Homeಕರ್ನಾಟಕಕೊಪ್ಪಳ: ಬಿಜೆಪಿ ಭದ್ರಕೋಟೆಯನ್ನು ಛಿದ್ರಗೊಳಿಸಲು ಕಾಂಗ್ರೆಸ್‌ಗೆ ಸುವರ್ಣಾವಕಾಶ!?

ಕೊಪ್ಪಳ: ಬಿಜೆಪಿ ಭದ್ರಕೋಟೆಯನ್ನು ಛಿದ್ರಗೊಳಿಸಲು ಕಾಂಗ್ರೆಸ್‌ಗೆ ಸುವರ್ಣಾವಕಾಶ!?

- Advertisement -
- Advertisement -

ಹಿಂದುತ್ವ ರಾಜಕಾರಣದ ವಿಚಾರದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರ ಕಳೆದ ಒಂದೂವರೆ ದಶಕದಿಂದ ಥೇಟ್ ಚಿಕ್ಕಮಗಳೂರು-ಶಿವಮೊಗ್ಗದ ತದ್ರೂಪಿ. ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಹಿಂದುತ್ವದ ಅಜೆಂಡಾ ಇಲ್ಲಿ ನಿರ್ಣಾಯಕ. ಆದರೆ, 2014ರಲ್ಲಿ ಲೋಕಸಭಾ ಕಣಕ್ಕೆ ಸಂಗಣ್ಣ ಕರಡಿ ಪ್ರವೇಶದೊಂದಿಗೆ ವ್ಯಕ್ತಿಗತ ಸ್ವಪ್ರತಿಷ್ಠೆಗೂ ಕೊಪ್ಪಳ ವೇದಿಕೆಯಾಗಿದೆ. ಮೋದಿ ಅಲೆ ಠುಸ್ ಎನಿಸಿರುವ, ಹಿಂದುತ್ವವೂ ಬಳಲಿ ಬೆಂಡಾಗಿರುವ 2024ರ ಕೊಪ್ಪಳ ಚುನಾವಣೆಯಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಪಾಲಿಗೆ ಸ್ವಪ್ರತಿಷ್ಠೆ ಕೈಹಿಡಿದರಷ್ಟೇ ಗೆಲುವು ಎಂಬ ವಾತಾವರಣ ನಿರ್ಮಾಣವಾಗಿದೆ.

ಅಸಲಿಗೆ ರಾಜ್ಯದಲ್ಲಿ ವಿಭಿನ್ನತೆಗೆ ಹೆಸರಾದ ಕ್ಷೇತ್ರಗಳ ಪೈಕಿ ಕೊಪ್ಪಳವೂ ಒಂದು. ಸ್ವಾತಂತ್ರ್ಯಾನಂತರ ಮೊದಲ ಚುನಾವಣೆ 1952ರಲ್ಲಿ ಈ ಕ್ಷೇತ್ರವನ್ನು ಕುಷ್ಟಗಿ ಲೋಕಸಭಾ ಕ್ಷೇತ್ರ ಎಂದು ಹೆಸರಿಸಲಾಗಿತ್ತು. ದೇಶದಾದ್ಯಂತ ಕಾಂಗ್ರೆಸ್ ಅಲೆ, ರಾಜ್ಯದಲ್ಲಿ ಕೆಂಗಲ್ ಹನುಮಂತಯ್ಯನವರ ವರ್ಚಸ್ಸಿನ ನಡುವೆಯೂ ಶಿವಮೂರ್ತಿ ಅಳವಂಡಿ ಪಕ್ಷೇತರರಾಗಿ ಲೋಕಸಭಾ ಸದಸ್ಯರಾಗಿ ಸಂಸತ್ ಮೆಟ್ಟಿಲೇರಿದ್ದು ಇತಿಹಾಸ.

