Homeಕರ್ನಾಟಕಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

’ಮೈಲಿಗೆ ಎಂದು ಮಗುವಿಗೆ ದಂಡ ಹಾಕುವ ಧರ್ಮವಿದ್ದರೆ ಅದು ನಮ್ಮ ಹೆಮ್ಮೆಯ ಸನಾತನ ಹಿಂದೂ ಧರ್ಮ’

- Advertisement -
- Advertisement -

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಿಯಾಪುರ ಗ್ರಾಮದಲ್ಲಿ ದಲಿತ ಸಮುದಾಯದ ಮಗುವೊಂದು ಆಕಸ್ಮಿಕವಾಗಿ ದೇವಸ್ಥಾನ ಪ್ರವೇಶಿಸಿದಕ್ಕೆ ಮಗುವಿನ ಕುಟುಂಬಕ್ಕೆ ಗ್ರಾಮಸ್ಥರು ದಂಡ ವಿಧಿಸಿದ್ದರು. ದೇವಸ್ಥಾನ ಶುದ್ಧಿಕರಿಸಿ ಅಸ್ಪೃಶ್ಯತೆ ಆಚರಿಸಿದ್ದರು, ಆದರೂ ಘಟನೆ ಬಗ್ಗೆ ದೂರು ಮಾತ್ರ ದಾಖಲಾಗದಕ್ಕೆ ದಲಿತಪರ ಸಂಘಟನೆಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತು ಪ್ರಕರಣ ದಾಖಲಿಸಿಕೊಳ್ಳದೆ ಶಾಂತಿ-ಸೌಹಾರ್ದ ಸಭೆ ನಡೆಸಿ ಪ್ರಕರಣವನ್ನು ಮುಚ್ಚಿ ಹಾಕಲು ಅಧಿಕಾರಿಗಳು ಪ್ರಯತ್ನಿಸಿದ್ದಾರೆ ಎಂದು ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಅಧ್ಯಕ್ಷ ಕರಿಯಪ್ಪ ಗುಡಿಮನಿ ಆರೋಪಿಸಿದ್ದಾರೆ.

ಕುಷ್ಟಗಿ ತಾಲೂಕಿನ ಮಿಯಾಪುರದಲ್ಲಿ ಸೆ. 4 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚನ್ನದಾಸರ ಸಮುದಾಯದ ಮಗುವಿನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಆಂಜನೇಯ ದೇವಸ್ಥಾನಕ್ಕೆ ಕುಟುಂಬದವರು ತೆರಳಿದ್ದರು. ಆಕಸ್ಮಿಕವಾಗಿ ಮಗು ದೇವಸ್ಥಾನದ ಒಳಗೆ ಪ್ರವೇಶಿಸಿದೆ. ದಲಿತರು ಗುಡಿ ಪ್ರವೇಶಿಸಿದ್ದಕ್ಕೆ ಅಪವಿತ್ರವಾಗಿದೆ ಎಂದು ಸೆ.11 ರಂದು ಗ್ರಾಮದ ಸವರ್ಣಿಯರು ಸಭೆ ನಡೆಸಿ, ದೇವಸ್ಥಾನವನ್ನು ಶುದ್ಧೀಕರಿಸಿದ್ದರು. ಕುಟುಂಬಕ್ಕೆ 25 ಸಾವಿರ ರೂಪಾಯಿ ದಂಡ ವಿಧಿಸಿದ್ದರು.

ಇದನ್ನೂ ಓದಿ: ಅತ್ಯಾಚಾರ ನಿಲ್ಲಬೇಕು, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು: ಸೈಕ್ಲಿಂಗ್ ಜಾಗೃತಿ ಮೂಡಿಸುತ್ತಿರುವ ಕಿರಣ್

ಬಳಿಕ ಗ್ರಾಮಕ್ಕೆ ಪೊಲೀಸ್‌, ಕಂದಾಯ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ದಂಡ ವಿಧಿಸಿದವರಿಗೆ ಎಚ್ಚರಿಕೆ ನೀಡಿ, ಗ್ರಾಮಸ್ಥರಿಗೆ ತಿಳಿವಳಿಕೆ ಹೇಳಿದ್ದರು. ಆದರೆ, ಕಾನೂನು ಕ್ರಮ ಕೈಗೊಂಡಿಲ್ಲ.

