Homeಕರ್ನಾಟಕಕೊಪ್ಪಳ ಎಲೆಕ್ಷನ್ ರೌಂಡ್ ಅಪ್ : ಹಗಲಲ್ಲೆ ಕರಡಿಗೆ ಸೋಲಿನ ಜಾಮೂನು ಗ್ಯಾರಂಟಿ ರೀ!

ಕೊಪ್ಪಳ ಎಲೆಕ್ಷನ್ ರೌಂಡ್ ಅಪ್ : ಹಗಲಲ್ಲೆ ಕರಡಿಗೆ ಸೋಲಿನ ಜಾಮೂನು ಗ್ಯಾರಂಟಿ ರೀ!

- Advertisement -
- Advertisement -

| ಮಲ್ಲಿ |
ಕೊನೆಗೂ ಬಿಜೆಪಿ ಜಗ್ಗಾಡಿ, ಅಲುಗಾಡಿ, ಒಂದಿಷ್ಟು ಡ್ರಾಮಾ ಮಾಡಿ ಟಿಕೆಟನ್ನು ನೀಡಿದೆ. ಹಾಲಿ ಸಂಸದ ಕರಡಿ ಸಂಗಣ್ಣ ಪ್ರಯಾಸಪಟ್ಟು ಅಂತಿಮ ಹಂತದಲ್ಲಿ ಬಿ ಫಾರಂ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಲ ಕರಡಿ ಸೋಲುತ್ತಾರೆ ಎಂದೇ ಬಿಜೆಪಿಯ ಆಂತರಿಕ ಸಮೀಕ್ಷೆ ಹೇಳಿತ್ತಂತೆ. ಅದಕ್ಕೇ ಇಲ್ಲಿಗೆ ರಾಮುಲುರನ್ನು ತರಲು ಅದು ಯೋಚಿಸಿತು. ರಾಮುಲು ನೋ ಎಂದ ಮೇಲೆ ಸ್ಥಳೀಯ ಅಭ್ಯರ್ಥಿಗಳ ಹುಡುಕಾಟ ನಡೆಸಿತು. ಆದರೆ ಅಂತಹ ಸಮರ್ಥರು ಸಿಗದೇ ಇದ್ದಾಗ ಮತ್ತೆ ಅನಿವಾರ್ಯವಾಗಿ ಕರಡಿ ಸಂಗಣ್ಣರಿಗೇ ಟಿಕೆಟ್ ನೀಡಿದೆ. ಇತ್ತ ಕಾಂಗ್ರೆಸ್ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್‍ರ ಸಹೋದರ ಜಿಪಂ ಸದಸ್ಯ ರಾಜಶೇಖರ ಹಿಟ್ನಾಳರಿಗೆ ವಾರದ ಹಿಂದೆನೇ ಟಿಕೆಟ್ ಘೋಷಿಸಿರುವುದರಿಂದ ಅವರಾಗಲೇ ಪ್ರಚಾರದಲ್ಲಿ ಕರಡಿಗಿಂತ ತುಂಬ ಮುಂದೆ ಇದ್ದಾರೆ.

