲಿನ ಜಾಮೂನು ಗ್ಯಾರಂಟಿ ರೀ!

ಕೊಪ್ಪಳ ಎಲೆಕ್ಷನ್ ರೌಂಡ್ ಅಪ್ : ಹಗಲಲ್ಲೆ ಕರಡಿಗೆ ಸೋಲಿನ ಜಾಮೂನು ಗ್ಯಾರಂಟಿ ರೀ!

- Advertisement -
- Advertisement -

| ಮಲ್ಲಿ |
ಕೊನೆಗೂ ಬಿಜೆಪಿ ಜಗ್ಗಾಡಿ, ಅಲುಗಾಡಿ, ಒಂದಿಷ್ಟು ಡ್ರಾಮಾ ಮಾಡಿ ಟಿಕೆಟನ್ನು ನೀಡಿದೆ. ಹಾಲಿ ಸಂಸದ ಕರಡಿ ಸಂಗಣ್ಣ ಪ್ರಯಾಸಪಟ್ಟು ಅಂತಿಮ ಹಂತದಲ್ಲಿ ಬಿ ಫಾರಂ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಲ ಕರಡಿ ಸೋಲುತ್ತಾರೆ ಎಂದೇ ಬಿಜೆಪಿಯ ಆಂತರಿಕ ಸಮೀಕ್ಷೆ ಹೇಳಿತ್ತಂತೆ. ಅದಕ್ಕೇ ಇಲ್ಲಿಗೆ ರಾಮುಲುರನ್ನು ತರಲು ಅದು ಯೋಚಿಸಿತು. ರಾಮುಲು ನೋ ಎಂದ ಮೇಲೆ ಸ್ಥಳೀಯ ಅಭ್ಯರ್ಥಿಗಳ ಹುಡುಕಾಟ ನಡೆಸಿತು. ಆದರೆ ಅಂತಹ ಸಮರ್ಥರು ಸಿಗದೇ ಇದ್ದಾಗ ಮತ್ತೆ ಅನಿವಾರ್ಯವಾಗಿ ಕರಡಿ ಸಂಗಣ್ಣರಿಗೇ ಟಿಕೆಟ್ ನೀಡಿದೆ. ಇತ್ತ ಕಾಂಗ್ರೆಸ್ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್‍ರ ಸಹೋದರ ಜಿಪಂ ಸದಸ್ಯ ರಾಜಶೇಖರ ಹಿಟ್ನಾಳರಿಗೆ ವಾರದ ಹಿಂದೆನೇ ಟಿಕೆಟ್ ಘೋಷಿಸಿರುವುದರಿಂದ ಅವರಾಗಲೇ ಪ್ರಚಾರದಲ್ಲಿ ಕರಡಿಗಿಂತ ತುಂಬ ಮುಂದೆ ಇದ್ದಾರೆ.