ಕುಷ್ಟಗಿ ತಹಶೀಲ್ದಾರ ಸಿದ್ದೇಶ, ಗಂಗಾವತಿ ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಚಂದ್ರ ಸಂಗನಾಳ, ಸಿಪಿಐ ನಿಂಗಪ್ಪ ಎನ್‌.ಆರ್‌, ಪಿಎಸ್‌ಐಗಳಾದ ತಿಮ್ಮಣ್ಣ ನಾಯಕ, ಅಶೋಕ ಬೇವೂರು, ಕಂದಾಯ ನಿರೀಕ್ಷಕ ಉಮೇಶಗೌಡ ಪಾಟೀಲ್‌, ಪಿಡಿಒ ವೆಂಕಟೇಶ ನಾಯ್ಕ್‌ ಇದ್ದರು ಭೇಟಿ ನೀಡಿ, ಶಾಂತಿ-ಸೌಹಾರ್ದ ಸಭೆ ನಡೆಸಿದ್ದರು.

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಅಧ್ಯಕ್ಷ, ಹೋರಾಟಗಾರ ಕರಿಯಪ್ಪ ಗುಡಿಮನಿ, “ಗಂಗಾವತಿ ಡಿವೈಎಸ್‌ಪಿ ಸಭೆ ನಡೆಸಿ ಸುಮ್ಮನೆ ಬಿಟ್ಟಿದ್ದಾರೆ. ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳದೆ ತಪ್ಪನ್ನು ಮುಚ್ಚಿಡಲು ಸಭೆ ನಡೆಸಿದ್ದಾರೆ. ಅವರು ಅಸ್ಪೃಶ್ಯತಾ ನಿವಾರಣೆ ಬಗ್ಗೆ ತಿಳಿ ಹೇಳಬೇಕಿತ್ತು. ಆದರೆ,
ದೂರು ದಾಖಲಾಗುವುದು ಬೇಡ. ಶಾಂತಿ ಕಾಪಾಡಿ ಎಂದು ಬಾಯಿ ಮಾತಿನಲ್ಲಿ ಹೇಳಿದ್ದಾರೆ” ಎಂದು ಆರೋಪಿಸಿದ್ದಾರೆ.

