Homeಕರ್ನಾಟಕಕೊಪ್ಪಳ: ಹಾರುಬೂದಿಗೆ ಕಂಗೆಟ್ಟ ಜನ - ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು

ಕೊಪ್ಪಳ: ಹಾರುಬೂದಿಗೆ ಕಂಗೆಟ್ಟ ಜನ – ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು

- Advertisement -
- Advertisement -

ಕೊಪ್ಪಳದ ಹಿರೇಬಗನಾಳ ಸುತ್ತ ಮುತ್ತಲಿನ ಗ್ರಾಮಗಳಿಗೆ ಹತ್ತಿರದ ಕಾರ್ಖಾನೆಗಳಿಂದ ಭಾರೀ ಸಂಕಷ್ಟ ಬಂದೊದಗಿದೆ. ಕಾರ್ಖಾನೆಗಳ ಹಾರುಬೂದಿ ಮತ್ತು ತ್ಯಾಜ್ಯದಿಂದ ಸುತ್ತಲಿನ ಪರಿಸರ ತೀವ್ರರೀತಿಯಲ್ಲಿ ಕಲುಷಿತಗೊಂಡಿದ್ದು ಜನ – ಜಾನುವಾರಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಆದರೆ ಕಾರ್ಖಾನೆಗಳ ಆಡಳಿತ ಮಂಡಳಿಯಾಗಲಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಾಗಲಿ ತಲೆಕೆಡಿಸಿಕೊಂಡಿಲ್ಲದ್ದರಿಂದ ಅಲ್ಲಿನ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿರೇಬಗನಾಳದಲ್ಲಿ ಹರೇಕೃಷ್ಣ ಮೆಟಲಿಕ್ಸ್ ಪ್ರೈ.ಲಿ ಎಂಬ ಸ್ಟೀಲ್ ಕಂಪನಿಯಿದ್ದು ಅದು ಬಳಸುವ ಕಲ್ಲಿದ್ದಲು ಮತ್ತಿತರ ಉರುವಲುಗಳಿಂದ ಪ್ರತಿನಿತ್ಯ ದೊಡ್ಡ ಪ್ರಮಾಣದ ಹಾರುಬೂದಿ ಸುತ್ತಮುತ್ತಲಿನ ಪ್ರದೇಶಗಳನ್ನು ಕಲುಷಿತಗೊಳಿಸಿದೆ. ಹಾರುಬೂದಿಯ ದಾಳಿಗೆ ಸಂಪೂರ್ಣ ಬೆಳೆ ನಾಶವಾಗುತ್ತಿದ್ದು, ಜಾನುವಾರುಗಳ ಸಹ ಮೇವು ತಿನ್ನುತ್ತಿಲ್ಲ. ಮನುಷ್ಯರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿದ್ದು ವಾಂತಿ-ಬೇಧಿಯಂತಹ ಕಾಯಿಲೆಗಳು ಸಾಮಾನ್ಯವಾಗಿವೆ ಎಂದು ರೈತರು ದೂರಿದ್ದಾರೆ.

 

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಸಂತ್ರಸ್ತ ರೈತ ಹನುಮಂತ ಕಡ್ಲಿ “ನಮ್ಮದು ಮತ್ತು ನಮ್ಮ ಸಂಬಂಧಿಕರ ಸುಮಾರು 16 ಎಕರೆ ಜಮೀನಿನ ಪಕ್ಕದಲ್ಲೇ ಈ ಕಾರ್ಖಾನೆ ಇದೆ. ಕಾರ್ಖಾನೆಯ ಹಾರುಬೂದಿ ಮತ್ತು ತ್ಯಾಜ್ಯಗಳಿಂದ ಕಳೆದ 10-12 ವರ್ಷಗಳಿಂದ ನಾವು ಸಮರ್ಪಕವಾಗಿ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ. ಪ್ರತಿ ವರ್ಷವೂ ನಾವು ಬೆಳೆಯುವ ಸೀಬೆಕಾಯಿ, ಮೆಕ್ಕೆಜೋಳ ಹಾಳಾಗುತ್ತಿದೆ. ಈ ಕುರಿತು 5 ವರ್ಷದ ಹಿಂದೆಯೇ ಲೋಕಾಯುಕ್ತರಲ್ಲಿ ದೂರು ಸಲ್ಲಿಸಿದ್ದೇವೆ” ಎನ್ನುತ್ತಾರೆ.

ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಪಶುಸಂಗೋಪನಾ ಇಲಾಖೆ, ತೋಟಗಾರಿಗೆ ಇಲಾಖೆ ಮತ್ತು ಹಲವು ವೈದ್ಯರು ಮತ್ತು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಹಾರುಬೂದಿಯಿಂದಾಗುತ್ತಿರುವ ಅಪಾಯಗಳ ಕುರಿತು ಲೋಕಾಯುಕ್ತಕ್ಕೆ ವರದಿ ಸಲ್ಲಿಸಿದ್ದಾರೆ. ಕಾರ್ಖಾನೆಯು ಪರಿಸರ ಸಂರಕ್ಷಣೆಯ ನಿಯಮಗಳನ್ನು ಮೀರಿರುವುದು ಈ ಸಂದರ್ಭದಲ್ಲಿ ಬೆಳಕಿಗೆ ಬಂದಿತ್ತು. ಈ ಸಮಯದಲ್ಲಿ ಲೋಕಾಯುಕ್ತ ನೋಟಿಸ್‌ಗೆ ಪ್ರತಿಕ್ರಿಯಿಸಿದ ಕಾರ್ಖಾನೆಯು 16 ಎಕರೆಗೆ 12 ಲಕ್ಷದಂತೆ 2017ರಿಂದ ಬೆಳೆನಷ್ಟ ಪರಿಹಾರ ಕೊಡುವುದಾಗಿ ಹೇಳಿ ಕಾರ್ಖಾನೆ ಮುಚ್ಚಿಹೋಗುವುದಿರಿಂದ ತಪ್ಪಿಸಿಕೊಂಡಿತು. ಆದರೆ ಅದರ ದುಷ್ಪರಿಣಾಮಗಳು ಮಾತ್ರ ದಿನೇ ದಿನೇ ಹೆಚ್ಚಾಗುತ್ತಿವೆ ಎಂದು ಹನುಮಂತ ಕಡ್ಲಿ ದೂರಿದ್ದಾರೆ.

ಪ್ರತಿನಿತ್ಯ ನಮ್ಮ ಮೇಲೆ ಧೂಳು ಬೀಳುತ್ತಿದ್ದು, ಗಾಳಿ-ನೀರಿನೊಂದಿಗೆ ದೇಹ ಸೇರುತ್ತಿದೆ. ಸುಸ್ತು-ವಾಂತಿ-ಬೇಧಿಯಂತಹ ರೋಗಗಳು ಕಾಣಿಸಿಕೊಳ್ಳುತ್ತಿವೆ. ನಮ್ಮ ಜಾನುವಾರು ಮೇವು ತಿನ್ನುತ್ತಿಲ್ಲ. ಬೆಲೆಗಳೆಲ್ಲ ನಾಶವಾಗುತ್ತಿದೆ. ಹಾಗಾಗಿ ನಮಗೆ ಕಾರ್ಖಾನೆಯ ಯಾವುದೇ ಪರಿಹಾರ ಹಣ ಬೇಡ. ನಮಗೆ ಶಾಶ್ವತ ಪರಿಹಾರ ಬೇಕಾಗಿದೆ. ಕಾರ್ಖಾನೆಯು ಹಾರುಬೂದಿ ಹರಡುವುದನ್ನು ತಡೆಗಟ್ಟಬೇಕು. ಸಾಧ್ಯವಾಗದಿದ್ದರೆ ನಮಗೆ ಬೇರೆ ಕಡೆ ಜಮೀನು ನೀಡಬೇಕು. ಇಲ್ಲದಿದ್ದಲ್ಲಿ ಕಾರ್ಖಾನೆಯನ್ನು ಮುಚ್ಚಬೇಕು. ಇದಕ್ಕೆ ಲೋಕಾಯುಕ್ತ ನ್ಯಾಯಾಲಯವು ಸಹಮತ ವ್ಯಕ್ತಪಡಿಸಿದೆ. ಆದರೆ ಜಿಲ್ಲಾಧಿಕಾರಿಗಳು ಪಟ್ಟು ಹಿಡಿದು ಜಾರಿಗೊಳಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆಗಾಗಿ ಕೊಪ್ಪಳ ಜಿಲ್ಲಾಧಿಕಾರಿ ಸುರಲ್ಕರ್ ವಿಕಾಸ್ ಕಿಶೋರ್‌ರವರನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತು. ಆದರೆ ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ನಂತರ ಈ ವರದಿಯನ್ನು ಅಪ್‌ಡೇಟ್‌ ಮಾಡಲಾಗುವುದು.


ಇದನ್ನೂ ಓದಿ: ಅಕ್ರಮ ಪರಿಸರ ಲೂಟಿಗೆ ವಿರೋಧ: ಹೋರಾಟಗಾರ ಗಿರೀಶ್ ಆಚಾರ್ ಮೇಲಿನ ಹಲ್ಲೆಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...