Homeಕರ್ನಾಟಕಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

’ಮೈಲಿಗೆ ಎಂದು ಮಗುವಿಗೆ ದಂಡ ಹಾಕುವ ಧರ್ಮವಿದ್ದರೆ ಅದು ನಮ್ಮ ಹೆಮ್ಮೆಯ ಸನಾತನ ಹಿಂದೂ ಧರ್ಮ’

- Advertisement -
- Advertisement -

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಿಯಾಪುರ ಗ್ರಾಮದಲ್ಲಿ ದಲಿತ ಸಮುದಾಯದ ಮಗುವೊಂದು ಆಕಸ್ಮಿಕವಾಗಿ ದೇವಸ್ಥಾನ ಪ್ರವೇಶಿಸಿದಕ್ಕೆ ಮಗುವಿನ ಕುಟುಂಬಕ್ಕೆ ಗ್ರಾಮಸ್ಥರು ದಂಡ ವಿಧಿಸಿದ್ದರು. ದೇವಸ್ಥಾನ ಶುದ್ಧಿಕರಿಸಿ ಅಸ್ಪೃಶ್ಯತೆ ಆಚರಿಸಿದ್ದರು, ಆದರೂ ಘಟನೆ ಬಗ್ಗೆ ದೂರು ಮಾತ್ರ ದಾಖಲಾಗದಕ್ಕೆ ದಲಿತಪರ ಸಂಘಟನೆಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತು ಪ್ರಕರಣ ದಾಖಲಿಸಿಕೊಳ್ಳದೆ ಶಾಂತಿ-ಸೌಹಾರ್ದ ಸಭೆ ನಡೆಸಿ ಪ್ರಕರಣವನ್ನು ಮುಚ್ಚಿ ಹಾಕಲು ಅಧಿಕಾರಿಗಳು ಪ್ರಯತ್ನಿಸಿದ್ದಾರೆ ಎಂದು ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಅಧ್ಯಕ್ಷ ಕರಿಯಪ್ಪ ಗುಡಿಮನಿ ಆರೋಪಿಸಿದ್ದಾರೆ.

ಕುಷ್ಟಗಿ ತಾಲೂಕಿನ ಮಿಯಾಪುರದಲ್ಲಿ ಸೆ. 4 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚನ್ನದಾಸರ ಸಮುದಾಯದ ಮಗುವಿನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಆಂಜನೇಯ ದೇವಸ್ಥಾನಕ್ಕೆ ಕುಟುಂಬದವರು ತೆರಳಿದ್ದರು. ಆಕಸ್ಮಿಕವಾಗಿ ಮಗು ದೇವಸ್ಥಾನದ ಒಳಗೆ ಪ್ರವೇಶಿಸಿದೆ. ದಲಿತರು ಗುಡಿ ಪ್ರವೇಶಿಸಿದ್ದಕ್ಕೆ ಅಪವಿತ್ರವಾಗಿದೆ ಎಂದು ಸೆ.11 ರಂದು ಗ್ರಾಮದ ಸವರ್ಣಿಯರು ಸಭೆ ನಡೆಸಿ, ದೇವಸ್ಥಾನವನ್ನು ಶುದ್ಧೀಕರಿಸಿದ್ದರು. ಕುಟುಂಬಕ್ಕೆ 25 ಸಾವಿರ ರೂಪಾಯಿ ದಂಡ ವಿಧಿಸಿದ್ದರು.

ಇದನ್ನೂ ಓದಿ: ಅತ್ಯಾಚಾರ ನಿಲ್ಲಬೇಕು, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು: ಸೈಕ್ಲಿಂಗ್ ಜಾಗೃತಿ ಮೂಡಿಸುತ್ತಿರುವ ಕಿರಣ್

ಬಳಿಕ ಗ್ರಾಮಕ್ಕೆ ಪೊಲೀಸ್‌, ಕಂದಾಯ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ದಂಡ ವಿಧಿಸಿದವರಿಗೆ ಎಚ್ಚರಿಕೆ ನೀಡಿ, ಗ್ರಾಮಸ್ಥರಿಗೆ ತಿಳಿವಳಿಕೆ ಹೇಳಿದ್ದರು. ಆದರೆ, ಕಾನೂನು ಕ್ರಮ ಕೈಗೊಂಡಿಲ್ಲ.