ತದನಂತರ ಕಾಲಘಟ್ಟದಲ್ಲಿ ಇಂದಿರಾ ಗಾಂಧಿ ಅವರ ಪರಮಾಪ್ತರಾದ ಎಚ್.ಜಿ. ರಾಮುಲು ಈ ಕ್ಷೇತ್ರದಲ್ಲಿ 4 ಬಾರಿ ಗೆಲುವು ಕಂಡು ದಾಖಲೆ ಬರೆದಿದ್ದರು. ಕೊಪ್ಪಳವನ್ನು ಕಾಂಗ್ರೆಸ್ ಭದ್ರಕೋಟೆಯನ್ನಾಗಿಸುವ ನಿಟ್ಟಿನಲ್ಲಿ ಎಚ್.ಜಿ. ರಾಮುಲು ಅವರ ಪಾತ್ರ ದೊಡ್ಡದು. ಆದರೆ, ಸರಿಯಾಗಿ ಎರಡು ದಶಕಗಳ ಹಿಂದೆ ಗಂಗಾವತಿಯಲ್ಲಿ ಮೊಕ್ಕಾಂ ಹೂಡಿದ್ದ ಹಿಂದುತ್ವ ಸಂಘಟನೆಗಳು ಥೇಟ್ ಚಿಕ್ಕಮಗಳೂರಿನ ದತ್ತಪೀಠದ ರೀತಿಯಲ್ಲೇ, ಹನುಮ ಹುಟ್ಟಿದ ಸ್ಥಳ ಎಂದು ಹಿಂದೂ ಜನಸಮೂಹದಿಂದ ನಂಬಲಾಗುವ ಅಂಜನಾದ್ರಿ ಪರ್ವತದಿಂದ ತಮ್ಮ ಎಂದಿನ ಹಿಂದುತ್ವ ರಾಜಕೀಯ ಆಟವಾಡಿ ಕೋಮು ಧ್ರುವೀಕರಣ ಶುರು ಮಾಡಿದ್ದವು.

ಎಚ್.ಜಿ. ರಾಮುಲು

ಪರಿಣಾಮ ಕೊಪ್ಪಳ ಜಿಲ್ಲೆಯ ರಾಜಕೀಯ ಕಣವೇ ಸಂಪೂರ್ಣ ಬದಲಾಗಿಹೋಯ್ತು. ಕೋಮುವಾದದ ಬೆಳೆ ಬಿತ್ತಿ ಮೊದಲ ಫಲ ಉಂಡವರು ಮಾಜಿ ಸಂಸದರಾದ ಶಿವರಾಮೇಗೌಡ. 2009ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಶಿವರಾಮೇಗೌಡ ಅಂದಿನ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 89,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಿ ದಾಖಲೆ ನಿರ್ಮಿಸಿದ್ದರು. ಆದರೆ, 2014ರ ಚುನಾವಣೆಯಲ್ಲಿ ಶಿವರಾಮೇಗೌಡ ಅವರನ್ನು ಒತ್ತಾಯಪೂರ್ವಕವಾಗಿ ಕೆಳಗಿಳಿಸಿದ್ದ ಬಿಜೆಪಿ ಕೊಪ್ಪಳದ ಜನಪ್ರಿಯ ನಾಯಕರಾದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ನೀಡಿ ಎರಡು ಅವಧಿಗೆ ಗೆಲ್ಲಿಸಿಕೊಂಡು ಬಂದಿತ್ತು. ಆದರೆ, ಈ ಬಾರಿಯ ಚಿತ್ರಣ ಸಂಪೂರ್ಣ ಬದಲಾಗಿದೆ.

ಸಂಗಣ್ಣನಿಗೆ ಕೊಕ್ ಕೊಟ್ಟು ಕೆಟ್ಟಿತಾ ಬಿಜೆಪಿ?

