Homeದಲಿತ್ ಫೈಲ್ಸ್ಕೊಪ್ಪಳ: ಹೊಲಕ್ಕೆ ಎಮ್ಮೆ ಹೋದ ಕಾರಣಕ್ಕೆ ಮೂವರು ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ

ಕೊಪ್ಪಳ: ಹೊಲಕ್ಕೆ ಎಮ್ಮೆ ಹೋದ ಕಾರಣಕ್ಕೆ ಮೂವರು ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ಜಮೀನಿನ ಒಳಗೆ ಜಾನುವಾರು ಹೋದ ಕಾರಣಕ್ಕೆ ಪರಿಶಿಷ್ಟ ಪಂಗಡ (ವಾಲ್ಮೀಕಿ ಸಮುದಾಯ)ದ ಮೂವರು ಯುವಕರ ಮೇಲೆ, ಕುರುಬ ಸಮುದಾಯದವರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಈ ಸಂಬಂಧ ಜಿಲ್ಲೆಯ ತಾವರೆಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾರತೀಯ ದಂಡ ಸಂಹಿತೆ ಸೆಕ್ಷನ್‌ 143, 147, 148, 323, 324, 307, 504, 506, 149 ಮತ್ತು ‘ಎಸ್‌ಸಿ ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾ‌ಯ್ದೆ’ಯ ಸೆಕ್ಷನ್‌ 3 (1)(r), 3(1)(s), 3(2)(va) ಅಡಿಯಲ್ಲಿ ಜನವರಿ 21ರಂದು ಪ್ರಕರಣ ದಾಖಲಾಗಿದೆ.

‌ಏನಿದು ವಿವಾದ?

ವಾಲ್ಮೀಕಿ ಸಮುದಾಯದ ಆಂಜನೇಯಗೌಡ ಮತ್ತು ಇತರ ಇಬ್ಬರು ಸಹೋದರರು ಹಲ್ಲೆಗೆ ಒಳಗಾಗಿದ್ದಾರೆ. ದಿನಾಂಕ 21-01-2023ರಂದು ಸಂಜೆ 7.30ರ ಸುಮಾರಿಗೆ ತಾವರಗೆರೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪೊಲೀಸರು ಮಾಹಿತಿ ಪಡೆದಿದ್ದಾರೆ.

ಕುಷ್ಟಗಿ ತಾಲ್ಲೂಕಿನ ಗರ್ಜನಾಳ ಗ್ರಾಮದ ಮಾನನಗೌಡ ಮತ್ತು ಪರಮಪ್ಪ ಅವರ ಜಮೀನುಗಳು ಅಕ್ಕಪಕ್ಕದಲ್ಲಿ ಇದ್ದು, ಒಂದು ತಿಂಗಳ ಹಿಂದೆ ಆಂಜನೇಯಗೌಡ (ಮಾನನಗೌಡ ಅವರ ಮಗ) ಅವರ ಜಮೀನಿಗೆ ಪರಮಪ್ಪ ಅವರು ಕುರಿ ಮತ್ತು ದನಗಳನ್ನು ಬಿಟ್ಟಿದ್ದರು. ಈ ವಿಚಾರವಾಗಿ ಪ್ರಶ್ನಿಸಿದಾಗ ಊರಿನ ಹಿರಿಯರು ಪರಮಪ್ಪನವರಿಗೆ ಬುದ್ಧಿ ವಾದ ಹೇಳಿದ್ದರು. ಈ ರೀತಿ ಬಿಟ್ಟು ಜಗಳ ಮಾಡಿಕೊಳ್ಳಬಾರದು ಎಂದು ತಿಳಿಸಿದ್ದರು. ಆವಾಗಿನಿಂದ ಪರಮಪ್ಪ ಅವರು ಆಂಜನೇಯಗೌಡನ ಕುಟುಂಬದ ಮೇಲೆ ಸಿಟ್ಟಾಗಿದ್ದರು.

ಜನವರಿ 21ರಂದು ಸಂಜೆ 5.30 ಗಂಟೆ ಸುಮಾರಿಗೆ ಆಂಜನೇಯಗೌಡರ ಜಾನುವಾರು ಪರಮಪ್ಪ ಕಂಬಳಿಯವರ ಜಮೀನಿಗೆ ಆಕಸ್ಮಿಕವಾಗಿ ಹೋಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಪರಮಪ್ಪ, ಆಂಜನೇಯಗೌಡನ ತಮ್ಮನಾದ ಬಸವನಗೌಡನಿಗೆ ಹೊಡೆದಿದ್ದರು. ಜೊತೆಗೆ ಇವರ ಎಮ್ಮೆಯನ್ನು ತಮ್ಮ ಹೊಲದಲ್ಲಿ ಕಟ್ಟಿ ಹಾಕಿಕೊಂಡಿದ್ದರು. ಸಹೋದರರಾದ ಆಂಜನೇಯಗೌಡ, ದುರುಗನಗೌಡ ಮತ್ತು ಬಸವನಗೌಡ ಮೂವರು ಸೇರಿಕೊಂಡು ಸಂಜೆ 6.30ರ ಸುಮಾರಿಗೆ ಹೊಲದ ಬಳಿ ಬಂದರು. “ಆಕಸ್ಮಿಕವಾಗಿ ನಮ್ಮ ಎಮ್ಮೆ ಬಂದಿದೆ. ಆದರೆ ಬಸವನಗೌಡನಿಗೆ ಹೊಡೆದಿದ್ದೀರಿ. ಅಲ್ಲದೆ ನಮ್ಮ ಎಮ್ಮೆಯನ್ನೂ ಕಟ್ಟಿ ಹಾಕಿಕೊಂಡಿದ್ದೀರಿ. ಕೂಡಿ ಹಾಕಿರುವ ನಮ್ಮ ಎಮ್ಮೆಯನ್ನು ಬಿಟ್ಟುಬಿಡಿ” ಎಂದು ಆಂಜನೇಯಗೌಡ ಕೇಳಿದ್ದರು.

ಆಗ ಜಗಳ ತೆಗೆದಿರುವ ಪರಮಪ್ಪ, “ಈ ಹಿಂದೆ ಗ್ರಾಮದ ಹಿರಿಯರಿಗೆ ತಿಳಿಸಿ ನಮಗೆ ಅವಮಾನ ಮಾಡಿದ್ದೀರಿ” ಎಂದು ತನ್ನವರ ಗುಂಪು ಕಟ್ಟಿಕೊಂಡು ಹಲ್ಲೆ ನಡೆಸಿದ್ದಾರೆ, ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಬಸವನಗೌಡ, ದುರುಗನಗೌಡ, ಆಂಜನೇಯಗೌಡ ಹಲ್ಲೆಗೊಳಗಾಗಿದ್ದಾರೆ. ಕುರುಬ ಸಮುದಾಯದ ಪರಮಪ್ಪ, ಬಾಲಪ್ಪ, ಬೀರಪ್ಪ, ಮಹಲಿಂಗರಾಯ, ಯಮನೂರಪ್ಪ, ಶಿವಗ್ಯಾನಪ್ಪ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ.

“ಘಟನೆ ನಡೆದು ಹತ್ತು ದಿನಗಳಾದರೂ ಆರೋಪಿಗಳ ಬಂಧನವಾಗಿಲ್ಲ. ಅವರು ಊರಿನಲ್ಲಿ ಆರಾಮವಾಗಿ ಅಡ್ಡಾಡಿಕೊಂಡು ಇದ್ದಾರೆ” ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...