Homeದಲಿತ್ ಫೈಲ್ಸ್ಕೊಪ್ಪಳ: ಹೊಲಕ್ಕೆ ಎಮ್ಮೆ ಹೋದ ಕಾರಣಕ್ಕೆ ಮೂವರು ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ

ಕೊಪ್ಪಳ: ಹೊಲಕ್ಕೆ ಎಮ್ಮೆ ಹೋದ ಕಾರಣಕ್ಕೆ ಮೂವರು ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ಜಮೀನಿನ ಒಳಗೆ ಜಾನುವಾರು ಹೋದ ಕಾರಣಕ್ಕೆ ಪರಿಶಿಷ್ಟ ಪಂಗಡ (ವಾಲ್ಮೀಕಿ ಸಮುದಾಯ)ದ ಮೂವರು ಯುವಕರ ಮೇಲೆ, ಕುರುಬ ಸಮುದಾಯದವರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಈ ಸಂಬಂಧ ಜಿಲ್ಲೆಯ ತಾವರೆಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾರತೀಯ ದಂಡ ಸಂಹಿತೆ ಸೆಕ್ಷನ್‌ 143, 147, 148, 323, 324, 307, 504, 506, 149 ಮತ್ತು ‘ಎಸ್‌ಸಿ ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾ‌ಯ್ದೆ’ಯ ಸೆಕ್ಷನ್‌ 3 (1)(r), 3(1)(s), 3(2)(va) ಅಡಿಯಲ್ಲಿ ಜನವರಿ 21ರಂದು ಪ್ರಕರಣ ದಾಖಲಾಗಿದೆ.

‌ಏನಿದು ವಿವಾದ?

ವಾಲ್ಮೀಕಿ ಸಮುದಾಯದ ಆಂಜನೇಯಗೌಡ ಮತ್ತು ಇತರ ಇಬ್ಬರು ಸಹೋದರರು ಹಲ್ಲೆಗೆ ಒಳಗಾಗಿದ್ದಾರೆ. ದಿನಾಂಕ 21-01-2023ರಂದು ಸಂಜೆ 7.30ರ ಸುಮಾರಿಗೆ ತಾವರಗೆರೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪೊಲೀಸರು ಮಾಹಿತಿ ಪಡೆದಿದ್ದಾರೆ.

ಕುಷ್ಟಗಿ ತಾಲ್ಲೂಕಿನ ಗರ್ಜನಾಳ ಗ್ರಾಮದ ಮಾನನಗೌಡ ಮತ್ತು ಪರಮಪ್ಪ ಅವರ ಜಮೀನುಗಳು ಅಕ್ಕಪಕ್ಕದಲ್ಲಿ ಇದ್ದು, ಒಂದು ತಿಂಗಳ ಹಿಂದೆ ಆಂಜನೇಯಗೌಡ (ಮಾನನಗೌಡ ಅವರ ಮಗ) ಅವರ ಜಮೀನಿಗೆ ಪರಮಪ್ಪ ಅವರು ಕುರಿ ಮತ್ತು ದನಗಳನ್ನು ಬಿಟ್ಟಿದ್ದರು. ಈ ವಿಚಾರವಾಗಿ ಪ್ರಶ್ನಿಸಿದಾಗ ಊರಿನ ಹಿರಿಯರು ಪರಮಪ್ಪನವರಿಗೆ ಬುದ್ಧಿ ವಾದ ಹೇಳಿದ್ದರು. ಈ ರೀತಿ ಬಿಟ್ಟು ಜಗಳ ಮಾಡಿಕೊಳ್ಳಬಾರದು ಎಂದು ತಿಳಿಸಿದ್ದರು. ಆವಾಗಿನಿಂದ ಪರಮಪ್ಪ ಅವರು ಆಂಜನೇಯಗೌಡನ ಕುಟುಂಬದ ಮೇಲೆ ಸಿಟ್ಟಾಗಿದ್ದರು.

ಜನವರಿ 21ರಂದು ಸಂಜೆ 5.30 ಗಂಟೆ ಸುಮಾರಿಗೆ ಆಂಜನೇಯಗೌಡರ ಜಾನುವಾರು ಪರಮಪ್ಪ ಕಂಬಳಿಯವರ ಜಮೀನಿಗೆ ಆಕಸ್ಮಿಕವಾಗಿ ಹೋಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಪರಮಪ್ಪ, ಆಂಜನೇಯಗೌಡನ ತಮ್ಮನಾದ ಬಸವನಗೌಡನಿಗೆ ಹೊಡೆದಿದ್ದರು. ಜೊತೆಗೆ ಇವರ ಎಮ್ಮೆಯನ್ನು ತಮ್ಮ ಹೊಲದಲ್ಲಿ ಕಟ್ಟಿ ಹಾಕಿಕೊಂಡಿದ್ದರು. ಸಹೋದರರಾದ ಆಂಜನೇಯಗೌಡ, ದುರುಗನಗೌಡ ಮತ್ತು ಬಸವನಗೌಡ ಮೂವರು ಸೇರಿಕೊಂಡು ಸಂಜೆ 6.30ರ ಸುಮಾರಿಗೆ ಹೊಲದ ಬಳಿ ಬಂದರು. “ಆಕಸ್ಮಿಕವಾಗಿ ನಮ್ಮ ಎಮ್ಮೆ ಬಂದಿದೆ. ಆದರೆ ಬಸವನಗೌಡನಿಗೆ ಹೊಡೆದಿದ್ದೀರಿ. ಅಲ್ಲದೆ ನಮ್ಮ ಎಮ್ಮೆಯನ್ನೂ ಕಟ್ಟಿ ಹಾಕಿಕೊಂಡಿದ್ದೀರಿ. ಕೂಡಿ ಹಾಕಿರುವ ನಮ್ಮ ಎಮ್ಮೆಯನ್ನು ಬಿಟ್ಟುಬಿಡಿ” ಎಂದು ಆಂಜನೇಯಗೌಡ ಕೇಳಿದ್ದರು.

ಆಗ ಜಗಳ ತೆಗೆದಿರುವ ಪರಮಪ್ಪ, “ಈ ಹಿಂದೆ ಗ್ರಾಮದ ಹಿರಿಯರಿಗೆ ತಿಳಿಸಿ ನಮಗೆ ಅವಮಾನ ಮಾಡಿದ್ದೀರಿ” ಎಂದು ತನ್ನವರ ಗುಂಪು ಕಟ್ಟಿಕೊಂಡು ಹಲ್ಲೆ ನಡೆಸಿದ್ದಾರೆ, ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಬಸವನಗೌಡ, ದುರುಗನಗೌಡ, ಆಂಜನೇಯಗೌಡ ಹಲ್ಲೆಗೊಳಗಾಗಿದ್ದಾರೆ. ಕುರುಬ ಸಮುದಾಯದ ಪರಮಪ್ಪ, ಬಾಲಪ್ಪ, ಬೀರಪ್ಪ, ಮಹಲಿಂಗರಾಯ, ಯಮನೂರಪ್ಪ, ಶಿವಗ್ಯಾನಪ್ಪ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ.

“ಘಟನೆ ನಡೆದು ಹತ್ತು ದಿನಗಳಾದರೂ ಆರೋಪಿಗಳ ಬಂಧನವಾಗಿಲ್ಲ. ಅವರು ಊರಿನಲ್ಲಿ ಆರಾಮವಾಗಿ ಅಡ್ಡಾಡಿಕೊಂಡು ಇದ್ದಾರೆ” ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...