ಕುಷ್ಟಗಿ ತಹಶೀಲ್ದಾರ ಸಿದ್ದೇಶ, ಗಂಗಾವತಿ ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಚಂದ್ರ ಸಂಗನಾಳ, ಸಿಪಿಐ ನಿಂಗಪ್ಪ ಎನ್‌.ಆರ್‌, ಪಿಎಸ್‌ಐಗಳಾದ ತಿಮ್ಮಣ್ಣ ನಾಯಕ, ಅಶೋಕ ಬೇವೂರು, ಕಂದಾಯ ನಿರೀಕ್ಷಕ ಉಮೇಶಗೌಡ ಪಾಟೀಲ್‌, ಪಿಡಿಒ ವೆಂಕಟೇಶ ನಾಯ್ಕ್‌ ಇದ್ದರು ಭೇಟಿ ನೀಡಿ, ಶಾಂತಿ-ಸೌಹಾರ್ದ ಸಭೆ ನಡೆಸಿದ್ದರು.

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಅಧ್ಯಕ್ಷ, ಹೋರಾಟಗಾರ ಕರಿಯಪ್ಪ ಗುಡಿಮನಿ, “ಗಂಗಾವತಿ ಡಿವೈಎಸ್‌ಪಿ ಸಭೆ ನಡೆಸಿ ಸುಮ್ಮನೆ ಬಿಟ್ಟಿದ್ದಾರೆ. ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳದೆ ತಪ್ಪನ್ನು ಮುಚ್ಚಿಡಲು ಸಭೆ ನಡೆಸಿದ್ದಾರೆ. ಅವರು ಅಸ್ಪೃಶ್ಯತಾ ನಿವಾರಣೆ ಬಗ್ಗೆ ತಿಳಿ ಹೇಳಬೇಕಿತ್ತು. ಆದರೆ,
ದೂರು ದಾಖಲಾಗುವುದು ಬೇಡ. ಶಾಂತಿ ಕಾಪಾಡಿ ಎಂದು ಬಾಯಿ ಮಾತಿನಲ್ಲಿ ಹೇಳಿದ್ದಾರೆ” ಎಂದು ಆರೋಪಿಸಿದ್ದಾರೆ.