ಕಾಂಗ್ರೆಸ್ ಬುಟ್ಟಿಗೆ ಈ ಸಲ ಹೊಸದಾಗಿ ಬೀಳಬಹುದಾದ ಎಂಪಿ ಕ್ಷೇತ್ರಗಳಲ್ಲಿ ಕೊಪ್ಪಳವೂ ಒಂದು ಎನ್ನಲಾಗುತ್ತಿದೆ. ಇದು ಬಿಜೆಪಿಯನ್ನೂ ಕಾಡುತ್ತಿದ್ದರ ಪರಿಣಾಮವಾಗಿ, ಅದು ಅಭ್ಯರ್ಥಿ ಬದಲಾವಣೆಗೆ ಚಿಂತಿಸಿತ್ತು. ಆದರೆ ಅಂತಿಮವಾಗಿ ಅದು ಮತ್ತೆ ಹಾಲಿ ಸಂಸದ ಕರಡಿ ಸಂಗಣ್ಣರನ್ನೇ ಕಣಕ್ಕೆ ಇಳಿಸುವ ನಿರ್ಧಾರಕ್ಕೆ ಬಂದಿದೆ.
ಕಾಂಗ್ರೆಸ್‍ನಲ್ಲಿ ಅಭ್ಯರ್ಥಿಗಳಾಗಲು ಮೂರ್ನಾಲ್ಕು ಜನ ಪೈಪೋಟಿ ನಡೆಸುತ್ತಿದ್ದರೂ, ಅಂತಿಮವಾಗಿ ರಾಜಶೇಖರ ಹಿಟ್ನಾಳ್‍ಗೆ ಟಿಕೆಟ್ ಸಿಕ್ಕಿದೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ, ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರರ ಅಣ್ಣನ ಮಗ ಶರಣೇಗೌಡ, ವಿರೂಪಾಕ್ಷಪ್ಪ ಸಿಂಗನಾಳ ಮತ್ತು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೆಸರುಗಳು ಚಾಲ್ತಿಗೆ ಬಂದಿದ್ದವು. ಆದರೆ ಅಂತಿಮವಾಗಿ ಹಿಟ್ನಾಳ್‍ಗೆ ಟಿಕೆಟ್ ಸಿಕ್ಕಿದೆ.

ಹಾಲಿ ಸಂಸದ ಕರಡಿ ಸಂಗಣ್ಣ ಹಿಂದೆ 4 ಬಾರಿ ಕೊಪ್ಪಳದ ಶಾಸಕರಾಗಿದ್ದವರು. ಅವರು ಪಂಚಮಸಾಲಿ ರಾಜಕೀಯ ಮಾಡುತ್ತ ಬಂದಿರುವುದು ಕ್ಷೇತ್ರದಲ್ಲಿ ಅಸಮಾಧಾನ ಹುಟ್ಟಿಸಿದೆ. ಪಂಚಮಸಾಲಿಗಳ ಸಮಸ್ಯೆಗೂ ಅವರು ಸ್ಪಂದಿಸಿಲ್ಲ, ಮಣ್ಣಿಗೆ ಹೋಗುವ, ಮದುವೆಗಳಿಗೆ ಹಾಜರಾಗುವುದನ್ನೇ ಜನಸೇವೆ ಎಂದು ಭ್ರಮಿಸಿರುವ ಕರಡಿ ಸಂಗಣ್ಣ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೂ ಮುಜುಗರವಾಗುವಂತೆ ನಡೆದುಕೊಂಡರು.

ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ಮಗನಿಗೇ ಟಿಕೆಟ್ ಕೊಡಬೇಕೆಂದು ಕರಡಿ ಸಂಗಣ್ಣ ಮಾಡಿದ ರಂಪಕ್ಕೆ ಬಿಜೆಪಿ ಹೈಕಮಾಂಡೇ ಬೆಚ್ಚಿಬಿದ್ದಿತ್ತು. ತನ್ನ ಮಗನಿಗೆ ಟಿಕೆಟ್ ಕೊಡದಿದ್ದರೆ ಬಿಜೆಪಿ ತೊರೆಯುವುದಾಗಿ ಬೆದರಿಸಿದ ಸಂಗಣ್ಣ, ಪಂಚಮಸಾಲಿ ವೇದಿಕೆಯೊಂದನ್ನು ಮಾಡಿ, ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಪಂಚಮಸಾಲಿ ಅಭ್ಯರ್ಥಿಗಳನ್ನು ಹಾಕುವುದಾಗಿ ಬಿಜೆಪಿಯನ್ನೇ ಬ್ಲ್ಯಾಕ್‍ಮೇಲ್ ಮಾಡಿದ್ದರು. ಆಗಲೇ ಜನ ಸಂಗಣ್ಣರ ಈ ಪುತ್ರವ್ಯಾಮೋಹವನ್ನು ಕಂಡು ರೋಸಿದ್ದರೂ, ಬಿಜೆಪಿ ಸಂಗಣ್ಣರ ಒತ್ತಡಕ್ಕೆ ಮಣಿದು ಅವರ ಮಗನಿಗೇ ಕೊಪ್ಪಳ ವಿಧಾನಸಭಾದÀ ಟಿಕೆಟ್ ನೀಡಿತ್ತು. ಅಷ್ಟರಲ್ಲಾಗಲೇ ಬಿಜೆಪಿಯಿಂದ ಬಿ ಫಾರಂ ಪಡೆದು ಪ್ರಚಾರ ಆರಂಭಿಸಿದ್ದ ಚಂದ್ರಶೇಖರ್‍ಗೆ ಕೈಕೊಟ್ಟ ಬಿಜೆಪಿ ನಾಯಕರು ಕೊನೆ ಕ್ಷಣದಲ್ಲಿ ಬಿ ಫಾರಂ ಅನ್ನು ಕರಡಿ ಮಗನಿಗೆ ನೀಡಿದರು. ಚಂದ್ರಶೇಖರ್‍ಗೆ ಟಿಕೆಟ್ ತಪ್ಪಿಸಿದ್ದಕ್ಕೆ ಗಮನಾರ್ಹ ಸಂಖ್ಯೆಯಲ್ಲಿ ಇರುವ ರೆಡ್ಡಿ ಲಿಂಗಾಯತರು ಕಾಂಗ್ರೆಸ್ ಪರ ನಿಂತರು. ಕಾಂಗ್ರೆಸ್‍ನ ರಾಘವೇಂದ್ರ ಹಿಟ್ನಾಳ್ ಎರಡನೇ ಬಾರಿಗೆ ನಿರಾಯಾಸವಾಗಿ ಗೆದ್ದರು.

ಆಗಿಂದಲೂ ಕರಡಿ ಸಂಗಣ್ಣರಿಗೆ ಪಾಠ ಕಲಿಸಲು ರೆಡ್ಡಿ ಮತ್ತು ಇತರ ಲಿಂಗಾಯತ ಸಮುದಾಯಗಳು ಕಾಯುತ್ತಿವೆ. ರೈಲ್ವೇ ಬ್ರಿಡ್ಜ್ ಮಾಡಿಸಿದ್ದೇ ಸಾಧನೆ ಎನ್ನುತ್ತಿರುವ ಕರಡಿಯವರಿಗೆ ಈ ಸಲ ಗೆಲುವು ಮರೀಚಿಕೆ ಆಗುವ ಎಲ್ಲ ಸಾಧ್ಯತೆಗಳೂ ದಟ್ಟವಾಗಿವೆ. ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಜನರ ಒಲವು ಗಳಿಸಿದ್ದಾರೆ. ಕುರುಬ ಸಮುದಾಯಕ್ಕೆ ಸೇರಿರುವ ರಾಜಶೇಖರ್ ಈಗಾಗಲೇ ಪ್ರಚಾರ ಶುರು ಮಾಡಿಯಾಗಿದೆ.
ಇಲ್ಲಿ ಕುರುಬರು, ಮುಸ್ಲಿಮರು ಮತ್ತು ಲಿಂಗಾಯತರ ಮತಗಳು ನಿರ್ಣಾಯಕವಾಗಿದ್ದು, ಈ ಮೂರೂ ಸಮುದಾಯಗಳು ಕರಡಿ ವಿರುದ್ಧ ನಿಲ್ಲುವ ಸೂಚನೆಗಳು ಕಾಣಿಸುತ್ತಿವೆ. ಹೀಗಾಗಿ ಈ ಸಲ ಕತ್ತಲಲ್ಲಿ ಅಲ್ಲ, ಹಾಡಹಗಲೇ ಕರಡಿಗೆ ಸೋಲಿನ ಜಾಮೂನು ತಿನ್ನಿಸುವುದು ಬಹುತೇಕ ಖಚಿತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...