ಸಂಗಣ್ಣ ಕರಡಿ ಕೊಪ್ಪಳ ಜಿಲ್ಲೆಯ ಪಾಲಿನ ಜನಪ್ರಿಯ ನಾಯಕ. ಯಾವುದೇ ಪಕ್ಷದ ಚಿಹ್ನೆ ಇಲ್ಲದೆಯೂ ಪಕ್ಷೇತರನಾಗಿ ಗೆದ್ದು ಬರುವ ಶಕ್ತಿ ಹೊಂದಿರುವ ನಾಯಕ ಎಂದೇ ಪ್ರಸದ್ಧಿ ಪಡೆದಿದ್ದಾರೆ. ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಂಗಣ್ಣ ಕರಡಿ, 2013ರಲ್ಲಿ ಸೋಲುಂಡ ಕಾರಣ ಬಿಜೆಪಿ ಸೇರ್ಪಡೆಯಾಗಿದ್ದರು. 2014ರ ಲೋಕಸಭಾ ಟಿಕೆಟ್‌ಅನ್ನೂ ಗಿಟ್ಟಿಸಿದ್ದರು. ಹಿಂದುತ್ವದ ಬಲ, ಮೋದಿ ಅಲೆ ಹಾಗೂ ಸ್ವಪ್ರತಿಷ್ಠೆಯ ಕಾರಣಕ್ಕೆ ಸಂಗಣ್ಣ ಕರಡಿ ಎರಡು ಅವಧಿಗೆ ಗೆದ್ದು ಸಂಸತ್‌ನಲ್ಲಿ ಕೊಪ್ಪಳವನ್ನು ಪ್ರತಿನಿಧಿಸಿದ್ದರು. ಕೊಪ್ಪಳವೂ ಬಿಜೆಪಿ ಭದ್ರಕೋಟೆಯಾಗಿ ಮಾರ್ಪಾಡಾಗಿತ್ತು. ಆದರೆ, ಈ ಬಾರಿ ಬಿಜೆಪಿ ಅವರಿಗೆ ಟಿಕೆಟ್ ನಿರಾಕರಿಸಿರುವುದು ತೀರಾ ಅನಿರೀಕ್ಷಿತ.

ಕೊಪ್ಪಳ ಜಿಲ್ಲೆಯಲ್ಲಿ ಈವರೆಗೆ ಯಾರೂ ಹ್ಯಾಟ್ರಿಕ್ ಗೆಲುವು ಸಾಧಿಸಿದ ಇತಿಹಾಸ ಇಲ್ಲ. ಎಚ್.ಜಿ. ರಾಮುಲು ಈ ಕ್ಷೇತ್ರದಿಂದ 4 ಬಾರಿ ಗೆಲುವು ಸಾಧಿಸಿ ಸಂಸತ್ ಪ್ರವೇಶಿಸಿದ್ದರೂ ಮಧ್ಯೆ ಎರಡು ಬಾರಿ ಸೋಲುಂಡಿದ್ದರು. ಹೀಗಾಗಿ ಸಂಗಣ್ಣ ಕರಡಿ ಹ್ಯಾಟ್ರಿಕ್ ಗೆಲುವು ಸಾಧಿಸಿ ದಾಖಲೆ ಬರೆಯುವ ಹುಮ್ಮಸ್ಸಿನಲ್ಲಿದ್ದರು. ಆದರೆ, ಬಿಜೆಪಿಯಿಂದ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಅಲ್ಲದೆ, ಟಿಕೆಟ್ ನಿರಾಕರಣೆಗೆ ಬಿಜೆಪಿ ಹೈಕಮಾಂಡ್ ನಿಖರ ಕಾರಣವನ್ನೂ ತಿಳಿಸದೆ ಇರುವುದು ಸಂಗಣ್ಣ ಕರಡಿ ಅವರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಲಾಗುತ್ತಿದೆ.

ಕಳೆದ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿ ಯಶಸ್ಸು ಕಂಡಿತ್ತು. ಅದೇ ತಂತ್ರದ ಭಾಗವಾಗಿ ಈಗ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಹೊಸಮುಖ ಡಾ. ಬಸವರಾಜ ಕ್ಯಾವಟರ್ ಅವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದ ಅಸಮಾಧಾನಕ್ಕೆ ಒಳಗಾಗಿರುವ ಸಂಗಣ್ಣ ಕರಡಿ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಎಂದು ಒಲ್ಲದ ಮನಸ್ಸಿನಲ್ಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ತಮ್ಮ ರಾಜಕೀಯ ಹಿನ್ನಡೆಗೆ ಬಿಜೆಪಿಯಲ್ಲಿರುವ ಹಲವರು ಕಾರಣ ಎಂದು ಆರೋಪಿಸಿ, ತಮ್ಮ 30 ವರ್ಷಗಳ ರಾಜಕೀಯ ಎದುರಾಳಿ ಹಿಟ್ನಾಳ ಕುಟುಂಬದ ಪರ ಮತ ಕೇಳುತ್ತಿದ್ದಾರೆ.