ಕಾಂಗ್ರೆಸ್ ಬುಟ್ಟಿಗೆ ಈ ಸಲ ಹೊಸದಾಗಿ ಬೀಳಬಹುದಾದ ಎಂಪಿ ಕ್ಷೇತ್ರಗಳಲ್ಲಿ ಕೊಪ್ಪಳವೂ ಒಂದು ಎನ್ನಲಾಗುತ್ತಿದೆ. ಇದು ಬಿಜೆಪಿಯನ್ನೂ ಕಾಡುತ್ತಿದ್ದರ ಪರಿಣಾಮವಾಗಿ, ಅದು ಅಭ್ಯರ್ಥಿ ಬದಲಾವಣೆಗೆ ಚಿಂತಿಸಿತ್ತು. ಆದರೆ ಅಂತಿಮವಾಗಿ ಅದು ಮತ್ತೆ ಹಾಲಿ ಸಂಸದ ಕರಡಿ ಸಂಗಣ್ಣರನ್ನೇ ಕಣಕ್ಕೆ ಇಳಿಸುವ ನಿರ್ಧಾರಕ್ಕೆ ಬಂದಿದೆ.
ಕಾಂಗ್ರೆಸ್‍ನಲ್ಲಿ ಅಭ್ಯರ್ಥಿಗಳಾಗಲು ಮೂರ್ನಾಲ್ಕು ಜನ ಪೈಪೋಟಿ ನಡೆಸುತ್ತಿದ್ದರೂ, ಅಂತಿಮವಾಗಿ ರಾಜಶೇಖರ ಹಿಟ್ನಾಳ್‍ಗೆ ಟಿಕೆಟ್ ಸಿಕ್ಕಿದೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ, ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರರ ಅಣ್ಣನ ಮಗ ಶರಣೇಗೌಡ, ವಿರೂಪಾಕ್ಷಪ್ಪ ಸಿಂಗನಾಳ ಮತ್ತು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೆಸರುಗಳು ಚಾಲ್ತಿಗೆ ಬಂದಿದ್ದವು. ಆದರೆ ಅಂತಿಮವಾಗಿ ಹಿಟ್ನಾಳ್‍ಗೆ ಟಿಕೆಟ್ ಸಿಕ್ಕಿದೆ.

ಹಾಲಿ ಸಂಸದ ಕರಡಿ ಸಂಗಣ್ಣ ಹಿಂದೆ 4 ಬಾರಿ ಕೊಪ್ಪಳದ ಶಾಸಕರಾಗಿದ್ದವರು. ಅವರು ಪಂಚಮಸಾಲಿ ರಾಜಕೀಯ ಮಾಡುತ್ತ ಬಂದಿರುವುದು ಕ್ಷೇತ್ರದಲ್ಲಿ ಅಸಮಾಧಾನ ಹುಟ್ಟಿಸಿದೆ. ಪಂಚಮಸಾಲಿಗಳ ಸಮಸ್ಯೆಗೂ ಅವರು ಸ್ಪಂದಿಸಿಲ್ಲ, ಮಣ್ಣಿಗೆ ಹೋಗುವ, ಮದುವೆಗಳಿಗೆ ಹಾಜರಾಗುವುದನ್ನೇ ಜನಸೇವೆ ಎಂದು ಭ್ರಮಿಸಿರುವ ಕರಡಿ ಸಂಗಣ್ಣ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೂ ಮುಜುಗರವಾಗುವಂತೆ ನಡೆದುಕೊಂಡರು.

ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ಮಗನಿಗೇ ಟಿಕೆಟ್ ಕೊಡಬೇಕೆಂದು ಕರಡಿ ಸಂಗಣ್ಣ ಮಾಡಿದ ರಂಪಕ್ಕೆ ಬಿಜೆಪಿ ಹೈಕಮಾಂಡೇ ಬೆಚ್ಚಿಬಿದ್ದಿತ್ತು. ತನ್ನ ಮಗನಿಗೆ ಟಿಕೆಟ್ ಕೊಡದಿದ್ದರೆ ಬಿಜೆಪಿ ತೊರೆಯುವುದಾಗಿ ಬೆದರಿಸಿದ ಸಂಗಣ್ಣ, ಪಂಚಮಸಾಲಿ ವೇದಿಕೆಯೊಂದನ್ನು ಮಾಡಿ, ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಪಂಚಮಸಾಲಿ ಅಭ್ಯರ್ಥಿಗಳನ್ನು ಹಾಕುವುದಾಗಿ ಬಿಜೆಪಿಯನ್ನೇ ಬ್ಲ್ಯಾಕ್‍ಮೇಲ್ ಮಾಡಿದ್ದರು. ಆಗಲೇ ಜನ ಸಂಗಣ್ಣರ ಈ ಪುತ್ರವ್ಯಾಮೋಹವನ್ನು ಕಂಡು ರೋಸಿದ್ದರೂ, ಬಿಜೆಪಿ ಸಂಗಣ್ಣರ ಒತ್ತಡಕ್ಕೆ ಮಣಿದು ಅವರ ಮಗನಿಗೇ ಕೊಪ್ಪಳ ವಿಧಾನಸಭಾದÀ ಟಿಕೆಟ್ ನೀಡಿತ್ತು. ಅಷ್ಟರಲ್ಲಾಗಲೇ ಬಿಜೆಪಿಯಿಂದ ಬಿ ಫಾರಂ ಪಡೆದು ಪ್ರಚಾರ ಆರಂಭಿಸಿದ್ದ ಚಂದ್ರಶೇಖರ್‍ಗೆ ಕೈಕೊಟ್ಟ ಬಿಜೆಪಿ ನಾಯಕರು ಕೊನೆ ಕ್ಷಣದಲ್ಲಿ ಬಿ ಫಾರಂ ಅನ್ನು ಕರಡಿ ಮಗನಿಗೆ ನೀಡಿದರು. ಚಂದ್ರಶೇಖರ್‍ಗೆ ಟಿಕೆಟ್ ತಪ್ಪಿಸಿದ್ದಕ್ಕೆ ಗಮನಾರ್ಹ ಸಂಖ್ಯೆಯಲ್ಲಿ ಇರುವ ರೆಡ್ಡಿ ಲಿಂಗಾಯತರು ಕಾಂಗ್ರೆಸ್ ಪರ ನಿಂತರು. ಕಾಂಗ್ರೆಸ್‍ನ ರಾಘವೇಂದ್ರ ಹಿಟ್ನಾಳ್ ಎರಡನೇ ಬಾರಿಗೆ ನಿರಾಯಾಸವಾಗಿ ಗೆದ್ದರು.

ಆಗಿಂದಲೂ ಕರಡಿ ಸಂಗಣ್ಣರಿಗೆ ಪಾಠ ಕಲಿಸಲು ರೆಡ್ಡಿ ಮತ್ತು ಇತರ ಲಿಂಗಾಯತ ಸಮುದಾಯಗಳು ಕಾಯುತ್ತಿವೆ. ರೈಲ್ವೇ ಬ್ರಿಡ್ಜ್ ಮಾಡಿಸಿದ್ದೇ ಸಾಧನೆ ಎನ್ನುತ್ತಿರುವ ಕರಡಿಯವರಿಗೆ ಈ ಸಲ ಗೆಲುವು ಮರೀಚಿಕೆ ಆಗುವ ಎಲ್ಲ ಸಾಧ್ಯತೆಗಳೂ ದಟ್ಟವಾಗಿವೆ. ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಜನರ ಒಲವು ಗಳಿಸಿದ್ದಾರೆ. ಕುರುಬ ಸಮುದಾಯಕ್ಕೆ ಸೇರಿರುವ ರಾಜಶೇಖರ್ ಈಗಾಗಲೇ ಪ್ರಚಾರ ಶುರು ಮಾಡಿಯಾಗಿದೆ.
ಇಲ್ಲಿ ಕುರುಬರು, ಮುಸ್ಲಿಮರು ಮತ್ತು ಲಿಂಗಾಯತರ ಮತಗಳು ನಿರ್ಣಾಯಕವಾಗಿದ್ದು, ಈ ಮೂರೂ ಸಮುದಾಯಗಳು ಕರಡಿ ವಿರುದ್ಧ ನಿಲ್ಲುವ ಸೂಚನೆಗಳು ಕಾಣಿಸುತ್ತಿವೆ. ಹೀಗಾಗಿ ಈ ಸಲ ಕತ್ತಲಲ್ಲಿ ಅಲ್ಲ, ಹಾಡಹಗಲೇ ಕರಡಿಗೆ ಸೋಲಿನ ಜಾಮೂನು ತಿನ್ನಿಸುವುದು ಬಹುತೇಕ ಖಚಿತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...