Homeಕರ್ನಾಟಕಕೊಪ್ಪಳ: ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಸ್ವಂತ ವಾಹನಕ್ಕೆ ಬೆಂಕಿ ಹಚ್ಚಿದ ಮಾಲೀಕ- ಆರೋಪ

ಕೊಪ್ಪಳ: ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಸ್ವಂತ ವಾಹನಕ್ಕೆ ಬೆಂಕಿ ಹಚ್ಚಿದ ಮಾಲೀಕ- ಆರೋಪ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ಆರ್ಥಿಕ ಸಂಕಷ್ಟದಲ್ಲೂ ವಾಹನ ಕೊಳ್ಳಲು ತೆಗೆದುಕೊಂಡಿದ್ದ ಸಾಲದ ಕಂತು ಕಟ್ಟಲು ಒತ್ತಾಯಿಸುತ್ತಿದ್ದ ಖಾಸಗಿ ಫೈನಾನ್ಸ್‌ಗಳ ಕಾಟ ತಾಳಲಾರದೆ ಮಾಲೀಕನೊಬ್ಬ ತನ್ನ ಸ್ವಂತ ವಾಹನಕೆಕ ಬೆಂಕಿ ಹಚ್ಚಿರುವ ದುರ್ಘಟನೆ ಕೊಪ್ಪಳದಲ್ಲಿ ವರದಿಯಾಗಿದೆ.

ಕೊಪ್ಪಳದ ಪೆಟ್ರೋಲ್ ಬಂಕ್ ಬಳಿಯ ವಿವೇಕಾನಂದ ಶಾಲೆಯ ಸರ್ಕಲ್‌ನಲ್ಲಿ ಕ್ರೂಸರ್ ವಾಹನ ಬೆಂಖಿಯಿಂದ ಹತ್ತಿ ಊರಿಯುತ್ತಿದ್ದನ್ನು ಕಂಡು ಜನತೆ ಆತಂಕಕ್ಕೆ ಒಳಗಾಗಿದ್ದಾರೆ. ಪ್ರಮುಖ ರಸ್ತೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಕ್ರೂಸರ್‌ನ ಟೈರ್‌ಗಳು ಸ್ಫೋಟಗೊಂಡಿವೆ. ಇದರಿಂದ ಜನ ಮತ್ತಷ್ಟು ಭಯ ಭೀತರಾಗಿದ್ದಾರೆ. ಜೊತೆಗೆ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಕ್ರೂಸರ್‌ ಮಾಲೀಕ ಸುಭಾಶ್‌ಚಂದ್ರ ಎಂಬುವವರು ಖಾಸಗಿ ಫೈನಾನ್ಸ್‌ನವರ ಕಿರುಕುಳ ಹಿನ್ನೆಲೆ ತಮ್ಮ ಗಾಡಿ ಸಂಖ್ಯೆ ಕೆಎ 44 3584 ನ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ರಾಜಸ್ಥಾನ: ದಲಿತ ಯುವಕನಿಗೆ ಥಳಿಸಿ ಮೂತ್ರ ಕುಡಿಸಿದ ಜಾತಿವಾದಿ ದುಷ್ಕರ್ಮಿಗಳು; ಪ್ರಕರಣ ದಾಖಲು

ಸ್ಥಳಕ್ಕಾಗಮಿಸಿದ ಅಗ್ನಿಶಾಂಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ವಾಹನ ಮೂಕ್ಕಾಲು ಭಾಗ ಸುಟ್ಟು ಕರಕಲಾಗಿದೆ.

ಬಾದಾಮಿ ತಾಲೂಕಿನ ಸುಭಾಶ್‌ ಚಂದ್ರ ಮತ್ತು ಖಾಸಗಿ ಫೈನಾನ್ಸ್ ಕಂಪನಿಯವರಿಗೆ ಹಣ ಕಟ್ಟುವಿ ವಿಚಾರಕ್ಕೆ ಇಂದು ಜಗಳವಾಗಿದ್ದು, ಇದೇ ಕೋಪದಲ್ಲಿ ಕ್ರೂಸರ್‌ ಮಾಲೀಕ ತಮ್ಮ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ‍


ಇದನ್ನೂ ಓದಿ: ಕೋಲಾರ: ಬದುಕಿರುವ ರೈತನಿಗೆ ಮರಣ ಪ್ರಮಾಣ ಪತ್ರ ಕೊಟ್ಟ ಅಧಿಕಾರಿಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

“ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗದಿದ್ದರೆ ಮತ್ತೆ ಹಾಗೆ ಮಾಡ್ತಾರೆ”: ಅತ್ಯಾಚಾರ ಸಂತ್ರಸ್ತೆಯ ಸಹೋದರಿ ಹೇಳಿಕೆ

0
"ಪ್ರಜ್ವಲ್ ಮತ್ತು ರೇವಣ್ಣ ಯಾವತ್ತೂ ತಲೆ ಎತ್ತಿ ನಡೆಯಬಾರದು, ಅಂತಹ ಶಿಕ್ಷೆಯಾಗಬೇಕು" ಎಂದು ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯೊಬ್ಬರ ಸಹೋದರಿ ಮಾಲಾ (ಹೆಸರು ಬದಲಿಸಲಾಗಿದೆ) ಹೇಳಿರುವುದಾಗಿ thenewsminute.com ವರದಿ ಮಾಡಿದೆ. ಮಾಲಾಗೆ ತನ್ನ ಸಹೋದರಿ...