ಬಿಜೆಪಿಯನ್ನು ಈ ಬಾರಿ ಸೋಲಿಸಿ ಮುಯ್ಯಿ ತೀರಿಸಿಕೊಳ್ಳುವುದಾಗಿ ಈಗಾಗಲೇ ಘೋಷಿಸಿರುವ ಸಂಗಣ್ಣ ಕರಡಿ ಕುಟುಂಬ ಸಮೇತರಾಗಿ ಬೀದಿಗಿಳಿದು ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸುತ್ತಿದ್ದಾರೆ. ಸ್ಥಳೀಯ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಹಾಗೂ ಸಚಿವ ಕೃಷ್ಣ ಬೈರೇಗೌಡ ಅವರ ಜೊತೆ ಸೇರಿ ಹಿಟ್ನಾಳ್ ಪರ ಅವರು ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ನಡೆಸುತ್ತಿರುವುದು ಇಡೀ ಕ್ಷೇತ್ರದ ಜನರ ಹುಬ್ಬೇರುವಂತೆ ಮಾಡಿದೆ.

ಸಂಗಣ್ಣ ಕರಡಿ

ಲಿಂಗಾಯತ ಸಮುದಾಯದ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ಸಂಗಣ್ಣ ಕರಡಿ ಕಾಂಗ್ರೆಸ್ ಜೊತೆ ಕೈಜೋಡಿಸುವ ಮೂಲಕ ಲಿಂಗಾಯತ ಮತಗಳನ್ನು ಒಡೆಯುತ್ತಾರೆಯೇ? ಎಂಬ ಆತಂಕದ ಜೊತೆಗೆ ಜಿಲ್ಲೆಯಲ್ಲಿ ರಾಜಕೀಯವಾಗಿ ಬಲಿಷ್ಠವಾಗಿರುವ ಹಿಟ್ನಾಳ್ ಹಾಗೂ ಕರಡಿ ಕುಟುಂಬ ಈ ಚುನಾವಣೆಯಲ್ಲಿ ಒಂದಾಗಿರುವುದು ಬಿಜೆಪಿ ಪಾಲಿಗೆ ಪಾಲಿಗೆ ನುಂಗಲಾರದ ತುತ್ತಾಗಿದೆ. ಅಲ್ಲದೆ ಹಿಟ್ನಾಳ್ ಅವರ ಸ್ವಸಮುದಾಯ ಕುರುಬ ಮತಗಳು ಕೂಡ ದೊಡ್ಡ ಸಂಖ್ಯೆಯಲ್ಲಿದ್ದು, ಸಿದ್ದರಾಮಯ್ಯನವರ ಕಾರಣಕ್ಕೂ ಅವು ಇಡುಗಂಟಿನಲ್ಲಿ ಕಾಂಗ್ರೆಸ್ ಪಾಲಾಗಲಿವೆ ಎನ್ನಲಾಗುತ್ತಿದೆ. ಆದುದರಿಂದ ಕಾಂಗ್ರೆಸ್ ಪಾಲಿಗೆ ಈ ಚುನಾವಣೆ ಬಿಜೆಪಿ ಕೋಟೆ ಭೇದಿಸುವ ಕೊನೆಯ ಅವಕಾಶ ಎನಿಸಿಕೊಂಡಿದೆ.

ಚುನಾವಣೆಗೆ ಮುನ್ನವೇ ಆಪರೇಷನ್ ಕಮಲ, ಬಿಜೆಪಿಗೆ ರೆಡ್ಡಿ ಬಲ!

ಕೊಪ್ಪಳ ಲೋಕಸಭಾ ಚುನಾವಣೆ ಬಿಜೆಪಿಯ ಹಲವು ನಾಯಕರ ಪಾಲಿನ ಅಳಿವು-ಉಳಿವಿನ ಪ್ರಶ್ನೆ ಎಂದೇ ಬಣ್ಣಿಸಲಾಗಿದೆ. ಏಕೆಂದರೆ 8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಕೊಪ್ಪಳದ 6 ಕ್ಷೇತ್ರಗಳನ್ನು ವಶಪಡಿಸಿಕೊಳ್ಳುವಲ್ಲಿ ಕಾಂಗ್ರೆಸ್ ಸಫಲವಾಗಿದ್ದರೆ, ಕಳೆದ ಚುನಾವಣೆಯಲ್ಲಿ ಬಿಜೆಪಿಗೆ ದಕ್ಕಿದ್ದು ಕೇವಲ 1 ಕ್ಷೇತ್ರ ಮಾತ್ರ. ಹೀಗಾಗಿ ತಾವು ಬೆಂಬಲ ನೀಡಿದ ಅಭ್ಯರ್ಥಿಗಳು ಗೆದ್ದರೆ ಮಾತ್ರ ತಮ್ಮ ಮುಂದಿನ ರಾಜಕೀಯ ನಡೆ ಮತ್ತಷ್ಟು ಗಟ್ಟಿಯಾಗುವುದು ಎಂಬುದು ಸ್ಥಳೀಯ ಬಿಜೆಪಿ ನಾಯಕರ ಲೆಕ್ಕಾಚಾರ.

