Homeದಲಿತ್ ಫೈಲ್ಸ್ಕೊಪ್ಪಳ: ಹೊಲಕ್ಕೆ ಎಮ್ಮೆ ಹೋದ ಕಾರಣಕ್ಕೆ ಮೂವರು ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ

ಕೊಪ್ಪಳ: ಹೊಲಕ್ಕೆ ಎಮ್ಮೆ ಹೋದ ಕಾರಣಕ್ಕೆ ಮೂವರು ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ಜಮೀನಿನ ಒಳಗೆ ಜಾನುವಾರು ಹೋದ ಕಾರಣಕ್ಕೆ ಪರಿಶಿಷ್ಟ ಪಂಗಡ (ವಾಲ್ಮೀಕಿ ಸಮುದಾಯ)ದ ಮೂವರು ಯುವಕರ ಮೇಲೆ, ಕುರುಬ ಸಮುದಾಯದವರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಈ ಸಂಬಂಧ ಜಿಲ್ಲೆಯ ತಾವರೆಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾರತೀಯ ದಂಡ ಸಂಹಿತೆ ಸೆಕ್ಷನ್‌ 143, 147, 148, 323, 324, 307, 504, 506, 149 ಮತ್ತು ‘ಎಸ್‌ಸಿ ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾ‌ಯ್ದೆ’ಯ ಸೆಕ್ಷನ್‌ 3 (1)(r), 3(1)(s), 3(2)(va) ಅಡಿಯಲ್ಲಿ ಜನವರಿ 21ರಂದು ಪ್ರಕರಣ ದಾಖಲಾಗಿದೆ.

‌ಏನಿದು ವಿವಾದ?

ವಾಲ್ಮೀಕಿ ಸಮುದಾಯದ ಆಂಜನೇಯಗೌಡ ಮತ್ತು ಇತರ ಇಬ್ಬರು ಸಹೋದರರು ಹಲ್ಲೆಗೆ ಒಳಗಾಗಿದ್ದಾರೆ. ದಿನಾಂಕ 21-01-2023ರಂದು ಸಂಜೆ 7.30ರ ಸುಮಾರಿಗೆ ತಾವರಗೆರೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪೊಲೀಸರು ಮಾಹಿತಿ ಪಡೆದಿದ್ದಾರೆ.

ಕುಷ್ಟಗಿ ತಾಲ್ಲೂಕಿನ ಗರ್ಜನಾಳ ಗ್ರಾಮದ ಮಾನನಗೌಡ ಮತ್ತು ಪರಮಪ್ಪ ಅವರ ಜಮೀನುಗಳು ಅಕ್ಕಪಕ್ಕದಲ್ಲಿ ಇದ್ದು, ಒಂದು ತಿಂಗಳ ಹಿಂದೆ ಆಂಜನೇಯಗೌಡ (ಮಾನನಗೌಡ ಅವರ ಮಗ) ಅವರ ಜಮೀನಿಗೆ ಪರಮಪ್ಪ ಅವರು ಕುರಿ ಮತ್ತು ದನಗಳನ್ನು ಬಿಟ್ಟಿದ್ದರು. ಈ ವಿಚಾರವಾಗಿ ಪ್ರಶ್ನಿಸಿದಾಗ ಊರಿನ ಹಿರಿಯರು ಪರಮಪ್ಪನವರಿಗೆ ಬುದ್ಧಿ ವಾದ ಹೇಳಿದ್ದರು. ಈ ರೀತಿ ಬಿಟ್ಟು ಜಗಳ ಮಾಡಿಕೊಳ್ಳಬಾರದು ಎಂದು ತಿಳಿಸಿದ್ದರು. ಆವಾಗಿನಿಂದ ಪರಮಪ್ಪ ಅವರು ಆಂಜನೇಯಗೌಡನ ಕುಟುಂಬದ ಮೇಲೆ ಸಿಟ್ಟಾಗಿದ್ದರು.

ಜನವರಿ 21ರಂದು ಸಂಜೆ 5.30 ಗಂಟೆ ಸುಮಾರಿಗೆ ಆಂಜನೇಯಗೌಡರ ಜಾನುವಾರು ಪರಮಪ್ಪ ಕಂಬಳಿಯವರ ಜಮೀನಿಗೆ ಆಕಸ್ಮಿಕವಾಗಿ ಹೋಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಪರಮಪ್ಪ, ಆಂಜನೇಯಗೌಡನ ತಮ್ಮನಾದ ಬಸವನಗೌಡನಿಗೆ ಹೊಡೆದಿದ್ದರು. ಜೊತೆಗೆ ಇವರ ಎಮ್ಮೆಯನ್ನು ತಮ್ಮ ಹೊಲದಲ್ಲಿ ಕಟ್ಟಿ ಹಾಕಿಕೊಂಡಿದ್ದರು. ಸಹೋದರರಾದ ಆಂಜನೇಯಗೌಡ, ದುರುಗನಗೌಡ ಮತ್ತು ಬಸವನಗೌಡ ಮೂವರು ಸೇರಿಕೊಂಡು ಸಂಜೆ 6.30ರ ಸುಮಾರಿಗೆ ಹೊಲದ ಬಳಿ ಬಂದರು. “ಆಕಸ್ಮಿಕವಾಗಿ ನಮ್ಮ ಎಮ್ಮೆ ಬಂದಿದೆ. ಆದರೆ ಬಸವನಗೌಡನಿಗೆ ಹೊಡೆದಿದ್ದೀರಿ. ಅಲ್ಲದೆ ನಮ್ಮ ಎಮ್ಮೆಯನ್ನೂ ಕಟ್ಟಿ ಹಾಕಿಕೊಂಡಿದ್ದೀರಿ. ಕೂಡಿ ಹಾಕಿರುವ ನಮ್ಮ ಎಮ್ಮೆಯನ್ನು ಬಿಟ್ಟುಬಿಡಿ” ಎಂದು ಆಂಜನೇಯಗೌಡ ಕೇಳಿದ್ದರು.

ಆಗ ಜಗಳ ತೆಗೆದಿರುವ ಪರಮಪ್ಪ, “ಈ ಹಿಂದೆ ಗ್ರಾಮದ ಹಿರಿಯರಿಗೆ ತಿಳಿಸಿ ನಮಗೆ ಅವಮಾನ ಮಾಡಿದ್ದೀರಿ” ಎಂದು ತನ್ನವರ ಗುಂಪು ಕಟ್ಟಿಕೊಂಡು ಹಲ್ಲೆ ನಡೆಸಿದ್ದಾರೆ, ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಬಸವನಗೌಡ, ದುರುಗನಗೌಡ, ಆಂಜನೇಯಗೌಡ ಹಲ್ಲೆಗೊಳಗಾಗಿದ್ದಾರೆ. ಕುರುಬ ಸಮುದಾಯದ ಪರಮಪ್ಪ, ಬಾಲಪ್ಪ, ಬೀರಪ್ಪ, ಮಹಲಿಂಗರಾಯ, ಯಮನೂರಪ್ಪ, ಶಿವಗ್ಯಾನಪ್ಪ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ.

“ಘಟನೆ ನಡೆದು ಹತ್ತು ದಿನಗಳಾದರೂ ಆರೋಪಿಗಳ ಬಂಧನವಾಗಿಲ್ಲ. ಅವರು ಊರಿನಲ್ಲಿ ಆರಾಮವಾಗಿ ಅಡ್ಡಾಡಿಕೊಂಡು ಇದ್ದಾರೆ” ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...