PC: public tv

“ಸಭೆ ನಡೆಸಿದ ಮಾತ್ರಕ್ಕೆ ಆ ದಲಿತ ಕುಟುಂಬಕ್ಕೆ ಆಗಿರುವ ಅವಮಾನ. ಮಾನಸಿಕ ಹಿಂಸೆ ಕಡಿಮೆಯಾಗುತ್ತದೆಯೇ…? ಅವರ ಮೇಲಾದ ದೌರ್ಜನ್ಯದ ಬಗ್ಗೆ ನೋವು ಇದ್ದೆ ಇರುತ್ತದೆ. ಕೊಪ್ಪಳ ಜಿಲ್ಲೆಯಲ್ಲಿ ಸರಣಿ ಘಟನೆಗಳು ಆಗುತ್ತಿವೆ. ಡಿವೈಎಸ್‌ಪಿ ರುದ್ರೇಶ ಉಜ್ಜನಕೊಪ್ಪ ಅವರ ವ್ಯಾಪ್ತಿಯ ಗ್ರಾಮಗಳಲ್ಲಿ ದಲಿತರ ಮೇಲೆ ಅವಮಾನ, ಶೋಷಣೆ ನಡೆಯುತ್ತಲೇ ಇವೆ. ಪೊಲೀಸರು ಉಳ್ಳವರ ಪರ ಇದ್ದಾರೆ. ಹೀಗಾಗಿ ಅವರು ಘಟನೆಗಳನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಇವರನ್ನು ಗಂಗಾವತಿಯಿಂದ ವರ್ಗಾವಣೆ  ಮಾಡಬೇಕು. ನಾವು ನಮ್ಮ ಸಂಘದ ವತಿಯಿಂದ ಗ್ರಾಮಕ್ಕೆ ಭೇಟಿ ನೀಡುತ್ತೇವೆ” ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಘಟನೆಯನ್ನು ಖಂಡಿಸಿರುವ ಭೀಮ್ ಆರ್ಮಿಯ ಮುಖಂಡ ನಟರಾಜ್ ದಿಂಡಗೂರು, “ಮನುಷ್ಯರನ್ನು ಮನುಷ್ಯ ಎಂದು ನೋಡದ ಧರ್ಮ ಇದು. ಆಡವಾಡುವ ಮಗುವಿನ ಮೇಲೆ ಅಸ್ಪೃಶ್ಯತಾ ಆಚರಣೆ ನಡೆಸುವುದು ಅಮಾನವೀಯ. ಅಲ್ಲಿ ಕಾನೂನು ವ್ಯವಸ್ಥೆ ಸವರ್ಣಿಯರ ಪರವಾಗಿದೆ. ಇವರು ದೊಡ್ಡ ದೊಡ್ಡ ಭಾಷಣ ಮಾಡುತ್ತಾರೆ. ನಾವೆಲ್ಲ ಹಿಂದೂಗಳು ಒಂದು ಎಂದು..ಆದರೆ, ಇಂತಹ ಘಟನೆಗಳು ಬಂದಾಗ ನಾವು ಯಾರು…? ನಮ್ಮ ಅಸ್ತಿತ್ವವೇನು…? ಮೈಲಿಗೆ ಎಂದು ಮಗುವಿಗೆ ದಂಡ ಹಾಕುವ ಧರ್ಮವಿದ್ದರೆ ಅದು ನಮ್ಮ ಹೆಮ್ಮೆಯ ಸನಾತನ ಹಿಂದೂ ಧರ್ಮ. ಇಂತಹ ಘಟನೆಗಳಿಗೆ ತಾಲೂಕು ಆಡಳಿತ, ಜಿಲ್ಲಾಡಳಿತ ಕಾರಣ. ಇಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಕೂಡ ಘಟನೆಯನ್ನು ಖಂಡಿಸಿದ್ದು, “ಬಿಜೆಪಿ ತನ್ನ ಆಡಳಿತದಲ್ಲಿ ದಲಿತ ವಿರೋಧಿ ವಾತಾವರಣ ನಿರ್ಮಿಸುತ್ತಿದೆ. ದಲಿತರಿಗೆ ಮೂತ್ರ ಕುಡಿಸುವುದರಿಂದ ಹಿಡಿದು ಬಹಿಷ್ಕಾರ, ಹಲ್ಲೆಯ ಪ್ರಕರಣಗಳು ಹೆಚ್ಚುತ್ತಿವೆ. ಮನುವಾದಿ ಬಿಜೆಪಿ ಆಡಳಿತದಲ್ಲಿ ದಲಿತರಿಗೆ ನೆಮ್ಮದಿಯ ಬದುಕಿಲ್ಲದಾಗಿದೆ. ಕೇಂದ್ರ ಸಚಿವ ನಾರಾಯಣಸ್ವಾಮಿ ಅವರು ಕಟ್ಟಲು ಹೊರಟ ಹಿಂದೂರಾಷ್ಟ್ರದ ಅಡಿಗಲ್ಲು ಇದೇನಾ!?” ಎಂದು ಪ್ರಶ್ನಿಸಿದೆ.

ಕೊಪ್ಪಳ ಜಿಲ್ಲೆಯಲ್ಲಿ ಈಗಲೂ ಸಹ ಗ್ರಾಮೀಣ ಪ್ರದೇಶಗಳಲ್ಲಿ ದಲಿತರ ಮೇಲೆ ಶೋಷಣೆ ನಡೆಯುತ್ತಲೆ ಇದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ಆಗಸ್ಟ್ ತಿಂಗಳಲ್ಲಿ ಕೊಪ್ಪಳದ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಮಾದಿಗ ಸಮುದಾಯದ ಜನರ ಮೇಲೆ, ಕುರುಬ ಮತ್ತು ನಾಯಕ ಸಮುದಯಗಳ ಜನರು ಗುಂಪು ಕಟ್ಟಿಕೊಂಡು ಬಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು.


ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ ಗುಡಿಮನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...