ಈ ಲೆಕ್ಕಾಚಾರದ ಭಾಗವಾಗಿಯೇ ಶಾಸಕ ದೊಡ್ಡನಗೌಡ, ಮಾಜಿ ಸಚಿವ ಹಾಲಪ್ಪ ಆಚಾರ್, ಮಾಜಿ ಶಾಸಕ ಪರಣ್ಣ ಮುನವಳ್ಳಿ, ವಿಧಾನಸಭೆ ಪ್ರತಿಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣಗಳವರ, ಮಾಜಿ ಶಾಸಕ ಬಸವರಾಜ ದಢೇಸೂಗೂರು, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ್ ಸೇರಿ ಹಲವು ನಾಯಕರು ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ತಮ್ಮಿಂದಾದ ಎಲ್ಲಾ ಕಸರತ್ತುಗಳನ್ನೂ ನಡೆಸುತ್ತಿದ್ದಾರೆ. ಈ ಪೈಕಿ ಆಪರೇಷನ್ ಕಮಲವೂ ಒಂದು.

ಇದನ್ನೂ ಓದಿ: FACT CHECK : ಬಿಜೆಪಿ ಮಾತ್ರ 272ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದೆ ಎಂಬ ಮೋದಿ…

ಬಿಜೆಪಿ ಸಾಮಾನ್ಯವಾಗಿ ಚುನಾವಣೆಯ ನಂತರ ಆಪರೇಷನ್ ಮಾಡುವುದು ವಾಡಿಕೆ. ಆದರೆ, ಈ ಬಾರಿ ಚುನಾವಣೆಗೆ ಮುನ್ನವೇ ಕೊಪ್ಪಳ ಕ್ಷೇತ್ರದಲ್ಲಿ ಆಪರೇಷನ್ ಕಸರತ್ತಿಗೆ ಮುಂದಾಗಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಪಂಚಮಸಾಲಿ ಸಮುದಾಯದವರಾಗಿದ್ದು, ಇದೇ ಸಮುದಾಯದ ಮಾಜಿ ಸಂಸದ ಶಿವರಾಮೇಗೌಡ ಅವರ ಸೇರ್ಪಡೆಯಿಂದ ಮತಗಳ ಕ್ರೋಢೀಕರಣಕ್ಕೆ ಅನುಕೂಲವಾಗುತ್ತದೆ ಎಂಬ ಕಾರಣಕ್ಕೆ ಅವರನ್ನು ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಮತ್ತೆ ಬಿಜೆಪಿಗೆ ಕರೆತರಲಾಗಿದೆ.

ಜನಾರ್ದನ ರೆಡ್ಡಿ

ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಕಳೆದ ಒಂದು ದಶಕದಿಂದ ಮುಚ್ಚಲಾಗಿದ್ದ ಬಿಜೆಪಿ ಬಾಗಿಲನ್ನು ಈ ಬಾರಿಯ ಚುನಾವಣೆ ಗೆಲುವಿಗಾಗಿ ತೆರೆಯಲಾಗಿದೆ. ಈ ಬೆಳವಣಿಗೆ ಬಿಜೆಪಿ ಬಲವನ್ನು ಕ್ಷೇತ್ರದಲ್ಲಿ ಇಮ್ಮಡಿಗೊಳಿಸಿದ್ದು, ಇನ್ನೂ ಹಲವು ಸಮುದಾಯಗಳ ನಾಯಕರಿಗೆ ಬಲೆ ಬೀಸಲಾಗಿದೆ ಎಂಬ ವರ್ತಮಾನವೂ ಬರುತ್ತಿದೆ.