PC: public tv

“ಸಭೆ ನಡೆಸಿದ ಮಾತ್ರಕ್ಕೆ ಆ ದಲಿತ ಕುಟುಂಬಕ್ಕೆ ಆಗಿರುವ ಅವಮಾನ. ಮಾನಸಿಕ ಹಿಂಸೆ ಕಡಿಮೆಯಾಗುತ್ತದೆಯೇ…? ಅವರ ಮೇಲಾದ ದೌರ್ಜನ್ಯದ ಬಗ್ಗೆ ನೋವು ಇದ್ದೆ ಇರುತ್ತದೆ. ಕೊಪ್ಪಳ ಜಿಲ್ಲೆಯಲ್ಲಿ ಸರಣಿ ಘಟನೆಗಳು ಆಗುತ್ತಿವೆ. ಡಿವೈಎಸ್‌ಪಿ ರುದ್ರೇಶ ಉಜ್ಜನಕೊಪ್ಪ ಅವರ ವ್ಯಾಪ್ತಿಯ ಗ್ರಾಮಗಳಲ್ಲಿ ದಲಿತರ ಮೇಲೆ ಅವಮಾನ, ಶೋಷಣೆ ನಡೆಯುತ್ತಲೇ ಇವೆ. ಪೊಲೀಸರು ಉಳ್ಳವರ ಪರ ಇದ್ದಾರೆ. ಹೀಗಾಗಿ ಅವರು ಘಟನೆಗಳನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಇವರನ್ನು ಗಂಗಾವತಿಯಿಂದ ವರ್ಗಾವಣೆ  ಮಾಡಬೇಕು. ನಾವು ನಮ್ಮ ಸಂಘದ ವತಿಯಿಂದ ಗ್ರಾಮಕ್ಕೆ ಭೇಟಿ ನೀಡುತ್ತೇವೆ” ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಘಟನೆಯನ್ನು ಖಂಡಿಸಿರುವ ಭೀಮ್ ಆರ್ಮಿಯ ಮುಖಂಡ ನಟರಾಜ್ ದಿಂಡಗೂರು, “ಮನುಷ್ಯರನ್ನು ಮನುಷ್ಯ ಎಂದು ನೋಡದ ಧರ್ಮ ಇದು. ಆಡವಾಡುವ ಮಗುವಿನ ಮೇಲೆ ಅಸ್ಪೃಶ್ಯತಾ ಆಚರಣೆ ನಡೆಸುವುದು ಅಮಾನವೀಯ. ಅಲ್ಲಿ ಕಾನೂನು ವ್ಯವಸ್ಥೆ ಸವರ್ಣಿಯರ ಪರವಾಗಿದೆ. ಇವರು ದೊಡ್ಡ ದೊಡ್ಡ ಭಾಷಣ ಮಾಡುತ್ತಾರೆ. ನಾವೆಲ್ಲ ಹಿಂದೂಗಳು ಒಂದು ಎಂದು..ಆದರೆ, ಇಂತಹ ಘಟನೆಗಳು ಬಂದಾಗ ನಾವು ಯಾರು…? ನಮ್ಮ ಅಸ್ತಿತ್ವವೇನು…? ಮೈಲಿಗೆ ಎಂದು ಮಗುವಿಗೆ ದಂಡ ಹಾಕುವ ಧರ್ಮವಿದ್ದರೆ ಅದು ನಮ್ಮ ಹೆಮ್ಮೆಯ ಸನಾತನ ಹಿಂದೂ ಧರ್ಮ. ಇಂತಹ ಘಟನೆಗಳಿಗೆ ತಾಲೂಕು ಆಡಳಿತ, ಜಿಲ್ಲಾಡಳಿತ ಕಾರಣ. ಇಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಕೂಡ ಘಟನೆಯನ್ನು ಖಂಡಿಸಿದ್ದು, “ಬಿಜೆಪಿ ತನ್ನ ಆಡಳಿತದಲ್ಲಿ ದಲಿತ ವಿರೋಧಿ ವಾತಾವರಣ ನಿರ್ಮಿಸುತ್ತಿದೆ. ದಲಿತರಿಗೆ ಮೂತ್ರ ಕುಡಿಸುವುದರಿಂದ ಹಿಡಿದು ಬಹಿಷ್ಕಾರ, ಹಲ್ಲೆಯ ಪ್ರಕರಣಗಳು ಹೆಚ್ಚುತ್ತಿವೆ. ಮನುವಾದಿ ಬಿಜೆಪಿ ಆಡಳಿತದಲ್ಲಿ ದಲಿತರಿಗೆ ನೆಮ್ಮದಿಯ ಬದುಕಿಲ್ಲದಾಗಿದೆ. ಕೇಂದ್ರ ಸಚಿವ ನಾರಾಯಣಸ್ವಾಮಿ ಅವರು ಕಟ್ಟಲು ಹೊರಟ ಹಿಂದೂರಾಷ್ಟ್ರದ ಅಡಿಗಲ್ಲು ಇದೇನಾ!?” ಎಂದು ಪ್ರಶ್ನಿಸಿದೆ.

ಕೊಪ್ಪಳ ಜಿಲ್ಲೆಯಲ್ಲಿ ಈಗಲೂ ಸಹ ಗ್ರಾಮೀಣ ಪ್ರದೇಶಗಳಲ್ಲಿ ದಲಿತರ ಮೇಲೆ ಶೋಷಣೆ ನಡೆಯುತ್ತಲೆ ಇದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ಆಗಸ್ಟ್ ತಿಂಗಳಲ್ಲಿ ಕೊಪ್ಪಳದ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಮಾದಿಗ ಸಮುದಾಯದ ಜನರ ಮೇಲೆ, ಕುರುಬ ಮತ್ತು ನಾಯಕ ಸಮುದಯಗಳ ಜನರು ಗುಂಪು ಕಟ್ಟಿಕೊಂಡು ಬಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು.


ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ ಗುಡಿಮನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...