ಸಮುದಾಯಗಳ ಬಲಾಬಲ?

ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 18,41,560 ಮತಗಳಿದ್ದು, ಅವುಗಳಲ್ಲಿ ಅಂದಾಜು 5 ಲಕ್ಷಕ್ಕೂ ಹೆಚ್ಚು ಲಿಂಗಾಯತ ಮತಗಳಿವೆ. ಈವರೆಗೆ ಬಿಜೆಪಿ ಜೊತೆಗೆ ಗುರುತಿಸಿಕೊಂಡಿದ್ದ ಲಿಂಗಾಯತ ಮತಗಳು ಈ ಬಾರಿ ಒಡೆದರೆ ಅಚ್ಚರಿ ಇಲ್ಲ. ಇದಲ್ಲದೆ, ಕ್ಷೇತ್ರದಲ್ಲಿ 4 ಲಕ್ಷ ಕುರುಬ, 4 ಲಕ್ಷ ಎಸ್‌ಸಿ, ಎಸ್‌ಟಿ ಹಾಗೂ 2 ಲಕ್ಷ ಮುಸ್ಲಿಂ ಮತದಾರರಿದ್ದಾರೆ. ಅಹಿಂದ ಒಳಗಿನ ಇತರೆ ಸಣ್ಣ ಜಾತಿ-ಪಂಗಡಗಳ ಒಟ್ಟು 3 ಲಕ್ಷ ಮತಗಳು ಇವೆ. ಲಿಂಗಾಯತರ, ಕುರುಬರ, ದಲಿತರ ಹಾಗೂ ಮುಸ್ಲಿಂ ಮತಗಳೇ ಇಲ್ಲಿನ ಅಭ್ಯರ್ಥಿ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ.

ಒಟ್ಟಿನಲ್ಲಿ ಬಿಜೆಪಿ ಈ ಬಾರಿ ಕೊಪ್ಪಳ ಕ್ಷೇತ್ರವನ್ನು ಪ್ರಯೋಗಕ್ಕೆ ಒಡ್ಡಿದೆ. ಉತ್ತರ ಭಾರತದಲ್ಲಿ ಕೈಹಿಡಿದ ಹೊಸ ಮುಖದ ಪ್ರಯೋಗ ಕರ್ನಾಟಕದಲ್ಲೂ ಕೈಹಿಡಿಯಲಿದೆ ಎಂಬ ಆಶಾಭಾವನೆಯಲ್ಲಿದೆ. ಗಂಗಾವತಿಯಲ್ಲಿ ಬೇರುಬಿಟ್ಟಿರುವ ಹಿಂದುತ್ವ ರಾಜಕಾರಣ ಹಾಗೂ ಗಾಲಿ ಜನಾರ್ದನ ರೆಡ್ಡಿ ಪ್ರತಿಷ್ಠೆ, ಜನಪ್ರಿಯತೆ ಹಾಗೂ ಹಣಬಲ ಗೆಲುವು ತಂದುಕೊಡಲಿದೆ ಎಂಬ ಭರವಸೆಯಲ್ಲಿದ್ದಾರೆ.

ಮತ್ತೊಂದು ಕಡೆ ರಾಜಕೀಯವಾಗಿ ಇಡೀ ಜಿಲ್ಲೆಯಲ್ಲಿ ಪ್ರತಿಷ್ಠೆಯ ಕುಟುಂಬ ಎನಿಸಿಕೊಂಡಿರುವ ಹಿಟ್ನಾಳ್-ಕರಡಿ ಕುಟುಂಬ ಒಂದಾಗಿದ್ದು ಜನಪ್ರಿಯತೆ ಆಧಾರದಲ್ಲಿ ಕೊಪ್ಪಳದಲ್ಲಿ ಕಾಂಗ್ರೆಸ್ ಖಾತೆ ತೆರೆಯುವ ಕನಸು ಕಂಡಿದೆ. ಮತದಾರರು ಮತಪೆಟ್ಟಿಗೆಯಲ್ಲಿ ತನ್ನ ಸ್ಪಷ್ಟ ಉತ್ತರ ಬರೆಯಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...